Ghost movie review: ಆಟ, ಅಖಾಡ ಎರಡೂ ಚೆಂದ!


Team Udayavani, Oct 20, 2023, 9:23 AM IST

Ghost movie review

ಇನ್ನೇನು ಭೂಮಿ ಪೂಜೆ ನಡೆಯಬೇಕು. ಅಷ್ಟರಲ್ಲಿ ಬಾಂಬ್‌ ಬ್ಲಾಸ್ಟ್‌ ಆಗುತ್ತದೆ. ಎಲ್ಲರೂ ಚೆಲ್ಲಾಪಿಲ್ಲಿ. ಕಟ್‌ ಮಾಡಿದರೆ ಹೊರಗಿಂದ ಬಂದ ಗ್ಯಾಂಗ್‌ವೊಂದು ಒಂದಷ್ಟು ಕೈದಿಗಳನ್ನು ಒತ್ತೆಯಾಳಗಿಟ್ಟುಕೊಂಡಿರುತ್ತದೆ. ಅಲ್ಲಿಂದ ಗೇಮ್‌ ಶುರು. ಅಖಾಡವೂ ಅವನದೇ ಆಟವೂ ಅವನದೇ… ಹಾಗಾದರೆ ಆತ ಯಾರು, ಹೈಜಾಕ್‌ ಹಿಂದಿನ ಉದ್ದೇಶವೇನು? ಈ ಕುತೂಹಲ ನಿಮಗಿದ್ದರೆ ನೀವು “ಘೋಸ್ಟ್‌’ ಸಿನಿಮಾ ನೋಡಬಹುದು.

ಶಿವರಾಜ್‌ಕುಮಾರ್‌ ಅವರ ಜೊತೆ ಸಿನಿಮಾ ಮಾಡಬೇಕೆಂದು ಕನಸು ಕಾಣುವ ನಿರ್ದೇಶಕರ ಪಟ್ಟಿ ದೊಡ್ಡದಿದೆ. ಆ ಪಟ್ಟಿಯಲ್ಲಿ ನಿರ್ದೇಶಕ ಶ್ರೀನಿ ಕೂಡಾ ಒಬ್ಬರು. ಆದರೆ, ಶ್ರೀನಿ, ಶಿವಣ್ಣ ಅವರಿಗೆ ಸಿನಿಮಾ ಮಾಡುವ ಕನಸಿನ ಜೊತೆಗೆ ಅವರನ್ನು ವಿಭಿನ್ನವಾಗಿ ತೋರಿಸಬೇಕೆಂಬ ಆಸೆಯೊಂದಿಗೆ ಮಾಡಿದ ಸಿನಿಮಾವಿದು. ಅದೇ ಕಾರಣದಿಂದ “ಘೋಸ್ಟ್‌’ ಶಿವಣ್ಣ ಕೆರಿಯರ್‌ನಲ್ಲಿ ವಿಭಿನ್ನವಾಗಿ ನಿಲ್ಲುವ ಸಿನಿಮಾ.

ಈ  ಸಿನಿಮಾದ ಹೈಲೈಟ್‌ ಎಂದರೆ ಚಿತ್ರಕಥೆ. ನಿರ್ದೇಶಕ ಶ್ರೀನಿ ಚಿತ್ರಕಥೆಯಲ್ಲಿ ಜಾಣ್ಮೆ ಮೆರೆದಿದ್ದಾರೆ. ಎಲ್ಲೂ ಬೋರ್‌ ಆಗದಂತೆ ಜೊತೆಗೆ ಆಗಾಗ ಪ್ರೇಕ್ಷಕರಲ್ಲಿ ಕುತೂಹಲ, ಗೊಂದಲವೂ ಎಲ್ಲವೂ ಬರುವಂತೆ ನೋಡಿಕೊಂಡು ಸಿನಿಮಾವನ್ನು ಮುಂದುವರೆಸುವ ಮೂಲಕ “ಘೋಸ್ಟ್‌’ ಒಂದು ಹೊಸ ಫೀಲ್‌ ಕೊಡುವಂತೆ ಮಾಡಿದ್ದಾರೆ.

