ಮಲೆನಾಡಲ್ಲಿ ಪ್ರೀತಿಯ ಅಂದ-ಚೆಂದ

ಚಿತ್ರ ವಿಮರ್ಶೆ

Team Udayavani, Oct 26, 2019, 5:02 AM IST

Andavada

“ನನ್ನ ಮುಟ್ಟಿದರೆ ಕೆಟ್ಟದಾಗುತ್ತೆ…’ ಹೀಗಂತ ಚಿಕ್ಕವಳಿರುವಾಗ ಆಕೆ ಆಗಾಗ ಹೇಳುತ್ತಿರುತ್ತಾಳೆ. ಹಾಗಾಗಿ ಬಾಲ್ಯದ ಗೆಳೆಯ ಸೇರಿದಂತೆ ಯಾರೂ ಆಕೆಯನ್ನು ಮುಟ್ಟೋದಿಲ್ಲ. ಅದಕ್ಕೊಂದು ಬಲವಾದ ಕಾರಣವಿದೆ. ಕಾರಣ ತಿಳಿದುಕೊಳ್ಳೋಕೆ ಬರೋಬ್ಬಜಿ ಎರಡು ತಾಸು ತಾಳ್ಮೆ ಕಳೆದುಕೊಳ್ಳದೆ ಕೂರಬೇಕು. ಕೊನೆಗೆ ಆ ಕಾರಣಕ್ಕೆ ಉತ್ತರ ಸಿಗುತ್ತೆ. ಆ ಉತ್ತರ ತಿಳಿದುಕೊಳ್ಳುವ ಆತುರ, ಕಾತುರ, ಕುತೂಹಲವೇನಾದರೂ ಇದ್ದರೆ, ಈ ಚಿತ್ರದೊಳಗಿರುವ “ಅಂದ’ ಸವಿಯಬಹುದು. ಇಲ್ಲಿ ಕಥೆಯ ಆಶಯ ಚೆನ್ನಾಗಿದೆ. ಆದರೆ, ಅದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ತೋರಿಸಬಹುದಿತ್ತು.

ಒಂದು ಸಂದೇಶ ತಿಳಿಸುವುದಕ್ಕೋಸ್ಕರ ನಿರ್ದೇಶಕರು ಒಂದಷ್ಟು ದೃಶ್ಯಗಳನ್ನು ಜೋಡಿಸಿಕೊಂಡು ಹೋಗಿದ್ದಾರಷ್ಟೇ. ಮೊದಲರ್ಧ ಏನಾಗುತ್ತೆ ಅಂತ ತಿಳಿದುಕೊಳ್ಳುವ ಹೊತ್ತಿಗೆ ಮಧ್ಯಂತರ ಬರುತ್ತೆ. ದ್ವಿತಿಯಾರ್ಧವೂ ಹಾಗೆ ಸಾಗಿ, ಕೊನೆಯ ಇಪ್ಪತ್ತು ನಿಮಿಷಕ್ಕೊಂದು ಟ್ವಿಸ್ಟ್‌ ಬರುತ್ತೆ. ಅದೇ ಚಿತ್ರದ ಹೈಲೈಟ್‌. ಇಲ್ಲಿ ಇನ್ನಷ್ಟು ಬಿಗಿಯಾದ ನಿರೂಪಣೆಯ ಅಗತ್ಯವಿತ್ತು. ಆರಂಭದಲ್ಲಿ ಚಿತ್ರ ನಿಧಾನವೆನಿಸಿದರೂ, ಸುಂದರ ತಾಣಗಳು ಅದನ್ನು ಮರೆಮಾಚಿಸುತ್ತವೆ. ಕಥೆಯ ಸಾರಾಂಶ ಪರವಾಗಿಲ್ಲ. ಅದನ್ನು ಇನ್ನಷ್ಟು ಗಟ್ಟಿಯಾಗಿ ಕಟ್ಟಿಕೊಡಲು ಸಾಧ್ಯವಿತ್ತು. ವಿನಾಕಾರಣ ಹಾಸ್ಯ ದೃಶ್ಯಗಳು ಎದುರಾದರೂ, ಅಷ್ಟೊಂದು ಪರಿಣಾಮಕಾರಿ ಎನಿಸುವುದಿಲ್ಲ.

