ಧರ್ಮ-ಕರ್ಮಗಳ ಮೇಲೊಂದು ಕಣ್ಣು!

ಚಿತ್ರ ವಿಮರ್ಶೆ

Team Udayavani, Dec 8, 2019, 6:02 AM IST

I-1

ಪ್ರತಿಯೊಬ್ಬರು ತಾವು ಮಾಡಿದ ಕರ್ಮಗಳಿಗೆ ಫ‌ಲಾಫ‌ಲಗಳನ್ನು ಪಡೆಯಲೇ ಬೇಕು. ಒಳ್ಳೆಯ ಕೆಲಸ ಮಾಡಿದರೆ, ಒಳ್ಳೆಯ ಫ‌ಲ, ಕೆಟ್ಟ ಕೆಲಸ ಮಾಡಿದರೆ ಕೆಟ್ಟ ಫ‌ಲ ಕಟ್ಟಿಟ್ಟ ಬುತ್ತಿ. ಹಾಗಾದ್ರೆ ಮನುಷ್ಯ ಮಾಡಿದ ಈ ಕರ್ಮಗಳಿಗೆ ಫ‌ಲ ನೀಡೋದು ಯಾರು? ಯಾವ ಯಾವ ರೂಪದಲ್ಲಿ ಕರ್ಮಫ‌ಲ ಬೆನ್ನು ಹತ್ತುತ್ತದೆ. ಅದನ್ನು ತಿಳಿದುಕೊಳ್ಳುವ ಕುತೂಹಲವಿದ್ದರೆ, ಈ ವಾರ ತೆರೆಗೆ ಬಂದಿರುವ “ಐ 1′ ಚಿತ್ರ ನೋಡಬಹುದು.

ಮೂವರು ಶ್ರೀಮಂತರ ಮಕ್ಕಳು ಇದ್ದಕ್ಕಿದ್ದಂತೆ ನಾಪತ್ತೆಯಾಗುತ್ತಾರೆ. ಅವರನ್ನು ಅಪಹರಿಸುವ ಅನಾಮಿಕ ವ್ಯಕ್ತಿಯೊಬ್ಬ ಮೂವರನ್ನೂ ನಿಗೂಢ ಜಾಗದಲ್ಲಿ ಬಂಧಿಸಿಡುತ್ತಾನೆ. ಸಾವು-ಬದುಕಿನ ಹೋರಾಟಕ್ಕೆ ಇಳಿಯುವ ಮೂವರೂ ತಾವು ಮಾಡಿರುವ ಪಾಪ-ಪುಣ್ಯ ಕಾರ್ಯಗಳನ್ನು ಒಂದೊಂದಾಗಿ ಬಿಚ್ಚಿಡುತ್ತಾರೆ. ಅಂತಿಮವಾಗಿ ಯಾರ್ಯಾರಿಗೆ, ಏನೇನು ಶಿಕ್ಷೆ ಅನ್ನೋದೆ “ಐ 1′ ಚಿತ್ರದ ಕಥಾ ಹಂದರ.

ಮೇಲ್ನೋಟಕ್ಕೆ “ಐ 1′ ಚಿತ್ರದ ಕಥೆ ಸಾಮಾನ್ಯವಾಗಿ ಕಂಡರೂ, ಚಿತ್ರದ ನಿರೂಪಣೆ ಗಮನ ಸೆಳೆಯುತ್ತದೆ. ಪ್ರೇಕ್ಷಕರಿಗೆ ಎಲ್ಲೂ ಬೋರ್‌ ಆಗದಂತೆ ಕೇವಲ ಒಂದೇ ಸ್ಥಳದಲ್ಲಿ ಚಿತ್ರವನ್ನು ಚಿತ್ರೀಕರಿಸಿ, ಪ್ರೇಕ್ಷಕರನ್ನು ಹಿಡಿದು ಕೂರಿಸುವಲ್ಲಿ ನಿರ್ದೇಶಕರು ಯಶಸ್ವಿಯಾಗಿದ್ದಾರೆ. ತಮಿಳಿನ ಜನಪ್ರಿಯ ಚಿತ್ರ “ಅನ್ನಿಯನ್‌’ನ ನೆರಳು ಚಿತ್ರದ ಅಲ್ಲಲ್ಲಿ ಕಂಡು ಬರುತ್ತದೆ ಅನ್ನೋದನ್ನ ಬಿಟ್ಟರೆ, ಚಿತ್ರವನ್ನು ಅಚ್ಚುಕಟ್ಟಾಗಿ ತೆರೆಮೇಲೆ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕರು.

