ಹರೆಯದ ಮನಸ್ಸುಗಳ ಪ್ರೇಮ್‌ ಕಹಾನಿ

ಚಿತ್ರ ವಿಮರ್ಶೆ

Team Udayavani, Jul 20, 2019, 3:04 AM IST

Malebillu

ಅವನ ಹೆಸರು ಸೂರ್ಯ. ಹೆಸರಿಗೆ ತಕ್ಕಂತೆ ಎಲ್ಲರೂ ಸೂರ್ಯನಿಗೆ ಆಕರ್ಷಿತರಾಗುತ್ತಾರೆ. ಇವಳ ಹೆಸರು ಭಾರ್ಗವಿ ನಡೆ-ನುಡಿಯಲ್ಲಿ ಭೂಮಿಯ ಗುಣದವಳು. ಇಷ್ಟು ಹೇಳಿದ ಮೇಲೆ ಸೂರ್ಯನಿಗೆ ಭೂಮಿ, ಭೂಮಿಗೆ ಸೂರ್ಯ ನೆರಳು-ಬೆಳಕಿನಂತೆ ಇರುವುದು ಪ್ರಕೃತಿಯ ನಿಯಮ. ಇದೇ ನಿಯಮದ ಜೊತೆಗೆ ಸೂರ್ಯ, ಭಾನು, ಭೂಮಿ, ಮಳೆ, ಪ್ರೀತಿ ಇವೆಲ್ಲದರ ಗುಣ ಸ್ವಭಾವವನ್ನು ಚಿತ್ರಕಥೆಯಲ್ಲಿ ಇಟ್ಟುಕೊಂಡು ತೆರೆಗೆ ಬಂದಿರುವ ಚಿತ್ರ “ಮಳೆಬಿಲ್ಲು’.

ಇನ್ನೂ ಹೈಸ್ಕೂಲ್‌ನಲ್ಲಿರುವ ಹರೆಯದ ಹುಡುಗ ಸೂರ್ಯ ಮತ್ತು ಹುಡುಗಿ ಭಾರ್ಗವಿ ಕ್ಲಾಸ್‌ ರೂಮ್‌ನಲ್ಲೇ ಲವ್‌ ಸಿಲೆಬಸ್‌ ಕೂಡ ಓದಲು ಶುರು ಮಾಡುತ್ತಾರೆ. ಕಣ್‌-ನೋಟ ಸ್ನೇಹಕ್ಕೆ, ಸ್ನೇಹ ಪ್ರೀತಿಗೆ ತಿರುಗಲು ಹೆಚ್ಚು ಸಮಯ ಹಿಡಿಯುವುದಿಲ್ಲ. ಎಲ್ಲವೂ ಸರಿಯಾಗಿ ನಡೆದುಕೊಂಡು ಹೋಗುತ್ತಿರುವಾಗಲೇ, ನಡೆದ ಘಟನೆಯೊಂದು ಸೂರ್ಯನನ್ನು ಭೂಮಿಯಿಂದ ದೂರ ಮಾಡುತ್ತದೆ. ಭೂಮಿಯ ನೆನಪಿನಲ್ಲೇ ಸೂರ್ಯನನ್ನು ಸುತ್ತುವಂತೆ ಮಾಡುತ್ತದೆ.

ಅಲ್ಲಿಯವರೆಗೆ ಮಿಂಚುತ್ತಿದ್ದ ಸೂರ್ಯನ ಪ್ರೀತಿಗೆ ಗ್ರಹಣದ ಛಾಯೆ ದುರಾಗುತ್ತದೆ. ಹಾಗಾದ್ರೆ ಸೂರ್ಯನ ಪ್ರೀತಿಗೆ ಹಿಡಿದಿರುವ ಗ್ರಹಣ ಮುಗಿಯುತ್ತಾ? ಭೂಮಿ ಮತ್ತೆ ಸೂರ್ಯನಿಗೆ ಸಿಗುತ್ತಾಳಾ? ಇವರಿಬ್ದರ ಪ್ರೀತಿಯಲ್ಲಿ ಕೊನೆಗೂ “ಮಳೆಬಿಲ್ಲು’ ಮೂಡಲಿದೆಯಾ? ಅನ್ನೋದೆ “ಮಳೆಬಿಲ್ಲು’ ಚಿತ್ರದ ಕ್ಲೈಮ್ಯಾಕ್ಸ್‌. ಇಷ್ಟೆಲ್ಲ ಹೇಳಿದ ಮೇಲೆ “ಮಳೆಬಿಲ್ಲು’ ಅನ್ನೋದು ಹರೆಯದ ಪ್ರೇಮ್‌ ಕಹಾನಿ ಅನ್ನೋದನ್ನ ಬಿಡಿಸಿ ಹೇಳಬೇಕಾಗಿಲ್ಲ.

