O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…


Team Udayavani, Apr 20, 2024, 1:07 PM IST

O2 movie review

ಆಕೆಗೆ ತಾನು ಕಂಡು ಹಿಡಿದ ಹೊಸ ಪ್ರಯೋಗದ ಮೂಲಕ ಸಾವಿನಂಚಿನಲ್ಲಿರುವವರನ್ನು ಬದುಕಿಸುವ ತವಕ.. ಈತನಿಗೆ ಇರುವಷ್ಟು ದಿನ ಬದುಕನ್ನು ಸಂಭ್ರಮಿಸಬೇಕು, ಖುಷಿ ಖುಷಿಯಾಗಿ ಬಾಳಬೇಕು ಎಂಬ ಆಸೆ.. ಇಂತಹ “ಸದುದ್ದೇಶ’ದ ಜೋಡಿಯ ಪರಿಚಯವಾಗುತ್ತದೆ, ಪರಿಚಯ ಪ್ರೇಮವಾಗುತ್ತದೆ. ಈ ಮಧ್ಯೆ ನಡೆಯುವ ಘಟನೆಯೊಂದು ದೊಡ್ಡ ತಿರುವಿಗೆ ಕಾರಣವಾಗುತ್ತದೆ. ಅದೇನೆಂಬುದನ್ನು ತೆರೆಮೇಲೆಯೇ ನೋಡಬೇಕು.

“ಓ2′ ಚಿತ್ರದ ಬಗ್ಗೆ ಒಂದೇ ಮಾತಲ್ಲಿ ಹೇಳಬೇಕೆಂದರೆ ಒಂದು ಸರಳ ಸುಂದರ ಪಯಣ. ಕಥೆಯ ವಿಚಾರಕ್ಕೆ ಬರುವುದಾದರೆ ಕನ್ನಡ ಮಟ್ಟಿಗೆ ಇದು ಹೊಸ ಕಥೆ ಎನ್ನಬಹುದು. ಮೆಡಿಕಲ್‌ ಥ್ರಿಲ್ಲರ್‌ ಜಾನರ್‌ನಲ್ಲಿ ಮೂಡಿಬಂದಿರುವ ಈ ಚಿತ್ರ ರೆಗ್ಯುಲರ್‌ ಕಂಟೆಂಟ್‌ಗಿಂತ ಭಿನ್ನವಾದ, ಹೊಸ ವಿಚಾರವನ್ನು ಪ್ರಸ್ತುತಪಡಿಸಿದೆ. ಪ್ರಾಣ ಹೋದ ಕೆಲವೇ ನಿಮಿಷಗಳಲ್ಲಿ ನೀಡುವ ಔಷಧಿ, ಹೇಗೆ ಪ್ರಾಣ ಉಳಿಸಬಲ್ಲದು ಎಂಬ ಅಂಶವನ್ನು ವಿಭಿನ್ನವಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆ.

ಮೆಡಿಕಲ್‌ ಥ್ರಿಲ್ಲರ್‌ ಎಂದಾಕ್ಷಣ ಅದೇ ಆಸ್ಪತ್ರೆ, ಕಣ್ಣೀರು, ಗೋಳಾಟದ ಕಥೆ ಎಂದುಕೊಳ್ಳುವಂತಿಲ್ಲ. ಇಲ್ಲೊಂದು ಲವಲವಿಕೆಯ ಹುಡುಗನಿದ್ದಾನೆ, ಆತನ ಗಾಢವಾದ ಪ್ರೀತಿ ಇದೆ, ಉತ್ಸಾಹದ ಚಿಲುಮೆಯಂತಿರುವ ಆತನ ಪಟಪಟ ಮಾತುಗಳು ಸಿನಿಮಾಕ್ಕೊಂದು “ಆತ್ಮೀಯತೆ’ ಫೀಲ್‌ ನೀಡಿರುವುದು ಸುಳ್ಳಲ್ಲ. ಆ ಮಟ್ಟಿಗೆ “ಓ2′ ಒಂದು ನೀಟಾದ ಸಿನಿಮಾ.

