‘ಥಗ್ಸ್ ಆಫ್ ರಾಮಘಡ’ ಚಿತ್ರ ವಿಮರ್ಶೆ: ರಾಮಘಡದಲ್ಲಿ ಕರ್ಮಫ‌ಲ ಪ್ರಾಪ್ತಿ!


Team Udayavani, Jan 8, 2023, 2:51 PM IST

Kannada movie thugs of ramaghada review

ದಿಢೀರ್‌ ಶ್ರೀಮಂತನಾಗಬೇಕು ಎಂಬ ದುರಾಸೆಯಿಂದ ಕಳ್ಳ ತನ ಮಾಡಲು ಮುಂದಾಗುವ ಹುಡುಗರ ಗುಂಪು, ಕಳ್ಳ ತನ ಮಾಡುವ ಆತುರದಲ್ಲಿ ಕೊಲೆಯೊಂದನ್ನು ಮಾಡಿ ರಕ್ತದ ಕಲೆಯನ್ನು ಕೈಗೆ ಅಂಟಿಸಿಕೊಳ್ಳುತ್ತದೆ. ಒಂದು ಕಳ್ಳ ತನ ಮತ್ತು ಕೊಲೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಒಂದರ ಹಿಂದೊಂದು ಹೆಣಗಳು ಉರುಳುತ್ತಾ ಹೋಗುತ್ತದೆ. ನೋಡ ನೋಡುತ್ತಿದ್ದಂತೆ, ರಕ್ತ ಚರಿತ್ರೆಯ ಒಂದೊಂದೆ ಪುಟಗಳು ತೆರೆಮೇಲೆ ತೆರೆದುಕೊಳ್ಳುತ್ತಾ, ಬಯಲು ಸೀಮೆಯ “ರಾಮಘಡ’ಕ್ಕೆ ಬಂದು ನಿಲ್ಲುತ್ತದೆ. ಅಂತಿಮವಾಗಿ ರಕ್ತ ಪಿಪಾಸುಗಳ ನೆತ್ತರ ದಾಹಕ್ಕೆ ಹೊಡೆದಾಟ, ಹೋರಾಟಕ್ಕೆ “ರಾಮಘಡ’ದಲ್ಲಿ ತಾರ್ಕಿಕ ಅಂತ್ಯ ಸಿಗುತ್ತದೆಯಾ? ಇಲ್ಲವಾ ಎಂಬುದನ್ನ ತಿಳಿಯಬೇಕಾದರೆ, “ಥಗ್ಸ್‌ ಆಫ್ ರಾಮಘಡ’ ಎಂಬ ನೆತ್ತರ ಕಹಾನಿಯ “ಚಿತ್ರ’ಣವನ್ನು ತೆರೆಮೇಲೆ ನೋಡಬೇಕು.

ಆರಂಭದಲ್ಲಿಯೇ ಸಿನಿಮಾದ ಪೋಸ್ಟರ್‌ ಮತ್ತು ಟ್ರೇಲರ್‌ನಲ್ಲಿ ತೋರಿಸಿರುವಂತೆ “ಥಗ್ಸ್‌ ಆಫ್ ರಾಮಘಡ’ ಬ್ಲಿಡ್‌ ಶೇಡ್‌ ಇರುವಂಥ ಸಿನಿಮಾ. ಕರ್ಮ ಸಿದ್ಧಾಂತದ ಎಳೆಯನ್ನು ಇಟ್ಟುಕೊಂಡು ಔಟ್‌ ಆ್ಯಂಡ್‌ ಔಟ್‌ ಕ್ರೈಂ ಕಂ ಆ್ಯಕ್ಷನ್‌-ಥ್ರಿಲ್ಲರ್‌ ಶೈಲಿಯಲ್ಲಿ ಇಡೀ ಸಿನಿಮಾವನ್ನು ತೆರೆಮೇಲೆ ತರಲಾಗಿದೆ. ಒಂದಷ್ಟು ಕೊಲೆ, ಕೊಲೆಗಾರರ ಹುಡುಕಾಟ, ಅದರ ಹಿಂದಿನ ಕಾರಣ ಎಲ್ಲವನ್ನೂ ಕುತೂಹಲಭರಿತವಾಗಿ ಕಟ್ಟಿಕೊಡುವಲ್ಲಿ ನಿರ್ದೇಶಕರು ಯಶಸ್ವಿಯಾಗಿದ್ದಾರೆ. ಬಿಗಿಯಾದ ನಿರೂಪಣೆ, ಉತ್ತರ ಕರ್ನಾಟಕದ ಖಡಕ್‌ ಡೈಲಾಗ್ಸ್‌ ಸಿನಿಮಾದ ವೇಗವನ್ನು ಹೆಚ್ಚಿಸಿ ಪ್ರೇಕ್ಷಕರನ್ನು ಹಿಡಿದು ಕೂರಿಸುವಂತೆ ಮಾಡಿದೆ.

