‘Daredevil Mustafa’ ಚಿತ್ರ ವಿಮರ್ಶೆ: ಬದಲಾದ ಮುಸ್ತಾಫಾನ ಬಲವಾದ ಸಂದೇಶ


Team Udayavani, May 20, 2023, 11:58 AM IST

Daredevil Mustafa movie review

ಓದುವ ಅಭಿರುಚಿಯಿರುವವರಿಗೆ ಕನ್ನಡದ ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ (ಪೂಚಂತೇ) ಅವರ ಕೃತಿಗಳು ಮತ್ತು ಅದರ ಪಾತ್ರಗಳ ಬಗ್ಗೆ ಕನಿಷ್ಟ ಪರಿಚಯ ಇದ್ದೇ ಇರುತ್ತದೆ. ಈಗಾಗಲೇ ತೇಜಸ್ವಿಯವರ “ಅಬಚೂರಿನಾ ಪೋಸ್ಟಾμàಸು’, “ತಬರನ ಕಥೆ’, “ಕಿರಗೂರಿನ ಗಯ್ನಾಳಿಗಳು’ ಹೀಗೆ ಒಂದಷ್ಟು ಕೃತಿಗಳು ಸಿನಿಮಾವಾಗಿದ್ದು, ಈಗ ಅಂಥದ್ದೇ ಮತ್ತೂಂದು ಕಥೆ ಮತ್ತದರ ಪಾತ್ರ “ಡೇರ್‌ಡೆವಿಲ್‌ ಮುಸ್ತಾಫಾ’ ಸಿನಿಮಾ ರೂಪ ಪಡೆದುಕೊಂಡು ಥಿಯೇಟರ್‌ಗೆ ಬಂದಿದೆ.

ಇನ್ನು ತೆರೆಮೇಲೆ “ಡೇರ್‌ಡೆವಿಲ್‌ ಮುಸ್ತಾಫಾ’ ನನ್ನು ನೋಡುವ ಕಾತುರದೊಂದಿಗೆ, ಸಿನಿಮಾ ತೆರೆದುಕೊಳ್ಳುತ್ತದೆ. ಎಲ್ಲ ಹಿಂದೂ ಧರ್ಮಿಯರೇ ಇರುವ ಅಬಚೂರಿನ ಪದವಿ ಪೂರ್ವ ಕಾಲೇಜಿಗೆ ಮೊದಲ ಬಾರಿಗೆ ಮುಸ್ಲಿಂ ಹುಡುಗ ಮುಸ್ತಾಫಾನ ಅಡ್ಮಿಷನ್‌ ಆಗಿರುತ್ತದೆ. ಮುಸ್ತಾಫಾ ನೀರಿಲ್ಲದೆ ಪಂಕ್ಚರ್‌ ಹಾಕ್ತಾನಂತೆ, ಸೆಂಟಿನಲ್ಲೇ ಮುಳುಗ್ತಾನಂತೆ.. ಹೀಗೆ ಅಂತೆ-ಕಂತೆಗಳಲ್ಲೇ ಮುಸ್ತಾಫಾನನ್ನು ಕಲ್ಪಿಸಿಕೊಂಡವರಿಗೆ, ಕಾಲೇಜು ಶುರುವಾದ ಸುಮಾರು ಇಪ್ಪತ್ತು ದಿನಗಳ ನಂತರ ಮುಸ್ತಾಫಾನ ದರ್ಶನವಾಗುತ್ತದೆ. ಆನಂತರ ಮುಸ್ತಾಫಾನ ನೈಜ ವ್ಯಕ್ತಿತ್ವದ ಚಿತ್ರಣ ತೆರೆಮೇಲೆ ತೆರೆದುಕೊಳ್ಳುತ್ತದೆ.

