‘ಕಾಗೆ ಮೊಟ್ಟೆ’ ಚಿತ್ರವಿಮರ್ಶೆ: ಕಾಗೆ ಗೂಡಲ್ಲೊಂದು ಕೃಷ್ಣನ್‌ ಲವ್‌ಸ್ಟೋರಿ


Team Udayavani, Oct 2, 2021, 12:37 PM IST

‘ಕಾಗೆ ಮೊಟ್ಟೆ’ ಚಿತ್ರವಿಮರ್ಶೆ: ಕಾಗೆ ಗೂಡಲ್ಲೊಂದು ಕೃಷ್ಣನ್‌ ಲವ್‌ಸ್ಟೋರಿ

ಚಿತ್ರಮಂದಿರಗಳಲ್ಲಿ ಪೂರ್ಣ ಪ್ರವೇಶಾತಿ ಸಿಕ್ಕ ಮೊದಲ ದಿನ ಬಿಡುಗಡೆಯಾಗಿರುವ ಚಿತ್ರ “ಕಾಗೆ ಮೊಟ್ಟೆ’. ತುಂಬಾ ದಿನಗಳಿಂದ ಚಿತ್ರಮಂದಿರಗಳಿಂದ ದೂರ ಉಳಿದಿರುವ ಪ್ರೇಕ್ಷಕರನ್ನು ಮತ್ತೆ ಕರೆತರಬೇಕಾದರೆ ಸಿನಿಮಾಗಳಲ್ಲಿ ಒಂದಾ ಮಾಸ್‌ ಅಂಶ ಇರಬೇಕು ಅಥವಾ ಔಟ್‌ ಅಂಡ್‌ ಔಟ್‌ಲವ್‌ಸ್ಟೋರಿ ಇರಬೇಕು.

ಹಾಗೆ ನೋಡಿದರೆ “ಕಾಗೆಮೊಟ್ಟೆ’ ಅವೆರಡನ್ನೂ ಜೊತೆ ಜೊತೆಯಾಗಿ ನೀಡುವ ಚಿತ್ರ ಎಂದರೆ ತಪ್ಪಾಗಲಾರದು. ಅದರಲ್ಲೂ ಮಾಸ್‌ ಎಲಿಮೆಂಟ್ಸ್‌ ಸ್ವಲ್ಪ ಹೆಚ್ಚೇ ಇರುವ ಈ ಚಿತ್ರ ಮೊದಲ ದಿನವೇ ಸಿನಿಮಾ ಪ್ರೇಮಿಗಳನ್ನು ಚಿತ್ರಮಂದಿರದೊಳಗೆ ಎರಡು ಸ್ಟೆಪ್‌ ಹಾಕುವಂತೆ ಮಾಡಿದೆ.

“ಕಾಗೆ ಮೊಟ್ಟೆ’ ಒಂದು ರೌಡಿಸಂ ಹಿನ್ನೆಲೆಯ ಸಿನಿಮಾ. ಬೆಂಗಳೂರಿನ ಅಂಡರ್‌ವರ್ಲ್ಡ್ಗೆ ತಾವೇ ಅಧಿಪತಿಯಾಗಬೇಕೆಂಬ ಆಸೆಯಿಂದ ಹಳ್ಳಿಯಿಂದ ಬೆಂಗಳೂರಿಗೆ ಬರುವ ಯುವಕರ ಕಥೆಯನ್ನು “ಕಾಗೆಮೊಟ್ಟೆ’ ಒಳಗೊಂಡಿದೆ. ಬಿಸಿ ರಕ್ತದ ಯುವಕರ ಹುಮ್ಮಸ್ಸು, ಕರಾಬ್‌ ದುನಿಯಾದಲ್ಲಿ ಮೆರೆದಾಡಬೇಕೆಂಬ ಕನಸು, ಜೊತೆಗೊಂದು ಲವ್‌ಸ್ಟೋರಿ… ಈ ಅಂಶಗಳೊಂದಿಗೆ ಸಾಗುವ ಸಿನಿಮಾ, ಮನರಂಜನೆಗೆ ಮೋಸ ಮಾಡುವುದಿಲ್ಲ.

