ಚಿತ್ರ ವಿಮರ್ಶೆ: ಆ್ಯಕ್ಷನ್‌ ಅಬ್ಬರದಲ್ಲಿ ರಣ ಕಹಳೆ


Team Udayavani, Mar 27, 2021, 9:09 AM IST

ranam kannada movie

ದೇಶದಾದ್ಯಂತ ರೈತಪರ ಹೋರಾಟ, ಖಾಸಗೀಕರಣದ ಪರ-ವಿರೋಧ ಚರ್ಚೆಗಳು ಜೋರಾಗಿ ನಡೆಯುತ್ತಿರುವಂತೆಯೇ ಅಂಥಹದೇ ಕಥಾಹಂದರ ಹೊಂದಿರುವ ರಣಂ ಚಿತ್ರ ಈ ವಾರ ತೆರೆಗೆ ಬಂದಿದೆ.

ಮೂಲ ಸೌಕರ್ಯಗಳಿಂದ ವಂಚಿತರಾದ, ನೀರಾವರಿ, ಮಳೆ-ಬೆಳೆಯಿಲ್ಲದೆ ಕಂಗೆಟ್ಟ ಹಳ್ಳಿಯ ರೈತರ ಜಮೀನನ್ನು ಕಬ ಳಿಸಲು ಹೊಂಚು ಹಾಕುವ ರಾಜಕಾರಣಿ ವಿರುದ್ದ ಸಿಡಿದೇಳುವ ಕೆಲ ಯುವಕರು ತಮ್ಮದೇ ರಣವ್ಯೂಹದಲ್ಲಿ ಆತನನ್ನು ಸಿಲುಕಿಸಿ, ಹೇಗೆ ನ್ಯಾಯ ಪಡೆಯುತ್ತಾರೆ. ವ್ಯವಸ್ಥೆಯಲ್ಲಿನ ಲೋಪಗಳನ್ನು ಬಳಸಿಕೊಂಡು ಹೇಗೆ ಜನರಿಗೆ ನ್ಯಾಯ ಕೊಡಿಸುತ್ತಾರೆ ಎನ್ನುವುದು ರಣಂ ಚಿತ್ರದ ಕಥಾಹಂದರ. ಅದು ಹೇಗೆಲ್ಲ ನಡೆಯುತ್ತದೆ ಅನ್ನೋದನ್ನ ತೆರೆಮೇಲೆ ನೋಡಬೇಕು.

“ರಣಂ’ ಚಿತ್ರದ ಹೆಸರೇ ಹೇಳುವಂತೆ, ಇದೊಂದು ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಕಥಾಹಂದರ ಹೊಂದಿರುವ ಚಿತ್ರ. ರೈತಸಮಸ್ಯೆ, ಭ್ರಷ್ಟಾಚಾರ, ಯುವಕರ ಹೋರಾಟ ಹೀಗೆ ಹತ್ತಾರು ವಿಷಯಗಳನ್ನು ಪೋಣಿಸಿ ಕಥೆಯನ್ನು ತೆರೆಮೇಲೆ ಹೇಳಿದ್ದಾರೆ ನಿರ್ದೇಶಕ ವಿ. ಸಮುದ್ರ. ಚಿತ್ರದ ಕಥೆ ಚೆನ್ನಾಗಿದ್ದರೂ, ರಣಂ ಚಿತ್ರಕಥೆ, ನಿರೂಪಣೆಗಿಂತ ನಿರ್ದೇಶಕರು ಮೇಕಿಂಗ್‌ ಕಡೆಗೇ ಹೆಚ್ಚು ಗಮನ ಕೊಟ್ಟಂತಿದೆ. ಮೇಕಿಂಗ್‌ನಂತೆಯೇ ಚಿತ್ರದ ಸ್ಕ್ರಿಪ್ಟ್ ಕಡೆಗೂ ನಿರ್ದೇಶಕರು ಇನ್ನಷ್ಟು ಗಮನ ಕೊಟ್ಟಿದ್ದರೆ ರಣಂ ಇನ್ನೂ ಪರಿಣಾಮಕಾರಿಯಾಗಿ ಮೂಡಿಬರುವ ಎಲ್ಲಾ ಸಾಧ್ಯತೆಗಳಿದ್ದವು.

ಒಂದು ಪ್ರಯತ್ನವಾಗಿ “ರಣಂ’ ಚಿತ್ರ ವನ್ನು ಮೆಚ್ಷಬಹುದು. ಸಾಕಷ್ಟು ಅಂಶ ಗಳು ಇಲ್ಲಿ ಗಮನ ಸೆಳೆಯುತ್ತಾ ಸಾಗುತ್ತವೆ. ಇಲ್ಲಿಯವರೆಗೆ ಲವರ್‌ಬಾಯ್‌ ಆಗಿ ಸ್ಮಾರ್ಟ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದ ಚೇತನ್‌ ರಣಂ ಚಿತ್ರದಲ್ಲಿ ಕೊಂಚ ರಗಡ್‌ ಲುಕ್‌ನಲ್ಲಿ ಆ್ಯಕ್ಷನ್ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ರಫ್ ಆ್ಯಂಡ್‌ ಟಫ್ ಪೊಲೀಸ್‌ ಅಧಿಕಾರಿಯಾಗಿ ಚಿರು ಸರ್ಜಾ ತಮ್ಮ ಅಭಿನಯದಲ್ಲಿ ಗಮನ ಸೆಳೆಯುತ್ತಾರೆ. ಇನ್ನು ನಾಯಕಿ ವರಲಕ್ಷ್ಮೀ ಕೂಡ ಚಿತ್ರದಲ್ಲಿ ಆ್ಯಕ್ಷನ್‌ ಲೇಡಿಯಾಗಿ ಕಾಣಿಸಿಕೊಂಡಿದ್ದು, ತಮ್ಮ ಮ್ಯಾನರಿಸಂ ಮೂಲಕ ವರಲಕ್ಷ್ಮೀ ಕೂಡ ಗಮನ ಸೆಳೆಯುತ್ತಾರೆ.

ಚಿತ್ರದಲ್ಲಿ ಸಾಧುಕೋಕಿಲ, ಬುಲೆಟ್‌ ಪ್ರಕಾಶ್‌ ಕಾಮಿಡಿ ಕಚಗುಳಿ ಇಡುವ ಪ್ರಯತ್ನ ಮಾಡಿದ್ದಾರೆ. ಉಳಿದಂತೆ ಚಿತ್ರದ ಇತರ ಪಾತ್ರಗಳಲ್ಲಿ ಬಹುತೇಕ ಹೊಸ ಪ್ರತಿಭೆಗಳು ಕಾಣಿಸಿಕೊಂಡಿದ್ದು, ಬಹುತೇಕ ಕಲಾವಿದರು ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಎಂಟರ್‌ಟೈನ್ಮೆಂಟ್‌ ಬಯಸುವ ಮಾಸ್‌ ಆಡಿಯನ್ಸ್‌ನ ಗಮನದಲ್ಲಿ ಇಟ್ಟುಕೊಂಡು ಮಾಡಲಾದ ರಣಂ ಚಿತ್ರವನ್ನು ಆ್ಯಕ್ಷನ್‌ ಪ್ರಿಯರು ಒಮ್ಮೆ ನೋಡಲಡ್ಡಿಯಿಲ್ಲ.

  • ಜಿ.ಎಸ್‌.ಕೆ

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.