‘ಅರ್ಜುನ್ ಗೌಡ’ ಚಿತ್ರ ವಿಮರ್ಶೆ: ಪ್ರೀತಿಯ ಬಲೆಯಲ್ಲಿ ಮಾಫಿಯಾ ಅಲೆ!


Team Udayavani, Jan 1, 2022, 11:04 AM IST

ಅರ್ಜುನ್ ಗೌಡ ಚಿತ್ರ ವಿಮರ್ಶೆ

ನಿರ್ಮಾಪಕ ರಾಮು ಅವರು ಆ್ಯಕ್ಷನ್‌ ಸಿನಿಮಾ ಮಾಡುತ್ತಾರೆಂದರೆ ಅಲ್ಲಿನ ಅದ್ಧೂರಿತನವನ್ನು ಊಹಿಸಿಕೊಳ್ಳಬಹುದು. ನಿರ್ದೇಶಕ ಕೇಳಿದ್ದಕ್ಕಿಂತ ಹೆಚ್ಚಿನದ್ದನ್ನು ನೀಡಿ, ಸಿನಿಮಾಕ್ಕೆ ಕೊರತೆಯಾಗದಂತೆ ನೋಡಿಕೊಳ್ಳುವ ಗುಣ ರಾಮು ಅವರದ್ದಾಗಿತ್ತು. ಅದು ಈ ವಾರ ತೆರೆಕಂಡಿರುವ ರಾಮು ನಿರ್ಮಾಣದ “ಅರ್ಜುನ್‌ ಗೌಡ’ ಚಿತ್ರದಲ್ಲಿ ಎದ್ದು ಕಾಣುತ್ತದೆ.

ಒಂದು ಮಾಸ್‌ ಎಂಟರ್‌ಟೈನರ್‌ ಸಿನಿಮಾವನ್ನು ಯಾವ ರೀತಿ ಕಟ್ಟಿಕೊಡಬೇಕು, ಅದರ ಪರಿಸರ ಹೇಗಿರಬೇಕು, ಫೈಟ್‌ ಎಷ್ಟು ಗ್ರ್ಯಾಂಡ್‌ ಆಗಿರಬೇಕು ಎಂಬುದನ್ನು ರಾಮು ಹಾಗೂ ನಿರ್ದೇಶಕ ಶಂಕರ್‌ ಚೆನ್ನಾಗಿ ಅರ್ಥಮಾಡಿಕೊಂಡಿರೋದು ತೆರೆಮೇಲೆ ಗೊತ್ತಾಗುತ್ತದೆ. ಆ ಮಟ್ಟಿಗೆ “ಅರ್ಜುನ್‌ ಗೌಡ’ ಒಂದು ಮಾಸ್‌ ಕಂ ಫ್ಯಾಮಿಲಿ ಡ್ರಾಮಾ ಸಿನಿಮಾವಾಗಿ ಇಷ್ಟವಾಗುತ್ತದೆ.

ನಿರ್ದೇಶಕ ಶಂಕರ್‌ ಪ್ರೀತಿಯ ಎಳೆಯೊಂದನ್ನು ಇಟ್ಟುಕೊಂಡು ಉಳಿದಂತೆ ಒಂದು ಆ್ಯಕ್ಷನ್‌ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಸಾಕಷ್ಟು ಘಟನೆಗಳು, ಸನ್ನಿವೇಶಗಳು ಬರುತ್ತವೆ. ಹಾಗಾಗಿ, ಇಲ್ಲೂ ಕಥೆಗಿಂತ ಇಡೀ ಸಿನಿಮಾವನ್ನು ಸನ್ನಿವೇಶಗಳೇ ಮುಂದುವರೆಸಿಕೊಂಡು ಹೋಗುತ್ತವೆ. ಮೊದಲೇ ಹೇಳಿದಂತೆ ಚಿತ್ರದಲ್ಲಿ ಲವ್‌, ಫ್ಯಾಮಿಲಿ ಡ್ರಾಮಾ ಹಾಗೂ ಆ್ಯಕ್ಷನ್‌, ಮದರ್‌ ಸೆಂಟಿಮೆಂಟ್‌ ಅಂಶಗಳಿದ್ದರೂ ನಿರ್ದೇಶಕರು ಯಾವೊಂದನ್ನು ಅತಿಯಾಗಿ ತೋರಿಸಿಲ್ಲ. ಚಿತ್ರದಲ್ಲಿ ಲವ್‌ ಇದ್ದರೂ ಅದನ್ನು ಹೆಚ್ಚು ತೋರಿಸದೇ, ಮಾಸ್‌ ಅಂಶಗಳಿಗೆ ಗಮನ ಕೊಟ್ಟಿದ್ದಾರೆ. ಆ ಮೂಲಕ “ಅರ್ಜುನ್‌ ಗೌಡ’ ಮಾಸ್‌ ಪ್ರಿಯರ ಗಮನ ಸೆಳೆಯುತ್ತದೆ.