ಒಂದು ಅಂಡರ್‌ವರ್ಲ್ಡ್ ಹಿನ್ನೆಲೆಯ ಸಿನಿಮಾವನ್ನು ಹೇಗೆ ಕಟ್ಟಿಕೊಡಬೇಕೆಂಬ ಕಲ್ಪನೆ ನಿರ್ದೇಶಕ ಚಂದ್ರಹಾಸ್‌ ಅವರಿಗೆ ಚೆನ್ನಾಗಿಯೇ ಇದೆ ಎಂಬುದು ಚಿತ್ರ ನೋಡಿದಾಗ ಗೊತ್ತಾಗುತ್ತದೆ. ಮುಖ್ಯವಾಗಿ ಇಂತಹ ಕಥೆಗೆ ಲೊಕೇಶನ್‌ ಕೂಡಾ ಪ್ರಮುಖ ಪಾತ್ರ ವಹಿಸುತ್ತದೆ. ಆ ನಿಟ್ಟಿನಲ್ಲಿ ನಿರ್ದೇಶಕರು ಚಿತ್ರಕ್ಕೆ ತುಂಬಾ ಚೆನ್ನಾಗಿ ಹೊಂದಿಕೊಳ್ಳುವ ಪರಿಸರದೊಂದಿಗೆ ಕಟ್ಟಿಕೊಟ್ಟಿದ್ದಾರೆ.

ಇದನ್ನೂ ಓದಿ:ಜಗದೀಶ್‌ ಮಾತನಾಡಿದ್ದು ತಪ್ಪಾಯ್ತು…ಕರ್ನಾಟಕದಲ್ಲಿ ನಾನು ಭಿಕ್ಷುಕಿನೇ: ನಟಿ ವಿಜಯಲಕ್ಷ್ಮೀ

ರೌಡಿಸಂ ಸಿನಿಮಾ ಎಂದಮೇಲೆ ಸಹಜವಾಗಿ ಸ್ನೇಹ, ಜಿದ್ದು, ಸ್ಕೆಚ್‌, ಹೊಡೆದಾಟ, ಬಡಿದಾಟ ಸಹಜ. ಆದರೆ, ಈ ಅಂಶಗಳನ್ನೇ “ಕಾಗೆ ಮೊಟ್ಟೆ’ಯಲ್ಲಿ ಭಿನ್ನ ರೀತಿಯಲ್ಲಿ ಹೇಳಲು ಪ್ರಯತ್ನಿಸಲಾಗಿದೆ. ಚಿತ್ರದಲ್ಲಿ ತಣ್ಣನೆ ಕಾಡುವ ಪ್ರೀತಿಯ ಜೊತೆಗೆ ರೌಡಿಸಂ ಕ್ರೇಜ್‌ನ ಯುವಕರಿಗೆ ಒಂದು ಸಂದೇಶ ಕೂಡಾ ಇದೆ. ವಿ.ನಾಗೇಂದ್ರ ಪ್ರಸಾದ್‌ ಸಂಭಾಷಣೆ ಕಥೆಗೆ ಪೂರಕವಾಗಿದೆ.

ನಟ ಗುರುರಾಜ್‌ ಪಕ್ಕಾ ರಗಡ್‌ ಲುಕ್‌ನಲ್ಲಿ ಕಾಣಿಸಿಕೊಂಡು ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಉಳಿದಂತೆ ಶರತ್‌ ಲೋಹಿತಾಶ್ವ, ಸತ್ಯಜಿತ್‌ ಹಾಗೂ ಇತರರು ಪಾತ್ರಕ್ಕೆ ಹೊಂದಿಕೊಂಡಿದ್ದಾರೆ. ಚಿತ್ರದ ಹಾಡೊಂದು ಗುನುಗುವಂತಿದೆ. ಪಿ.ಎಲ್‌.ರವಿ ಛಾಯಾಗ್ರಹಣದಲ್ಲಿ “ಕಾಗೆ ಮೊಟ್ಟೆ’ ಸುಂದರ. ಅವರ ಛಾಯಾಗ್ರಹಣದ ಶ್ರಮ ಅಲ್ಲಲ್ಲಿ ಎದ್ದು ಕಾಣುತ್ತದೆ.

 ರವಿ ರೈ

ಟಾಪ್ ನ್ಯೂಸ್

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lineman movie review

Lineman movie review; ಜಾಲಿರೈಡ್‌ ನ‌ಲ್ಲಿ ‘ಲೈನ್‌ಮ್ಯಾನ್‌’

Dilkush Movie Review

Dilkush Movie Review; ತ್ರಿಕೋನ ಪ್ರೇಮದಲ್ಲಿ ಹೊಸಬರ ಆಟ

Mehabooba-Movie-Review

Mehabooba Movie Review; ತಿರುವುಗಳ ಹಾದಿಯಲ್ಲಿ ಪ್ರೇಮಪಯಣ

chow chow bath movie review

Chow Chow Bath Review; ಹರೆಯದ ಮನಸುಗಳ ಖಾಸ್‌ಬಾತ್‌

jog 101 kannada movie review

JOG 101 movie review; ಸುಂದರ ಜೋಗದಲ್ಲಿ ನಿಗೂಢ ಹೆಜ್ಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.