ಚಿತ್ರವಿಮರ್ಶೆ: ‘ಹಂಡ್ರೆಡ್‌’ ಪರ್ಸೆಂಟ್‌ ಥ್ರಿಲ್‌ ಕೊಡೋ ನೆಟ್ ಸ್ಟೋರಿ


Team Udayavani, Nov 20, 2021, 11:30 AM IST

ramesh aravind

ಲಾಕ್‌ಡೌನ್‌ ಬಳಿಕ ವಾರಕ್ಕೆ ಐದಾರು ಸಿನಿಮಾಗಳು ಬಿಡುಗಡೆಯಾಗುತ್ತಿದ್ದರೂ, ಮನೆಮಂದಿ ಎಲ್ಲ ಒಟ್ಟಿಗೆ ಕೂತು ನೋಡುವಂಥ ಸಿನಿಮಾಗಳು ಬರುತ್ತಿಲ್ಲ ಎನ್ನುತ್ತಿದ್ದ ಫ್ಯಾಮಿಲಿ ಆಡಿಯನ್ಸ್‌ಗೆ ಅವರು ನಿರೀಕ್ಷಿಸಿರುವಂಥ ಸಿನಿಮಾವೊಂದು ತೆರೆಗೆ ಬಂದಿದೆ. ಅದೇ “100′.

ಇಲ್ಲೊಂದು ಹೊಸಥರದ ಕಥೆ ಇದೆ. ಭಾವನಾತ್ಮಕ ಸನ್ನಿವೇಶಗಳಿವೆ, ಸೀಟ್‌ನಲ್ಲಿ ಕೊನೆವರೆಗೂ ಹಿಡಿದು ಕೂರಿಸುವಂಥ ಕೌತುಕದ ಅಂಶಗಳಿವೆ, ಕೊನೆಗೊಂದು ಮೆಸೇಜ್‌ ಇದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ನಮ್ಮ ನಡುವೆಯೇ ನಡೆಯುವಂಥ ಘಟನೆಗಳೇ ತೆರೆಮೇಲೂ ಕಾಣುವುದರಿಂದ, ಸಿನಿಮಾ ಎಲ್ಲ ವರ್ಗದ ಪ್ರೇಕ್ಷಕರಿಗೂ ಕನೆಕ್ಟ್ ಆಗುತ್ತದೆ. ಒಟ್ಟಾರೆ “100′ ಅನ್ನೋದು ಮನೆಮಂದಿ ಕುಳಿ ತು ನೋಡುವಂಥ, ಔಟ್‌ ಆ್ಯಂಡ್‌ ಔಟ್‌ ಫ್ಯಾಮಿಲಿ ಎಂಟರ್‌ ಟೈನರ್‌ ಸಿನಿಮಾ ಅನ್ನೋದರಲ್ಲಿ ಎರಡು ಮಾತಿಲ್ಲ

ಇನ್ನು “100′ ಸಿನಿಮಾದ ಕಥಾಹಂದರದ ಬಗ್ಗೆ ಹೇಳುವುದಾದರೆ, ಇದೊಂದು ಸೈಬರ್‌ ಕ್ರೈಂ ಸುತ್ತ ನಡೆಯುವ ಸಿನಿಮಾ. ಮನೆಯೊಳಗೆ ನಮ್ಮ ಕುಟುಂಬದ ಸದಸ್ಯರು ಭೌತಿಕವಾಗಿ ನೆಮ್ಮದಿಯಾಗಿ, ಸೇಫ್ ಆಗಿದ್ದರೂ, ನಮ್ಮ ಕೈಯಲ್ಲಿರುವ ಮೊಬೈಲ್‌ ಪೋನ್‌ ಮತ್ತು ಇಂಟರ್‌ನೆಟ್‌ ಎಂಬ ಮತ್ತೂಂದು ಜಗತ್ತಿನಲ್ಲಿ ಯಾರೂ ನೆಮ್ಮದಿಯಾಗಿ, ಸೇಫ್ ಆಗಿ ಇರಲು ಸಾಧ್ಯವಿಲ್ಲ. ಗೊತ್ತಿಧ್ದೋ, ಗೊತ್ತಿಲ್ಲದೆಯೋ.., ಎಲ್ಲರೂ ಅಂತರ್ಜಾಲದ ಸುಳಿಯೊಳಗೆ ಸಿಲುಕಿಕೊಂಡಿರುತ್ತೇವೆ. ಹೀಗೆ ಈ ನೆಟ್‌ ಲೋಕದ ಸುಳಿಯೊಳಗೆ, ಸಿಲುಕಿಕೊಂಡ ವಿಷ್ಣು (ರಮೇಶ್‌ ಅರವಿಂದ್‌) ಎಂಬ ಪೊಲೀಸ್‌ ಇಲಾಖೆಯ ಸೈಬರ್‌ ಕ್ರೈಂ ಅಧಿಕಾರಿಯ ಫ್ಯಾಮಿಲಿಯ ಸುತ್ತ ಇಡೀ ಸಿನಿಮಾ ಸಾಗುತ್ತದೆ. ಜನಸಾಮಾನ್ಯರಿಂದ ಹಿಡಿದು, ಉದ್ಯಮಿಗಳು, ರಾಜಕಾರಣಿಗಳು, ಪೊಲೀಸ್‌ ಅಧಿಕಾರಿಗಳು ಯಾರೂ ಕೂಡ ಈ ಸೈಬರ್‌ ಲೋಕದಲ್ಲಿ ಸುರಕ್ಷಿತರಲ್ಲ ಎಂಬ ವಾಸ್ತವ ಸತ್ಯದ ಜೊತೆಗೆ ಸಿನಿಮಾದ ಕಥೆ ತೆರೆದು ಕೊಳ್ಳುತ್ತದೆ. ಜನಸಾಮಾನ್ಯರನ್ನು ರಕ್ಷಿಸಬೇಕಾದ ಪೊಲೀಸ್‌ ಅಧಿಕಾರಿಯೇ ತನ್ನ ಫ್ಯಾಮಿಲಿಯನ್ನು ರಕ್ಷಿಸಿಕೊಳ್ಳಲು ಹೇಗೆಲ್ಲ ಹೋರಾಟ ಮಾಡುತ್ತಾನೆ. ಕೊನೆಗೆ ಈ ನೆಟ್‌ ಲೋಕದ ಗುದ್ದಾಟದಲ್ಲಿ ವಿಷ್ಣು ಗೆಲ್ಲುತ್ತಾನಾ? ಅಂತರ್ಜಾಲದ ಅಸಲಿಯತ್ತೇನು? ಅನ್ನೋದು “100′ ಸಿನಿಮಾದ ಕ್ಲೈಮ್ಯಾಕ್ಸ್‌. ಅದು ಗೊತ್ತಾಗುವ ಹೊತ್ತಿಗೆ ಸಿನಿಮಾ ಮುಗಿದಿರುವುದೂ ಪ್ರೇಕ್ಷಕರಿಗೆ ಗೊತ್ತಾಗಿರುವುದಿಲ್ಲ.