ಕೆಲವು ದೃಶ್ಯಗಳ ಡೈಲಾಗ್‌ನಲ್ಲಿ ಪಂಚ್‌ ಇದೆ. ಅದು ಬಿಟ್ಟರೆ, ಹೆಚ್ಚೇನೂ ನಿರೀಕ್ಷಿಸುವಂತಿಲ್ಲ. ಇಡೀ ಸಿನಿಮಾ ನೋಡಿದವರಿಗೆ ಮಲೆನಾಡಲ್ಲೇ ಕುಳಿತ ಅನುಭವ ಆಗುತ್ತೆ ಎಂಬುದೊಂದೇ ಸಮಾಧಾನ. ಹಸಿರು ಕಾನನ, ಬೆಟ್ಟ, ಹರಿಯೋ ನೀರು, ಮಂಜು ಮುಸುಕಿದ ಗುಡ್ಡದ ಸಾಲುಗಳು ಒಂದಷ್ಟು ಖುಷಿಕೊಡುತ್ತವೆ ಅಂದರೆ, ಅದು ಛಾಯಾಗ್ರಾಹಕರ ಕೈಚಳಕ. ಇನ್ನು, ಚಿತ್ರದ ಎರಡು ಹಾಡುಗಳು ವೇಗಕ್ಕೊಂದು ಹೆಗಲು ಕೊಟ್ಟಂತಿವೆ. ಸಿನಿಮಾದಲ್ಲಿ ಹೊಡಿ, ಬಡಿ, ಕಡಿ ಅಂಶಗಳಿಲ್ಲದೆ, ಅಲ್ಲಲ್ಲಿ ಮಾತಿನ ಕಚಗುಳಿ ನಡುವೆ ನೋಡಿಸಿಕೊಂಡು ಹೋಗುತ್ತಲೇ ಸಣ್ಣದ್ದೊಂದು ಭಾವುಕತೆಗೂ ಕಾರಣವಾಗುತ್ತೆ. ಅದೇ ಸಿನಿಮಾದ ಟೆಸ್ಟು ಮತ್ತು ಟ್ವಿಸ್ಟು. ಅದನ್ನು ತಿಳಿಯುವ ಕುತೂಹಲವಿದ್ದರೆ, ಹೊಸಬರ “ಅಂದ’ವನ್ನು ಕಾಣಬಹುದು.

ಅವಳು ಅಮ್ಮು. ಅವನು ಮೋಹನ. ಇಬ್ಬರೂ ಚೈಲ್ಡ್‌ವುಡ್‌ ಫ್ರೆಂಡ್ಸ್‌. ಆಕೆ ಆಗಾಗ ಇನ್ನಿಲ್ಲದ ಸುಳ್ಳುಗಳ ಕಂತೆ ಕಟ್ಟುವ ಹುಡುಗಿ. ತನ್ನ ಹುಡುಗಿ ಹೇಳಿದ್ದೇ ನಿಜ ಎಂದುಕೊಳ್ಳುವ ಹುಡುಗ ಅವನು. ಅದು ದೊಡ್ಡವರಾದ ಮೇಲೂ ಮುಂದುವರೆಯುತ್ತಲೇ ಇರುತ್ತೆ. ಈ ನಡುವೆ, ಆಕೆ ಆಗಾಗ ಅವನಿಂದ ಕಾಣೆಯಾಗುತ್ತಲೇ ಇರುತ್ತಾಳೆ. ಪುನಃ ಇದ್ದಕ್ಕಿದ್ದಂತೆ ಪ್ರತ್ಯಕ್ಷವಾಗಿ, ಅಲ್ಲೊಂದು ಸುಳ್ಳಿನ ಸರಮಾಲೆ ಪೋಣಿಸಿ, ಅವನನ್ನು ನಂಬಿಸುತ್ತಿರುತ್ತಾಳೆ. ಆದರೆ, ಆಕೆ ಯಾಕೆ ಆಗಾಗ ಕಾಣೆಯಾಗುತ್ತಾಳೆ, ಚಿಕ್ಕಂದಿನಿಂದಲೂ ಅವನಿಗೆ ಸುಳ್ಳನ್ನು ಹೇಳುವುದೇಕೆ ಎಂಬುದೇ ಚಿತ್ರದ ಗುಟ್ಟು.

