Matte Matte Review; ಸಿನಿಮಾ ಹಿಂದೆ ಬಿದ್ದವರ ಹುಡುಗಾಟ-ಹುಡುಕಾಟ


Team Udayavani, Jan 20, 2024, 10:48 AM IST

Matte Matte Review

ಅವರೆಲ್ಲರೂ ಆಗಷ್ಟೇ ಪತ್ರಿಕೋದ್ಯಮದಲ್ಲಿ ಪದವಿ ಮುಗಿಸಿ ಕಾಲೇಜಿನಿಂದ ಹೊರಬಂದಿರುವ ಹುಡುಗರು. ತಮ್ಮದೇ ಆದ ಸ್ವಂತ ನ್ಯೂಸ್‌ ಚಾನೆಲ್‌ ಶುರು ಮಾಡಿ ಆ ಮೂಲಕ ಪತ್ರಿಕೋದ್ಯಮದಲ್ಲಿ ಬದುಕು ಕಟ್ಟಿಕೊಳ್ಳಬೇಕು ಎಂಬುದು ಅವರ ಕನಸು. ಆದರೆ ನ್ಯೂಸ್‌ ಚಾನೆಲ್‌ ಶುರು ಮಾಡುವುದೆಂದರೆ, ಹುಡುಕಾಟದ ಮಾತೆ? ನ್ಯೂಸ್‌ ಚಾನೆಲ್‌ ಶುರುಮಾಡಲು ಕೋಟ್ಯಾಂತರ ರೂಪಾಯಿ ಬಂಡವಾಳ ಬೇಕು. ಆ ಬಂಡವಾಳವನ್ನು ಕ್ರೂಢೀಕರಿಸುವುದು ಹೇಗೆ? ಎಂಬ ಯೋಚನೆಯಲ್ಲಿದ್ದಾಗ ಇವರಿಗೆ ಹೊಳೆಯುವ ಐಡಿಯಾ ಸಿನಿಮಾ ಮಾಡುವುದು. ಹೌದು, ಒಂದು ಒಳ್ಳೆಯ ಸಿನಿಮಾ ಮಾಡುವುದು ಆ ಸಿನಿಮಾದ ಮೂಲಕ ಹಣ ಮತ್ತು ಹೆಸರು ಎರಡನ್ನೂ ಮಾಡಿ, ತಮ್ಮ ಕನಸಿನ ನ್ಯೂಸ್‌ ಚಾನೆಲ್‌ ಶುರು ಮಾಡುವುದು. ಹೀಗೆ ತಮ್ಮ ದೊಡ್ಡ ಕನಸು ನನಸು ಮಾಡುವ ಸಲುವಾಗಿ “ಮತ್ತೆ ಮತ್ತೆ’ ಸಿನಿಮಾ ಮಾಡಲು ಈ ಹುಡುಗರ ತಂಡ ಮುಂದಾಗುತ್ತದೆ. ಸಿನಿಮಾ ಮಾಡಲು ಹೊರಡುವ ಈ ಹುಡುಗರಿಗೆ ಹೆಜ್ಜೆ ಹೆಜ್ಜೆಗೂ ಸವಾಲುಗಳು ಎದುರಾಗುತ್ತ ಹೋಗುತ್ತದೆ. ಅದೆಲ್ಲವನ್ನೂ ದಾಟಿ ಇವರೆಲ್ಲರೂ ತಾವಂದುಕೊಂಡಂತೆ ಸಿನಿಮಾ ಮಾಡಿ ಮುಗಿಸುತ್ತಾರಾ? ಆ ಸಿನಿಮಾ ಹೇಗಿರುತ್ತದೆ? ಎಂಬುದೇ ಈ ವಾರ ತೆರೆಗೆ ಬಂದಿರುವ “ಮತ್ತೆ ಮತ್ತೆ’ ಸಿನಿಮಾದ ಕಥಾಹಂದರ.

ಇದೊಂದು ಔಟ್‌ ಆ್ಯಂಡ್‌ ಔಟ್‌ ಕಾಮಿಡಿ ಕಥಾಹಂದರದ ಸಿನಿಮಾ. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಕನಸನ್ನು ಇಟ್ಟುಕೊಂಡು ಅದರ ಬೆನ್ನತ್ತಿ ಹೊರಟ ಹುಡುಗರ ಹಠ, ಹೋರಾಟ ಎಲ್ಲವನ್ನೂ ನಿರ್ದೇಶಕರು ಹಾಸ್ಯಭರಿತವಾಗಿ ತೆರೆಮೇಲೆ ತೆರೆದಿಡುವ ಪ್ರಯತ್ನ ಮಾಡಿದ್ದಾರೆ.

ಒಂದು ಗಂಭೀರ ವಿಷಯವನ್ನು ಕಾಮಿಡಿ ಟಚ್‌ ಕೊಟ್ಟು ಪ್ರೇಕ್ಷಕರ ಮುಂದಿಡುವಲ್ಲಿ ನಿರ್ದೇಶಕರು ಗೆದ್ದಿದ್ದಾರೆ.  ಕಥೆ ಮತ್ತು ಸಂಭಾಷಣೆ ಸಿನಿಮಾದ ಹೈಲೈಟ್ಸ್‌. ನಟಿ ಸಂಜನಾ ಗಲ್ರಾನಿ ಸಿನಿಮಾದ ಹಾಡೊಂದು ಮತ್ತು ಕೆಲ ದೃಶ್ಯಗಳಲ್ಲಿ ಅಭಿನಯಿಸಿ “ಮತ್ತೆ ಮತ್ತೆ’ ಸಿನಿಮಾದ ಮೂಲಕ “ಮತ್ತೆ’ ಪ್ರೇಕ್ಷಕರಿಗೆ ದರ್ಶನ ಕೊಟ್ಟಿದ್ದಾರೆ.

ತಾಂತ್ರಿಕವಾಗಿ ಸಂಗೀತ ನಿರ್ದೇಶಕ ಇಮ್ತಿಯಾಜ್‌ ಸುಲ್ತಾನ್‌ ಸಂಗೀತ ಸಂಯೋಜಿಸಿರುವ ಎರಡು ಹಾಡುಗಳು ಅಲ್ಲಲ್ಲಿ ಗುನುಗುವಂತಿದೆ. ಹಿರಿಯ ಕಲಾವಿದರು, ಕಿರಿಯ ಕಲಾವಿದರ ಸಮಾಗಮದಲ್ಲಿ ಮೂಡಿಬಂದಿರುವ, ಕೂತಲ್ಲಿ ಕಚಗುಳಿಯಿಡುವ “ಮತ್ತೆ ಮತ್ತೆ’ ಚಿತ್ರವನ್ನು ಒಮ್ಮೆ ನೋಡಲಡ್ಡಿಯಿಲ್ಲ.

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.