ಕೋಟಿಗೊಬ್ಬ-3 ಚಿತ್ರ ವಿಮರ್ಶೆ: ಸತ್ಯ ಶೋಧನೆಯಲ್ಲಿ ದೊರೆತ ಶಿವ ಸಾಂಗತ್ಯ


Team Udayavani, Oct 16, 2021, 10:12 AM IST

kotigobba 3

ನೀವು “ಕೋಟಿಗೊಬ್ಬ-2′ ಸಿನಿಮಾ ನೋಡಿದ್ದರೆ ಅಲ್ಲಿ ಬರುವ ಸತ್ಯ ಹಾಗೂ ಶಿವ ಈ ಎರಡು ಪಾತ್ರಗಳು ನೆನಪಲ್ಲಿರುತ್ತವೆ. ಕೊನೆಗೆ ಶಿವ ಸತ್ತ, ಸತ್ಯ ಬದುಕಿದ ಎಂಬ ಅಂಶದೊಂದಿಗೆ ಸಿನಿಮಾ ಮುಗಿಯುತ್ತದೆ. ಶಿವನನ್ನು ಎಸಿಪಿ ಸಾಯಿಸಿದ ಎಂಬ ಸತ್ಯನ ಆರೋಪದೊಂದಿಗೆ ಎಸಿಪಿ ಕಿಶೋರ್‌ ಜೈಲಿಗೆ ಹೋಗಿರೋದು ನಿಮಗೆ ನೆನಪಿರಬಹುದು. ಈಗ “ಕೋಟಿಗೊಬ್ಬ-3′ ಸಿನಿಮಾದಲ್ಲಿ ಮತ್ತೆ ಸತ್ಯ- ಶಿವ ಪಾತ್ರಗಳು ಕಾಣಸಿಗುತ್ತವೆ. ಜೊತೆಗೆ ಅಚ್ಚರಿ ಎಂಬಂತೆ “ಗೋಸ್ಟ್‌ ಮ್ಯಾನ್‌’ಇಡೀ ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ. ಹಾಗಾದರೆ, ಆತ ಯಾರು, ಎಲ್ಲಿಂದ ಬಂದ… ಇದೇ ಇಡೀ “ಕೋಟಿಗೊಬ್ಬ-3′ ಚಿತ್ರದ ಹೈಲೈಟ್‌.

“ಕೋಟಿಗೊಬ್ಬ-3′ ಚಿತ್ರವನ್ನು “ಕೋಟಿಗೊಬ್ಬ -2′ ಚಿತ್ರದ ಮುಂದುವರೆದ ಭಾಗ ಎನ್ನುವುದಕ್ಕಿಂತ ಆ ಚಿತ್ರದ ಎರಡು ಪ್ರಮುಖ ಪಾತ್ರಗಳ ಮುಂದುವರೆದ ಭಾಗ ಎನ್ನಬಹುದು. ಮುಖ್ಯವಾಗಿ ಇಲ್ಲಿ ಸತ್ಯ ಹಾಗೂ ಎಸಿಪಿ ಕಿಶೋರ್‌ ಪಾತ್ರಗಳು ಮುಂದುವರೆದಿದೆ. ಉಳಿದಂತೆ ಹೊಸ ಪಾತ್ರಗಳು ಸೇರಿಕೊಳ್ಳುತ್ತಾ ಹೋಗಿವೆ. ಜೊತೆಗೆ ಹೊಸ ಸನ್ನಿವೇಶಗಳು, ಟ್ವಿಸ್ಟ್‌ಗಳು ಪ್ರೇಕ್ಷಕರಿಗೆ ಮಜಾ ಕೊಡುವಲ್ಲಿ ಹಿಂದೆ ಬಿದ್ದಿಲ್ಲ. “ಕೋಟಿಗೊಬ್ಬ-3′ ಒಂದು ಪಕ್ಕಾ ಫ್ಯಾಮಿಲಿ ಎಂಟರ್‌ಟೈನರ್‌. ಒಂದು ಸಣ್ಣಲೈನ್‌ ನೊಂದಿಗೆ ಕಥೆಯನ್ನು ಬೆಳೆಸಿಕೊಂಡು ಹೋಗಲಾಗಿದೆ. ಹಾಗಾದರೆ ಅದೇನು ಎಂಬ ಕುತೂಹಲವಿದ್ದರೆ ನೀವು ಸಿನಿಮಾ ನೋಡಲಡ್ಡಿಯಿಲ್ಲ. ಶಿವ ಕಾರ್ತಿಕ್‌ ಎಂಬ ನವನಿರ್ದೇಶಕ ಇಡೀ ಸಿನಿಮಾವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.

