ಸರಸ + ವಿರಸ = ಪಾದರಸ


Team Udayavani, Aug 12, 2018, 11:20 AM IST

padarasa.jpg

ಪರಮ ನೀಚ ಅವನು. ಯಾರಿಗೋ ಕೆಲಸ ಕೊಡಿಸುತ್ತೀನಿ ಅಂತ ಅವರಿಂದ ದುಡ್ಡು ಪಡೆದು ಕುಡಿದು ಮಜಾ ಮಾಡುತ್ತಾನೆ. ತನ್ನ ಬೆಸ್ಟ್‌ ಫ್ರೆಂಡ್‌ ಒಬ್ಬ ಒಂದು ಹುಡುಗಿಯನ್ನು ಇಷ್ಟಪಟ್ಟಿದ್ದಾನೆ ಎಂದು ಗೊತ್ತಿದ್ದರೂ, ಆ ಹುಡುಗಿಯನ್ನೇ ಪಟಾಯಿಸಿ ತನ್ನ ಸ್ನೇಹಿತನಿಗೇ ಮೋಸ ಮಾಡುತ್ತಾನೆ. ಒಂದು ಲಕ್ಷ ದುಡ್ಡು ಸಿಗುತ್ತದೆ ಎಂಬ ಕಾರಣಕ್ಕೆ ತನ್ನ ಸ್ನೇಹಿತನ ಮಗನನ್ನೇ ಮಾರಾಟ ಮಾಡಿಬಿಡುತ್ತಾನೆ. ಅವನ ಈ ನೀಚ ಬುದ್ಧಿಯ ಬಗ್ಗೆ ಗೊತ್ತಾಗಿ ಅವನನ್ನು ಇಷ್ಟಪಟ್ಟ ಹುಡುಗಿ ದೂರವಾಗುತ್ತಾಳೆ.

ಪೊಲೀಸ್‌ ಅಧಿಕಾರಿಯೊಬ್ಬ ಅವನನ್ನು ಹೊಡೆದು ಸಾಯಿಸಬೇಕು ಎಂದು ಸಿಟ್ಟಾಗುತ್ತಾನೆ. ಅಷ್ಟೇ ಅಲ್ಲ, ಮಗು ಕಳೆದುಕೊಂಡಿರುವ ಅವನ ಸ್ನೇಹಿತ ಪೊಲೀಸರಿಗೇ ದೂರು ಕೊಡುವುದಕ್ಕೆ ಮುಂದಾಗುತ್ತಾನೆ. ಇಷ್ಟೆಲ್ಲಾ ಅವನು ಮಾಡುವುದಾದರೂ ಯಾಕೆ? ಈ ಪ್ರಶ್ನೆಗಳಿಗೆ ಉತ್ತರ “ಪಾದರಸ’ದಲ್ಲಿದೆ. “ಪಾದರಸ” ಚಿತ್ರವು ಪಾದರಸದಂತಹ ವ್ಯಕ್ತಿತ್ವದ ಪಾದರಸ ಎಂಬ ಯುವಕನ ಸಿನಿಮಾ. ಕುಡಿತ ಬಿಟ್ಟರೆ, ಆತ ಒಂದು ನಿಮಿಷ ಕುಳಿತಲ್ಲ ಕೂರುವುದಿಲ್ಲ, ನಿಂತಲ್ಲಿ ನಿಲ್ಲುವುದಿಲ್ಲ.

ಅವನ ಮನಸ್ಸು, ಯೋಚನೆ ಇನ್ನೂ ಅತ್ತತ್ತ. ಇಂಥವನೊಬ್ಬ ಮಾಡಬಾರದ್ದನ್ನು ಮಾಡಿ, ಸಮಾಜದ ದೃಷ್ಟಿಯಲ್ಲಿ, ಪ್ರೇಕ್ಷಕನ ದೃಷ್ಟಿಯಲ್ಲಿ ಪರಮನೀಚನೆನೆಸಿಕೊಳ್ಳುತ್ತಾನೆ. ಆದರೆ, ಅವನು ನಿಜಕ್ಕೂ ಇರುವುದೇ ಹಾಗಾ? ಅಥವಾ ಯಾವುದಾದರೂ ಕಾರಣಕ್ಕೆ ಹಾಗೆಲ್ಲಾ ಆಡುತ್ತಿರುತ್ತಾನಾ? ಹಾಗೆಲ್ಲಾ ಮಾಡಿದರೂ ಕಾರಣವೇನು? ಈ ಪ್ರಶ್ನೆಗಳನ್ನು ಕೇಳುವುದೂ ಸರಿಯಲ್ಲ, ಉತ್ತರ ಹೇಳುವುದೂ ಸರಿಯಲ್ಲ.

