‘ಹೊಂದಿಸಿ ಬರೆಯಿರಿ’ ಚಿತ್ರ ವಿಮರ್ಶೆ: ಭಾವನೆಗಳ ಮೇಲೆ ಜೀವಯಾನ


Team Udayavani, Feb 11, 2023, 5:06 PM IST

‘ಹೊಂದಿಸಿ ಬರೆಯಿರಿ’ ಚಿತ್ರ ವಿಮರ್ಶೆ: ಭಾವನೆಗಳ ಮೇಲೆ ಜೀವಯಾನ

“ಇಷ್ಟಪಟ್ಟು ಮದುವೆಯಾಗಿದ್ದೇವೆ ಎಂಬ ಕಾರಣಕ್ಕೆ ಕಷ್ಟಪಟ್ಟುಕೊಂಡು ಜೊತೆಗಿರಲು ಸಾಧ್ಯವಿಲ್ಲ…’ – ಆಕೆ ಈ ಡೈಲಾಗ್‌ ಹೇಳುವ ಹೊತ್ತಿಗೆ ಮಾನಸಿಕವಾಗಿ ಇಬ್ಬರು ದೂರವಾಗಿರುತ್ತಾರೆ. ಪ್ರೀತಿಸಿ ಮದುವೆಯಾದ ಜೋಡಿಯ ನಡುವಿನ ಭಿನ್ನಾಭಿಪ್ರಾಯವೇ ಇದಕ್ಕೆ ಕಾರಣ. ಬದುಕೇ ಹಾಗೆ, ಆರಂಭದಲ್ಲಿ ಚೆನ್ನಾಗಿದೆ ಅನಿಸಿದ್ದು, ಮುಂದೆ ದುಃಖಕ್ಕೆ, ನೋವಿಗೆ ಕಾರಣವಾಗಬಹುದು. ಬದುಕಿನಲ್ಲಿ ಬರುವ ಸೂಕ್ಷ್ಮ ಅಂಶಗಳು ಹಾಗೂ ಆ ಸಮಯದಲ್ಲಿ ನಾವು ತೆಗೆದುಕೊಳ್ಳುವ ನಿರ್ಧಾರಗಳು ನಮ್ಮ ನೆಮ್ಮದಿ-ದುಃಖಕ್ಕೆ ಕಾರಣವಾಗುತ್ತವೆ. ಈ ತರಹದ ಒಂದು ಸೂಕ್ಷ್ಮ ಹಾಗೂ ಮನಸ್ಸಿಗೆ ಮುಟ್ಟುವಂತಹ ಸಂದೇಶದೊಂದಿಗೆ ತೆರೆಕಂಡಿರುವ ಚಿತ್ರ “ಹೊಂದಿಸಿ ಬರೆಯಿರಿ’.

ಇಡೀ ಸಿನಿಮಾ ನಿಂತಿರೋದು ಭಾವನೆಗಳ ಮೇಲೆ. ಹಾಗಾಗಿ, ಸಿನಿಮಾದ ಪಯಣ ಕೂಡಾ ಭಾವನಾ ಹಾದಿಯಲ್ಲೇ ಸಾಗುತ್ತದೆ. ಹರೆಯದ ಹುಡುಗ-ಹುಡುಗಿಯರ ನಿರ್ಧಾರಗಳು ಹೇಗೆ ಅವರ ಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಈ ಸಿನಿಮಾದ ಪ್ರಮುಖ ಅಂಶ. ಇದು ರೆಗ್ಯುಲರ್‌ ಜಾನರ್‌ ಬಿಟ್ಟ ಸಿನಿಮಾ. ಹೀರೋ ಇಂಟ್ರೋಡಕ್ಷನ್‌, ಫೈಟ್‌, ಪಂಚಿಂಗ್‌ ಡೈಲಾಗ್‌… ಇವೆಲ್ಲದರಿಂದ ಹೊರತಾಗಿ ಕಥೆಯೇ ಈ ಸಿನಿಮಾದ ಹೀರೋ.

ಚಿತ್ರದಲ್ಲಿ ಭಾವನೆಗಳ ಏರಿಳಿತದ ಪಯಣ ಹೈಲೈಟ್‌ ಆದರೂ ಇಲ್ಲಿ ಕಾಲೇಜು ವಿದ್ಯಾರ್ಥಿಗಳ ಮಜವಾದ ಜರ್ನಿ ಇದೆ. ಚಿತ್ರದ ಮೊದಲಾರ್ಧ ಕಾಲೇಜು, ಅಲ್ಲಿನ ಪ್ರೀತಿ ಪ್ರೇಮ, ಸಣ್ಣಪುಟ್ಟ ಕಿರಿಕ್‌ಗಳ ಮೂಲಕ ಸಿನಿಮಾ ಸಾಗುತ್ತದೆ. ಇಲ್ಲಿ ಜಾಲಿಯಾಗಿ ಸಾಗುವ ಸನ್ನಿವೇಶಗಳು ಪ್ರೇಕ್ಷಕರಿಗೆ ನಗು ತರಿಸುವ ಜೊತೆಗೆ ಎಲ್ಲೂ ಬೋರ್‌ ಆಗದಂತೆ ನೋಡಿಕೊಂಡಿದ್ದಾರೆ ನಿರ್ದೇಶಕರು.

ಇನ್ನು, ಚಿತ್ರದ ದ್ವಿತೀಯಾರ್ಧ ತುಂಬಾ ಗಂಭೀರವಾಗಿ ಸಾಗುವ ಜೊತೆಗೆ ಬೇರೆ ಬೇರೆ ಸನ್ನಿವೇಶಗಳು ತೆರೆದುಕೊಳ್ಳುತ್ತವೆ. ಈ ಸಿನಿಮಾ ಬಗ್ಗೆ ಒಂದೇ ಮಾತಲ್ಲಿ ಹೇಳಬೇಕಾದರೆ ಮನೆಮಂದಿಯೆಲ್ಲಾ ಕುಳಿತು ನೋಡುವಂತಹ ಒಂದು ನೀಟಾದ ಸಿನಿಮಾ.

ಚಿತ್ರದಲ್ಲಿ ನಟಿಸಿರುವ ಐಶಾನಿ, ಶ್ರೀ ಮಹದೇವ್‌, ನವೀನ್‌ ಶಂಕರ್‌, ಪ್ರವೀಣ್‌ ತೇಜ್‌, ಭಾವನಾ, ಸಂಯುಕ್ತಾ ಹೊರನಾಡು ಸೇರಿದಂತೆ ಪ್ರತಿಯೊಬ್ಬರು ಪಾತ್ರಕ್ಕೆ ತುಂಬಾ ಚೆನ್ನಾಗಿ ಹೊಂದಿಕೊಂಡಿದ್ದಾರೆ. ಉಳಿದಂತೆ ಚಿತ್ರದ ಹಾಡುಗಳು, ಹಿನ್ನೆಲೆ ಸಂಗೀತ ಕಥೆಗೆ ಪೂರಕವಾಗಿದೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.