ಮೊದಲೇ ಹೇಳಿದಂತೆ ಶಿವಣ್ಣ ಕೆರಿಯರ್‌ನಲ್ಲಿ ಇದು ವಿಭಿನ್ನವಾಗಿ ನಿಲ್ಲುವ ಸಿನಿಮಾ. ಈ ತರಹದ ಒಂದು ಪ್ರಯತ್ನಕ್ಕೆ ಕೈ ಜೋಡಿಸಿದ ಶಿವಣ್ಣ ಅವರನ್ನು ಮೆಚ್ಚಲೇಬೇಕು. ಅದೇ ಹಾಡು, ಲವ್‌, ಫ್ಯಾಮಿಲಿ ಸೆಂಟಿಮೆಂಟ್‌, ಡ್ಯುಯೆಟ್‌ಗಳ ಮಧ್ಯೆ “ಘೋಸ್ಟ್‌’ “ಜೈಲ್‌ಬ್ರೇಕ್‌’ನಂತೆ ಅವೆಲ್ಲವನ್ನು ಬ್ರೇಕ್‌ ಮಾಡಿ ಒಂದು ಶೈಲಿಯಲ್ಲಿ ಮೂಡಿಬಂದಿದೆ. ಇಲ್ಲಿ ತಂತ್ರ, ಪ್ರತಿತಂತ್ರ, ಕ್ಷಣ ಕ್ಷಣಕ್ಕೂ ಬದಲಾಗುವ ಸನ್ನಿವೇಶ, ಅದರ ಹಿಂದಿನ ಉದ್ದೇಶ… ಹೀಗೆ ಸದಾ ಪ್ರೇಕ್ಷಕರನ್ನು ಎಂಗೇಜ್‌ ಮಾಡುತ್ತಲೇ ಸಾಗುವ ಸಿನಿಮಾದ ಕಥೆ ನಾಲ್ಕು ಕಾಲಘಟ್ಟಗಳಲ್ಲಿ ತೋರಿಸಿದ್ದಾರೆ. ಆದರೆ, ಅದನ್ನು ಅತಿಯಾಗಿ ವೈಭವೀಕರಿಸದೇ ಕಥೆಯ ಜೊತೆ ಜೊತೆಗೆ ಸಾಗುವಂತೆ ಮಾಡಿರುವುದು ನಿರ್ದೇಶಕರ ಜಾಣ್ಮೆ.

ಮೊದಲರ್ಧಕ್ಕೆ ಹೋಲಿಸಿದರೆ ಚಿತ್ರದ ದ್ವಿತೀಯಾರ್ಧ ಹೆಚ್ಚು ವೇಗವಾಗಿ ಕೂಡಿದೆ. ಕ್ಷಣ ಕ್ಷಣಕ್ಕೂ ಹೊಸ ಹೊಸ ಟ್ವಿಸ್ಟ್‌ಗಳ ಮೂಲಕ ಸಾಗುವ ಸಿನಿಮಾ ಒಂದು ಹಂತದಲ್ಲಿ ರೋಚಕ ಕ್ಷಣಗಳನ್ನು ಕಟ್ಟಿಕೊಡುತ್ತದೆ. ಈ ಸಿನಿಮಾದ ಹೈಲೈಟ್‌ಗಳಲ್ಲಿ ಚಿತ್ರದ ಸಂಭಾಷಣೆ ಕೂಡಾ ಒಂದು. ಇಲ್ಲಿ ಹೆಚ್ಚು ಮಾತಿಲ್ಲ. ಆದರೆ, ಆಡುವ ಮಾತು ಅಷ್ಟೇ ಪವರ್‌ಫ‌ುಲ್‌ ಆಗಿದೆ. “ಬಟ್ಟೆ ಗಲೀಜಾಗಿದ್ರು ಪರ್ವಾಗಿಲ್ಲ, ನಿಯತ್ತು ಶುದ್ಧವಾಗಿರಬೇಕು’, “ಕಾಶಿಗೆ ಬಂದಿದ್ದೀಯ, ಗಂಗೆಯಲ್ಲಿ ಮುಳುಗಿಸದೇ ಬಿಡ್ತೀವ’, “ಭಯ ಇರಬೇಕು, ಆಗಲೇ ನಮ್ಮ ಧೈರ್ಯ ಗೊತ್ತಾಗೋದು…’ ಇಂತಹ ಡೈಲಾಗ್‌ಗಳನ್ನು ಸಂಭಾಷಣೆಕಾರರಾದ ಮಾಸ್ತಿ ಹಾಗೂ ಪ್ರಸನ್ನ ಕಟ್ಟಿಕೊಟ್ಟು ಸಿನಿಮಾದ ತೂಕ ಹೆಚ್ಚಿಸಿದ್ದಾರೆ.

