‘ದಿಲ್ ಪಸಂದ್’ ಚಿತ್ರ ವಿಮರ್ಶೆ: ನಗುವಿನ ಹೂರಣದಲ್ಲಿ ಫ್ಯಾಮಿಲಿ ಡ್ರಾಮಾ


Team Udayavani, Nov 12, 2022, 11:12 AM IST

‘ದಿಲ್ ಪಸಂದ್’ ಚಿತ್ರ ವಿಮರ್ಶೆ: ನಗುವಿನ ಹೂರಣದಲ್ಲಿ ಫ್ಯಾಮಿಲಿ ಡ್ರಾಮಾ

ಒಂದು ಕಡೆ ಆತನ ಮದುವೆ ತಯಾರಿ, ಮತ್ತೂಂದು ಕಡೆ ಬೇಡ ಬೇಡವೆಂದರೂ ಆತನಿಗೆ ಗಂಟುಬೀಳುವ ಸಖತ್‌ ಸ್ಟೈಲಿಶ್‌ ಹುಡುಗಿ… ಈ ಇಬ್ಬರ ಮಧ್ಯೆ ಸಿಕ್ಕಿ ಒದ್ದಾಡುವ ನಾಯಕ.

ಹೇಗಾದರೂ ಮಾಡಿ ಈ ಪೇಚಾಟದಿಂದ ಪಾರಾಗಬೇಕೆಂದು ಏನೇನೋ ಪ್ರಯತ್ನ ಮಾಡಿದರೂ ಅದು ಫ‌ಲಿಸುವುದಿಲ್ಲ. ಹಾಗಾದರೆ, ನಾಯಕ ಯಾರನ್ನು ಮದುವೆಯಾಗುತ್ತಾನೆ, ಆತನ ಸಮಸ್ಯೆಗೆ ಪರಿಹಾರ ಸಿಗುತ್ತಾ? ಈ ಕುತೂಹಲ ನಿಮಗಿದ್ದರೆ ನೀವು ಈ ವಾರ ತೆರೆಕಂಡಿರುವ “ದಿಲ್‌ ಪಸಂದ್‌’ ಸಿನಿಮಾ ನೋಡಬೇಕು.

“ದಿಲ್‌ ಪಸಂದ್‌’ ಒಂದು ಔಟ್‌ ಅಂಡ್‌ ಔಟ್‌ ಫ್ಯಾಮಿಲಿ ಎಂಟರ್‌ಟೈನರ್‌. ಆರಂಭದಿಂದ ಕೊನೆಯವರೆಗೂ ಪ್ರೇಕ್ಷಕರನ್ನು ನಗಿಸುತ್ತಲೇ ಸಾಗುವುದು ಈ ಸಿನಿಮಾದ ಪ್ಲಸ್‌. ಚಿತ್ರದಲ್ಲೊಂದು ಕಥೆ ಇದೆ. ಅದನ್ನು ಹೆಚ್ಚು ಗಂಭೀರವಾಗಿ ಹೇಳದೇ ಫ‌ನ್‌ ಆಗಿ ಹೇಳಲು ನಿರ್ದೇಶಕರು ಪ್ರಯತ್ನಿಸಿದ್ದಾರೆ. ಇಬ್ಬರು ಹುಡುಗಿಯರ ಮಧ್ಯೆ ಸಿಕ್ಕಿ ಒದ್ದಾಡುವ ಹುಡುಗನಾಗಿ ಕೃಷ್ಣ ಕಾಣಿಸಿಕೊಂಡಿದ್ದಾರೆ.