ಆಕೆಗೊಂದು ಖಾಯಿಲೆ ಇರುತ್ತೆ. ಅದು ಏನು, ಯಾವ ಕಾರಣಕ್ಕೆ ಅವಳನ್ನು ಅದು ಆವರಿಸಿಕೊಂಡಿರುತ್ತೆ ಎಂಬುದನ್ನು ನಿರ್ದೇಶಕರು ಕೊನೆಯವರೆಗೂ ಸಸ್ಪೆನ್ಸ್‌ನಲ್ಲಿಟ್ಟು ಕ್ಲೈಮ್ಯಾಕ್ಸ್‌ನಲ್ಲಿ ಬಿಚ್ಚಿಡುತ್ತಾರೆ. ಆ ಸತ್ಯವೇ ಸಿನಿಮಾದ ಸತ್ವ. ನಾಯಕ ಜೈ ಸಿಕ್ಕ ಪಾತ್ರವನ್ನು ನೀಟಾಗಿ ನಿಭಾಯಿಸಿದ್ದಾರೆ. ಭಾವುಕ ಸನ್ನಿವೇಶದಲ್ಲಿನ್ನೂ ಪಳಗಬೇಕಿದೆ. ಅನೂಷ ಪಾತ್ರವನ್ನು ಜೀವಿಸಿದ್ದಾರೆ. ಗ್ಲಾಮರ್‌ಗೂ, ಗ್ರಾಮರ್‌ಗೂ ಹೊಂದಿಕೊಂಡಿದ್ದಾರೆ. ಉಳಿದಂತೆ ಹರೀಶ್‌ ರೈ, ಶ್ರೀಧರ್‌ ಕೂಡ ಇರುವಷ್ಟು ಸಮಯ ಇಷ್ಟವಾಗುತ್ತಾರೆ. ವಿಕ್ರಮ್‌ ವರ್ಮನ್‌ ಸಂಗೀತದ ಎರಡು ಹಾಡು ಗುನುಗುವಂತಿವೆ. ಗುರುಕಿರಣ್‌ ಹಿನ್ನೆಲೆ ಸಂಗೀತ ಪೂರಕವಾಗಿದೆ. ಹರೀಶ್‌ ಎನ್‌.ಸೊಂಡೇಕೊಪ್ಪ ಛಾಯಾಗ್ರಹಣ ಮಲೆನಾಡ ಅಂದವನ್ನು ಹೆಚ್ಚಿಸಿದೆ.

ಚಿತ್ರ: ಅಂದವಾದ
ನಿರ್ಮಾಣ: ಡಿ.ಆರ್‌.ಮಧು ಜಿ. ರಾಜ್‌
ನಿರ್ದೇಶನ: ಚಲ
ತಾರಾಗಣ: ಜೈ, ಅನುಷಾ ರಂಗನಾಥ್‌, ಹರೀಶ್‌ ರೈ, ಶ್ರೀಧರ್‌, ಮಂಜಯ್ಯ, ರೇಖಾ ಸಾಗರ್‌, ರೋಜಾ ಇತರರು.

* ವಿಭ

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lineman movie review

Lineman movie review; ಜಾಲಿರೈಡ್‌ ನ‌ಲ್ಲಿ ‘ಲೈನ್‌ಮ್ಯಾನ್‌’

Dilkush Movie Review

Dilkush Movie Review; ತ್ರಿಕೋನ ಪ್ರೇಮದಲ್ಲಿ ಹೊಸಬರ ಆಟ

Mehabooba-Movie-Review

Mehabooba Movie Review; ತಿರುವುಗಳ ಹಾದಿಯಲ್ಲಿ ಪ್ರೇಮಪಯಣ

chow chow bath movie review

Chow Chow Bath Review; ಹರೆಯದ ಮನಸುಗಳ ಖಾಸ್‌ಬಾತ್‌

jog 101 kannada movie review

JOG 101 movie review; ಸುಂದರ ಜೋಗದಲ್ಲಿ ನಿಗೂಢ ಹೆಜ್ಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.