ಸಿನಿಮಾದ ಟೈಟಲ್‌ ಮತ್ತು ಸಬ್‌ ಟೈಟಲ್‌ ಹೇಳುವಂತೆ, ಮುಸ್ತಾಫಾ ಮತ್ತು ರಾಮಾನುಜ ಅಯ್ಯಂಗಾರಿ ಪಟಾಲಂ ನಡುವಿನ ಸೆಣೆಸಾಟದ ನಡುವೆಯೇ “ಡೇರ್‌ಡೆವಿಲ್‌ ಮುಸ್ತಾಫಾ’ ಸಿನಿಮಾದ ಕಥಾಹಂದರ ಸಾಗುತ್ತದೆ. ತೇಜಸ್ವಿಯವರ ಪುಸ್ತಕದಲ್ಲಿ ಓದುಗರ ಕಲ್ಪನೆಗೆ ತಕ್ಕಂತೆ‌ “ಡೇರ್‌ಡೆವಿಲ್‌ ಮುಸ್ತಾಫಾ’ ತೆರೆಮೇಲೆ ಬೇರೆಯದ್ದೇ ರೀತಿಯಲ್ಲಿ ಕಾಣುತ್ತದೆ. ದೃಶ್ಯರೂಪದಲ್ಲಿ ಕೆಲವೊಂದಿಷ್ಟು ಬಲವಂತ’ದ ಬದಲಾವಣೆಗಳನ್ನು ಮಾಡಿರುವುದರಿಂದ, ಸಿನಿಮಾದಲ್ಲೂ ಈ ಬದಲಾವಣೆಯನ್ನು ಒಪ್ಪಿಕೊಳ್ಳದೆ ಬೇರೆ ದಾರಿಯಿಲ್ಲ!

“ಡೇರ್‌ಡೆವಿಲ್‌ ಮುಸ್ತಾಫಾ’ ನ ಚಿತ್ರಕಥೆ ಬಹುತೇಕ ಅಬಚೂರಿನ ಕಾಲೇಜು ವರಾಂಡದಲ್ಲಿಯೇ ನಡೆಯುವುದರಿಂದ, ಮೊದಲರ್ಧ ಕಾಲೇಜು ಹುಡುಗರ ಒಂದಷ್ಟು ತರಲೆ, ತುಂಟಾಟ, ಕಿತಾಪತಿ ನೋಡುಗರಿಗೆ ನಗುತರಿಸುವಂತಿವೆ. ಆದರೆ ದ್ವಿತೀಯರ್ಧ ಕೂಡ ಒಂದಷ್ಟು ಡೈಲಾಗ್ಸ್‌ ಜೊತೆ ಅಲ್ಲೇ ಗಿರಕಿ ಹೊಡೆಯುವುದರಿಂದ, ಬೇರೆಯದ್ದೇನನ್ನೂ ನಿರೀಕ್ಷಿಸುವಂತಿಲ್ಲ. ಕೆಲವೊಂದು ಪಾತ್ರಗಳ “ಅತಿ’ಯಾದ ಮಾತು, ಅನವಶ್ಯಕ ದೃಶ್ಯಗಳು ಮತ್ತು ಮಂದಗತಿಯ ನಿರೂಪಣೆ “ಡೇರ್‌ಡೆವಿಲ್‌ ಮುಸ್ತಾಫಾ’ ಜೊತೆಗಿನ ಪ್ರಯಾಣ ಅಲ್ಲಲ್ಲಿ “ದೀರ್ಘ‌’ವಾಗಿಸಿದಂತೆ ಬಾಸವಾಗುತ್ತದೆ. ಅದೆಲ್ಲವನ್ನು ಬದಿಗಿಟ್ಟು ಪೂರ್ಣಚಂದ್ರ ತೇಜಸ್ವಿಯವರ ಕೃತಿಯಾಗಿ ಸಿನಿಮಾವನ್ನು ನೋಡಿದವರಿಗೆ “ಡೇರ್‌ಡೆವಿಲ್‌ ಮುಸ್ತಾಫಾ’ ಮೆಚ್ಚುಗೆಯಾಗಬಹುದು.

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.