ಚಿತ್ರ ವಿಮರ್ಶೆ: ಪ್ರಶ್ನೆಗಳನ್ನು ಮುಂದಿಟ್ಟು  ಮರೆಯಾಗುವ ‘ಪಂಪ’


Team Udayavani, Sep 17, 2022, 2:40 PM IST

ಚಿತ್ರ ವಿಮರ್ಶೆ: ಪ್ರಶ್ನೆಗಳನ್ನು ಮುಂದಿಟ್ಟು  ಮರೆಯಾಗುವ ‘ಪಂಪ’

ಕರ್ನಾಟಕದಲ್ಲಿ ಇತ್ತೀಚಿನ ವರ್ಷಗಳಲ್ಲಿ ಅತಿಹೆಚ್ಚು ಚರ್ಚೆಯಾಗುತ್ತಿರುವ ಭಾಷಾ ವಿಚಾರ, ಸಾಹಿತಿಗಳು ಮತ್ತು ಚಿಂತಕರ ಹತ್ಯೆ, ಕನ್ನಡಪರ ಹೋರಾಟಗಳ ದಿಕ್ಕು -ದೆಸೆ ಇಂಥ ಪ್ರಸ್ತುತ ಗಂಭೀರ ವಿಷಯಗಳನ್ನು ಸಸ್ಪೆನ್ಸ್‌ ಕಂ ಕ್ರೈಂ-ಥ್ರಿಲ್ಲರ್‌ ಶೈಲಿಯಲ್ಲಿ ತೆರೆಮೇಲೆ ಹೇಳಿರುವ ಚಿತ್ರ “ಪಂಪ’.

ಕನ್ನಡದ ಅಸ್ತಿತ್ವ ಮತ್ತು ಅಸ್ಮಿತೆಗಾಗಿ ಹೋರಾಡುವ ಪ್ರೊ. ಪಂಚಳ್ಳಿ ಪರಶಿವಮೂರ್ತಿ (ಪಂಪ) ಎಂಬ ಪಾತ್ರದ ಮೂಲಕ ಆರಂಭವಾಗುವ ಸಿನಿಮಾದ ಕಥೆ, ನಂತರ ಭಾಷಾ ಹೋರಾಟ, ಅದರ ಹಿಂದಿನ ರಾಜಕೀಯ, ಎಜುಕೇಷನ್‌ ಮಾμಯಾ, ಸರ್ಕಾರದ ಧೋರಣೆ ಹೀಗೆ ಹತ್ತಾರು ವಿಷಯಗಳನ್ನು ಚರ್ಚಿಸುತ್ತಾ ಸಾಗುತ್ತದೆ. ಅಂತಿಮವಾಗಿ ಇವೆಲ್ಲದಕ್ಕೂ ಮೂಲ ಕಾರಣವೇನು? ಎಂಬ ಪ್ರಶ್ನೆಯನ್ನು ಪ್ರೇಕ್ಷಕರ ಮುಂದೆ ಬಿಟ್ಟು “ಪಂಪ’ನ ಕಥೆಗೆ ತೆರೆ ಬೀಳುತ್ತದೆ.

ಕನ್ನಡ ಚಿತ್ರರಂಗದಲ್ಲಿ ಹೆಚ್ಚಾಗಿ ಸೆಂಟಿಮೆಂಟ್‌ ಮತ್ತು ಎಮೋಶನಲ್‌ ಸಿನಿಮಾಗಳ ಮೂಲಕವೇ ಗುರುತಿಸಿಕೊಂಡಿದ್ದ ಹಿರಿಯ ನಿರ್ದೇಶಕ ಎಸ್‌. ಮಹೇಂದರ್‌, ಮೊದಲ ಬಾರಿಗೆ ಔಟ್‌ ಆ್ಯಂಡ್‌ ಔಟ್‌ ಸಸ್ಪೆನ್ಸ್‌ ಕಂ ಕ್ರೈಂ-ಥ್ರಿಲ್ಲರ್‌ ಕಥೆಯನ್ನು ತೆರೆಮೇಲೆ ಹೇಳಿದ್ದಾರೆ.

