ತುಂಡ್‌ ಹೈಕ್ಳ ಜಂಟಿ ಸಾಹಸ

ಚಿತ್ರ ವಿಮರ್ಶೆ

Team Udayavani, Jan 18, 2020, 7:03 AM IST

sri-bharata

ಇಲ್ಲಿಯವರೆಗೆ ಸಂಭಾಷಣೆಕಾರನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮಂಜು ಮಾಂಡವ್ಯ ಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಿರುವ “ಶ್ರೀ ಭರತ ಬಾಹುಬಲಿ’ ಚಿತ್ರ ಈ ವಾರ ತೆರೆಗೆ ಬಂದಿದೆ. ಅಂದಹಾಗೆ, ಚಿತ್ರದ ಹೆಸರು “ಶ್ರೀ ಭರತ ಬಾಹುಬಲಿ’ ಅಂತಿದ್ದರೂ, ಇತಿಹಾಸ-ಪುರಾಣಗಳಲ್ಲಿ ಬರುವ ಭರತ-ಬಾಹುಬಲಿಗೂ, ಈ ಚಿತ್ರದಲ್ಲಿರುವ ಭರತ-ಬಾಹುಬಲಿಗೂ ಯಾವುದೇ ಸಂಬಂಧವಿಲ್ಲ. ಇದರಲ್ಲಿ ನೋಡೋಕೆ ಸಿಗೋದು ಪಕ್ಕಾ ನಮ್ಮ-ನಿಮ್ಮ ನಡುವೆ ಇರುವ ಭರತ-ಬಾಹುಬಲಿ ಅನ್ನೋ ತುಂಡ್‌ ಹೈಕ್ಳು.

ಚಿಕ್ಕ ವಯಸ್ಸಿನಲ್ಲಿ ಬಾಹುಬಲಿ ಮಹಾಮಸ್ತಕಾಭಿಷೇಕದಲ್ಲಿ ಕಳೆದು ಹೋಗುವ ಪುಟ್ಟ ಹುಡುಗಿ ಶ್ರೀ ವಿದೇಶಿ ದಂಪತಿಗಳ ಕೈಗೆ ಸಿಕ್ಕು ವಿದೇಶ ಸೇರಿಕೊಳ್ಳುತ್ತಾಳೆ. ಅಲ್ಲೆ ಬೆಳೆದು ದೊಡ್ಡವಳಾಗುವ ಶ್ರೀಗೆ ಪದೇ ಪದೇ ಬೀಳುವ ಕನಸೊಂದು ಆಕೆಯನ್ನು ನಿಜ ಜೀವನದಲ್ಲಿ ಮತ್ತೆ ತನ್ನ ಹೆತ್ತವರನ್ನು ಹುಡುಕಿಕೊಂಡು ಭಾರತಕ್ಕೆ ಬರುವಂತೆ ಮಾಡುತ್ತದೆ. ಮತ್ತೂಂದೆಡೆ ಹಳ್ಳಿಯಲ್ಲಿ ಅವರಿವರಿಗೆ ಟೋಪಿ ಹಾಕಿಕೊಂಡು ಆರಾಮಾಗಿ ಓಡಾಡಿಕೊಂಡಿರುವ ಭರತ, ಬಾಹುಬಲಿ ಅನ್ನೋ ತುಂಡ್‌ ಹೈಕ್ಳು ಈ ಹುಡುಗಿಯ ಕಣ್ಣಿಗೆ ಬೀಳುತ್ತಾರೆ.

ಈ ಹುಡುಗರನ್ನು ಬಳಸಿಕೊಂಡು ಶ್ರೀ ತನ್ನ ಪೋಷಕರನ್ನು ಹುಡುಕಲು ಯಶಸ್ವಿಯಾಗುತ್ತಾಳಾ? ಶ್ರೀ ಹೆತ್ತವರ ಹುಡುಕಾಟದಲ್ಲಿ ಭರತ-ಬಾಹುಬಲಿಯ ಪಾತ್ರವೇನು ಅನ್ನೋದೆ “ಶ್ರೀ ಭರತ ಬಾಹುಬಲಿ’ ಚಿತ್ರದ ಕಥೆ. ಅದೆಲ್ಲವನ್ನೂ ಒಂದಷ್ಟು ಕಮರ್ಶಿಯಲ್‌ ಅಂಶಗಳನ್ನು ಇಟ್ಟುಕೊಂಡು ತೆರೆಮೇಲೆ ತಂದಿದೆ ನಿರ್ದೇಶಕ ಮಂಜು ಮಾಂಡವ್ಯ ಆ್ಯಂಡ್‌ ಟೀಮ್‌. ಚಿತ್ರದ ಹೆಸರೇಹೇಳುವಂತೆ ಶ್ರೀ, ಭರತ ಮತ್ತು ಬಾಹುಬಲಿ ಅನ್ನೋ ಮೂರು ಪಾತ್ರಗಳ ಸುತ್ತ ಚಿತ್ರದ ಕಥೆ ಸಾಗುತ್ತದೆ.

