David movie review; ಅಪರಿಚಿತನ ಹಿಂದೆ ಡೇವಿಡ್‌ ಹೆಜ್ಜೆ


Team Udayavani, Jul 22, 2023, 4:30 PM IST

David movie review; ಅಪರಿಚಿತನ ಹಿಂದೆ ಡೇವಿಡ್‌ ಹೆಜ್ಜೆ

ಕಥಾನಾಯಕನಿಗೆ ಗೆಳೆತನ ಅಂದ್ರೆ ಇಷ್ಟ. ಅದೇ ಪ್ರೀತಿ-ಪ್ರೇಮ ಅಂದ್ರೆ ಬಲುದೂರ. ತಮ್ಮ ಸ್ನೇಹಿತರ ಬಳಗದಲ್ಲಿ ಯಾರಾದರೂ ಲವ್‌ ಮಾಡುತ್ತಿದ್ದರೆ, ಅವರ ಪ್ರೇಮಭಂಗ ಮಾಡುವವರೆಗೂ ಈ ಹುಡುಗನಿಗೆ ಸಮಾಧಾನವಿಲ್ಲ. ಇಂಥ ಹುಡುಗನಿಗೆ ಒಮ್ಮೆ ಸುಂದರ ಹುಡುಗಿಯೊಬ್ಬಳ ಮೇಲೆ ನಿಧಾನವಾಗಿ ಪ್ರೇಮಾಂಕುರವಾಗುತ್ತದೆ. ಇನ್ನೇನು ಆ ಹುಡುಗಿಯ ಎದುರಿಗೆ ನಿಂತು ಪ್ರೇಮ ನಿವೇದನೆ ಮಾಡಿಕೊಳ್ಳಬೇಕು ಅನ್ನುವಷ್ಟರಲ್ಲಿ ಆಕೆ ನಿಗೂಢವಾಗಿ ಕಣ್ಮರೆಯಾಗುತ್ತಾಳೆ. ಆ ಹುಡುಗಿಯ ತಂದೆ, ತನ್ನ ಜೀವದಂತಿದ್ದ ಸ್ನೇಹಿತ ಇಬ್ಬರೂ ನಿಗೂಢವಾಗಿ ಅಪರಿಚಿತರ ಗುಂಡಿಗೆ ಬಲಿಯಾಗುತ್ತಾರೆ. ಅಲ್ಲಿಯವರೆಗೂ ಲವ್‌, ಫ್ರೆಂಡ್‌ ಶಿಪ್‌, ಕಾಮಿಡಿ ಅಂತ ಸರಾಗವಾಗಿ ಸಾಗುತ್ತಿದ್ದ ಕಥೆಯಲ್ಲಿ ರಕ್ತದೋಕುಳಿ ಹರಿದು, ಸಿನಿಮಾದಲ್ಲೊಂದು ಮರ್ಡರ್‌ ಮಿಸ್ಟರಿ ತೆರೆದುಕೊಳ್ಳುತ್ತದೆ. “ಡೇವಿಡ್‌’ ಎಂಬ ಅನಾಮಿಕನ ಹುಡುಕಾಟ ಶುರುವಾಗುತ್ತದೆ. ಇದು ಈ ವಾರ ತೆರೆಗೆ ಬಂದಿರುವ “ಡೇವಿಡ್‌’ ಸಿನಿಮಾದ ಕಥೆಯ ಎಳೆ.

ಇಷ್ಟು ಹೇಳಿದ ಮೇಲೆ “ಡೇವಿಡ್‌’ ಲವ್‌ ಕಂ ಮರ್ಡರ್‌ ಮಿಸ್ಟರಿ ಕಥಾಹಂದರದ ಸಿನಿಮಾ ಅನ್ನೋದು ಗೊತ್ತಾಗುತ್ತದೆ. ಒಂದಷ್ಟು ಸ್ನೇಹಿತರ ನಡುವಿನ ಹುಡುಗಾಟದ ಮೂಲಕ ಶುರುವಾಗುವ ಸಿನಿಮಾದ ಕಥೆಯಲ್ಲಿ ಲವ್‌, ಮರ್ಡರ್‌, ಆ್ಯಕ್ಷನ್‌, ಸಸ್ಪೆನ್ಸ್‌ ಎಲ್ಲವನ್ನೂ ಸೇರಿಸಿ ಪ್ರೇಕ್ಷಕರ ಮುಂದೆ ತಂದಿದ್ದಾರೆ ನಾಯಕ ನಟ ಕಂ ನಿರ್ದೇಶಕ ಶ್ರೇಯಸ್‌ ಚಿಂಗಾ.

ಸಿನಿಮಾದ ಕಥೆಯ ಒಂದು ಎಳೆ ಚೆನ್ನಾಗಿದೆ. ಕಥೆಯ ಆಯ್ಕೆಯಲ್ಲಿ ಕೊಟ್ಟಂತಹ ಮಹತ್ವ ಚಿತ್ರಕಥೆ, ನಿರೂಪಣೆಯ ಕಡೆಗೂ ಕೊಟ್ಟಿದ್ದರೆ, “ಡೇವಿಡ್‌’ ಇನ್ನಷ್ಟು ಪರಿಣಾಮಕಾರಿಯಾಗಿ ನೋಡುಗರ ಮನ ಮುಟ್ಟುವ ಸಾಧ್ಯತೆಗಳಿದ್ದವು. ಅದರಾಚೆಗೆ “ಡೇವಿಡ್‌’ ಒಂದು ಪ್ರಯತ್ನವಾಗಿ ಮೆಚ್ಚುಬಹುದಾದ ಚಿತ್ರ.

ಸಿನಿಮಾದಲ್ಲಿ ಬೃಹತ್‌ ಕಲಾವಿದರಿದ್ದರೂ, ನಾಯಕಿ ಸಾರಾ, ರಾಕೇಶ್‌ ಅಡಿಗ, ಅವಿನಾಶ್‌, ಪ್ರತಾಪ್‌ ನಾರಾಯಣ್‌ ಸೇರಿದಂತೆ ಒಂದಷ್ಟು ಪಾತ್ರಗಳು ಮಾತ್ರ ಪರಿಣಾಮಕಾರಿಯಾಗಿ ಮೂಡಿಬಂದಿದೆ. ತಾಂತ್ರಿಕವಾಗಿ ಸಿನಿಮಾದ ಛಾಯಾಗ್ರಹಣ, ಸಂಕಲನ ಕಾರ್ಯ ಗಮನ ಸೆಳೆಯುತ್ತದೆ.

ಹಿನ್ನೆಲೆ ಸಂಗೀತದ ಕಡೆಗೆ ಚಿತ್ರತಂಡ ಇನ್ನಷ್ಟು ಗಮನ ಕೊಡಬಹುದಿತ್ತು. ಕೆಲವೊಂದು ಒಪ್ಪಬಹುದಾದ ತಪ್ಪುಗಳನ್ನು ಬದಿಗಿಟ್ಟು ಹೇಳುವುದಾದರೆ, ಬಹುತೇಕ ಹೊಸ ಪ್ರತಿಭೆಗಳ “ಡೇವಿಡ್‌’ ಒಮ್ಮೆ ನೋಡಿ ಬೆನ್ನುತಟ್ಟಬಹುದಾದ ಸಿನಿಮಾ ಎನ್ನಲು ಅಡ್ಡಿಯಿಲ್ಲ.

ಜಿ.ಎಸ್.ಕಾರ್ತಿಕ ಸುಧನ್

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.