ಮಾನವೀಯ ಸಂಬಂಧಗಳ ಕಟ್ಟುವ ರಿಬ್ಬನ್‌


Team Udayavani, Jul 14, 2018, 11:08 AM IST

hasiru.jpg

“ಹಣ ಸಣ್ಣದು. ಮನುಷ್ಯ ಸಹ ಸಣ್ಣವನಾಗಬೇಕಾ …’ ಬಹುಶಃ ಹಾಗಾಗಬಹುದು ಎಂದು ಆಕೆ ಕನಸಿನಲ್ಲಿಯೂ ಎಣಿಸಲಿರಕ್ಕಿಲ್ಲ. ಅತ್ತೆ ಅಂತ ಬಾಯ್ತುಂಬ ಕೂಗುವವನು, ಮನೆಮಗನಂತೆ ಒಳ್ಳೆಯದನ್ನೇ ಬಯಸುವವನು, ಹಬ್ಬಕ್ಕೆ ಕರೆದು ಸಂಭ್ರಮಿಸುವವನು … ಬೆನ್ನಿಗೆ ಚೂರಿ ಹಾಕಬಹುದು ಎಂದು ಆಕೆ ನಿರೀಕ್ಷಿಸಿರುವುದಿಲ್ಲ. ಆದರೆ, ಅಂಥದ್ದೊಂದು ದಿನ ಎದುರಾಗೇಬಿಡುತ್ತದೆ.

ತಾವು ಜಮೀನಿಗೆಂದು ಕೊಟ್ಟ ದುಡ್ಡನ್ನು ಅವನು ನುಂಗಿದ್ದು ಕೇಳಿ ಆಘಾತವಾಗುತ್ತದೆ. ತಾವು ಮೋಸ ಹೋದೆವು ಅಂತ ತಿಳಿದು ಆಕಾಶವೇ ತಲೆಯ ಮೇಲೆ ಕಳಚಿಬಿದ್ದಂತಾಗುತ್ತದೆ. ಆಗ ಆಕೆಯ ಬಾಯಿಂದ ಬರುವುದೇ, “ಹಣ ಸಣ್ಣದು. ಮನುಷ್ಯ ಸಹ ಸಣ್ಣವನಾಗಬೇಕಾ …’ ಎಂಬ ಮಾತು. ಇದುವರೆಗೂ ಗೀತರಚನೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆಯುವುದರಲ್ಲಿ ತೊಡಗಿಸಿಕೊಂಡಿದ್ದ ಹಿರಿಯ ಸಾಹಿತಿ ಡಾ.ಎಚ್‌.ಎಸ್‌. ವೆಂಕಟೇಶಮೂರ್ತಿ ಇದೇ ಮೊದಲ ಬಾರಿಗೆ “ಹಸಿರು ರಿಬ್ಬನ್‌’ ಎಂಬ ಸಿನಿಮಾ ಮಾಡಿದ್ದಾರೆ.

ಸಾಹಿತಿಗಳೊಬ್ಬರು ಸಿನಿಮಾ ಮಾಡುವಾಗ, ಎಲ್ಲಿ ತಮ್ಮ ತನವನ್ನು ಕಳೆದುಕೊಳ್ಳುತ್ತಾರೋ ಎಂಬ ಭಯ ಅವರ ಓದುಗವಲಯದಲ್ಲಿ ಸಹಜವಾಗಿಯೇ ಇರುತ್ತದೆ. ಆದರೆ, ವೆಂಕಟೇಶಮೂರ್ತಿಗಳು ತಮ್ಮ ತನವನ್ನು ಕಳೆದುಕೊಳ್ಳದೆಯೇ, ಮನೆ ಮಂದಿಯೆಲ್ಲಾ ಕುಳಿತು ಒಂದು ಸದಭಿರುಚಿಯ ಚಿತ್ರವನ್ನು ಮಾಡಿದ್ದಾರೆ. ಇಲ್ಲಿ ಅವರು ಕಳೆದು ಹೋಗುತ್ತಿರುವ ಮಾನವೀಯ ಸಂಬಂಧಗಳ ಬಗ್ಗೆ, ಹಣಕ್ಕಾಗಿ ಸಂಬಂಧವನ್ನು ದೂರ ಮಾಡಿಕೊಳ್ಳುತ್ತಿರುವ ಬಗ್ಗೆ ಹೇಳುವ ಪ್ರಯತ್ನ ಮಾಡಿದ್ದಾರೆ.

