ಮಕ್ಕಳ ಬಾಯಲ್ಲಿ ಕಾಡಿನ ಕಥೆಗಳು

ಚಿತ್ರ ವಿಮರ್ಶೆ

Team Udayavani, Mar 31, 2019, 11:30 AM IST

Gandada-Kudi

“ಮಗೂ, ಇಲ್ಲಿರುವ ಪುಟ್ಟ ಗಿಡ ನನ್ನ ಕೊನೆಯ ಕುಡಿ. ಅದನ್ನು ಕಾಪಾಡು…’ ಇನ್ನೇನು ಧನದಾಹಿಗಳ ಕ್ರೌರ್ಯ, ಅಟ್ಟಹಾಸಕ್ಕೆ ಸಿಲುಕಿ ಧರೆಗುರುಳುವ ಗಂಧದ ಮರದ ಹೀಗೊಂದು ಆಂತರ್ಯದ ಧ್ವನಿ ಕೇಳಿದ ಪುಟ್ಟ ಹುಡುಗಿಯ ಹೃದಯವನ್ನು ತಟ್ಟುತ್ತದೆ. ಕೂಡಲೇ ಆ ಹುಡುಗಿ ತನ್ನ ಪುಟ್ಟ ಕೈಗಳಲ್ಲಿ ಗಂಧದ ಗಿಡವನ್ನು ಹಿಡಿದು ಕಾಡುಗಳ್ಳರಿಂದ ತಪ್ಪಿಸಿಕೊಂಡು ಹೋಗುತ್ತಾಳೆ.

ತನ್ನ ಜೊತೆ ಮರ ಮಾತನಾಡಿತು, ತನ್ನ ನೋವುಗಳನ್ನು ಹೇಳಿಕೊಂಡಿತು ಎಂಬ ಈಕೆಯ ಮಾತುಗಳನ್ನು ಆರಂಭದಲ್ಲಿ ಕೆಲವರು ನಿರ್ಲಕ್ಷಿಸಿದರೂ, ನಂತರ ಪ್ರಯೋಗಕ್ಕೆ ಮುಂದಾಗುತ್ತಾರೆ. ಹಾಗಾದರೆ, ನಿಜವಾಗಿಯೂ ಮರ ಮಾತನಾಡುತ್ತದೆಯಾ? ತನ್ನ ಮೇಲಾಗುವ ದೌರ್ಜನ್ಯವನ್ನು ಎಳೆಎಳೆಯಾಗಿ ಬಿಚ್ಚಿಡುತ್ತದೆಯಾ? ಮರ ನಿಜವಾಗಿಯೂ ಮಾತಾಡೋಕೆ ಸಾಧ್ಯನಾ?

ಅದಕ್ಕೆ ವೈಜ್ಞಾನಿಕ ಪುರಾವೆ ಇದೆಯಾ? ಇಂಥ ಪ್ರಶ್ನೆಗಳಿಗೆ ಒಂದಷ್ಟು ಉತ್ತರ ಸಿಗುವುದು ಕ್ಲೈಮ್ಯಾಕ್ಸ್‌ನಲ್ಲಿ. ಇದು ಈ ವಾರ ತೆರೆಗೆ ಬಂದಿರುವ “ಗಂಧದ ಕುಡಿ’ ಚಿತ್ರದ ಒಂದಷ್ಟು ಹೈಲೈಟ್ಸ್‌. ಒಂದೆಡೆ ಮರಗಳ ಮಾರಣ ಹೋಮ, ಮತ್ತೂಂದೆಡೆ ಪರಿಸರ ವಿನಾಶ ಈ ಎರಡೂ ವಿಷಯಗಳನ್ನು ಮಕ್ಕಳ ಮೂಲಕ ಹೇಳುವ ಪ್ರಯತ್ನ “ಗಂಧದ ಕುಡಿ’ಯಲ್ಲಿ ಆಗಿದೆ.