ಸಾಮಾನ್ಯವಾಗಿ ಸಸ್ಪೆನ್ಸ್‌ ಮತ್ತು ಕ್ರೈಂ-ಥ್ರಿಲ್ಲರ್‌ ಸಿನಿಮಾಗಳಲ್ಲಿ ಚಿತ್ರಕಥೆ, ನಿರೂಪಣೆ ಕೊಂಚ ವೇಗವಾಗಿರುತ್ತದೆ. ಆದರೆ “ಪಂಪ’ನಲ್ಲಿ ಇಂಥದ್ದೊಂದು ವೇಗವನ್ನು ನಿರೀಕ್ಷಿಸುವಂತಿಲಲ್ಲದಿದ್ದರೂ, ಕಥಾಹಂದರ ನಿಧಾನವಾಗಿ ಮನಸ್ಸಿನೊಳಗೆ ಇಳಿಯುವಂತಿದೆ. ಸಾಮಾನ್ಯವಾಗಿ ಸಸ್ಪೆನ್ಸ್‌ ಕಂ ಕ್ರೈಂ-ಥ್ರಿಲ್ಲರ್‌ ಸಿನಿಮಾಗಳಲ್ಲಿ ಮೂಲ ಕ್ರೈಂ ಕಥಾವಸ್ತು ಅಥವಾ ಘಟನೆಗೆ ಕ್ಲೈಮ್ಯಾಕ್ಸ್‌ನಲ್ಲಿ ತಾರ್ಕಿಕ ಅಂತ್ಯ ಸಿಕ್ಕಿ ಸಿನಿಮಾ ಕೊನೆಯಾಗುತ್ತದೆ. ಪ್ರೇಕ್ಷಕರು ನಿರಾಳರಾಗಿ ಥಿಯೇಟರ್‌ ನಿಂದ ಹೊರಬರುತ್ತಾರೆ. ಆದರೆ “ಪಂಪ’ ಇದಕ್ಕೆ ಅಪವಾದವೆಂಬಂತಿದೆ! “ಪಂಪ’ ಸಸ್ಪೆನ್ಸ್‌ ಕಂ ಕ್ರೈಂ-ಥ್ರಿಲ್ಲರ್‌ ಸಿನಿಮಾವಾದರೂ, ಸಿದ್ಧಸೂತ್ರದಿಂದ ಹೊರತಾಗಿ ತೆರೆಮೇಲೆ ಬಂದಿದೆ. ಹೀಗಾಗಿ, ಥಿಯೇಟರ್‌ನಿಂದ ಹೊರಗೆ ಬಂದಮೇಲೂ ಒಂದಷ್ಟು ವಿಚಾರಗಳು, ನೋಡುಗರನ್ನು ಕೆಲಹೊತ್ತು ಕಾಡುತ್ತವೆ.

ಇನ್ನು “ಪಂಪ’ನ ಪಾತ್ರಧಾರಿಯಾಗಿ ಕೀರ್ತಿ ಭಾನು, ಕನ್ನಡ ಅಭಿಮಾನಿಯಾಗಿ ಸಂಗೀತಾ ಶೃಂಗೇರಿ ತಮ್ಮ ಪಾತ್ರವನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಉಳಿದಂತೆ ಅರವಿಂದ ರಾವ್‌, ಆದಿತ್ಯ ಶೆಟ್ಟಿ, ರಾಘವ್‌ ನಾಯಕ್‌, ರವಿಭಟ್‌ ತಮ್ಮ ಪಾತ್ರದಲ್ಲಿ ಗಮನ ಸೆಳೆಯುತ್ತಾರೆ.

ತಾಂತ್ರಿಕವಾಗಿ ಚಿತ್ರದ ಛಾಯಾಗ್ರಹಣ, ಸಂಕಲನ, ಹಿನ್ನೆಲೆ ಸಂಗೀತ, ಕಲರಿಂಗ್‌ ಗುಣಮಟ್ಟದಲ್ಲಿದೆ. ಪ್ರಸ್ತುತ ಚರ್ಚೆಯಲ್ಲಿರುವ ಕನ್ನಡ ವಿಚಾರ, ಪಾತ್ರ ಪೋಷಣೆ, ಕಣ್ಣಿಗೆ ಕಟ್ಟುವಂಥ ಸುಂದರ ಲೊಕೇಶನ್ಸ್‌, ಥಿಯೇಟರ್‌ ಹೊರಗೂ ಗುನುಗುವಂಥ ಒಂದೆರಡು ಹಾಡುಗಳು, ಸಂಭಾಷಣೆ ಸಿನಿಮಾಕ್ಕೆ ಪ್ಲಸ್‌ ಆಗಿರುವ ಪ್ರಮುಖ ಅಂಶಗಳು ಎನ್ನಬಹುದು

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.