ಇಡೀ ಸಿನಿಮಾವನ್ನು ಕಲರ್‌ಫ‌ುಲ್‌ ಆಗಿ ಕಾಣಲು ಏನೇನು ಬೇಕೋ ಆ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಒಂದು ಕಮರ್ಷಿಯಲ್‌ ಸಿನಿಮಾದಲ್ಲಿರಬೇಕಾದ ಭರ್ಜರಿ ಹೀರೋ ಇಂಟ್ರೊಡಕ್ಷನ್‌, ಪಂಚಿಂಗ್‌ ಡೈಲಾಗ್‌, ಗ್ಲಾಮರಸ್‌ ನಾಯಕಿಯರು, ಕಲರ್‌ಫ‌ುಲ್‌ ಸಾಂಗ್‌… ಎಲ್ಲವೂ ಈ ಚಿತ್ರದಲ್ಲಿದೆ. ದೃಶ್ಯಗಳನ್ನು ಹೆಚ್ಚು ಎಳೆದಾಡದೇ, ಇಡೀ ಸಿನಿಮಾವನ್ನು ಅಚ್ಚುಕಟ್ಟಾಗಿ ಕಟ್ಟಿಕೊಡುವ ಮೂಲಕ “ದಿಲ್‌ ಪಸಂದ್‌’ ಒಂದು ಫ್ಯಾಮಿಲಿ ಎಂಟರ್‌ಟೈನರ್‌ ಆಗಿ ಇಷ್ಟವಾಗುತ್ತದೆ.

ಸಿನಿಮಾದಲ್ಲಿ ನಗುವಿನ ಜೊತೆ ಜೊತೆಗೆ ಅಲ್ಲಲ್ಲಿ ಸಿಗುವ ಟ್ವಿಸ್ಟ್‌ಗಳು ಚಿತ್ರದ ಕುತೂಹಲವನ್ನು ಹೆಚ್ಚಿಸುತ್ತಾ ಸಾಗುತ್ತದೆ. ನಾಯಕ ಕೃಷ್ಣ ತಮ್ಮ ಮ್ಯಾನರಿಸಂ ಮೂಲಕ ಇಷ್ಟವಾಗುತ್ತಾರೆ. ಲವರ್‌ ಬಾಯ್‌ ಆಗಿ, ಆ್ಯಕ್ಷನ್‌ ಹೀರೋ ಆಗಿ, ಮುದ್ದಿನ ಮಗನಾಗಿ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ.

ಇನ್ನು ನಾಯಕಿ ನಿಶ್ವಿ‌ಕಾ ಸಿನಿಮಾದುದ್ದಕ್ಕೂ ಸಖತ್‌ ಗ್ಲಾಮರಸ್‌ ಆಗಿ ಕಾಣಿಸಿಕೊಂಡಿದ್ದಾರೆ. ಮತ್ತೂಬ್ಬ ನಾಯಕಿ ಮೇಘಾ ಶೆಟ್ಟಿ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸುವ ಜೊತೆಗೆ ಭವಿಷ್ಯದ ಭರವಸೆ ಮೂಡಿಸಿದ್ದಾರೆ. ಉಳಿದಂತೆ ರಂಗಾಯಣ ರಘು, ತಬಲನಾಣಿ, ಗಿರಿ ಸೇರಿದಂತೆ ಇತರರು ನಟಿಸಿದ್ದಾರೆ. ಒಂದು ಫ್ಯಾಮಿಲಿ ಎಂಟರ್‌ಟೈನರ್‌ ಸಿನಿಮಾವನ್ನು ಬಯಸುವವರಿಗೆ ದಿಲ್‌ “ಪಸಂದ್‌’ ಆಗಬಹುದು.

ರವಿಪ್ರಕಾಶ್ ರೈ

ಟಾಪ್ ನ್ಯೂಸ್

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kabzaa

ಕಬ್ಜ ಚಿತ್ರ ವಿಮರ್ಶೆ; ಮಾಸ್ ಮನತಣಿಸುವ ಅರ್ಕೇಶ್ವರ ವೈಭವ

‘ಚೌಕಾಬಾರ’ ಮೆಚ್ಚುಗೆ

‘ಚೌಕಾಬಾರ’ ಮೆಚ್ಚುಗೆ

kannada movie mary review

ಚಿತ್ರ ವಿಮರ್ಶೆ; ಥ್ರಿಲ್ಲರ್ ‘ಮೇರಿ’ಯ ಜಾಡು ಹಿಡಿದು..

dddooradarshana kannada movie

ದೂರದರ್ಶನ ಚಿತ್ರ ವಿಮರ್ಶೆ; ಟಿವಿಯ ಸದ್ದು, ಅಹಂಗೊಂದು ಗುದ್ದು

kadala theerada bhargava movie

ಕಡಲ ತೀರದ ಭಾರ್ಗವ ಚಿತ್ರ ವಿಮರ್ಶೆ: ಕಡಲ ತೀರದ ಭಾವಯಾನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.