ರುಧೀರ ಕಣಿವೆ ಚಿತ್ರ ವಿಮರ್ಶೆ; ಕಣಿವೆಯಲ್ಲಿ ಹಾರರ್‌ ಅನುಭವ


Team Udayavani, Jan 1, 2023, 12:01 PM IST

rudhira kanive movie review

ಅದೊಂದು ನಿರ್ಜನ ಪ್ರದೇಶ. ಮನಮೋಹಕ ಪ್ರಾಕೃತಿಕ ಸೌಂದರ್ಯ ಮತ್ತು ಹೇರಳವಾದ ಸಂಪತ್ತನ್ನು ತನ್ನೊಳಗೆ ಹುದುಗಿಸಿಕೊಟ್ಟುಕೊಂಡ ಆ ಜಾಗದ ಹೆಸರು “ರುಧೀರ ಕಣಿವೆ. ಜನಸಾಮಾನ್ಯರು ಹೋಗಲು ಭಯಪಡುವ ಇಂಥ ಜಾಗದ ಮೇಲೆ ನಿಧಿ ಕಳ್ಳರ ಕಣ್ಣು ಬೀಳುತ್ತದೆ. “ರುಧೀರ ಕಣಿವೆ’ಯ ಒಡಲಿನಲ್ಲಿರುವ ಸಂಪತ್ತಿಗೆ ಕನ್ನ ಹಾಕಲು ತಂಡ ಕೂಡಾ ಸಿದ್ಧವಾಗುತ್ತದೆ. ಕಣಿವೆಯ ಒಡಲನ್ನು ಬಗೆಯಲು ಅಲ್ಲಿಗೆ ಹೋದವರಿಗೆ ಅನಿರೀಕ್ಷಿತ ಆಘಾತಗಳು ಒಂದರ ಹಿಂದೊಂದು ಎದುರಾಗುತ್ತದೆ. ಅಂತಿಮವಾಗಿ ಸಂಪತ್ತಿನ ಮೇಲೆ ಕಣ್ಣಿಟ್ಟು, “ರುಧೀರ ಕಣಿವೆ’ಗೆ ಕಾಲಿಟ್ಟವರ ಕಥೆ ಏನಾಗುತ್ತದೆ ಎಂಬುದೇ ಈ ವಾರ ತೆರೆಗೆ ಬಂದಿರುವ “ರುಧೀರ ಕಣಿವೆ’ ಸಿನಿಮಾದ ಕ್ಲೈಮ್ಯಾಕ್ಸ್‌.

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ರುಧೀರ ಕಣಿವೆ’ ಒಂದು ಹಾರರ್‌ ಕಂ ಥ್ರಿಲ್ಲರ್‌ ಶೈಲಿಯ ಸಿನಿಮಾ. ಇದರ ನಿಧಿ ಹುಡುಕಾಟದ ಜೊತೆಗೊಂದು ಪುನರ್ಜನ್ಮದ ಪ್ರೇಮಕಥೆಯನ್ನು ಜೋಡಿಸಿ ಚಿತ್ರವನ್ನು ತೆರೆಮೇಲೆ ತರಲಾಗಿದೆ. ಒಂದಷ್ಟು ಸಸ್ಪೆನ್ಸ್‌, ಥ್ರಿಲ್ಲರ್‌, ಹಾರರ್‌ ಅಂಶಗಳ ಜೊತೆಗೆ ಹಾಡು, ಡ್ಯಾನ್ಸ್‌, ಕಾಮಿಡಿ ಹೀಗೆ ಎಲ್ಲ ತರದ ಕಮರ್ಷಿಯಲ್‌ ಎಂಟರ್‌ ಟೈನ್ಮೆಂಟ್‌ ಪ್ಯಾಕೇಜ್‌ ಸಿನಿಮಾದಲ್ಲಿದೆ.

ಒಂದು ಪ್ರಯತ್ನವಾಗಿ ಚಿತ್ರತಂಡದ ಶ್ರಮವನ್ನು ಮೆಚ್ಚಬಹುದು. ಚಿತ್ರದ ನಿರೂಪO ಮತ್ತು ವೇಗ ಇನ್ನಷ್ಟು ಹೆಚ್ಚಾಗಿದ್ದರೆ, “ರುಧೀರ ಕಣಿವೆಯ’ ಥ್ರಿಲ್ಲಿಂಗ್‌ ಅನುಭವ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿದ್ದವು. ನವ ಪ್ರತಿಭೆ ಕಾರ್ತಿಕ್‌, ನಾಯಕಿಯರಾದ ದಿಶಾ ಪೂವಯ್ಯ, ಅಮೃತಾ, ಅನುಭವಿ ಕಲಾವಿದರಾದ ಶೋಭರಾಜ್‌, ಬಲರಾಜವಾಡಿ, ಹನುಮಂತೇಗೌಡ ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ.

ಸ್ವಾಮಿ ಛಾಯಾಗ್ರಹಣ “ರುಧೀರ ಕಣಿವೆ’ಯ ಅಂದವನ್ನು ತೆರೆಮೇಲೆ ಹೆಚ್ಚಿಸಿದೆ. ಸಂಕಲನ ಮತ್ತು ಹಿನ್ನೆಲೆ ಸಂಗೀತ ಕಡೆಗೆ ಚಿತ್ರತಂಡ ಇನ್ನಷ್ಟು ಗಮನ ಕೊಡಬಹುದಿತ್ತು. ಒಟ್ಟಾರೆ “ರುಧೀರ ಕಣಿವೆ’ ಹೊಸಬರ ಪ್ರಯತ್ನವಾಗಿದ್ದು, ಕಣಿವೆಗೆ ಕನ್ನ ಹಾಕಲು ಹೋಗುವವರ ಹಾರರ್‌-ಥ್ರಿಲ್ಲರ್‌ ಜರ್ನಿ ಹೇಗಿರಲಿದೆ ಎಂಬುದನ್ನು ತಿಳಿಯುವ ಕುತೂಹಲವಿದ್ದರೆ, ವಾರಾಂತ್ಯದಲ್ಲಿ ಒಮ್ಮೆ “ರುಧೀರ ಕಣಿವೆ’ಯ ಕಡೆಗೆ ಮುಖ ಮಾಡಬಹುದು

ಜಿ. ಎಸ್‌ ಕಾರ್ತಿಕ ಸುಧನ್

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lineman movie review

Lineman movie review; ಜಾಲಿರೈಡ್‌ ನ‌ಲ್ಲಿ ‘ಲೈನ್‌ಮ್ಯಾನ್‌’

Dilkush Movie Review

Dilkush Movie Review; ತ್ರಿಕೋನ ಪ್ರೇಮದಲ್ಲಿ ಹೊಸಬರ ಆಟ

Mehabooba-Movie-Review

Mehabooba Movie Review; ತಿರುವುಗಳ ಹಾದಿಯಲ್ಲಿ ಪ್ರೇಮಪಯಣ

chow chow bath movie review

Chow Chow Bath Review; ಹರೆಯದ ಮನಸುಗಳ ಖಾಸ್‌ಬಾತ್‌

jog 101 kannada movie review

JOG 101 movie review; ಸುಂದರ ಜೋಗದಲ್ಲಿ ನಿಗೂಢ ಹೆಜ್ಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.