ಬಹುಶಃ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್‌, ಇಂಥದ್ದೊಂದು ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನುವುದು ಬಿಟ್ಟರೆ, ಚಿತ್ರದಲ್ಲಿ ವಿಶೇಷವೇನಿಲ್ಲ. ಇದುವರೆಗೂ ಮಾಡದಂತಹ ಒಂದು ವಿಭಿನ್ನ ಪಾತ್ರದಲ್ಲಿ ವಿಜಯ್‌ ಕಾಣಿಸಿಕೊಂಡಿದ್ದಾರೆ. ಅದು ಅವರಿಗೆ ಸ್ವಲ್ಪ ಹೆಚ್ಚಾದಂತೆ ಕಾಣುತ್ತದೆ. ಆದರೂ ವಿಜಯ್‌ ತಮ್ಮ ಶಕ್ತಿಮೀರಿ, ಪಾತ್ರಕ್ಕೆ ನ್ಯಾಯ ಸಲ್ಲಿಸುವುದಕ್ಕೆ ಒದ್ದಾಡಿದ್ದಾರೆ. ಇದೊಂದು ಅಂಶ ಬಿಟ್ಟರೆ, ಚಿತ್ರದಲ್ಲಿ ಹೊಸತನವಾಗಲೀ, ವಿಶೇಷತೆಗಳಾಗಲೀ ಕಡಿಮೆಯೇ.

ಅದರ ಜೊತೆಗೆ ವಿಪರೀತ ಫ್ಲಾಶ್‌ಬ್ಯಾಕ್‌ಗಳು, ಬೋರ್‌ ಹೊಡೆಸುವ ದೃಶ್ಯಗಳು, ಅತಿರೇಕ ಎನಿಸುವ ಮಾತುಗಳು ಇವೆಲ್ಲವೂ ಪ್ರೇಕ್ಷಕರನ್ನು ಸಾಕಷ್ಟು ಕಾಡುತ್ತದೆ. ಅದರಲ್ಲೂ ಚಿತ್ರದಲ್ಲಿ ಒಂದು ಕ್ಷಣ ಮೌನವೆನ್ನುವುದಿಲ್ಲ. ಇಡೀ ಚಿತ್ರದಲ್ಲಿ ಎಲ್ಲಾ ಪಾತ್ರಗಳಿಂದ ಮಾತಾಡಿಸಿಯೇ ಆಡಿಸುತ್ತಾರೆ ನಿರ್ದೇಶಕರು. ಇದರಿಂದ ಸುಸ್ತಾಗುವುದು ಪಾತ್ರಧಾರಿಗಳಲ್ಲ, ಪ್ರೇಕ್ಷಕರು. ಇನ್ನು ಚಿತ್ರದಲ್ಲಿರುವ ಒಳ್ಳೆಯ ಅಂಶಗಳ ಬಗ್ಗೆ ಹೇಳುವುದಾದರೆ, ಎ.ಟಿ. ರವೀಶ್‌ ಸಂಗೀತ ನಿರ್ದೇಶನದಲ್ಲಿ ಎರಡು ಹಾಡುಗಳು ಚೆನ್ನಾಗಿವೆ.

ಚಿತ್ರ: ಪಾದರಸ
ನಿರ್ದೇಶನ: ಹೃಷಿಕೇಶ್‌ ಜಂಬಗಿ
ನಿರ್ಮಾಣ: ಹಾರ್ಟ್‌ ಆ್ಯಂಡ್‌ ಸೋಲ್‌ ಮೀಡಿಯಾ ಸರ್ವೀಸಸ್‌
ತಾರಾಗಣ: ಸಂಚಾರಿ ವಿಜಯ್‌, ವೈಷ್ಣವಿ ಮೆನನ್‌, ನಿರಂಜನ್‌ ದೇಶಪಾಂಡೆ, ಗುರುದತ್‌, ಜೈಜಗದೀಶ್‌, ಶೋಭರಾಜ್‌ ಮುಂತಾದವರು

* ಚೇತನ್‌ ನಾಡಿಗೇರ್‌

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.