ಇನ್ನು ಇಲ್ಲಿಯವರೆಗೆ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ನಟ ಅಶ್ವಿ‌ನ್‌ ಹಾಸನ್‌ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕುಟುಂಬದವರನ್ನು ಕಳೆದುಕೊಂಡ ದುಃಖೀಯಾಗಿ, ಅದಕ್ಕೆ ಕಾರಣರಾದವರನ್ನು ಹುಡುಕಿ ಪ್ರತಿಕಾರ ತೀರಿಸಿಕೊಳ್ಳುವ ವ್ಯಕ್ತಿಯಾಗಿ ಡಬಲ್‌ ಶೇಡ್‌ ನಲ್ಲಿರುವ ತಮ್ಮ ಪಾತ್ರವನ್ನು ಅಶ್ವಿ‌ನ್‌ ಯಶಸ್ವಿಯಾಗಿ ನಿಭಾಯಿಸಿ ಫುಲ್‌ ಮಾರ್ಕ್ಸ್ ಪಡೆದುಕೊಳ್ಳುತ್ತಾರೆ. ನವ ಪ್ರತಿಭೆ ಚಂದನ್‌ ರಾಜ್‌, ಮಹಾಲಕ್ಷ್ಮೀ ಪಾತ್ರಗಳು ಮನಸ್ಸಿನಲ್ಲಿ ಉಳಿಯುವಂತಿದೆ.

ಉಳಿದಂತೆ ಬಹುತೇಕ ಹೊಸ ಕಲಾವಿದರು ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಗಮನ ಸೆಳೆಯುತ್ತಾರೆ. ತಾಂತ್ರಿಕವಾಗಿ ಛಾಯಾಗ್ರಹಣ, ಸಂಕಲನ, ಕಲರಿಂಗ್‌ ಮತ್ತು ಹಿನ್ನೆಲೆ ಸಂಗೀತ ಸಿನಿಮಾದ ಹೈಲೈಟ್ಸ್‌ ಎನ್ನಬಹುದು. ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಕಂ ಕ್ರೈಂ-ಥ್ರಿಲ್ಲರ್‌ ಸಿನಿಮಾಗಳನ್ನು ಇಷ್ಟಪಡುವವರು ಒಮ್ಮೆ “ಥಗ್ಸ್‌ ಆಫ್ ರಾಮಘಡ’ ನೋಡಿ ಬರಲು ಅಡ್ಡಿಯಿಲ್ಲ

 ಜಿ.ಎಸ್‌.ಕೆ

ಟಾಪ್ ನ್ಯೂಸ್

ಕೊನೆ ಉಸಿರಿರುವವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

Vachanananda Swamiji spoke about getting reservation to Panchmasali community

ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

1-manipal-station

ಮಣಿಪಾಲ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಆರೋಪ; ಐವರು ವಿದ್ಯಾರ್ಥಿಗಳು ವಶಕ್ಕೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kabzaa

ಕಬ್ಜ ಚಿತ್ರ ವಿಮರ್ಶೆ; ಮಾಸ್ ಮನತಣಿಸುವ ಅರ್ಕೇಶ್ವರ ವೈಭವ

‘ಚೌಕಾಬಾರ’ ಮೆಚ್ಚುಗೆ

‘ಚೌಕಾಬಾರ’ ಮೆಚ್ಚುಗೆ

kannada movie mary review

ಚಿತ್ರ ವಿಮರ್ಶೆ; ಥ್ರಿಲ್ಲರ್ ‘ಮೇರಿ’ಯ ಜಾಡು ಹಿಡಿದು..

dddooradarshana kannada movie

ದೂರದರ್ಶನ ಚಿತ್ರ ವಿಮರ್ಶೆ; ಟಿವಿಯ ಸದ್ದು, ಅಹಂಗೊಂದು ಗುದ್ದು

kadala theerada bhargava movie

ಕಡಲ ತೀರದ ಭಾರ್ಗವ ಚಿತ್ರ ವಿಮರ್ಶೆ: ಕಡಲ ತೀರದ ಭಾವಯಾನ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

1-adsadsad

ಬನವಾಸಿ ನೂತನ ಮಹಾಸ್ಯಂದನ ರಥೋತ್ಸವ ಮುಂದಕ್ಕೆ; ಕಾರಣವೇನು?

1-a-wewq3

ಚಿಕ್ಕಮಗಳೂರು: ಸರಕಾರಿ ಬಸ್ ಢಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರ ಮೃತ್ಯು

ಕೊನೆ ಉಸಿರಿರುವವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

ಸೋನು ನಿಗಮ್‌ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.