ನಿರ್ದೇಶಕದ್ವಯರು ಯಾವುದೇ ಗೊಂದಲವಿಲ್ಲದಂತೆ ಇಡೀ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ. ಏನು ಹೇಳಬೇಕು ಅದನ್ನು ಸ್ಪಷ್ಟವಾಗಿ ಮತ್ತು ಅಷ್ಟೇ ಪಕ್ವತೆಯಿಂದ ಹೇಳಿದ್ದಾರೆ. ಚಿತ್ರದಲ್ಲಿ ಎರಡು ಟ್ರ್ಯಾಕ್‌ ಬರುತ್ತದೆ. ಒಂದು ಮೆಡಿಕಲ್‌, ಇನ್ನೊಂದು ಲವ್‌. ಆದರೆ ಎರಡೂ ಜೊತೆ ಜೊತೆಯಾಗಿ ಸಾಗುತ್ತಲೇ ಒಂದಷ್ಟು ಕುತೂಹಲಕ್ಕೆ ಕಾರಣವಾಗುತ್ತದೆ.

ಚಿತ್ರದ ಬಿಗಿಯಾದ ಚಿತ್ರಕಥೆ, ತುಂಬಾ ಹೊಸದೆನಿಸುವ ದೃಶ್ಯಗಳು, ಅದಕ್ಕೆ ಪೂರಕವಾದ ವಾತಾವರಣ, ಅರ್ಥಪೂರ್ಣ ಸಂಭಾಷಣೆ.. “ಓ2′ ಸಿನಿಮಾದ ಪ್ಲಸ್‌. ಪಕ್ಕಾ ಕ್ಲಾಸ್‌ ಸಿನಿಮಾವಾಗಿ ಮೂಡಿಬಂದಿರುವ “ಓ2′ ಒಂದು ಹೊಸ ಅನುಭವ ನೀಡುವ ಸಿನಿಮಾ. ಸಣ್ಣಪುಟ್ಟ ಲೋಪದೋಷಗಳನ್ನು ಹೊರತುಪಡಿಸಿದರೆ, ಹೊಸ ನಿರ್ದೇಶಕರಿಬ್ಬರ ಪ್ರಯತ್ನವನ್ನು ಮೆಚ್ಚಬಹುದು.

ಚಿತ್ರದಲ್ಲಿ ಆಶಿಕಾ ರಂಗನಾಥ್‌ ವೈದ್ಯೆಯಾಗಿ ಹಾಗೂ ಪ್ರೇಮಿಯಾಗಿ ಮಿಂಚಿದ್ದಾರೆ. ಈ ಸಿನಿಮಾದ ಅಚ್ಚರಿಗಳಲ್ಲಿ ರಾಘವ್‌ ನಾಯಕ್‌ ಕೂಡಾ ಒಬ್ಬರು. ಚಿತ್ರದ ನಿರ್ದೇಶನದ ಜೊತೆಗೆ ಓಶೋ ಎಂಬ ಪಾತ್ರ ಮಾಡಿದ್ದಾರೆ. ತುಂಬಾ ಲವಲವಿಕೆಯಿಂದ ಆ ಪಾತ್ರವನ್ನು ನಿಭಾಹಿಸಿ, ಪ್ರೇಕ್ಷಕರಿಗೆ ಇಷ್ಟವಾಗುತ್ತಾರೆ. ಉಳಿದಂತೆ ಪ್ರವೀಣ್‌ ತೇಜ್‌, ಸಿರಿ, ಪ್ರಕಾಶ್‌ ಬೆಳವಾಡಿ, ಶ್ರೀಧರ್‌, ಅರುಣಾ ಬಾಲರಾಜ್‌ ಸೇರಿದಂತೆ ಇತರರು ನಟಿಸಿದ್ದಾರೆ. ಚಿತ್ರದ ಹಾಡುಗಳು ಕಥೆಗೊಂದು ಕಥೆಯ ಓಘಕ್ಕೆ ಸಾಥ್‌ ನೀಡಿವೆ. ಕುಟುಂಬ ಸಮೇತರಾಗಿ ನೋಡಲು “ಓ2′ ಒಂದು ಒಳ್ಳೆಯ ಆಯ್ಕೆಯಾಗಬಹುದು.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.