ಹರೆಯದ ಮನಸ್ಸುಗಳ ಸ್ನೇಹ, ಪ್ರೀತಿ-ಪ್ರೇಮ ಪಿಸುಮಾತು ಈ ಚಿತ್ರದಲ್ಲೂ ಕೇಳಿಸುತ್ತದೆ. ಚಿತ್ರದ ಕಥೆಯ ಒಂದೆಳೆ ಚೆನ್ನಾಗಿದ್ದರೂ, ಅದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರೂಪಿಸಬಹುದಿತ್ತು. ಚಿತ್ರಕಥೆ, ಸಂಭಾಷಣೆ ಮತ್ತು ಹೇಳುವ ಶೈಲಿ ಇನ್ನಷ್ಟು ಬಿಗಿಯಾಗಿದ್ದರೆ “ಮಳೆಬಿಲ್ಲು’ ಇನ್ನೂ ಶೈನಿಂಗ್‌ ಆಗಿ ಕಾಣಿಸುವ ಸಾಧ್ಯತೆಗಳಿದ್ದವು. ಇನ್ನು ಚಿತ್ರದ ನಾಯಕ ಶರತ್‌ ಅಭಿನಯದಲ್ಲಿ ಸಾಕಷ್ಟು ಪಳಗಬೇಕಿದೆ. ಉಳಿದಂತೆ ಸಂಜನಾ ಆನಂದ್‌ ತಮ್ಮ ಪಾತ್ರದಲ್ಲಿ ಗಮನ ಸೆಳೆಯುತ್ತಾರೆ.

ಮತ್ತೂಬ್ಬ ನಾಯಕಿ ನಯನಾ ಅಭಿನಯ ಪರವಾಗಿಲ್ಲ. ಉಳಿದ ಕಲಾವಿದರು ನಿರ್ದೇಶಕರು ಹೇಳಿದ್ದನ್ನ ಅಚ್ಚುಕಟ್ಟಾಗಿ ತೆರೆಮೇಲೆ ಒಪ್ಪಿಸಿದ್ದಾರೆ. ಇನ್ನು ಚಿತ್ರದಲ್ಲಿ ಬರುವ ಗಣೇಶ್‌ ನಾರಾಯಣ್‌ ಸಂಗೀತ ನಿರ್ದೇಶನದ ಎರಡು-ಮೂರು ಹಾಡುಗಳು ಗುನುಗುವಂತಿವೆ. ಹಿನ್ನೆಲೆ ಸಂಗೀತದ ಬಗ್ಗೆ ಹೆಚ್ಚು ಗಮನ ಕೊಟ್ಟಂತಿಲ್ಲ. ಛಾಯಾಗ್ರಹಣ ಚೆನ್ನಾಗಿದೆ. ಒಟ್ಟಾರೆ ಚಿತ್ರತಂಡ ಇನ್ನೂ ಸ್ವಲ್ಪ ಮುತುವರ್ಜಿ ವಹಿಸಿದ್ದರೆ “ಮಳೆಬಿಲ್ಲು’ ಎನ್ನುವ ಚಿತ್ರವನ್ನು ಇನ್ನಷ್ಟು ಕಲರ್‌ಫ‌ುಲ್‌ ಆಗಿ ತೋರಿಸಬಹುದಿತ್ತು.

ಚಿತ್ರ: ಮಳೆಬಿಲ್ಲು
ನಿರ್ಮಾಣ: ನಿಂಗಪ್ಪ ಎಲ್‌.
ನಿರ್ದೇಶನ: ನಾಗರಾಜ್‌ ಹಿರಿಯೂರು
ತಾರಾಗಣ: ಶರತ್‌, ಸಂಜನಾ ಆನಂದ್‌, ನಯನಾ, ಕಿರ್ಲೋಸ್ಕರ್‌ ಸತ್ಯ, ಶ್ರೀನಿವಾಸ ಪ್ರಭು, ಮೈಕೋ ನಾಗರಾಜ್‌, ಮಹದೇವ್‌, ಚಂದನ್‌ ಮತ್ತಿತರರು.

* ಕಾರ್ತಿಕ್‌

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.