ಚಿತ್ರದ ಮೊದಲರ್ಧ ಒಂದಷ್ಟು ತರಲೆ, ಅನಪೇಕ್ಷಿತ ಹಾಸ್ಯ ದೃಶ್ಯಗಳು ಚಿತ್ರದ ವೇಗಕ್ಕೆ ಅಲ್ಲಲ್ಲಿ ಬ್ರೇಕ್‌ ಹಾಕುತ್ತ ಸಾಗುವುದರಿಂದ ಅಷ್ಟಾಗಿ ಮನಸ್ಸಿನಲ್ಲಿ ಉಳಿಯುವುದಿಲ್ಲ. ಆದರೆ ದ್ವಿತಿಯಾರ್ಧದ ನಂತರ ಚಿತ್ರಕಥೆ ಒಂದಷ್ಟು ಗಂಭೀ ರವಾಗಿ ನೋಡುಗರನ್ನು ಹಿಡಿದು ಕೂರಿಸುತ್ತದೆ. ನಿರ್ದೇಶಕರು ಮೊದ ಲರ್ಧದ ನಿರೂಪಣೆ ಕೊಂಚ ಬಿಗಿಯಾಗಿಸಿದ್ದರೆ, ಚಿತ್ರ ನೋಡುಗರಿಗೆ ಇನ್ನಷ್ಟು ಪರಿಣಾಮಕಾರಿ ಯಾಗುವ ಸಾಧ್ಯತೆಗಳಿದ್ದವು.

ಇನ್ನು ಮೊದಲ ಬಾರಿಗೆ ನಾಯಕನಾಗಿ ಬೆಳ್ಳಿತೆರೆಗೆ ಅಡಿಯಿಟ್ಟಿರುವ ಮಂಜು ಮಾಂಡವ್ಯ ನಿರ್ದೇಶನ ಮತ್ತು ನಟನೆ ಎರಡನ್ನೂ ಸಮಾನವಾಗಿ ನಿರ್ವಹಿಸಿದ್ದಾರೆ. ಚಿತ್ರದ ದ್ವಿತಿಯಾರ್ಧ ಮಂಜು ಮಾಂಡವ್ಯ ಮತ್ತು ನಾಯಕಿ ಸಾರಾ ಹರೀಶ್‌ ಕೆಮಿಸ್ಟ್ರಿ ಚೆನ್ನಾಗಿ ವರ್ಕೌಟ್‌ ಆಗಿದೆ. ನೋಡುಗರಿಗೆ ಚಿಕ್ಕಣ್ಣ ಕಾಮಿಡಿ ನಿರೀಕ್ಷಿತ ಮಜಾ ಕೊಡುವುದು ಕಷ್ಟ. ಉಳಿದಂತೆ ಚಿತ್ರದ ಇತರ ಕಲಾವಿದರು ನಿರ್ದೇಶಕರ ಅಣತಿಯಂತೆ ಅಚ್ಚುಕಟ್ಟಾದ ಅಭಿನಯ ನೀಡಿದ್ದಾರೆ.

ಚಿತ್ರದ ಛಾಯಾಗ್ರಹಣ, ಸಂಕಲನ ತೆರೆಮೇಲೆ ಚಿತ್ರದ ಅಂದವನ್ನು ಹೆಚ್ಚಿಸಿವೆ. ಮಣಿಕಾಂತ್‌ ಕದ್ರಿ ಸಂಗೀತದ ಎರಡು ಹಾಡುಗಳು ತಲೆದೂಗುವಂತಿವೆ. ಒಟ್ಟಾರೆ ಕೆಲವೊಂದು ತರ್ಕಗಳನ್ನು ಬದಿಗಿಟ್ಟು ನೋಡುವುದಾದರೆ, ಲವ್‌, ಕಾಮಿಡಿ, ಸೆಂಟಿಮೆಂಟ್‌, ಐಟಂ ಡ್ಯಾನ್ಸ್‌ ಹೀಗೆ ಎಲ್ಲ ಕಮರ್ಶಿಯಲ್‌ ಎಲಿಮೆಂಟ್ಸ್‌ನ್ನು ಇಟ್ಟುಕೊಂಡು ಬಂದಿರುವ “ಶ್ರೀ ಭರತ ಬಾಹುಬಲಿ’ಯಿಂದ ಕನಿಷ್ಟ ಮನರಂಜನೆಗೆ ಖಾತ್ರಿ ಎನ್ನಲು ಅಡ್ಡಿಯಿಲ್ಲ.

ಚಿತ್ರ: ಶ್ರೀ ಭರತ ಬಾಹುಬಲಿ
ನಿರ್ಮಾಣ: ಐಶ್ವರ್ಯ ಪ್ರೊಡಕ್ಷನ್ಸ್‌
ನಿರ್ದೇಶನ: ಮಂಜು ಮಾಂಡವ್ಯ
ತಾರಾಗಣ: ಮಂಜು ಮಾಂಡವ್ಯ, ಚಿಕ್ಕಣ್ಣ, ಸಾರಾ ಹರೀಶ್‌, ಶ್ರೀನಿವಾಸ ಮೂರ್ತಿ, ಭವ್ಯಾ, ಹರೀಶ್‌ ರಾಯ್‌, ಸೇತುರಾಮ್‌ ಮತ್ತಿತರರು

* ಜಿ.ಎಸ್‌ ಕಾರ್ತಿಕ ಸುಧನ್‌

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mehabooba-Movie-Review

Mehabooba Movie Review; ತಿರುವುಗಳ ಹಾದಿಯಲ್ಲಿ ಪ್ರೇಮಪಯಣ

chow chow bath movie review

Chow Chow Bath Review; ಹರೆಯದ ಮನಸುಗಳ ಖಾಸ್‌ಬಾತ್‌

jog 101 kannada movie review

JOG 101 movie review; ಸುಂದರ ಜೋಗದಲ್ಲಿ ನಿಗೂಢ ಹೆಜ್ಜೆ

blink kannada movie review

Blink movie review; ಸಮಯದ ಹಿಂದೆ ಸವಾರಿ…

ranganayaka movie review

Ranganayaka Movie Review; ಗುರುವಿನ ಆದಿ ಪುರಾಣ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.