ಚಿತ್ರ ವಿಮರ್ಶೆ: ‘ಕಾಂತಾರ’ ಹಂದರ ಬಲು ಸುಂದರ


Team Udayavani, Oct 1, 2022, 9:13 AM IST

kantara cienma review

ದಟ್ಟ ಕಾನನದ ಮಧ್ಯದ ಊರು, ಅಲ್ಲಿನ ಮುಗ್ಧ ಜನ, ಅವರನ್ನು ಕಾಯುವ ಪಂಜುರ್ಲಿ, ಗುಳಿಗ ದೈವ, ಆ ದೈವಗಳ ಕೋಲ, ನೇಮದ ಸಂಭ್ರಮ, ಇದರ ನಡುವೆಯೇ ಅರಣ್ಯ ಇಲಾಖೆ ಜೊತೆಗಿನ ಕಿತ್ತಾಟ… ಇಷ್ಟು ಅಂಶಗಳನ್ನಿಟ್ಟುಕೊಂಡು ನಿರ್ದೇಶಕ ರಿಷಭ್‌ ಶೆಟ್ಟಿ ಒಂದು ಅದ್ಭುತ ಜಗತ್ತನ್ನು “ಕಾಂತಾರ’ದಲ್ಲಿ ಕಟ್ಟಿಕೊಟ್ಟಿದ್ದಾರೆ. ಆ ಮಟ್ಟಿಗೆ “ಕಾಂತಾರ’ ಕರಾವಳಿಯ ಸೊಗಡನ್ನು ಸಾರುತ್ತಲೇ ಪ್ರೇಕ್ಷಕರಿಗೆ ಆಪ್ತವಾಗುವ ಸಿನಿಮಾ.

ಪರಭಾಷೆಯಲ್ಲಿ ನೇಟಿವಿಟಿ ಸಿನಿಮಾಗಳನ್ನು ಅದ್ಭುತವಾಗಿ ಕಟ್ಟಿಕೊಡುತ್ತಾರೆ, ನಮ್ಮ ಕನ್ನಡದಲ್ಲಿ ಯಾಕೆ ಆ ತರಹದ ಪ್ರಯತ್ನ ಮಾಡಲ್ಲ ಎಂದು ಆಗಾಗ ಕನ್ನಡ ಸಿನಿಮಾಗಳನ್ನು ಕುಟುಕುವವರಿಗೆ ಖಡಕ್‌ ಉತ್ತರ ನೀಡುವ ಸಿನಿಮಾ “ಕಾಂತಾರ’. ರಿಷಭ್‌ ಈ ಬಾರಿ “ಕಾಂತಾರ’ದಲ್ಲಿ ಆಯ್ಕೆ ಮಾಡಿಕೊಂಡಿರೋದು ಕರಾವಳಿ ಸಂಸ್ಕೃತಿಗಳಲ್ಲೊಂದಾದ ಭೂತಾರಾಧನೆ. ಭೂತಕೋಲ, ನೇಮ ಕರಾವಳಿ ಜನರ ಭಾವನೆಗಳಲ್ಲಿ ಇಂದಿಗೂ ಹಾಸು ಹೊಕ್ಕಾಗಿದೆ. ತಮ್ಮ ಜಮೀನನ್ನು, ಕುಟುಂಬವನ್ನು ದೈವ ಕಾಯುತ್ತದೆ ಎಂಬ ನಂಬಿಕೆಯೊಂದಿಗೆ ವರ್ಷಂಪ್ರತಿ ವಿಜೃಂಬಣೆಯಿಂದ ನಂಬಿದ ದೈವಕ್ಕೆ ನೇಮ, ಕೋಲ ನೀಡುತ್ತಾರೆ. ಇಂತಹ ಒಂದು ಸೂಕ್ಷ್ಮ ವಿಚಾರವನ್ನು ರಿಷಭ್‌ “ಕಾಂತಾರ’ದಲ್ಲಿ ಹೇಳಿದ್ದಾರೆ. ಹಾಗಂತ ಇದು ಭೂತ, ದೈವದ ಕುರಿತ ಡಾಕ್ಯುಮೆಂಟರಿಯಲ್ಲ. ಆ ಅರಿವು ರಿಷಭ್‌ಗೆ ಚೆನ್ನಾಗಿಯೇ ಇದ್ದಿದ್ದರಿಂದಲೇ ಭೂತಾರಾಧನೆಯನ್ನು ಮೂಲವಾಗಿಟ್ಟುಕೊಂಡು ಉಳಿದಂತೆ ಅದರ ಸುತ್ತ ಹಲವು ಅಂಶಗಳನ್ನು ಹೇಳುತ್ತಾ ಹೋಗಿದ್ದಾರೆ. ಒಂದು ಕಮರ್ಷಿಯಲ್‌ ಸಿನಿಮಾವನ್ನು ಕಟ್ಟಿಕೊಡುವಾಗ ಏನೆಲ್ಲಾ ಅಂಶಗಳು ಮುಖ್ಯವಾಗುತ್ತವೋ, ಆ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ.  ಹಾಗಂತ ಅವ್ಯಾವುವು ರೆಗ್ಯುಲರ್‌ ಶೈಲಿಯಲ್ಲಿ ಇಲ್ಲ. ಅದೇ ಈ ಸಿನಿಮಾದ ಪ್ಲಸ್‌ ಪಾಯಿಂಟ್‌.