ಇಲ್ಲಿ ಹೇಳುವ ಎರಡೂ ವಿಷಯಗಳು ಪ್ರಸ್ತುತವಾದರೂ, ಅದು ಚಿತ್ರರೂಪದಲ್ಲಿ ಪರಿಣಾಮಕಾರಿಯಾಗಿ ಬಂದಿದೆಯಾ ಎನ್ನುವುದೇ ಇಲ್ಲಿರುವ ಪ್ರಶ್ನೆ. ಹೇಳಿ-ಕೇಳಿ ಸಿನಿಮಾ ಎನ್ನುವುದು ಮನರಂಜನಾ ಮಾಧ್ಯಮ. ಇದರ ಮೂಲ ಆಶಯವೇ ಮನರಂಜನೆ. ಹಾಗಾಗಿ ವಾಸ್ತವಿಕ ನೆಲೆಗಟ್ಟಿನಲ್ಲಿ ಮನರಂಜನೆಯ ಜೊತೆಗೆ ಅಲ್ಲಿ ಸಂದೇಶ ಹೇಳಬಹುದುದೇ ಹೊರತು,

ವಾಸ್ತವಾಂಶ ಮತ್ತು ಬರೀ ಸಂದೇಶವನ್ನೇ ಹೇಳುತ್ತಾ ಹೋದರೆ ಅದು ಅದು ಚಲನಚಿತ್ರವಾಗುವ ಬದಲು ಸಾಕ್ಷ್ಯಚಿತ್ರವಾಗುತ್ತದೆ. ಅಂಥದ್ದೇ ಗೊಂದಲದ ಅನುಭವ “ಗಂಧದ ಕುಡಿ’ಯಲ್ಲಿ ನೋಡುಗರಿಗೂ ಆಗುತ್ತದೆ. ಆದರೂ ಒಂದು ಪ್ರಯತ್ನವಾಗಿ ಚಿತ್ರ ಇಷ್ಟವಾಗುತ್ತದೆ. ಚಿತ್ರದಲ್ಲಿ ಬರುವ ಎರಡು-ಮೂರು ಪಾತ್ರಗಳನ್ನು ಹೊರತುಪಡಿಸಿದರೆ, ಬಹುತೇಕ ಕಲಾವಿದರ ಅಭಿನಯ ಮನಸ್ಸಿಗೆ ತಟ್ಟುವುದಿಲ್ಲ.

ಕಾಡಿನ ಸೊಬಗಿದ್ದರೂ, ವೃತ್ತಿಪರತೆಯ ಕೊರತೆ ಕಾಡುತ್ತದೆ. ದೃಶ್ಯ ಜೋಡಣೆ, ಸಂಭಾಷಣೆ, ನಿರೂಪಣೆ ಎಲ್ಲವೂ ಇದು ಮಕ್ಕಳ ಚಿತ್ರ ಎನ್ನುವುದನ್ನು ಪದೇ ಪದೇ ನೆನಪು ಮಾಡಿಕೊಡುತ್ತದೆ. ಚಿತ್ರದ ಛಾಯಾಗ್ರಹಣ ಪಶ್ಚಿಮ ಘಟ್ಟದ ಹಸಿರನ್ನು ಸೊಗಸಾಗಿ ಕಟ್ಟಿಕೊಟ್ಟಿದೆ. ಸಂಕಲನ ಕಾರ್ಯ ಪರವಾಗಿಲ್ಲ ಎನ್ನಬಹುದು. ನಾಡು, ನುಡಿ, ಪರಿಸರದ ಕುರಿತಾದ ಹಾಡುಗಳಿವೆ. ಒಟ್ಟಾರೆ ಬೇಸಿಗೆಯ ರಜೆಯಲ್ಲಿರುವ ಮಕ್ಕಳಿಗೆ “ಗಂಧದ ಕುಡಿ’ ಹೇಳಿ ಮಾಡಿಸಿದಂತಿದೆ.

ಚಿತ್ರ: ಗಂಧದ ಕುಡಿ
ನಿರ್ಮಾಣ: ಸತ್ಯೇಂದ್ರ ಪೈ, ಕೃಷ್ಣ ಮೋಹನ್‌ ಪೈ
ನಿರ್ದೇಶನ: ಸಂತೋಷ್‌ ಶೆಟ್ಟಿ ಕಟೀಲ್‌
ತಾರಾಗಣ: ರಮೇಶ್‌ ಭಟ್‌, ಶಿವಧ್ವಜ್‌, ಜ್ಯೋತಿ ರೈ, ಅರವಿಂದ್‌ ಶೆಟ್ಟಿ, ದೀಪಕ್‌ ಶೆಟ್ಟಿ, ಯೋಗೀಶ್‌ ಕೊಟ್ಯಾನ್‌, ಜಿ.ಪಿ ಭಟ್‌, ಬೇಬಿ ನಿಧಿ ಎಸ್‌ ಶೆಟ್ಟಿ ಮತ್ತಿತರರು.

* ಜಿ.ಎಸ್‌ ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.