ಸುದೀಪ್‌ ಸಿನಿಮಾದಲ್ಲಿರಬೇಕಾದ ಕೆಲವು ಮೂಲ ಅಂಶಗಳು ಹಾಗೂ ಅವರ ಅಭಿಮಾನಿಗಳನ್ನು ರಂಜಿಸುವ ಅವಕಾಶವನ್ನು ಅವರು ಮಿಸ್‌ ಮಾಡಿಲ್ಲ. ಈ ಸಿನಿಮಾದಲ್ಲಿ ಶಿವ ಹಾಗೂ ಸತ್ಯ ಪಾತ್ರಗಳ ಮೂಲವನ್ನು ತೆರೆದಿಟ್ಟಿದ್ದಾರೆ. ಜೊತೆಗೆ ಮಾಫಿಯಾ, ಅದರ ಹಿಂದಿನ ದ್ವೇಷ, ಸೇಡಿನ ಕಥೆಯನ್ನು ಸೇರಿಸಿ, ಕಮರ್ಷಿಯಲ್‌ ಎಂಟರ್‌ಟೈನರ್‌ ಆಗಿ ಕಟ್ಟಿಕೊಡಲಾಗಿದೆ.

ಇದನ್ನೂ ಓದಿ:ಕೊನೆಗೂ ಫಲ ನೀಡಿತು ಗಂಗೂಲಿ ಪ್ರಯತ್ನ: ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

ಚಿತ್ರದ ಒಂದಷ್ಟು ಭಾಗ ವಿದೇಶದಲ್ಲಿ ನಡೆಯುತ್ತದೆ. ಅದಕ್ಕೊಂದು ಕಾರಣವೂ ಇದೆ. ಚಿತ್ರ ದಲ್ಲಿ ಮೈ ನವಿರೇಳಿಸುವ ವಿದೇಶದಲ್ಲಿನ ಚೇಸಿಂಗ್‌ ದೃಶ್ಯಗಳಿವೆ. ಸಣ್ಣದೊಂದು ಲವ್‌ ಸ್ಟೋರಿಯೂ ಪಾಸಿಂಗ್‌ ಶಾಟ್‌ನಲ್ಲಿ ಬಂದು ಹೋಗುತ್ತದೆ. ಅದರ ಇಲ್ಲಿ ಮೂಲ ಅಂಶ “ಗೋಸ್ಟ್‌ಮ್ಯಾನ್‌’ ರಿವೆಂಜ್‌. “ಗೋಸ್ಟ್‌ಮ್ಯಾನ್‌’ ಹಿನ್ನೆಲೆಯೊಂದಿಗೆ ಸಿನಿಮಾ ಸಾಗುತ್ತದೆ. ಸುದೀಪ್‌ ಎಂಟ್ರಿಯೇ ಇಲ್ಲಿ ಮಜಾ ಕೊಡುತ್ತದೆ. ವಿಭಿನ್ನ ಗೆಟಪ್‌ನೊಂದಿಗೆ ಎಂಟ್ರಿಕೊಟ್ಟು ಅವರ ಮುಖದರ್ಶನ ನೀಡಿದ್ದಾರೆ. ಅದರಾಚೆ ಅವರ ಪಾತ್ರ, ನಟನೆಯ ಬಗ್ಗೆ ಒಂದೇ ಮಾತಲ್ಲಿ ಹೇಳುವುದಾದರೆ “ಸತ್ಯಂ ಶಿವಂ ಸುಂದರಂ’.

ನಾಯಕಿ ಮಡೊನಾ ಬಂದಿದ್ದು ಹೋಗಿದ್ದು ಗೊತ್ತೇ ಆಗುವುದಿಲ್ಲ. ರವಿಶಂಕರ್‌ ಅವರಿಗೆ ಈ ಬಾರಿ ನಟನೆಗಿಂತ ಹೆಚ್ಚು ಡೈಲಾಗ್‌ ಸಿಕ್ಕಿದೆ. ಅದರಲ್ಲಿ ಬಹುತೇಕ ಡೈಲಾಗ್‌ ಕಿಚ್ಚ ಸುದೀಪ್‌ ಅವರ ಪರ್ಫಾರ್ಮೆನ್ಸ್‌ ಸುತ್ತವೇ ಸುತ್ತುತ್ತದೆ. ಉಳಿದಂತೆ ಅಫ್ತಾಬ್‌ ಶಿವದಾಸನಿ, ಶ್ರದ್ಧಾ, ನವಾನ್‌, ಅಭಿರಾಮಿ ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mehabooba-Movie-Review

Mehabooba Movie Review; ತಿರುವುಗಳ ಹಾದಿಯಲ್ಲಿ ಪ್ರೇಮಪಯಣ

chow chow bath movie review

Chow Chow Bath Review; ಹರೆಯದ ಮನಸುಗಳ ಖಾಸ್‌ಬಾತ್‌

jog 101 kannada movie review

JOG 101 movie review; ಸುಂದರ ಜೋಗದಲ್ಲಿ ನಿಗೂಢ ಹೆಜ್ಜೆ

blink kannada movie review

Blink movie review; ಸಮಯದ ಹಿಂದೆ ಸವಾರಿ…

ranganayaka movie review

Ranganayaka Movie Review; ಗುರುವಿನ ಆದಿ ಪುರಾಣ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.