ಇಲ್ಲೊಂದು ಭೂತವಿದೆ, ಜೊತೆಗೊಬ್ಬ ಧಣಿ ಇದ್ದಾನೆ. ಆ ಭೂತ ಹಾಗೂ ಧಣಿ.. ಇಬ್ಬರಿಗೂ ಒಂದೊಂದು ಫ್ಲ್ಯಾಶ್‌ಬ್ಯಾಕ್‌ ಇದೆ. ಇಡೀ ಸಿನಿಮಾ ಆರಂಭವಾಗುವುದು ಹಾಗೂ ಸಿನಿಮಾದ ಮೂಲ ಹಂದರ ಕೂಡಾ ಇದೇ. ನಿರ್ದೇಶಕ ರಿಷಭ್‌ ಶೆಟ್ಟಿ ಸಿನಿಮಾವನ್ನು ಎಷ್ಟು ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದಾರೆಂದರೆ ಒಂದು ಕ್ಷಣವೂ ಪ್ರೇಕ್ಷಕ ಖಾಲಿ ಕೂರುವಂತಿಲ್ಲ. ಪ್ರತಿ ದೃಶ್ಯಗಳಲ್ಲೂ ಪ್ರೇಕ್ಷಕನನ್ನು ತನ್ನ ಜೊತೆ ಕುತೂಹಲದಿಂದ ಹೆಜ್ಜೆ ಹಾಕುವಂತೆ ಮಾಡಿದ್ದಾರೆ. ಇದೇ ಈ ಸಿನಿಮಾದ ನಿಜವಾದ ಗೆಲುವು ಎನ್ನಬಹುದು. ಕ್ಷಣ ಕ್ಷಣವೂ ಹೊಸದನ್ನು ತೆರೆದುಕೊಳ್ಳುತ್ತಾ, ಹಳೆಯದರ ಬಗ್ಗೆ ಕ್ಲಾéರಿಟಿ ಕೊಡುತ್ತಾ ಚಿತ್ರಮುಂದೆ ಸಾಗುತ್ತದೆ. ಅಷ್ಟರ ಮಟ್ಟಿಗೆ ರಿಷಭ್‌ ಪೂರ್ವತಯಾರಿ ಮಾಡಿಕೊಂಡಿದ್ದಾರೆ. ಮೊದಲೇ ಹೇಳಿದಂತೆ ಇದು ಕರಾವಳಿಯ ಕಥೆ. ಇಲ್ಲಿ ಭೂತದ ನೇಮ, ಅದರ ಆಚರಣೆ, ಭಂಡಾರ ಇಳಿಸಿಕೊಡುವ ಮನೆ, ಭೂತ ನರ್ತಕ, ಪಾಡªನ, ಕಂಬಳ… ಹಲವು ಅಂಶಗಳು ಬರುತ್ತವೆ. ಕರಾವಳಿ ಸಂಸ್ಕೃತಿಯ ಪರಿಚಯವಿದ್ದವರಿಗೆ ಈ ಚಿತ್ರ ಬೇಗನೇ ಕನೆಕ್ಟ್ ಆದರೆ, ಮಿಕ್ಕವರ ಕುತೂಹಲ ಹೆಚ್ಚಿಸುತ್ತಾ ಸಾಗುತ್ತದೆ.

