ನಿರ್ಭಾವುಕ ಜಗತ್ತಿನಲ್ಲಿ ಭಾವುಕ ಪಯಣ


Team Udayavani, Feb 8, 2020, 12:41 PM IST

cinema-tdy-3

18 ಗಂಟೆ ನಿದ್ದೆ 6 ಗಂಟೆ ಎಚ್ಚರ. ಹಾಗಂತ ಆತ ಸೋಮಾರಿಯಲ್ಲ. ಬೇಡವೆಂದರೂ ಕಾಯಿಲೆಯೊಂದು ಆತನನ್ನು ಬಿಟ್ಟುಬಿಡದಂತೆ ಕಾಡುತ್ತಿದೆ. ಎಚ್ಚರವಿರುವ ಹೊತ್ತಲ್ಲಿ ಆತ ಗುಡ್‌ಬಾಯ್‌. ಅಪ್ಪಟ ಪ್ರೇಮಿ, ಪಕ್ಕಾ ಫ್ಯಾಮಿಲಿ ಮ್ಯಾನ್‌ ಜೊತೆಗೆ ಮುದ್ದಿನ ಚಿಕ್ಕಪ್ಪ. ಎಲ್ಲವೂ ಚೆನ್ನಾಗಿಯೇ ನಡೆಯುತ್ತಿರುತ್ತದೆ. ಆದರೆ, ಅಂದುಕೊಂಡಂತೆ ಎಲ್ಲವೂ ನಡೆಯಬೇಕಲ್ಲ. ಆ ಒಂದು ಘಟನೆ ಆತನನ್ನು ಇನ್ನಿಲ್ಲದಂತೆ ಕಾಡುತ್ತದೆ. ಆತನೊಳಗಿನ ಕುಂಭಕರ್ಣ ಎದ್ದು ನಿಲ್ಲುತ್ತಾನೆ.

ನೀವು “ಜಂಟಲ್‌ಮೆನ್‌’ ಸಿನಿಮಾ ನೋಡಿದರೆ ಅಲ್ಲಿ ನಿಮಗೆ ಪ್ರೀತಿ, ಪ್ರೇಮ ಜೊತೆಗೆ ಭಾವುಕ ಜಗತ್ತೂಂದು ತೆರೆದುಕೊಳ್ಳುತ್ತದೆ. ಇತ್ತೀಚಿನ ದಿನಗಳಲ್ಲಿ ಬರುವ ಸಿನಿಮಾಗಳಲ್ಲಿ ಕಥೆಯಿಲ್ಲ, ಕಥೆ ಇದ್ದರೂ ಅದು ಕಾಡುವುದಿಲ್ಲ ಎಂಬ ಮಾತಿದೆ. ಆದರೆ, “ಜಂಟಲ್‌ ಮೆನ್‌’ ಒಂದು ಗಟ್ಟಿ ಕಥೆ ಇರುವ ಹಾಗೂ ಅಷ್ಟೇ ಕಾಡುವ ಸಿನಿಮಾ. ಸಿನಿಮಾ ನೋಡ ನೋಡುತ್ತಲೇ ನಿಮ್ಮ ಕಣ್ಣಂಚು ಒದ್ದೆಯಾಗಿರುತ್ತದೆ ಎಂದರೆ ಅದಕ್ಕೆ ಕಾರಣ ಸಿನಿಮಾದ ಕಥೆ ಹಾಗೂ ಸಾಗುವ ರೀತಿ. ನಿರ್ದೇಶಕ ಜಡೇಶ್‌ ಒಂದು ಹೊಸ ಬಗೆಯ ಕಥೆಯನ್ನು ಆಯ್ಕೆ ಮಾಡಿಕೊಂಡು ಈ ಸಿನಿಮಾ ಮಾಡಿದ್ದಾರೆ. ಮುಖ್ಯವಾಗಿ ಚಿತ್ರದ ನಿರೂಪಣೆ ಕುತೂಹಲದ ಜೊತೆ ಜೊತೆಗೆ ಪ್ರೇಕ್ಷಕರಲ್ಲಿ ಸಣ್ಣದೊಂದು ಚಡಪಡಿಕೆ ಉಂಟಾಗುವಂತೆ ಮಾಡುತ್ತದೆ.

