“ಕಾಣೆಯಾದವರ ಬಗ್ಗೆ ಪ್ರಕಟಣೆ’ ಚಿತ್ರ ವಿಮರ್ಶೆ: ಇದು ಕಾಣೆಯಾದವರ ಜಾಲಿರೈಡ್‌


Team Udayavani, May 28, 2022, 2:40 PM IST

“ಕಾಣೆಯಾದವರ ಬಗ್ಗೆ ಪ್ರಕಟಣೆ’ ಚಿತ್ರ ವಿಮರ್ಶೆ: ಇದು ಕಾಣೆಯಾದವರ ಜಾಲಿರೈಡ್‌

ಬಾಲ್ಯದ ಸ್ನೇಹಿತರ ಕುರಿತಾಗಿ ಸಾಕಷ್ಟು ಸಿನಿಮಾಗಳು ಬಂದಿವೆ. ಪ್ರತಿ ಸಿನಿಮಾಗಳು ಕೂಡಾ ಒಂದೊಂದು ವಿಭಿನ್ನ ಕಥೆಯನ್ನು ಹೇಳಿವೆ. ಈ ವಾರ ತೆರೆಕಂಡಿರುವ “ಕಾಣೆಯಾದವರ ಬಗ್ಗೆ ಪ್ರಕಟಣೆ’ ಕೂಡಾ ಸ್ನೇಹದ ಸುತ್ತ ಸಾಗುವ ಸಿನಿಮಾ. ಮೂವರು ವಿಭಿನ್ನ ಮನಸ್ಥಿತಿಯ, ಚಿಂತನೆಯ ಒಟ್ಟಾಗಿ, ಸ್ನೇಹಿತರಾದಾಗ ಮುಂದೆ ಏನೇನು ನಡೆಯುತ್ತದೆ, ಅವರ ಸ್ನೇಹ ಎಂಥದ್ದು ಎಂಬ ಅಂಶವನ್ನಿಟ್ಟುಕೊಂಡು ಈ ಸಿನಿಮಾವನ್ನು ಕಟ್ಟಿಕೊಡಲಾಗಿದೆ.

ಮುಖ್ಯವಾಗಿ ಈ ಸಿನಿಮಾವನ್ನು ನಿರ್ದೇಶಕರು ಮೂರು ವಯೋಮಾನದಲ್ಲಿ ಕಟ್ಟಿಕೊಟ್ಟಿದ್ದಾರೆ. ಬಾಲ್ಯ,ಹರೆಯ, ಮಧ್ಯ… ಈ ಮೂರು ವಯೋಮಾನವನ್ನು ಸಿನಿಮಾದಲ್ಲಿ ತೋರಿಸಿರುವುದರಿಂದ ಬಹುತೇಕ ಚಿತ್ರ ಫ್ಲ್ಯಾಶ್‌ಬ್ಯಾಕ್‌ನಲ್ಲೇ ಸಾಗುತ್ತದೆ.

ಒಬ್ಬ ಸ್ನೇಹಿತನ ಕಥೆಯನ್ನು, ಇನ್ನೊಬ್ಬ ಸ್ನೇಹಿತನ ಬಾಯಿಂದ ನಿರ್ದೇಶಕರು ಹೇಳಿಸುತ್ತಾ ಸಿನಿಮಾವನ್ನು ಮುಂದುವರೆಸುವ ಪ್ರಯತ್ನ ಮಾಡಿದ್ದಾರೆ. ಈ ಪ್ರಯತ್ನದಲ್ಲಿ ಕುತೂಹಲ ಹಾಗೂ ಗೊಂದಲ ಎರಡೂ ಒಟ್ಟೊಟ್ಟಿಗೆ ಸಾಗುತ್ತದೆ. ಚಿತ್ರದಲ್ಲಿ ಥ್ರಿಲ್ಲರ್‌ ಹಾಗೂ ಸಸ್ಪೆನ್ಸ್‌ ಅಂಶಗಳಿಗೆ ಹೆಚ್ಚು ಒತ್ತು ನೀಡಲಾಗಿದೆ. ಸಿನಿಮಾ ಏಕಾಏಕಿ ಬ್ಯಾಂಕಾಕ್‌ಗೆ ಶಿಫ್ಟ್ ಆಗುತ್ತದೆ. ಈ ಮೂಲಕ ಬ್ಯಾಂಕಾಕ್‌ನ ಬೀದಿಗಳಲ್ಲಿ ಮೂವರು ಸ್ನೇಹಿತರ ಮೋಜು- ಮಸ್ತಿ ಸಾಗುತ್ತದೆ. ಇದರ ನಡುವೆಯೇ ಅವರ ಮುಖದಲ್ಲೊಂದು ಭಯ… ಅಷ್ಟಕ್ಕೂ ಆ ಭಯಕ್ಕೆ ಕಾರಣವೇನು… ಅದೇ ಸಿನಿಮಾದ ಸಸ್ಪೆನ್ಸ್‌ ಪಾಯಿಂಟ್‌.

ಮನರಂಜನೆಯ ಜೊತೆಗೆ ಚಿತ್ರದಲ್ಲಿ ಸಂದೇಶಕ್ಕೂ ಹೆಚ್ಚಿನ ಜಾಗವಿದೆ. ತಂದೆ-ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಿ, ಪಾಸಿಟಿವ್‌ ಯೋಚನೆಯಲ್ಲಿ ಬದುಕಿ.. ಹೀಗೆ ಹಲವು ಸಂದೇಶಗಳನ್ನು ಮನರಂಜನೆಯ ಜೊತೆಗೆ ನೀಡಲಾಗಿದೆ. “ಕಾಣೆಯಾದವರ ಬಗ್ಗೆ ಪ್ರಕಟಣೆ’ ಒಂದು ಪ್ರಯತ್ನವಾಗಿ ಇಷ್ಟವಾಗುತ್ತದೆ. ಸಣ್ಣ ಪುಟ್ಟ ಗೊಂದಲಗಳನ್ನು ಬದಿಗಿಟ್ಟು ನೋಡಬಹುದು.

ಚಿತ್ರದಲ್ಲಿ ರವಿಶಂಕರ್‌, ರಂಗಾಯಣ ರಘು, ತಬಲ ನಾಣಿ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ನಾಯಕಿ ಆಶಿಕಾ ಇದ್ದಷ್ಟು ಹೊತ್ತು ಚೆಂದ. ನಿರ್ದೇಶಕ ಅನಿಲ್‌ ಸಿಕ್ಕ ಸ್ಕ್ರೀನ್‌ಸ್ಪೆಸ್‌ ಅನ್ನು ಚೆನ್ನಾಗಿ ಬಳಸಿಕೊಂಡಿದ್ದಾರೆ.

ರವಿ ರೈ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.