ಇದನ್ನೂ ಓದಿ:‘ಲವ್ ಯು ರಚ್ಚು’ ಚಿತ್ರವಿಮರ್ಶೆ: ಮತ್ತೆ ಮತ್ತೆ ಕಾಡುವ ‘ರಚ್ಚು’ ಕರ್ಮ ಕಥೆ!

ಸಿನಿಮಾದ ಕಥೆ ಮಂಗಳೂರಿನಿಂದ ಆರಂಭವಾಗಿ ಬೆಂಗಳೂರು ತಲುಪಿ, ಸಿಂಗಾಪೂರದ ದೃಶ್ಯಗಳವರೆಗೂ ಹೋಗುತ್ತದೆ. ಸಿನಿಮಾದ ಕಥೆ ಗಂಭೀರವಾಗಿ ಸಾಗುವುದರಿಂದ ಅಲ್ಲಲ್ಲಿ ಪ್ರೇಕ್ಷಕ ಮೊಗದಲ್ಲಿ ನಗುಮೂಡಿಸಲು ಒಂದಷ್ಟು ಕಾಮಿಡಿ ಸನ್ನಿವೇಶಗಳನ್ನು ಜೋಡಿಸಲಾಗಿದೆ. ಕೆಲವೊಮ್ಮೆ ಈ ದೃಶ್ಯಗಳು ಕಿರಿಕಿರಿ ಎನಿಸಿದರೂ, ಕಮರ್ಷಿಯಲ್‌ ಸಿನಿಮಾವಾದ್ದರಿಂದ ಅವೆಲ್ಲವನ್ನು ಸಹಿಸಿಕೊಂಡು ಮುಂದೆ ಸಾಗಬೇಕು. ಅದು ಬಿಟ್ಟರೆ ಯಾವುದೇ ಗೊಂದಲವಿಲ್ಲದಂತೆ ಸಿನಿಮಾ ಮುಗಿಸಿದ್ದಾರೆ ಶಂಕರ್‌.

ನಾಯಕ ಪ್ರಜ್ವಲ್‌ ಕೆರಿಯರ್‌ ನಲ್ಲಿ ಇದೊಂದು ಅದ್ಧೂರಿ ಸಿನಿಮಾ ಎಂಬುದರಲ್ಲಿ ಎರಡು ಮಾತಿಲ್ಲ. ಪ್ರಜ್ವಲ್‌ ಕೂಡಾ ಮಾಸ್‌ ಹೀರೋ ಆಗಿ, ಲವರ್‌ ಬಾಯ್‌ ಆಗಿ ಇಷ್ಟವಾಗುತ್ತಾರೆ. ಸಿನಿಮಾದ ಟೈಟಲ್‌ ಗೆ ತಕ್ಕಂತೆ ಖಡಕ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿ ಪ್ರಿಯಾಂಕಾ ಇದ್ದಷ್ಟು ಹೊತ್ತು ಚೆಂದ. ರೇಖಾ, ರಾಹುಲ್‌ ದೇವ್‌, ದೀಪಕ್‌ ರಾಜ್‌, ಅರವಿಂದ್‌ ರಾವ್‌ ಸೇರಿದಂತೆ ಅನೇಕರು ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ. ಕಥೆಯ ಆಶಯಕ್ಕೆ ಛಾಯಾಗ್ರಹಕ ಜೈ ಆನಂದ್‌ ಸಾಥ್‌ ನೀಡಿದ್ದಾರೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.