ನಮ್ಮ ಹುಡುಗರು ಚಿತ್ರ ವಿಮರ್ಶೆ: ಸ್ನೇಹದ ನೆರಳಿನಲ್ಲಿ ಹುಡುಗರ ಆಟ


Team Udayavani, Jul 10, 2022, 11:44 AM IST

Namma-hudugrau

ಅದು ನಾಲ್ವರು ಸ್ನೇಹಿತರ ತಂಡ. ಕಷ್ಟ-ಸುಖ ಎರಡರಲ್ಲೂ ಜೊತೆಯಾಗಿರುವ ಇಂಥ ಪ್ರಾಣ ಸ್ನೇಹಿತರ ನಡುವೆ, ಸುಳಿಯುವ ಸಣ್ಣ ಸುಳ್ಳಿನ ವಿಷಯ ಸ್ನೇಹಿತರ ಬದುಕಿನ ದಿಕ್ಕನ್ನೇ ಬದಲಾಯಿಸಿ ಅವರನ್ನು ಪೇಚಿಗೆ ಸಿಲುಕಿಸುತ್ತದೆ. ಒಂದು ಸುಳ್ಳಿನಿಂದ ಪ್ರಾಣ ಸ್ನೇಹಿತರು ಹೇಗೆಲ್ಲ ಹೆಣಗಾಡುತ್ತಾರೆ. ಸ್ನೇಹ, ಪ್ರೀತಿ ಮತ್ತು ಬದುಕಿನ ಹೋರಾಟದಲ್ಲಿ ಯಾವುದು ಗೆಲ್ಲುತ್ತದೆ? ಅನ್ನೋದು ಈ ವಾರ ತೆರೆಗೆ ಬಂದಿರುವ “ನಮ್ಮ ಹುಡುಗರು’ ಸಿನಿಮಾದ ಕಥಾಹಂದರ. ತಾವೇ ಹೆಣೆದುಕೊಂಡ ಸುಳ್ಳಿನ ಸುಳಿಯಿಂದ ಈ ಹುಡುಗರು ಹೊರಗೆ ಬರುತ್ತಾರಾ? ಇಲ್ಲವಾ ಅನ್ನೋದು “ನಮ್ಮ ಹುಡುಗರು’ ಸಿನಿಮಾದ ಕ್ಲೈಮ್ಯಾಕ್ಸ್‌.

“ನಮ್ಮ ಹುಡುಗರು’ ಸಿನಿಮಾದ ಟೈಟಲ್ಲೇ ಹೇಳುವಂತೆ, ಇದೊಂದು ಹಳ್ಳಿಯ ನಾಲ್ವರು ಹುಡುಗರ ಸುತ್ತ ನಡೆಯುವ ಸಿನಿಮಾ. ಹುಡುಗರ ಕಥೆ ಎಂದಮೇಲೆ, ಅಲ್ಲಿ ಸ್ನೇಹ, ಪ್ರೀತಿ, ಹಾಸ್ಯ, ಕೋಪ-ತಾಪ ಎಲ್ಲವೂ ಇರಲೇಬೇಕು. ಅದೆಲ್ಲವನ್ನೂ ಸಮವಾಗಿ ಬೆರೆಸಿ “ನಮ್ಮ ಹುಡುಗರು’ ಸಿನಿಮಾವನ್ನು ತೆರೆಮೇಲೆ ತರಲಾಗಿದೆ.

“ನಮ್ಮ ಹುಡುಗರು’ ಸಿನಿಮಾದ ಮೊದಲರ್ಧ ಮಾಮೂಲಿ ಹುಡುಗರ ಸಿನಿಮಾದಂತೆ ಕಂಡರೂ, ಮಧ್ಯಂತರದ ನಂತರ ಸಿನಿಮಾ ಬೇರೆಯದ್ದೇ ತಿರುವು ಪಡೆದುಕೊಂಡು ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದು ನಿಲ್ಲುತ್ತದೆ.

“ನಮ್ಮ ಹುಡುಗರ’ ಕಥೆ ಗಮನ ಸೆಳೆಯುವಂತಿದ್ದರೂ, ಚಿತ್ರಕಥೆಗೆ ಇನ್ನಷ್ಟು ವೇಗ ಸಿಕ್ಕಿದ್ದರೆ, ಸಂಭಾಷಣೆ ಮತ್ತು ನಿರೂಪಣೆ ಕಡೆಗೆ ಇನ್ನಷ್ಟು ಗಮನ ವಹಿಸಿದ್ದರೆ, ಹುಡುಗರ ಕಥೆ ಇನ್ನಷ್ಟು ಪರಿಣಾಮ ಕಾರಿಯಾಗಿ ಮೂಡಿಬರುವ ಸಾಧ್ಯತೆಗಳಿದ್ದವು.

ಇನ್ನು “ನಮ್ಮ ಹುಡುಗರು’ ಸಿನಿಮಾದಲ್ಲಿ ನವ ನಾಯಕ ನಟ ನಿರಂಜನ್‌ ಸುಧೀಂದ್ರ ಮೊದಲ ಪ್ರಯತ್ನದಲ್ಲೇ ಲವರ್‌ಬಾಯ್‌ ಆಗಿ ತೆರೆಮೇಲೆ ಗಮನ ಸೆಳೆಯುತ್ತಾರೆ. ಡೈಲಾಗ್‌ ಡೆಲಿವರಿ, ಡ್ಯಾನ್ಸ್‌ ಮತ್ತು ಆ್ಯಕ್ಷನ್‌ ದೃಶ್ಯಗಳಲ್ಲಿ ಪಕ್ಕಾ ಮಂಡ್ಯದ ಹಳ್ಳಿ ಹೈದನಾಗಿ ನಿರಂಜನ್‌ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ನಾಯಕಿ ರಾಧ್ಯಾ ಕೂಡ ಅಂದಕ್ಕೆ ಒಪ್ಪುವಂತೆ ಸಹಜ ಅಭಿನಯ ನೀಡಿದ್ದಾರೆ. ಉಳಿದಂತೆ ಅಲೋಕ್‌, ಶರತ್‌ ಲೋಹಿತಾಶ್ವ, ಭವ್ಯಾ ಮೊದಲಾದ ಕಲಾವಿದರು ತಮ್ಮ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಇನ್ನುಳಿದ ಕಲಾವಿದರ ಅಭಿನಯದ ಬಗ್ಗೆ ಹೆಚ್ಚೇನೂ ಹೇಳುವಂತಿಲ್ಲ.

ತಾಂತ್ರಿಕವಾಗಿ ಚಿತ್ರದ ಚಿತ್ರದ ಛಾಯಾಗ್ರಹಣ, ಸಂಕಲನ ಕಾರ್ಯ ಉತ್ತಮವಾಗಿದೆ. ಒಂದೆರಡು ಹಾಡುಗಳು ಥಿಯೇಟರ್‌ ಹೊರಗೂ ಗುನುಗುವಂತಿದೆ. ಒಟ್ಟಾರೆ ಅತಿಯಾದ ನಿರೀಕ್ಷೆಗಳನ್ನು ಇಟ್ಟುಕೊಳ್ಳದೆ ಥಿಯೇಟರ್‌ ಗೆ ಹೋದವರಿಗೆ, “ನಮ್ಮ ಹುಡುಗರು’ ಒಂದಷ್ಟು ಮನರಂಜನೆ ನೀಡುತ್ತಾರೆ ಎನ್ನಲು ಅಡ್ಡಿಯಿಲ

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.