‘ವರ್ಣಪಟಲ’ ಚಿತ್ರ ವಿಮರ್ಶೆ: ಆಟಿಸಂ ಸುತ್ತ ‘ವರ್ಣ’ಚಿತ್ರ


Team Udayavani, Apr 9, 2022, 10:58 AM IST

varnapatala

ಭಗವಂತನ ಸೃಷ್ಟಿ ತರ್ಕಕ್ಕೆ ನಿಲುಕದ್ದು. ಪ್ರಪಂಚದಲ್ಲಿ ಒಬ್ಬರಂತೆ ಬೇರೊಬ್ಬರಿಲ್ಲ ಅಂದ ಮೇಲೆ ಎಲ್ಲರೂ ಒಂದೇ ಆಗಲು ಹೇಗೆ ಸಾಧ್ಯ. ಭಾರತದಲ್ಲಿ 100ಕ್ಕೆ ಎರಡು ಮಕ್ಕಳಲ್ಲಿ “ಆಟಿಸಂ’ನ ಗುಣವಿರುತ್ತದೆ. “ಆಟಿಸಂ’ ಗುಣವಿರುವ ಮಕ್ಕಳು ಎಲ್ಲರಿಗಿಂತ ಭಿನ್ನವಾಗಿರುತ್ತಾರೆ. ಇಂತಹ ವಿಶಿಷ್ಟ ಮಕ್ಕಳ ಕಥೆಯನ್ನು ಹೇಳುವುದೇ “ವರ್ಣಪಟಲ’.

ಮಗಳು ಆಟಿಸಂ ಗುಣಗಳನ್ನು ಹೊಂದಿದ್ದಾಳೆ ಎಂದು ತಿಳಿದಾಗ ಪೋಷಕರ ಮನೋವೇದನೆ ಏನು? ಗಂಡನ ನಿರಾಕರಣೆಗೆ ಒಳಗಾದ ಹೆಣ್ಣು ತನ್ನ ಮಗಳನ್ನು ಸಮಾಜದ ಎದುರು ಹೇಗೆ ನಿಲ್ಲಿಸುತ್ತಾಳೆ ಎಂಬ ಎಳೆಯೇ “ವರ್ಣಪಟಲ’.

ನಿರ್ದೇಶಕ ಚೇತನ್‌ “ಆಟಿಸಂ’ ಹೊಂದಿರುವ ಒಂದು ಮಗು ಹಾಗೂ ಇಡೀ ಕುಟುಂಬದ ನಿಜ ಜೀವನದ ಅನುಭವಗಳನ್ನು ತೆರೆಮೇಲೆ ತರಲು ಯಶಸ್ವಿಯಾಗಿದ್ದಾರೆ. ತಾಯಿ ಪ್ರೀತಿ, ದುಗುಡ, ಸಮಾಜ ಅವಳನ್ನು ಕಾಣುವ ರೀತಿ ಎಲ್ಲಾ ಭಾವನೆಗಳನ್ನು ಮನ ಮುಟ್ಟುವಂತೆ ಚಿತ್ರಿಸಲಾಗಿದೆ. ಸಮಾಜದಲ್ಲಿ ಆಟಿಸಂ ಕುರಿತಾಗಿ ಇರುವ ತಪ್ಪು ಕಲ್ಪನೆಗಳನ್ನು ದೂರವಾಗಿಸಿ, ಎಲ್ಲರೂ ಸಮಾನವಾಗಿ ಬದುಕುವ ಅವಕಾಶವಿದೆ ಎಂದು ತಿಳಿ ಹೇಳುವ ಪ್ರಯತ್ನ “ವರ್ಣಪಟಲ’ ಚಿತ್ರ ತಂಡದ್ದಾಗಿದೆ.

ಇದನ್ನೂ ಓದಿ:ಚಿತ್ರ ವಿಮರ್ಶೆ: ದೃಷ್ಟಿಕೋನ ಬದಲಿಸುವ ‘ತ್ರಿಕೋನ’

ಚಿತ್ರದ ಜೀವಾಳ ನಿತ್ಯಾ ಪಾತ್ರಧಾರಿ ಜ್ಯೋತಿ ರೈ. ತಾಯಿ ಪಾತ್ರಕ್ಕೆ ಅರ್ಥ ತುಂಬುವಲ್ಲಿ ಯಶಸ್ವಿಯಾಗಿದ್ದಾರೆ. ಬಾಲ ಕಲಾವಿದರಾದ ಅಂಶಿಕಾ ಶೆಟ್ಟಿ, ಧನಿಕಾ ಹೆಗ್ಡೆ ತಮ್ಮ ಪಾತ್ರಗಳನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿತ್ರದಲ್ಲಿ ಸುಹಾಸಿನಿ ವೈದ್ಯೆಯಾಗಿ ಕಾಣಿಸಿಕೊಂಡಿದ್ದು, ಎಂದಿನಂತೆ ಮನೋಜ್ಞ ಅಭಿನಯ ಅವರದ್ದಾಗಿದೆ.ಇನ್ನು ಛಾಯಾಗ್ರಾಹಕ ಗಣೇಶ್‌ ಹೆಗ್ಡೆ ಕ್ಯಾಮರ ಮೂಲಕ ಪ್ರಕೃತಿಯ ಸೌಂದರ್ಯವನ್ನು ಮನೋಹರವಾಗಿ ಕಟ್ಟಿಕೊಟ್ಟಿದ್ದಾರೆ.

ವಾಣಿ ಭಟ್ಟ

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.