ಇಡೀ ಚಿತ್ರ ಕೇವಲ ಮೂರು ಪಾತ್ರದ ಸುತ್ತ ನಡೆಯುತ್ತದೆ. ಕಿಶೋರ್‌, ಧೀರಜ್‌ ಪ್ರಸಾದ್‌ ಹಾಗೂ ರಂಜನ್‌ ಎಂ.ಎಸ್‌.ಬಿ ಮೂವರು ಕೂಡ ತಮ್ಮ ಪಾತ್ರವನ್ನು ಚೆನ್ನಾಗಿ ನಿಭಾಯಿಸಿದ್ದಾರೆ. ಉಳಿದಂತೆ ಚಿತ್ರದ ಹಿನ್ನೆಲೆ ಸಂಗೀತ, ಶಬ್ದಗ್ರಹಣ ಕಾರ್ಯಗಳು ಚಿತ್ರಕ್ಕೆ ಮೆರುಗು ನೀಡಿವೆ. ಚಿತ್ರದಲ್ಲಿ ಆಗಾಗ್ಗೆ ಬರುವ ಜನಪದ ಹಾಡಿನ ತುಣುಕುಗಳು ಚಿತ್ರದ ಕಥೆಗೆ ಟ್ವಿಸ್ಟ್‌ ಕೊಡುತ್ತ ಹೋಗುತ್ತದೆ.

ವಿಬಿನ್‌ ಆರ್‌ ಸಂಗೀತ, ಶಿನೂಬ್‌ ಟಿ ಚಾಕೋ ಛಾಯಾಗ್ರಹಣ, ವಿಶಾಖ್‌ ರಾಜೇಂದ್ರನ್‌ ಸಂಕಲನ ಕಾರ್ಯ ಅಚ್ಚುಕಟ್ಟಾಗಿ ಮೂಡಿಬಂದಿದೆ. ಒಟ್ಟಿನಲ್ಲಿ ತೀರಾ ನಿರೀಕ್ಷೆ ಇಟ್ಟುಕೊಳ್ಳದೆ ಥಿಯೇಟರ್‌ಗೆ ಹೋಗುವ ಪ್ರೇಕ್ಷಕರಿಗೆ “ಐ 1′ ಸಸ್ಪೆನ್ಸ್‌ ಕಂ ಕ್ರೈಂ-ಥ್ರಿಲ್ಲರ್‌ ಶೈಲಿಯಲ್ಲಿ ಅನಿರೀಕ್ಷಿತ ಮನರಂಜನೆ ನೀಡುವಂಥ ಚಿತ್ರ. ತೆರೆಯ ಮುಂದೆ ಬಹುತೇಕ ಹೊಸ ಪ್ರತಿಭೆಗಳೇ ಸೇರಿ ಮಾಡಿರುವ “ಐ 1′ ಚಿತ್ರವನ್ನು ವಾರಾಂತ್ಯದಲ್ಲಿ ಒಮ್ಮೆ ನೋಡಲು ಅಡ್ಡಿ ಇಲ್ಲ.

ಚಿತ್ರ: ಐ-1
ನಿರ್ಮಾಣ: ಎಸ್‌.ಪಿ ಪಿಕ್ಚರ್ ಶೈಲಜಾ ಪ್ರಕಾಶ್‌
ನಿರ್ದೇಶನ: ಆರ್‌.ಎಸ್‌.ರಾಜಕುಮಾರ್‌
ತಾರಾಗಣ: ಕಿಶೋರ್‌, ಧೀರಜ್‌ ಪ್ರಸಾದ್‌ ಹಾಗೂ ರಂಜನ್‌ ಎಂ.ಎಸ್‌.ಬಿ ಮತ್ತಿತರರು.

* ಕಾರ್ತಿಕ್

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.