ಚಿತ್ರ ವಿಮರ್ಶೆ: ಸರಳ ಸುಂದರ ‘ಮಗಳೇ’


Team Udayavani, Apr 22, 2023, 2:02 PM IST

magale kannada movie review

ಒಂದು ಸರಳವಾದ ಕಥೆಯನ್ನು ನೀವು ಎಷ್ಟು ಸುಂದರವಾಗಿ, ಮನಮಟ್ಟುವಂತೆ ಕಟ್ಟಿಕೊಡುತ್ತೀರಿ ಎಂಬುದರ ಮೇಲೆ ಒಂದು ಸಿನಿಮಾದ ಓಟ ನಿಂತಿರುತ್ತದೆ. ಆ ವಿಚಾರದಲ್ಲಿ ಈ ವಾರ ತೆರೆಕಂಡಿರುವ “ಮಗಳೇ’ ಒಂದು ಉತ್ತಮ ಪ್ರಯತ್ನದ ಸಿನಿಮಾ. ಸಣ್ಣ ಬಜೆಟ್‌ನಲ್ಲಿ, ಕಡಿಮೆ ಪಾತ್ರಗಳ ನ್ನಿಟ್ಟುಕೊಂಡು, ಎಲ್ಲೂ ಗೊಂದಲವಿಲ್ಲದಂತೆ ಹೇಳಬೇಕಾದ ವಿಚಾರವನ್ನು ಸ್ಪಷ್ಟವಾಗಿ ಹೇಳುತ್ತಾ, ಪ್ರೇಕ್ಷಕರಿಗೆ ಹತ್ತಿರವಾಗುವ ಸಿನಿಮಾ “ಮಗಳೇ’.

ಸಿನಿಮಾದ ಹೆಸರೇ ಸೂಚಿಸುವಂತೆ “ಮಗಳೇ’ ರೆಗ್ಯುಲರ್‌ ಕಮರ್ಷಿಯಲ್‌ ಅಂಶಗಳಿಂದ ಮುಕ್ತವಾಗಿರುವ ಸಿನಿಮಾ. ಒಂದು ಗಟ್ಟಿ ಕಥಾಹಂದರದೊಂದಿಗೆ “ಮಗಳೇ’ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ಸೋಮು ಕೆಂಗೇರಿ. ಸಿನಿಮಾದ ಕಥೆಯನ್ನು ಯಾವ ರೀತಿ ಕಟ್ಟಿಕೊಡಬೇಕು ಎಂಬ ಸ್ಪಷ್ಟತೆ ನಿರ್ದೇಶಕರಲ್ಲಿ ಇದೆ. ಈ ಮೂಲಕ ಮೊದಲ ಚಿತ್ರದಲ್ಲೇ ನಿರ್ದೇಶಕರು ಭರವಸೆ ಮೂಡಿಸಿದ್ದಾರೆ.

ಕೆಲವೇ ಕೆಲವು ಪಾತ್ರಗಳನ್ನಿಟ್ಟುಕೊಂಡು, ಯಾವುದೇ ಅಬ್ಬರವಿಲ್ಲದೇ, ಕಥೆಯ ಆಶಯಕ್ಕೆ ತಕ್ಕಂತೆ ಚಿತ್ರವನ್ನು ಕಟ್ಟಿಕೊಡಲಾಗಿದೆ. ಹೆತ್ತವರ ಹಾಗೂ ಮಕ್ಕಳ ನಡುವಿನ ಬಾಂಧ್ಯವದ ಕಥಾಹಂದರದೊಂದಿಗೆ ತಯಾರಾಗಿರುವ ಈ ಸಿನಿಮಾದಲ್ಲಿ ಇವತ್ತಿನ ಪಾಲಕರು ಮಗಳ ಜೊತೆ ಹೇಗಿರಬೇಕು, ಎಷ್ಟು ಸೂಕ್ಷ್ಮವಾಗಿರಬೇಕು ಎಂಬ ಅಂಶವನ್ನು ಹೇಳಲಾಗಿದೆ.ಈ ಚಿತ್ರದ ಹೈಲೈಟ್‌ಗಳಲ್ಲಿ ಸಿನಿಮಾ ಸಾಗುವ ರೀತಿ ಹಾಗೂ ಅಲ್ಲಲ್ಲಿ ಬರುವ ಟ್ವಿಸ್ಟ್‌ ಪ್ರಮುಖವಾಗಿದೆ. ಮೊದಲರ್ಧ ಸಿನಿಮಾದ ಪಾತ್ರ ಪರಿಚಯ ಸೇರಿದಂತೆ ಇತರ ಅಂಶಗಳೊಂದಿಗೆ ಸಾಗಿದರೆ, ಸಿನಿಮಾದ ನಿಜವಾದ ಟ್ವಿಸ್ಟ್‌ ತೆರೆದುಕೊಳ್ಳುವುದು ದ್ವಿತೀಯಾರ್ಧದಲ್ಲಿ. ಪ್ರೇಕ್ಷಕನ ಊಹೆಗೆ ನಿಲುಕದಂತೆ ಸಿನಿಮಾ ಸಾಗುವುದು ಈ ಸಿನಿಮಾದ ಪ್ಲಸ್‌ ಪಾಯಿಂಟ್‌ಗಳಲ್ಲಿ ಒಂದು.

