Pinki Elli movie review: ಪ್ರೇಕ್ಷಕರನ್ನು ಆವರಿಸಿಕೊಳ್ಳುವ ಪಿಂಕಿ


Team Udayavani, Jun 5, 2023, 11:45 AM IST

Pinki Elli movie review

ಆಧುನಿಕ ಜಗತ್ತಿನ ಬೇಕು-ಬೇಡಗಳು, ಜಂಜಾಟ, ಸ್ವತಂತ್ರ ಮನೋಭಾವ ಪ್ರತಿಯೊಬ್ಬರ ಬದುಕಿಗೂ ಅವರದ್ದೇ ಆದ ದೃಷ್ಠಿಕೋನದಲ್ಲಿ ಒಂದೊಂದು ಅರ್ಥ ಕಲ್ಪಿಸಿಕೊಡುತ್ತವೆ. ಹಾಗಂತ ಇಲ್ಲಿ ಯಾರನ್ನೂ ವಹಿಸಿಕೊಳ್ಳಲಾಗದು, ಯಾರ ಪರವಾಗಿಯೂ ನಿಲ್ಲಲಾಗದು, ಯಾವುದನ್ನೂ ಜರಿಯಲೂ ಆಗದು. ಇಂಥ ಸಂದರ್ಭದಲ್ಲಿ ಕೆಲವೊಮ್ಮೆ ಅನಿರೀಕ್ಷಿತವಾಗಿ ಎದುರಾಗುವ ಪರಿಸ್ಥಿತಿ ಬದುಕನ್ನು ಹೇಗೆಲ್ಲ ಹೈರಾಣಾಗಿ ಸುತ್ತದೆ. ಅದಕ್ಕೆ ಸಾಮಾಜಿಕ ಮತ್ತು ಶ್ರೀಸಾಮಾನ್ಯನ ಪ್ರತಿಕ್ರಿಯೆ ಹೇಗಿರುತ್ತದೆ ಎನ್ನುವುದೇ ಈ ವಾರ ತೆರೆಗೆ ಬಂದಿರುವ “ಪಿಂಕಿ ಎಲ್ಲಿ?’ ಸಿನಿಮಾದ ವಸ್ತು ವಿಷಯ.

ತಾಯಿಯ ಮಡಿಲಿನಲ್ಲಿ ಬೆಚ್ಚಗೆ ಬೆಳೆಯಬೇಕಾದ 8 ತಿಂಗಳ ಹೆಣ್ಣು ಮಗು ಪಿಂಕಿ, ತಂದೆ-ತಾಯಿ ಇದ್ದರೂ ಬೇರೊಬ್ಬರ ಜೋಳಿಗೆ ತುಂಬಿಸಲು ದುಡಿಯುವಮಗುವಾಗುತ್ತದೆ. ಮನೆಯಿಂದ ಕಾಣೆಯಾಗುವ ಪಿಂಕಿಯ ಹುಡುಕಾಟದ ಸುತ್ತ “ಪಿಂಕಿ ಎಲ್ಲಿ?’ ಸಿನಿಮಾದ ಕಥಾಹಂದರ ಸಾಗುತ್ತದೆ.

ಅಂದಹಾಗೆ, “ಪಿಂಕಿ ಎಲ್ಲಿ?’ ಸಿನಿಮಾದಲ್ಲಿ ಪಿಂಕಿ ಎಂಬ ಮಗು ಕೇವಲ ಸಾಂಕೇತಿಕವಷ್ಟೇ. ಪಿಂಕಿ ಕಳೆದು ಹೋದ ನಂತರ ಮಗುವಿನ ಹುಡುಕಾದ ನಡುವೆಯೇ ಅದರ ಪೋಷಕರ ಹಿನ್ನೆಲೆ ತೆರೆದುಕೊಳ್ಳುತ್ತದೆ. ಅಲ್ಲಿ ದಾಂಪತ್ಯ, ಮಾನವ ಸಂಬಂಧಗಳ ಹುಳುಕು ಬಿಚ್ಚಿಕೊಳ್ಳುತ್ತಾ ಹೋಗುತ್ತದೆ. ಮಹಾನಗರಗಳಲ್ಲಿ ಬದುಕಿನ ಅನಿವಾರ್ಯತೆ ವಿರಾಟ್‌ ದರ್ಶನವಾಗುತ್ತದೆ. ಸ್ಲಂಗಳು, ಅಲ್ಲಿನ ಜನ ಜೀವನ, ಗೊಂದಲಮಯ ಬದುಕು ಮತ್ತು ಸಾಮಾಜಿಕ ಮನಸ್ಥಿತಿ, ಸ್ಥಿತಿಗತಿ ಎಲ್ಲವೂ ತೆರೆದುಕೊಳ್ಳುತ್ತದೆ. ಮಗುವನ್ನು ಕಳೆದು ಕೊಂಡ ತಾಯಿಯೊಬ್ಬಳ ಒಡಲಾಳದ ನೋವು ಮತ್ತು ಅಸಹಾಯಕ ನಿಲವು ಅಲ್ಲಲ್ಲಿ ಕರುಣೆ ಹುಟ್ಟಿಸುತ್ತದೆ.