ಅದಕ್ಕೆ ಕಾರಣ ಕಥೆಯ ಜೊತೆಗೆ ಪ್ರೇಕ್ಷಕ ಬೇಗನೇ ಕನೆಕ್ಟ್ ಆಗುತ್ತಾನೆ. ಎಲ್ಲೋ ನಮ್ಮ ಅಕ್ಕಪಕ್ಕದಲ್ಲಿ ಹೀಗಾದರೆ ಹೇಗೆ ಫಿಲ್‌ ಆಗುತ್ತದೋ ಆ ತರಹದ ಒಂದು ಭಾವ ಮೂಡುತ್ತದೆ. ನಿರ್ದೇಶಕ ಜಡೇಶ್‌ ಒಂದು ಕಥೆಯಲ್ಲಿ ಹಲವು ಅಂಶಗಳನ್ನು ಹೇಳುತ್ತಾ ಹೋಗಿದ್ದಾರೆ. ನಿದ್ರಾ ಕಾಯಿಲೆಯಿಂದ ಬಳಲುವ ನಾಯಕನ ಸಮಸ್ಯೆ ಒಂದೆಡೆಯಾದರೆ, ಹೆಣ್ಣುಮಕ್ಕಳ ಕಿಡ್ನಾಪ್‌ ಹಾಗೂ ಅದರ ಹಿಂದಿನ ಮಾಫಿಯಾವನ್ನು ಹೇಳುತ್ತಾ ಹೋಗಿದ್ದಾರೆ. ಮುಖ್ಯವಾಗಿ ಪ್ರೇಕ್ಷಕರ ಊಹಿಸಿಕೊಂಡಂತೆ ಇಲ್ಲಿ ಯಾವುದೂ ನಡೆಯೋದಿಲ್ಲ. ಆತನ ಊಹೆ ಕ್ಲೈಮ್ಯಾಕ್ಸ್‌ನಲ್ಲಿ ಬುಡಮೇಲಾಗುತ್ತದೆ. ಅಂತಹ ಟ್ವಿಸ್ಟ್‌ವೊಂದನ್ನು ನಿರ್ದೇಶಕರು ಇಟ್ಟಿದ್ದಾರೆ. ಅದೇನೆಂಬುದನ್ನು ನೀವು ಸಿನಿಮಾದಲ್ಲೇ ನೋಡಿ.

ಚಿತ್ರದ ಮೊದಲರ್ಧ ಪ್ರೀತಿ, ಪ್ರೇಮ, ಹೊಡೆದಾಟ ಬಡಿದಾಟದಲ್ಲಿ ಸಾಗಿದರೆ, ದ್ವಿತೀಯಾರ್ಧ ಸಿನಿಮಾದ ನಿಜವಾದ ಜೀವಾಳ. ಕಥೆಯ ಪ್ರಮುಖ ಅಂಶ ತೆರೆದುಕೊಳ್ಳುತ್ತದೆ. ನಿರ್ದೇಶಕರು ಇಲ್ಲಿ ಕಥೆಗೆ ಪೂರಕವಾದ ಪರಿಸರ ಹುಡುಕಿರೋದು ಸಿನಿಮಾದ ಮತ್ತೂಂದು ಪ್ಲಸ್‌. ಈ ಚಿತ್ರದ ನಿರ್ಮಾಪಕ ಗುರುದೇಶಪಾಂಡೆ ಅವರ ಸಿನಿಮಾ ಪ್ರೀತಿ ತೆರೆಮೇಲೆ ಕಾಣುತ್ತದೆ.

ನಾಯಕ ಪ್ರಜ್ವಲ್‌ ದೇವರಾಜ್‌ ಇದುವರೆಗೆ ಮಾಡದಂಥ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಮತ್ತು ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಒಬ್ಬ ಪ್ರೇಮಿಯಾಗಿ, ಫ್ಯಾಮಿಲಿ ಮ್ಯಾನ್‌ ಆಗಿ ಅವರು ಇಷ್ಟವಾಗುತ್ತಾರೆ. ಅವರ ಚಡಪಡಿಕೆ, ಕೋಪ, ಸಿಟ್ಟು ಎಲ್ಲವೂ ಆ ಪಾತ್ರದ ತೂಕವನ್ನು ಹೆಚ್ಚಿಸಿದೆ. ನಾಯಕಿ ನಿಶ್ವಿ‌ಕಾ ನಾಯ್ಡು ಕೊಟ್ಟ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಸಂಚಾರಿ ವಿಜಯ್‌ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ ಮತ್ತು ಈ ಸಿನಿಮಾದ ಅಚ್ಚರಿ ಕೂಡಾ. ಅಜನೀಶ್‌ ಲೋಕನಾಥ್‌ ಸಂಗೀತದ ಹಾಡುಗಳು ಸನ್ನಿವೇಶಕ್ಕೆ ತಕ್ಕಂತಿವೆ.

 

-ರವಿ ರೈ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.