ಅದಕ್ಕಾಗಿ ತಮ್ಮದೇ ಆತ್ಮಚರಿತ್ರೆಯಾದ “ಅನಾತ್ಮಕ ಕಥನ’ದಿಂದ ಒಂದು ಅಧ್ಯಾಯವನ್ನು ತೆಗೆದುಕೊಂಡಿದ್ದಾರೆ. ವೆಂಕಟೇಶಮೂರ್ತಿ ಅವರ “ಹಸಿರು ರಿಬ್ಬನ್‌’ ಚಿತ್ರದ ವಿಶೇಷವೆಂದರೆ, ಇದೊಂದು ಸಾಮಾನ್ಯ ಮನುಷ್ಯರ ಕಥೆ. ಒಬ್ಬ ಸಾಮಾನ್ಯ ಮನುಷ್ಯ ಯಾವುದೇ ಘಟನೆಗೆ ಹೇಗೆ ಪ್ರತಿಕ್ರಯಿಸುತ್ತಾನೋ, ಅದನ್ನೇ ತೆರೆಯ ಮೇಲೆ ತರಲಾಗಿದೆ. ಪ್ರೇಕ್ಷಕರಿಗೆ ಇಡೀ ಕಥೆ ತಮ್ಮ ಸುತ್ತಮುತ್ತಲೇ ನಡೆಯುತ್ತಿದೆಯೇನೋ ಎನಿಸುವಷ್ಟು ಆಪ್ತವಾಗಿ ಇಡೀ ವಾತಾವರಣವನ್ನು ಕಟ್ಟಿಕೊಡಲಾಗಿದೆ.

ಚಿತ್ರದಲ್ಲಿರುವುದು ಕೆಲವೇ ಕೆಲವು ಪಾತ್ರಗಳು. ಮೊದಲಾರ್ಧ ಆ ಪಾತ್ರಗಳ ಪರಿಚಯ, ಸಂಬಂಧದ ಕುರಿತಾಗಿ ಸಾಗಿದರೆ, ದ್ವಿತೀಯಾರ್ಧವು ಗಂಭೀರವಾಗುತ್ತಾ ಹೋಗುತ್ತದೆ. ಅದರಲ್ಲೂ ಕೊನೆಯ ಕೆಲವು ನಿಮಿಷಗಳ ಕಾಲ ಪ್ರೇಕ್ಷಕರನ್ನು ಗದ್ಗದಿತರನ್ನಾಗಿ ಮಾಡುವಲ್ಲಿ ವೆಂಕಟೇಶಮೂರ್ತಿಗಳು ಸಫ‌ಲರಾಗಿದ್ದಾರೆ. ಮೊದಲೇ ಹೇಳಿದಂತೆ ಚಿತ್ರದಲ್ಲಿರುವುದು ಕೆಲವೇ ಪಾತ್ರಗಳು.

ಆ ಪೈಕಿ ಗಿರಿಜಾ ಲೋಕೇಶ್‌ ತಮ್ಮ ಅಭಿನಯದಿಂದ ಎಲ್ಲರ ಮನಗೆಲ್ಲುತ್ತಾರೆ. ನಿಖೀಲ್‌ ಮಂಜು, ಚೈತ್ರ, ಸುಪ್ರಿಯಾ ರಾವ್‌ ಮುಂತಾದವರು ಸಹ ಗಮನಸೆಳೆಯುತ್ತಾರೆ. ಉಪಾಸನಾ ಮೋಹನ್‌ ಅವರ ಸಂಗೀತದಲ್ಲಿ “ಸಕ್ಕರೆಯ ಪಾಕದಲಿ ಅದ್ದಿರುವ ಜಾಮೂನು …’ ಹಾಡು ಚಿತ್ರದ ಹೈಲೈಟು. ಇನ್ನು ಪಿ.ವಿ.ಆರ್‌. ಸ್ವಾಮಿ ಅವರ ಛಾಯಾಗ್ರಹಣದಲ್ಲಿ ಇಡೀ ಪರಿಸರ ಆಪ್ತವೆನಿಸುತ್ತದೆ.

ಚಿತ್ರ: ಹಸಿರು ರಿಬ್ಬನ್‌
ನಿರ್ದೇಶನ: ಎಚ್‌.ಎಸ್‌. ವೆಂಕಟೇಶಮೂರ್ತಿ
ನಿರ್ಮಾಣ: ಕುಮಾರ್‌
ತಾರಾಗಣ: ನಿಖೀಲ್‌ ಮಂಜು, ಗಿರಿಜಾ ಲೋಕೇಶ್‌, ಬಿ. ಜಯಶ್ರೀ ಮುಂತಾದವರು

* ಚೇತನ್‌

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.