ಇನ್ನು, ಚಿತ್ರದಲ್ಲಿ ಸಾಕಷ್ಟು ಅಂಶಗಳು ಬಂದು ಹೋಗುವುದರಿಂದ ಕ್ಲೈಮ್ಯಾಕ್ಸ್‌ನಲ್ಲಿ ಸ್ಪಷ್ಟತೆಗಾಗಿ ಎಲ್ಲವನ್ನು ನೆನಪಿನಲ್ಲಿಟ್ಟುಕೊಳ್ಳುವ ಟಾಸ್ಕ್ ಅನ್ನು ಇಲ್ಲಿ ಪ್ರೇಕ್ಷಕರಿಗೆ ನೀಡಲಾಗಿದೆ. ನಟ ಶಿವರಾಜ್‌ಕುಮಾರ್‌ ಅವರನ್ನು ಖಡಕ್‌ ಆ್ಯಕ್ಷನ್‌ ಇಮೇಜ್‌ ಇಷ್ಟಪಡುವವರಿಗೆ “ಘೋಸ್ಟ್‌’ ಹಬ್ಬ. ಶಿವಣ್ಣ ಕೂಡಾ ಹೆಚ್ಚು ಮಾತಿಲ್ಲದೇ, ಮೌನದಲ್ಲೇ ಸಿನಿಮಾದ ತೂಕ ಹೆಚ್ಚಿಸಿದ್ದಾರೆ. ಇಲ್ಲಿ ಅವರ ಲುಕ್‌, ಮ್ಯಾನರಿಸಂ ಎಲ್ಲವೂ ವಿಭಿನ್ನವಾಗಿದೆ.

ಉಳಿದಂತೆ ಜಯರಾಂ ತಮ್ಮ ಪಾತ್ರದಲ್ಲಿ ಮಿಂಚಿದ್ದಾರೆ. ಚಿತ್ರದಲ್ಲಿ ಅನುಪಮ್‌ ಖೇರ್‌ ಕೂಡಾ ನಟಿಸಿದ್ದಾರೆ. ಇಡೀ ಸಿನಿಮಾದ ಹೈಲೈಟ್‌ಗಳಲ್ಲಿ ಚಿತ್ರದ ಛಾಯಾಗ್ರಹಣ ಹಾಗೂ ಹಿನ್ನೆಲೆ ಸಂಗೀತ ಕೂಡಾ ಒಂದು. ಇವೆರಡೂ ಸಿನಿಮಾದ ತೂಕ ಹೆಚ್ಚಿಸಿರುವುದು ಸುಳ್ಳಲ್ಲ. ರೆಗ್ಯುಲರ್‌ ಪ್ಯಾಟರ್ನ್ ಬಿಟ್ಟು ಶಿವಣ್ಣ ಅವರನ್ನು ನೋಡುವವರಿಗೆ “ಘೋಸ್ಟ್‌’ ರುಚಿಸಬಹುದು.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.