ಇನ್ನು, ಚಿತ್ರದ ಮೇಕಿಂಗ್‌ ಬಗ್ಗೆ ಹೇಳುವುದಾದರೆ, ಕರಾವಳಿ ಸೊಗಡನ್ನು ತೋರಿಸಲು ಏನೆಲ್ಲಾ ಅಂಶಗಳು ಬೇಕೋ, ಅವೆಲ್ಲವನ್ನು ರಿಷಭ್‌ ಒಂದೇ ಸೂರಿನಡಿ ನೈಜವಾಗಿ ಕಟ್ಟಿಕೊಟ್ಟಿದ್ದಾರೆ. ಇಲ್ಲಿ ಸಂಭಾಷಣೆ ಮಜಾ ಕೊಡುತ್ತದೆ. ಸಿನಿಮೇಟಿಕ್‌ ಎನಿಸದೇ ಸರಾಗವಾಗಿ ಸಾಗುವ ಸಂಭಾಷಣೆ ನಗೆ ಉಕ್ಕಿಸುತ್ತದೆ. ಚಿತ್ರದಲ್ಲಿ ಪ್ರಕೃತಿ ಹಾಗೂ ಮನುಷ್ಯನ ನಡುವಿನ ಸಂಘರ್ಷದ ಕಥೆ ಇದೆ. ಹಾಗಂತ ಅದನ್ನು ಅತಿಯಾಗಿ ಎಳೆದಾಡದೇ, ತುಂಬಾ ಸೂಕ್ಷ್ಮವಾಗಿ ಚಿತ್ರಿಸಿದ್ದಾರೆ.

“ಕಾಂತಾರ’ದ ಪ್ರಮುಖ ಹೈಲೈಟ್‌ ಎಂದರೆ ಅದು ಕ್ಲೈಮ್ಯಾಕ್ಸ್‌. ಸಿನಿಮಾದ ಕೊನೆಯ ಇಪ್ಪತ್ತು ನಿಮಿಷ ರಿಷಭ್‌ ಪ್ರೇಕ್ಷಕರನ್ನು ರೋಮಾಂಚನಗೊಳಿಸಿ ಸೀಟಿನಂಚಿನಲ್ಲಿ ಕೂರುವಂತೆ ಮಾಡುತ್ತಾರೆ. ಆರಂಭದಿಂದ ನೋಡಿಕೊಂಡು ಬಂದಿದ್ದು, ಒಂದು ತೂಕವಾದರೆ, ಕೊನೆಯ 20 ನಿಮಿಷ ಮತ್ತೂಂದು ತೂಕ. ಬಹುಶಃ ರಿಷಭ್‌ ಬಿಟ್ಟರೆ ಇದರಲ್ಲಿ ಮತ್ತೂಬ್ಬರನ್ನು ಊಹಿಸಿಕೊಳ್ಳೋದು ಕೂಡಾ ಕಷ್ಟ. ಇಡೀ ಸಿನಿಮಾವನ್ನು ಆವರಿಸಿಕೊಂಡಿರೋದು ರಿಷಭ್‌.

