ಚಿತ್ರ ವಿಮರ್ಶೆ: ಫ್ಯಾಮಿಲಿ ಡ್ರಾಮಾದಲ್ಲಿ ‘ಗರುಡ’ ಪುರಾಣ


Team Udayavani, May 21, 2022, 2:28 PM IST

garuda kannada movie

ಆತ ಮೇಲ್ನೋಟಕ್ಕೆ ಸೈಲೆಂಟ್‌ ಹುಡುಗ. ಗೋವಾದಲ್ಲಿ ತಾನಾಯಿತು, ತನ್ನ ಹೋಟೆಲ್‌ ಆಯಿತು ಎಂದುಕೊಂಡಿದ್ದ ಆತನಿಗೊಂದು ಫ್ಲ್ಯಾಶ್‌ಬ್ಯಾಕ್‌ ಇದೆ. ಅದ ಕ್ಕೆ ಕಾರಣ ಸೈಲೆಂಟ್‌ ಹುಡುಗನ ಹಿಂದಿರುವ ವೈಲೆಂಟ್‌ ಸ್ಟೋರಿ. ಅಷ್ಟಕ್ಕೂ ಆ ವೈಲೆಂಟ್‌ ಸ್ಟೋರಿ ಏನು ಎಂಬ ಕುತೂಹಲ ನಿಮಗಿದ್ದರೆ ನೀವು “ಗರುಡ’ ನೋಡಬಹುದು.

“ಗರುಡ’ ಒಂದು ಔಟ್‌ಅಂಡ್‌ ಔಟ್‌ ಕಮರ್ಷಿಯಲ್‌ ಸಿನಿಮಾ. ಫ್ಯಾಮಿಲಿ ಹಾಗೂ ಮಾಸ್‌ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ಮಾಡಿರುವ ಕಾರಣ, ಇಲ್ಲಿ ಕಥೆಗಿಂತ ಸನ್ನಿವೇಶಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬಹುತೇಕ ಸಿನಿಮಾಗಳಂತೆ ಇಲ್ಲೂ ಕಥೆ ಟ್ರ್ಯಾಕ್‌ಗೆ ಬರೋದು ದ್ವಿತೀಯಾರ್ಧದಲ್ಲಿ. ಅಲ್ಲಿವರೆಗೆ ಪ್ರೇಕ್ಷಕರಿಗೆ ಗೋವಾ ದರ್ಶನ ಮಾಡಿಸಿದ್ದಾರೆ. ಇಲ್ಲಿ ನಿಮಗೆ ಗ್ಲಾಮರ್‌, ಫ‌ನ್‌, ಕಾಮಿಡಿ… ಎಲ್ಲದರ ದರ್ಶನವಾಗುತ್ತದೆ.

ಇಂಟರ್‌ನ್ಯಾಶನಲ್‌ ಮಾಫಿಯಾವೊಂದರ ಸುತ್ತ ಸಾಗುವ ಕಥೆಯಲ್ಲಿ ಒಂದು ಸುಂದರ ಕುಟುಂಬದ ಕತೆಯನ್ನು ಸೇರಿಸಲಾಗಿದೆ. ಒಂದಷ್ಟು ದೃಶ್ಯಗಳು ಪ್ರೇಕ್ಷಕರ ಊಹೆಗೆ ತಕ್ಕಂತೆ ಸಾಗಿದರೂ, ಅಲ್ಲಲ್ಲಿ ಬರುವ ಟ್ವಿಸ್ಟ್‌-ಟರ್ನ್ಗಳು ಸಿನಿಮಾವನ್ನು ನೋಡಿಸಿಕೊಂಡು ಹೋಗುವಂತೆ ಮಾಡಿವೆ. ಅದರಲ್ಲೂ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಬರುವ ಟ್ವಿಸ್ಟ್‌ ಹಾಗೂ ಹೈವೋಲ್ಟೇಜ್‌ ಫೈಟ್ಸ್‌ ಚಿತ್ರದ ಪ್ಲಸ್‌ ಪಾಯಿಂಟ್‌. ಇನ್ನು, ಚಿತ್ರದಲ್ಲಿ ಬರುವ ಒಂದಷ್ಟು ಕಾಮಿಡಿ ಟ್ರ್ಯಾಕ್‌ಗಳನ್ನು ಟ್ರಿಮ್‌ ಮಾಡಿದ್ದರೆ ಚಿತ್ರದ ವೇಗ ಹೆಚ್ಚುತ್ತಿತ್ತು.

ಇದನ್ನೂ ಓದಿ:ಕಟ್ಟಿಂಗ್ ಶಾಪ್ ಚಿತ್ರವಿಮರ್ಶೆ: ಅಡ್ಡ ಕತ್ತರಿಯಲ್ಲಿ ‘ಸಂಕಲನ’ಕಾರನ ಜೀವನ ಚಿತ್ರಣ

ನಾಯಕ ಸಿದ್ಧಾರ್ಥ್ ಮಹೇಶ್‌ ಆ್ಯಕ್ಷನ್‌ ದೃಶ್ಯಗಳಲ್ಲಿ ಇಷ್ಟವಾಗುತ್ತಾರೆ. ಅದರಾಚೆ ಸೆಂಟಿಮೆಂಟ್‌ ಹಾಗೂ ಇತರ ದೃಶ್ಯಗಳಲ್ಲಿ ಸಿದ್ಧಾರ್ಥ್ ಇನ್ನಷ್ಟು ಪಳಗಬೇಕು. ನಾಯಕಿಯರಾದ ಐಂದ್ರಿತಾ ರೇ ಹಾಗೂ ಆಶಿಕಾ ರಂಗನಾಥ್‌ ಇದ್ದಷ್ಟು ಹೊತ್ತು ಚೆಂದ. ಉಳಿದಂತೆ ಪೊಲೀಸ್‌ ಆಫಿಸರ್‌ ಆಗಿ ಶ್ರೀನಗರ ಕಿಟ್ಟಿ, ಡಾನ್‌ ಆಗಿ ಆದಿ ಲೋಕೇಶ್‌, ರಂಗಾಯಣ ರಘು ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ.

ರವಿ ರೈ

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.