ಚಿತ್ರದಲ್ಲಿ ಗುರುರಾಜಶೆಟ್ಟಿ, ಬಿಂದು ರಕ್ಷಿಧಿ, ಸುಪ್ರಿತಾ ರಾಜ್‌, ಗ್ರೀಷ್ಮ ಶ್ರೀಧರ್‌, ಬಿಷನ್‌ ಶೆಟ್ಟಿ, ನೀನಾಸಂ ನವೀನ್‌ ಕುಮಾರ್‌ ಮುಂತಾದವರು ಅಭಿನಯಿಸಿದ್ದು, ಪ್ರತಿಯೊಬ್ಬರು ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಅದರಲ್ಲೂ ಬಿಂದು ರಕ್ಷಿಧಿ ಗಮನ ಸೆಳೆಯುತ್ತಾರೆ. ಬಿ.ಎಸ್‌.ಕೆಂಪರಾಜು ಅವರ ಸಂಕಲನ ಕೂಡಾ ಚಿತ್ರ ತೆರೆಮೇಲೆ ಅಚ್ಚುಕಟ್ಟಾಗಿ ಮೂಡಿಬರುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಒಂದು ಪ್ರಯತ್ನವಾಗಿ “ಮಗಳೇ’ ಇಷ್ಟವಾಗುತ್ತದೆ.

ರವಿ ರೈ

ಟಾಪ್ ನ್ಯೂಸ್

Madhyapradesh: ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ… 39 ಬಿಜೆಪಿ ಕಾರ್ಯಕರ್ತರಿಗೆ ಗಾಯ

Madhyapradesh: ನಿಂತಿದ್ದ ಟ್ರಕ್‌ಗೆ ಬಿಜೆಪಿ ಕಾರ್ಯಕರ್ತರಿದ್ದ ಬಸ್ ಡಿಕ್ಕಿ, 39ಮಂದಿಗೆ ಗಾಯ

Challenge: ವಯನಾಡ್ ಬದಲು ಹೈದರಾಬಾದ್ ನಲ್ಲಿ ಸ್ಪರ್ಧಿಸಿ… ರಾಹುಲ್ ಗೆ ಸವಾಲು ಹಾಕಿದ ಓವೈಸಿ

Challenge: ವಯನಾಡ್ ಬದಲು ಹೈದರಾಬಾದ್ ನಿಂದ ಸ್ಪರ್ಧಿಸಿ… ರಾಹುಲ್ ಗೆ ಸವಾಲು ಹಾಕಿದ ಓವೈಸಿ

Asian Games 2023: 10 ಮೀಟರ್ ಏರ್ ರೈಫಲ್ ನಲ್ಲಿ ಚಿನ್ನ ಗೆದ್ದು ವಿಶ್ವ ದಾಖಲೆ ಬರೆದ ಭಾರತ

Asian Games 2023: 10 ಮೀಟರ್ ಏರ್ ರೈಫಲ್ ನಲ್ಲಿ ಚಿನ್ನ ಗೆದ್ದು ವಿಶ್ವ ದಾಖಲೆ ಬರೆದ ಭಾರತ

Nutrition Food ಫ‌ಲಾನುಭವಿಗಳ ಕೈಸೇರದ ಪೌಷ್ಟಿಕ ಆಹಾರ; ಕೊರಗ,ಮಲೆಕುಡಿಯ ಸಮುದಾಯದವರ ಸಂಕಷ್ಟ

Nutrition Food ಫ‌ಲಾನುಭವಿಗಳ ಕೈಸೇರದ ಪೌಷ್ಟಿಕ ಆಹಾರ; ಕೊರಗ,ಮಲೆಕುಡಿಯ ಸಮುದಾಯದವರ ಸಂಕಷ್ಟ

1-monday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ

Inspire Award: ವಿಜ್ಞಾನದತ್ತ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆಸಕ್ತಿ