ಇನ್ನು ಆಕೆಯ ಪತಿ ಹಾಗೂ ಸ್ನೇಹಿತ ಎಂಬ ಎರಡು ಪಾತ್ರಗಳಿಗೆ ಎರಡು ಆಯಾಮಗಳಿವೆ. ಕೆಲವರ್ಷಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ನೈಜ ಘಟನೆಯೊಂದನ್ನು ಆಧರಿಸಿ, ಅದನ್ನು ಮನಮುಟ್ಟುವಂತೆ ಚಿತ್ರರೂಪದಲ್ಲಿ ತೆರೆಮೇಲೆ ತರುವಲ್ಲಿ ನಿರ್ದೇಶಕ ಪೃಥ್ವಿ ಕೋಣನೂರು ಯಶಸ್ವಿಯಾಗಿದ್ದಾರೆ. ಬದುಕಿನ ಅನಿವಾರ್ಯತೆ ಯಲ್ಲಿ ಬೇಯುವ ಮನಸ್ಸುಗಳು ತಮ್ಮದೇ ನಿರ್ಲಕ್ಷ್ಯದಿಂದ ಉಂಟಾಗುವ ಅನಾಹುತಗಳಿಂದ ಹೇಗೆಲ್ಲ ಪರಿತಪಿಸಬೇಕಾಗುತ್ತದೆ ಎಂಬುದನ್ನು “ಪಿಂಕಿ ಎಲ್ಲಿ?’ ಸಿನಿಮಾ ಪರಿಣಾಮಕಾರಿಯಾಗಿ ಕಟ್ಟಿಕೊಟ್ಟಿದೆ.

ಕಲಾವಿದರಾದ ಅಕ್ಷತಾ ಪಾಂಡವ ಪುರ, ದೀಪಕ್‌ ಸುಬ್ರಮಣ್ಯ, ಶೂನ್ಯ, ಗುಂಜಲಮ್ಮ, ಅನಸೂಯಮ್ಮ ಮೊದಲಾದವರು ಯಾವುದೇ ಆಡಂಭರವಿಲ್ಲದೆ ತಮ್ಮ ಸಹಜ ಅಭಿನಯದಿಂದ ಇಷ್ಟವಾಗುತ್ತಾರೆ. ನೋಡುನೋಡುತ್ತಿದ್ದಂತೆ, ನಿಧಾನ ವಾಗಿ ಆವರಿಸಿ ಕೊಳ್ಳುವ ಪಿಂಕಿಯ ಹುಡು ಕಾಟ ನೋಡುಗರ ಮನಸ್ಸನ್ನು ಅಲ್ಲಲ್ಲಿ ಆದ್ರವಾಗಿಸುತ್ತದೆ.

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

Shamanuru Shivashankarappa

Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

totapuri 2 review

Totapuri 2 review; ತೋತಾಪುರಿಯ ‘ಘಮ’ ಮತ್ತು ಕಾಡುವ ‘ಸುಮ’!

baana daariyalli review

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

Dighvijay Movie review;

Dighvijaya Movie review; ರೈತಪರ ಹೋರಾಟಕ್ಕೆ ದಿಗ್ವಿಜಯ

Olave Mandara 2 movie review

Olave Mandara 2 movie review; ಪ್ರೇಮದೂರಿನ ಕರೆಯೋಲೆ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sadsada-s

Asian Games 10,000 ಮೀ. ರೇಸ್‌: ಕಾರ್ತಿಕ್‌, ಗುಲ್ವೀರ್‌ ಅವಳಿ ಪದಕದ ಹೀರೋಗಳು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

WHATSAPP

WhatsApp, Telegram ಆ್ಯಪ್‌ ವಂಚನೆ ಜಾಲ ಬಯಲಿಗೆ

pregnancy

Health: ನೂತನ ಗರ್ಭನಿರೋಧಕ ವಿಧಾನ ಅನುಷ್ಠಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.