Movie Review: ದರ್ಬಾರ್‌ ಒಳಗೊಂದು ನಗೆಹಬ್ಬ


Team Udayavani, Jun 10, 2023, 11:51 AM IST

Kannada movie darbar review

ರಾಜಕೀಯದ ಚದುರಂಗದಾಟವನ್ನು ದೂರದಿಂದ ನೋಡುವುದೇ ಒಂದು ಮಜ. ಅಭ್ಯರ್ಥಿಯನ್ನುಸೋಲಿಸಲು, ಗೆಲ್ಲಿಸಲು ನಡೆಯುವ “ಗೇಮ್‌’ಗಳು, ಸ್ಕೆಚ್‌ಗಳು ಚಿತ್ರ-ವಿಚಿತ್ರವಾಗಿರುತ್ತವೆ. ಅದರಲ್ಲೂಹಳ್ಳಿ ರಾಜಕೀಯದ “ರಂಗು’ ಇನ್ನೂ ಜೋರು. ಇಂತಹ ಹಳ್ಳಿ ರಾಜಕೀಯದ ಆಟವನ್ನು ತೆರೆಮೇಲೆ ತಂದಿರುವ ಸಿನಿಮಾ “ದರ್ಬಾರ್‌’. ಇದು ನಿರ್ದೇಶಕ ವಿ.ಮನೋಹರ್‌ ಅವರ ಕನಸು ಕೂಡಾ.

ಸುಮಾರು 23 ವರ್ಷಗಳ ನಂತರ ಮನೋಹರ್‌ ನಿರ್ದೇಶಿಸಿರುವ ಸಿನಿಮಾ “ದರ್ಬಾರ್‌’. ಒಂದು ಔಟ್‌ ಅಂಡ್‌ ಔಟ್‌ ಕಾಮಿಡಿ ಸಿನಿಮಾವನ್ನು ಹಳ್ಳಿ ಹಿನ್ನೆಲೆಯಲ್ಲಿ ಕಟ್ಟಿಕೊಡಬೇಕೆಂಬುದು ಮನೋಹರ್‌ ಅವರ ಕನಸು. ಅದನ್ನು ತೆರೆಮೇಲೆ ಅಚ್ಚುಕಟ್ಟಾಗಿ ತರುವಲ್ಲಿ ಮನೋಹರ್‌ ಯಶಸ್ವಿಯಾಗಿದ್ದಾರೆ.

ಜಬರ್ದಸ್ತ್ ನಾಯಕ, ಆತನದ್ದೇ ಆದ ಸ್ಟೈಲ್‌, ಜೊತೆಗೊಂದು ಲವ್‌.. ಆದರೆ, ಹೃದಯವಂತ… ಈ ನಡುವೆಯೇ ನಾಯಕನ ಅಹಂಕಾರ ಇಳಿಸಬೇಕೆಂಬುದು ಸ್ಕೆಚ್‌ ಹಾಕಿ ಚುನಾವಣೆಗೆ ನಿಲ್ಲಿಸುವ “ಜೊತೆಗಾರರು’ ಹಾಗೂ ಆತನ ವಿರುದ್ಧ ಅವರ ಸ್ಕೆಚ್‌.. ಇಂತಹ ಅಂಶದೊಂದಿಗೆ ಇಡೀ ಸಿನಿಮಾ ಸಾಗುತ್ತದೆ. ಆರಂಭದಲ್ಲಿ ಎಲ್ಲಾ ಸಿನಿಮಾಗಳಂತೆ ನಾಯಕನ ಇಂಟ್ರೋಡಕ್ಷನ್‌, ಆತನ ಗುಣಗಾನ, ಲವ್‌… ಹೀಗೆ ಸಾಗುವ ಸಿನಿಮಾ ನಿಜವಾಗಿಯೂ ಟೇಕಾಫ್ ಆಗೋದು ಚುನಾವಣಾ ಪ್ರಕ್ರಿಯೆ ಅಖಾಡಕ್ಕಿಳಿದ ಮೇಲೆ. ಇಲ್ಲಿನ ತರಹೇವಾರಿ ಪ್ರಚಾರ, ಗಿಮಿಕ್‌… ಎಲ್ಲವೂ ಪ್ರೇಕ್ಷಕರಿಗೆ ಖುಷಿ ಕೊಡುತ್ತವೆ. ಜೊತೆಗೆ ನಗುವಿನೊಂದಿಗೆ ಪ್ರೇಕ್ಷಕ ಸಿನಿಮಾ ಎಂಜಾಯ್‌ ಮಾಡುವಂತಹ ಹಲವು ಸನ್ನಿವೇಶಗಳು ಸಿನಿಮಾದಲ್ಲಿವೆ. ಆ ಮಟ್ಟಿಗೆ ವಿ.ಮನೋಹರ್‌ ಸಿನಿಮಾವನ್ನು ನೀಟಾಗಿ ಕಟ್ಟಿಕೊಟ್ಟಿದ್ದಾರೆ.