Inspire Award: ವಿಜ್ಞಾನದತ್ತ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆಸಕ್ತಿ

District In-charge Minister ಮಂಗಳೂರು, ಉಡುಪಿಯಲ್ಲಿ ಇಂದು ಜನತಾ ದರ್ಶನ

District In-charge Minister ಮಂಗಳೂರು, ಉಡುಪಿಯಲ್ಲಿ ಇಂದು ಜನತಾ ದರ್ಶನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dighvijay Movie review;

Dighvijaya Movie review; ರೈತಪರ ಹೋರಾಟಕ್ಕೆ ದಿಗ್ವಿಜಯ

Olave Mandara 2 movie review

Olave Mandara 2 movie review; ಪ್ರೇಮದೂರಿನ ಕರೆಯೋಲೆ

Parimala D’souza Movie Review; ನಿಗೂಢ ಹಾದಿಯಲ್ಲಿ ಪರಿಮಳ ಹೆಜ್ಜೆ

Parimala D’souza Movie Review; ನಿಗೂಢ ಹಾದಿಯಲ್ಲಿ ಪರಿಮಳ ಹೆಜ್ಜೆ

’13’ movie review

’13’ movie review: ಹಣದ ಹಿಂದೆ ಬಿದ್ದವರ ಹುಡುಕಾಟ

tales of mahanagara movie review

Tales of Mahanagara Movie Review; ಅಚ್ಚರಿಗಳ ನಡುವೆ ಮಹಾನಗರದ ಚಿತ್ರಣ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

Madhyapradesh: ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ… 39 ಬಿಜೆಪಿ ಕಾರ್ಯಕರ್ತರಿಗೆ ಗಾಯ

Madhyapradesh: ನಿಂತಿದ್ದ ಟ್ರಕ್‌ಗೆ ಬಿಜೆಪಿ ಕಾರ್ಯಕರ್ತರಿದ್ದ ಬಸ್ ಡಿಕ್ಕಿ, 39ಮಂದಿಗೆ ಗಾಯ

Challenge: ವಯನಾಡ್ ಬದಲು ಹೈದರಾಬಾದ್ ನಲ್ಲಿ ಸ್ಪರ್ಧಿಸಿ… ರಾಹುಲ್ ಗೆ ಸವಾಲು ಹಾಕಿದ ಓವೈಸಿ

Challenge: ವಯನಾಡ್ ಬದಲು ಹೈದರಾಬಾದ್ ನಿಂದ ಸ್ಪರ್ಧಿಸಿ… ರಾಹುಲ್ ಗೆ ಸವಾಲು ಹಾಕಿದ ಓವೈಸಿ

Asian Games 2023: 10 ಮೀಟರ್ ಏರ್ ರೈಫಲ್ ನಲ್ಲಿ ಚಿನ್ನ ಗೆದ್ದು ವಿಶ್ವ ದಾಖಲೆ ಬರೆದ ಭಾರತ

Asian Games 2023: 10 ಮೀಟರ್ ಏರ್ ರೈಫಲ್ ನಲ್ಲಿ ಚಿನ್ನ ಗೆದ್ದು ವಿಶ್ವ ದಾಖಲೆ ಬರೆದ ಭಾರತ

Nutrition Food ಫ‌ಲಾನುಭವಿಗಳ ಕೈಸೇರದ ಪೌಷ್ಟಿಕ ಆಹಾರ; ಕೊರಗ,ಮಲೆಕುಡಿಯ ಸಮುದಾಯದವರ ಸಂಕಷ್ಟ

Nutrition Food ಫ‌ಲಾನುಭವಿಗಳ ಕೈಸೇರದ ಪೌಷ್ಟಿಕ ಆಹಾರ; ಕೊರಗ,ಮಲೆಕುಡಿಯ ಸಮುದಾಯದವರ ಸಂಕಷ್ಟ

1-monday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.