ಇದನ್ನೂ ಓದಿ:”ಭೂಗತ ಹಾದಿಯಲ್ಲಿ ಸಿಕ್ಕ ಕೆಂಪು ಗುಲಾಬಿ”: ಗರುಡ ಗಮನ ವೃಷಭ ವಾಹನ ಚಿತ್ರ ವಿಮರ್ಶೆ

ಆಗಾಗ್ಗೆ ಪತ್ರಿಕೆಗಳು, ಟಿವಿಗಳಲ್ಲಿ ವರದಿಯಾಗುವ ಸೈಬರ್‌ ಕ್ರೈಂ ಅಂಶವನ್ನು ಇಟ್ಟುಕೊಂಡು ಅದನ್ನು ಕುತೂಹಲಭರಿತವಾಗಿ “100′ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ತರುವಲ್ಲಿ ನಟ ಕಂ ನಿರ್ದೇಶಕ ರಮೇಶ್‌ ಅರವಿಂದ್‌ ಯಶಸ್ವಿಯಾಗಿದ್ದಾರೆ.

ಡ್ಯಾನ್ಸ್‌, ಆ್ಯಕ್ಷನ್‌, ಕಾಮಿಡಿ, ಲವ್‌, ಎಮೋಶನ್ಸ್‌ ಹೀಗೆ ಎಲ್ಲ ಅಂಶಗಳು ಚಿತ್ರಕಥೆಯಲ್ಲಿ ಹದವಾಗಿ ಬೆರೆತಿತುವುದರಿಂದ “100′ ಎಲ್ಲ ವರ್ಗದ ಆಡಿಯನ್ಸ್‌ಗೂ ಇಷ್ಟವಾಗುವಂತಿದೆ. ತೆರೆಮೇಲೂ ರಮೇಶ್‌, ರಚಿತಾ, ಪೂರ್ಣ ಹೀಗೆ ಬಹುತೇಕ ಕಲಾವಿದರು ತಮ್ಮ ಅಭಿನಯದಲ್ಲಿ ನೋಡುಗರಿಗೆ ಆಪ್ತವಾಗುತ್ತ ಹೋಗುತ್ತಾರೆ. ಚಿತ್ರದ ಒಂದೆರಡು ಹಾಡುಗಳು, ಸಂಭಾಷಣೆ ಗಮನ ಸೆಳೆಯುತ್ತದೆ. ಛಾಯಾಗ್ರಹಣ ಮತ್ತು ಸಂಕಲನ ಮತ್ತು ಹಿನ್ನೆಲೆ ಸಂಗೀತ ಎಲ್ಲವೂ ಚಿತ್ರದ ಪ್ಲಸ್‌ ಎನ್ನಬಹುದು. ಹೊಸಥರದ ಸಿನಿಮಾಗಳನ್ನು ನಿರೀಕ್ಷಿಸುವ, ಎಂಟರ್‌ಟೈನ್ಮೆಂಟ್‌ ಜೊತೆಗೆ ಮೆಸೇಜ್‌ ಇರುವಂಥ “100′ ಸಿನಿಮಾವನ್ನು ಒಮ್ಮೆ ಫ್ಯಾಮಿಲಿ ಜೊತೆ ನೋಡಿಬರಲು ಅಡ್ಡಿಯಿಲ್ಲ.

ಜಿ.ಎಸ್.ಕಾರ್ತಿಕ ಸುಧನ್

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.