ಅಂದಹಾಗೆ, ನಾಯಕರಾಗಿ ನಟಿಸಿರುವ ಸತೀಶ್‌ ಅವರೇ ಈ ಸಿನಿಮಾದ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದು, ಇವತ್ತಿನ ರಾಜಕೀಯ ಸನ್ನಿವೇಶಗಳಿಗೆ ಹಿಡಿದ ಕೈಗನ್ನಡಿಯಂತಿದೆ. ಇಡೀ ಸಿನಿಮಾ ಹಳ್ಳಿಯಲ್ಲೇ ನಡೆದಿದ್ದು, ಒಂದಷ್ಟು ವಿಚಿತ್ರ, ವಿಭಿನ್ನ ಮ್ಯಾನರಿಸಂನ ಪಾತ್ರಗಳು ನಗುತರಿಸುತ್ತವೆ.

ಮೊದಲ ಬಾರಿಗೆ ನಾಯಕರಾಗಿ ನಟಿಸಿರುವ ಸತೀಶ್‌ ಅವರು ಆ್ಯಕ್ಷನ್‌ ಇಮೇಜ್‌ ಇರುವ ಹೀರೋ ಆಗಿ ಮಿಂಚಿದ್ದಾರೆ. ಸೆಂಟಿಮೆಂಟ್‌ಗಿಂತ ಖಡಕ್‌ ಲುಕ್‌ನಲ್ಲೇ ಗಮನ ಸೆಳೆದಿರುವ ಸತೀಶ್‌ ಸಿನಿಮಾದ ಕಥೆ, ಚಿತ್ರಕಥೆ, ಸಂಭಾಷಣೆಯಲ್ಲೂ ಮೆಚ್ಚುಗೆ ಗಳಿಸುತ್ತಾರೆ. ನಾಯಕಿ ಜಾಹ್ನವಿಗೆ ಇಲ್ಲಿನ ಹೆಚ್ಚಿನ ಅವಕಾಶವಿಲ್ಲ.

ಆದರೆ, ಹುಲಿ ಕಾರ್ತಿಕ್‌ ತಾನೊಬ್ಬ ಪ್ರತಿಭಾವಂತ ಕಲಾವಿದ ಎನ್ನುವುದನ್ನು ಹಿರಿತೆರೆ ಮೇಲೂ ಸಾಬೀತು ಮಾಡಿದ್ದಾರೆ. “ನಾಗ’ ಎಂಬ ಪಾತ್ರದ ವಿವಿಧ ಶೇಡ್‌ಗಳಲ್ಲಿ ಕಾರ್ತಿಕ್‌ ಗಮನ ಸೆಳೆಯುತ್ತಾರೆ. ಒಂದು ಹಳ್ಳಿ ಕಾಮಿಡಿಯನ್ನು ಕಣ್ತುಂಬಿಕೊಳ್ಳುವ ಆಸೆ ಇರುವವರಿಗೆ “ದರ್ಬಾರ್‌’ ಒಳ್ಳೆಯ ಆಯ್ಕೆಯಾಗಬಹುದು

 ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lineman movie review

Lineman movie review; ಜಾಲಿರೈಡ್‌ ನ‌ಲ್ಲಿ ‘ಲೈನ್‌ಮ್ಯಾನ್‌’

Dilkush Movie Review

Dilkush Movie Review; ತ್ರಿಕೋನ ಪ್ರೇಮದಲ್ಲಿ ಹೊಸಬರ ಆಟ

Mehabooba-Movie-Review

Mehabooba Movie Review; ತಿರುವುಗಳ ಹಾದಿಯಲ್ಲಿ ಪ್ರೇಮಪಯಣ

chow chow bath movie review

Chow Chow Bath Review; ಹರೆಯದ ಮನಸುಗಳ ಖಾಸ್‌ಬಾತ್‌

jog 101 kannada movie review

JOG 101 movie review; ಸುಂದರ ಜೋಗದಲ್ಲಿ ನಿಗೂಢ ಹೆಜ್ಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.