Juni Review; ಥ್ರಿಲ್ಲರ್ ಜೂನಿಯ ಭಾವ ಲಹರಿ


Team Udayavani, Feb 10, 2024, 12:36 PM IST

Juni Review

ಆತ ತನ್ನದೇ ರೆಸ್ಟೋರೆಂಟ್‌ನಲ್ಲಿ ತಾನೇ ಶೆಫ್ ಆಗಿ ಕೆಲಸ ಮಾಡುತ್ತಿರುವ ಹುಡುಗ. ತನ್ನಿಷ್ಟದಂತೆ ತಾನು ಬದುಕಬೇಕು ಎಂಬ ಕಾರಣಕ್ಕೆ ತನ್ನಿಷ್ಟದ ಶೆಫ್ ಕೆಲಸವನ್ನು ಖುಷಿಯಿಂದ ಮಾಡುತ್ತಿರುವ ಆ ಹುಡುಗನಿಗೆ ಹೊಸ ಕೇಕ್‌ ರೆಸಿಪಿಯೊಂದನ್ನು ಕಂಡು ಹಿಡಿಯುವ ಕನಸು. ಏನೆಲ್ಲ ಪ್ರಯತ್ನ ಮಾಡಿದರೂ ಯಾವ ರೀತಿಯಲ್ಲಿ ಹೊಸ ರೆಸಿಪಿಯನ್ನು ಪ್ರಯತ್ನಿಸಿದರೂ, ಅದರಲ್ಲಿ ಏನೋ ಕೊರತೆ! ತಾನಂದುಕೊಂಡಂತೆ ರೆಸಿಪಿ ಬರುತ್ತಿಲ್ಲ ಎಂಬ ಹುಡುಕಾಟದಲ್ಲಿರುವಾಗಲೇ, ಈ ಹುಡುಗನ ರೆಸ್ಟೋರೆಂಟ್‌ಗೆ “ಜೂನಿ’ ಎಂಬ ಹುಡುಗಿಯೊಬ್ಬಳ ಎಂಟ್ರಿಯಾಗುತ್ತದೆ. ಅವಳ್ಳೋ, ಮೇಲ್ನೋಟಕ್ಕೆ ಸರಳ ಸುಂದರಿಯಾಗಿ ಕಂಡರೂ, ಅಂತರಾಳದಲ್ಲಿ ನೂರಾರು ಭಾವನೆಗಳನ್ನು ಅಡಗಿಸಿಕೊಟ್ಟುಕೊಂಡ ಗುಪ್ತಗಾಮಿನಿ. ಅಲ್ಲಿಯವರೆಗೂ ರೆಸಿಪಿಗಾಗಿ ಹುಡುಕಾಟ ನಡೆಸುತ್ತಿದ್ದ ಹುಡುಗ, ಅಲ್ಲಿಂದ ಹುಡುಗಿಯ ಹಿನ್ನೆಲೆ, ಅವಳ ಕಾಣದ ವ್ಯಕ್ತಿತ್ವ, ಭಾವನೆಗಳ ಹುಡುಕಾಟಕ್ಕೆ ಮುಂದಾಗುತ್ತಾನೆ. ಅಲ್ಲಿಂದ “ಜೂನಿ’ಯ ವರ್ಣರಂಜಿತ ವ್ಯಕ್ತಿತ್ವ ಅನಾವರಣವಾಗುತ್ತಾ ಹೋಗುತ್ತದೆ.

ಇದು ಈ ವಾರ ತೆರೆಗೆ ಬಂದಿರುವ “ಜೂನಿ’ ಸಿನಿಮಾದ ಕಥೆಯ ಸಣ್ಣ ಎಳೆ. ಮೇಲ್ನೋಟಕ್ಕೆ ಕಾಣುವಂತೆ, “ಜೂನಿ’ ಒಂದು ಲವ್‌ಸ್ಟೋರಿ ಸಿನಿಮಾ. ಒಂದು ನವಿರಾದ ಪ್ರೇಮಕಥೆಯ ಜೊತೆಗೆ ಸೈಕಾಲಜಿಕಲ್‌ ಥ್ರಿಲ್ಲರ್‌ ಅಂಶಗಳನ್ನು ಇಟ್ಟುಕೊಂಡು “ಜೂನಿ’ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತಂದಿದ್ದಾರೆ ನಿರ್ದೇಶಕ ವೈಭವ್‌ ಮಹಾದೇವ.