ನಿರ್ದೇಶಕರಾಗಿ ಅವರು ಎಷ್ಟು ನೀಟಾಗಿ ಸಿನಿಮಾ ಕಟ್ಟಿಕೊಟ್ಟಿದ್ದಾರೋ, ನಟರಾಗಿ ಮತ್ತೂಂದು ಆಯಾಮಕ್ಕೆ ತೆರೆದುಕೊಂಡಿದ್ದಾರೆ. ಆ ಮಟ್ಟಿನ ಫ‌ರ್‌ಫಾರ್ಮೆನ್ಸ್‌ ಮೂಲಕ ರಿಷಭ್‌ ಇಲ್ಲಿ ಆಪ್ತರಾಗುತ್ತಾರೆ. ಶಿವನ ಪಾತ್ರಕ್ಕೆ ಅವರು ತೆರೆದುಕೊಂಡಿರುವ ರೀತಿ, ನಡೆ-ನುಡಿ, ಬಾಡಿಲಾಂಗ್ವೆಜ್‌ ಎಲ್ಲವೂ ಸೂಪರ್‌. ಅದರಲ್ಲೂ ಕ್ಲೈಮ್ಯಾಕ್ಸ್‌ನಲ್ಲಂತೂ ರಿಷಭ್‌ ಇಡೀ ಸಿನಿಮಾನ್ನು ಮತ್ತೂಂದು ಲೆವೆಲ್‌ಗೆ ಕೊಂಡೊಯ್ಯಿದಿದ್ದಾರೆ. ನಾಯಕಿ ಸಪ್ತಮಿ ಕೂಡಾ ಇದ್ದಷ್ಟು ಹೊತ್ತು ಚೆಂದ. ಉಳಿದಂತೆ ಅಚ್ಯುತ್‌, ಕಿಶೋರ್‌, ಪ್ರಕಾಶ್‌ ತುಮಿನಾಡು ಸೇರಿದಂತೆ ಇತರರು “ಕಾಂತಾರ’ದ ಬೇರುಗಳು.

ಇನ್ನು, ರಿಷಭ್‌ ಕನಸಿಗೆ ಜೀವ ತುಂಬುವಲ್ಲಿ ಸಂಗೀತ ನಿರ್ದೇಶಕ ಅಜನೀಶ್‌ ಲೋಕನಾಥ್‌ ಅವರ ಹಿನ್ನೆಲೆ ಸಂಗೀತ ಪ್ರಮುಖ ಪಾತ್ರ ವಹಿಸಿದೆ. ಕಥೆಯ ಆಶಯವನ್ನು ಅಜನೀಶ್‌ ಅರಿತಿದ್ದು ತೆರೆಮೇಲಿನ “ಸದ್ದ’ಲ್ಲಿ ಎದ್ದು ಕಾಣುತ್ತಿದೆ.

 ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vidyarthi Vidyarthiniyare Movie Review

Vidyarthi Vidyarthiniyare Review;ವಿದ್ಯಾರ್ಥಿಗಳ ಆಟದೊಳಗೊಂದು ಪಾಠ

Not Out movie review

Not Out movie review; ಮಧ್ಯಮ ಹುಡುಗನ ಕಾಸು-ಕನಸು

Hejjaru Movie Review

Hejjaru Movie Review; ಹೆಜ್ಜಾರು ಎಂಬ ಹೊಸ ಕೌತುಕ

Hiranya

Hiranya Review; ಆ್ಯಕ್ಷನ್‌-ಥ್ರಿಲ್ಲರ್‌ನಲ್ಲಿ ನಿರ್ದಯಿ ಪಯಣ

Jigar movie review

Jigar movie review; ಆ್ಯಕನ್‌ ಡ್ರಾಮಾದಲ್ಲೊಂದು ಪ್ರೇಮ್‌ ಕಹಾನಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.