‘ನಾನು ಅದು ಮತ್ತು ಸರೋಜ’ ಚಿತ್ರ ವಿಮರ್ಶೆ: ಅದರ ಸುತ್ತ ಮೂವರ ಚಿತ್ತ!


Team Udayavani, Jan 1, 2023, 11:54 AM IST

nanu adu mattu saroja review

ತನಗಿರುವ ಅತಿಯಾದ ನಿದ್ದೆಯ ಖಾಯಿಲೆಯಿಂದ ಎಲ್ಲರಿಂದ ತಿರಸ್ಕಾರಕ್ಕೆ ಒಳಗಾಗುವ ಯುವಕ. ಮತ್ತೂಬ್ಬ ಮಗ ಮತ್ತು ಸೊಸೆಯ ಉಪಟಳದಿಂದ ಬೇಸತ್ತ ಮುದುಕ. ಇವರಿಬ್ಬರ ನಡುವೆ ಹಣಕ್ಕಾಗಿ ವೇಶ್ಯಾವಾಟಿಕೆ ದಾರಿ ಹಿಡಿದ ಹುಡುಗಿ. ಈ ಮೂರು ಬೇರೆ ಬೇರೆ ಹಿನ್ನೆಲೆಯಿಂದ ಬಂದವರು ಒಂದು ಕಡೆ ಸೇರಿದಾಗ ನಡೆಯುವ ಒಂದಷ್ಟು ಘಟನೆಗಳು ಹೇಗಿರುತ್ತವೆ ಎಂಬುದು ಈ ವಾರ ತೆರೆಗೆ ಬಂದಿರುವ “ನಾನು ಅದು ಮತ್ತು ಸರೋಜ’ ಚಿತ್ರ.

ಸಿನಿಮಾದ ಬಿಡುಗಡೆಗೂ ಮೊದಲೆ ಟೀಸರ್‌, ಟ್ರೇಲರ್‌ನಲ್ಲಿ ಕಾಣಿಸಿದಂತೆ “ನಾನು ಅದು ಮತ್ತು ಸರೋಜ’ ಒಂದು ಕಾಮಿಡಿ, ಸಸ್ಪೆನ್ಸ್‌ ಮತ್ತು ಎಮೋಶನ್ಸ್‌ ಅಂಶಗಳನ್ನು ಇಟ್ಟುಕೊಂಡು ತೆರೆಗೆ ಬಂದಿರುವ ಸಿನಿಮಾ. ಸರಳವಾದ ಕಥೆಯ ಎಳೆಯನ್ನು ಇಟ್ಟುಕೊಂಡು ಅದಕ್ಕೆ ಒಂದಷ್ಟು ಮಸಾಲ ಅಂಶಗಳನ್ನು ಸೇರಿಸಿ ಮಾಸ್‌ ಆಡಿಯನ್ಸ್‌ಗೆ ಇಷ್ಟವಾಗುವಂತೆ ಸಿನಿಮಾ ಮಾಡುವ ಪ್ರಯತ್ನ ಚಿತ್ರತಂಡ ಮಾಡಿದೆ.

ಸಿನಿಮಾದ ಟೈಟಲ್ಲೇ ಹೇಳುವಂತೆ “ನಾನು ಅದು ಮತ್ತು ಸರೋಜ’ ಸಿನಿಮಾ ಕಥೆ ಮುಖ್ಯವಾಗಿ ಲೂಸ್‌ಮಾದ ಯೋಗಿ, ದತ್ತಣ್ಣ ಮತ್ತು ಅಪೂರ್ವಾ ಭಾರದ್ವಾಜ್‌ ಕಾಣಿಸಿಕೊಂಡಿರುವ ಮೂರು ಪಾತ್ರಗಳ ಸುತ್ತ ನಡೆಯುತ್ತದೆ. ಈ ಮೂರು ಪಾತ್ರಗಳೇ ಇಡೀ ಸಿನಿಮಾದ ಹೈಲೈಟ್ಸ್‌ ಎಂದರೂ ತಪ್ಪಾಗಲಾರದು. ಮೂವರು ಕೂಡ ತಮ್ಮ ಪಾತ್ರವನ್ನು ಯಶಸ್ವಿಯಾಗಿ ದಡ ಮುಟ್ಟಿಸಿದ್ದಾರೆ. ಉಳಿದಂತೆ ಇತರ ಪಾತ್ರಗಳಿಗೆ ಹೆಚ್ಚಿನ ಮಣೆ, ಮನ್ನಣೆ ಇಲ್ಲದಿರುವುದರಿಂದ, ಅವುಗಳ ಬಗ್ಗೆ ಹೆಚ್ಚೇನೂ ಹೇಳಲಾಗದು. ಅದನ್ನು ಹೊರತುಪಡಿಸಿ “ನಾನು ಅದು ಮತ್ತು ಸರೋಜ’ದ ಒಂದಷ್ಟು ಸನ್ನಿವೇಶಗಳು, ಸಂಭಾಷಣೆಗಳು ಅಲ್ಲಲ್ಲಿ ಕಚಗುಳಿಯಿಡುವಂತಿದೆ.

ಚಿತ್ರಕಥೆ ಮತ್ತು ನಿರೂಪಣೆ ಇನ್ನಷ್ಟು ಗಟ್ಟಿಯಾಗಿದ್ದರೆ, “ನಾನು ಅದು ಮತ್ತು ಸರೋಜ’ ಇನ್ನಷ್ಟು ಪರಿಣಾಮಕಾರಿಯಾಗಿ ಪ್ರೇಕ್ಷಕರನ್ನು ಮುಟ್ಟುವ ಸಾಧ್ಯತೆಗಳಿದ್ದವು. ಆ ಸಾಧ್ಯತೆಯನ್ನು ಚಿತ್ರತಂಡ ಸರಿಯಾಗಿ ಬಳಸಿಕೊಂಡಂತಿಲ್ಲ. ಅದೆಲ್ಲವನ್ನು ಬದಿಗಿಟ್ಟು ಹೇಳುವುದಾದರೆ, ಅತಿಯಾದ ನಿರೀಕ್ಷೆಗಳಿಲ್ಲದೆ ಥಿಯೇಟರ್‌ಗೆ ಹೋದವರಿಗೆ ಒಂದಷ್ಟು ಮನರಂಜನೆ ನೀಡುವಲ್ಲಿ ಚಿತ್ರ ಯಶಸ್ವಿಯಾಗಿದೆ ಎನ್ನಬಹುದು.

 ಜಿಎಸ್‌ ಕೆ

ಟಾಪ್ ನ್ಯೂಸ್

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.