ಕನ್ನಡದಲ್ಲಿ ಇತ್ತೀಚಿನ ದಿನಗಳಲ್ಲಿ ಇದೊಂದು ಅಪರೂಪದ ಪ್ರಯತ್ನ ಎನ್ನಬಹುದು. ಆರಂಭದಿಂದ ಅಂತ್ಯದವರೆಗೂ “ಜೂನಿ’ ಒಂದೇ ವೇಗವನ್ನು ಕಾಪಾಡಿಕೊಂಡಿದ್ದು, ಹೊಸತನದ ನಿರೂಪಣೆ ಒಂದಷ್ಟು ಗಮನ ಸೆಳೆಯುತ್ತದೆ. ಕೆಲ ದೃಶ್ಯಗಳಿಗೆ ಅಲ್ಲಲ್ಲಿ ಕತ್ತರಿ ಪ್ರಯೋಗ ಮಾಡಿದ್ದರೆ, “ಜೂನಿ’ ಕಥೆ ಇನ್ನಷ್ಟು ಶಾರ್ಟ್‌ ಆ್ಯಂಡ್‌ ಸ್ವೀಟ್‌ ಆಗಿ ಮುಗಿಯುವ ಸಾಧ್ಯತೆಗಳಿದ್ದವು.

ಇನ್ನು ನಾಯಕ ಪೃಥ್ವಿ ಅಂಬರ್‌ ಶೆಫ್ ಪಾತ್ರದಲ್ಲಿ ಗಮನ ಸೆಳೆಯುತ್ತಾರೆ. ನಾಯಕಿ ರಿಶಿಕಾ ಮೂರು-ನಾಲ್ಕು ವಿಭಿನ್ನ ವ್ಯಕ್ತಿತ್ವಗಳನ್ನು ತನ್ನಲ್ಲಿ ಹುದುಗಿಸಿಟ್ಟುಕೊಂಡ ಹುಡುಗಿ ಯಾಗಿ ತಮ್ಮ ಪಾತ್ರವನ್ನು ಸಮರ್ಥ ವಾಗಿ ನಿಭಾಯಿಸಿ ದ್ದಾರೆ. ಇನ್ನಿತರ ಕಲಾವಿದರು ಪಾತ್ರಕ್ಕೆ ಒಪ್ಪುವಂತೆ ಅಚ್ಚುಕಟ್ಟಾದ ಅಭಿನಯ ನೀಡಿದ್ದಾರೆ. ಸಿನಿಮಾದ ಒಂದೆರಡು ಹಾಡುಗಳು, ಛಾಯಾಗ್ರಹಣ, ಸಂಕಲನ ಕಾರ್ಯ ತಾಂತ್ರಿಕವಾಗಿ ಸಿನಿಮಾವನ್ನು ಸುಂದರವಾಗಿಸಿದೆ.

ಅತಿಯಾದ ಆಡಂಬರವಿಲ್ಲದೆ ಸರಳವಾಗಿ ಒಂದು ಒಳ್ಳೆಯ ಪ್ರಯತ್ನವಾಗಿ ಮೂಡಿ ಬಂದಿರುವ “ಜೂನಿ’ಯನ್ನು ಒಮ್ಮೆ ಥಿಯೇ ಟರ್‌ನಲ್ಲಿ ನೋಡಿಬರಬಹುದು.

ಜಿ.ಎಸ್. ಕಾರ್ತಿಕ ಸುಧನ್

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.