ರಿಲ್ಯಾಕ್ಸ್‌ ಮೂಡ್‌ನ‌ಲ್ಲಿ ಸತ್ಯನ ಸಸ್ಪೆನ್ಸ್‌ ಸ್ಟೋರಿ!

ಚಿತ್ರ ವಿಮರ್ಶೆ

Team Udayavani, Nov 17, 2019, 6:03 AM IST

Relax-Satya

ಲೈಫ್ನಲ್ಲಿ ಸೆಟ್ಲ ಆಗಬೇಕು ಅಂದ್ರೆ ಹಣ ಇರಬೇಕು. ಆದ್ರೆ ಆ ಹಣ ಮಾಡೋಕೆ ತುಂಬ ಕಷ್ಟಪಡುವಂತಿರಬಾರದು. ಅತಿ ಸುಲಭ ಮಾರ್ಗದಲ್ಲಿ ಹಣ ಮಾಡೋದಕ್ಕೆ ಏನಾದರೊಂದು ಐಡಿಯಾ ಇರಬೇಕು. ಅಂಥದ್ದೊಂದು ಐಡಿಯಾ ಅಂದ್ರೆ, ಹಣ ಇದ್ದವರನ್ನ ಕಿಡ್ನ್ಯಾಪ್‌ ಮಾಡೋದು. ಐಡಿಯಾ ಸ್ವಲ್ಪ ಹಳೆಯದಾದ್ರೂ, ಕಿಡ್ನಾಪ್‌ ಮಾಡೋ ಸ್ಟೈಲ್‌ನಲ್ಲಿ ಹೊಸದೇನಾದ್ರೂ ಇದ್ದರೆ, ಆ ಕಿಡ್ನ್ಯಾಪ್‌ ಒಂದಷ್ಟು ಥ್ರಿಲ್ಲಿಂಗ್‌ ಆಗಿರುತ್ತದೆ.

ಅಂಥದ್ದೊಂದು ಕಿಡ್ನ್ಯಾಪ್‌ ಸ್ಟೋರಿಯ ರೋಚಕತೆಯನ್ನು ಕಣ್ತುಂಬಿಕೊಳ್ಳುವ ಮನಸ್ಸಿದ್ದರೆ, ನೀವು ಥಿಯೇಟರ್‌ನಲ್ಲಿ ಒಂದಷ್ಟು “ರಿಲ್ಯಾಕ್ಸ್‌’ ಆಗೋದಂತೂ “ಸತ್ಯ’. ಹೀರೋ-ವಿಲನ್‌ ಇಬ್ಬರೂ ಸೇರಿ ಹಣಕ್ಕಾಗಿ ಒಂದು ಹುಡುಗಿಯನ್ನು ಕಿಡ್ನ್ಯಾಪ್‌ ಮಾಡಲು ಪ್ಲಾನ್‌ ಮಾಡುತ್ತಾರೆ. ಆ ಪ್ಲಾನ್‌ ಅನ್ನು ಹೇಗೆ ಜಾರಿಗೊಳಿಸುತ್ತಾರೆ. ಕಿಡ್ನ್ಯಾಪ್‌ ಆಗುವ ಹುಡುಗಿ ಯಾರು, ಅವಳ ಹಿನ್ನೆಲೆ ಏನು ಅನ್ನೋದು ಸಸ್ಪೆನ್ಸ್‌.

ಕಿಡ್ನ್ಯಾಪ್‌ ನಂತರ ಮುಂದೇನಾಗುತ್ತದೆ, ನಿಜವಾಗಿಯೂ “ರಿಲ್ಯಾಕ್ಸ್‌” ಆಗೋದು ಯಾರು ಅನ್ನೋದು ಕ್ಲೈಮ್ಯಾಕ್ಸ್‌! ಇದು ಈ ವಾರ ತೆರೆಗೆ ಬಂದಿರುವ “ರಿಲ್ಯಾಕ್ಸ್‌ ಸತ್ಯ’ ಚಿತ್ರದ ಕಥಾಹಂದರ. ಒಂದು ಮಾಮೂಲಿ ಕಿಡ್ನ್ಯಾಪ್‌ ಸ್ಟೋರಿಯನ್ನು ಸಸ್ಪೆನ್ಸ್‌-ಥ್ರಿಲ್ಲಿಂಗ್‌ ಅಂಶಗಳನ್ನು ಇಟ್ಟುಕೊಂಡು, ಎಷ್ಟರ ಮಟ್ಟಿಗೆ ರೋಚಕವಾಗಿ ಕಟ್ಟಿಕೊಡಬಹುದು ಎಂಬುದಕ್ಕೆ “ರಿಲ್ಯಾಕ್ಸ್‌ ಸತ್ಯ’ ಇತ್ತೀಚಿನ ತಾಜಾ ಉದಾಹರಣೆ.

ಸಂಪೂರ್ಣ ಚಿತ್ರದ ಕಥೆ ಕೇವಲ ನಾಲ್ಕೈದು ಪಾತ್ರಗಳ ಸುತ್ತ ಸುತ್ತುವುದರಿಂದ, ಕಲಾವಿದರ ಅಭಿನಯ ಮತ್ತು ನಿರೂಪಣೆಯೇ ಇಡೀ ಚಿತ್ರಕ್ಕೆ ಜೀವಾಳ. ಇನ್ನು ನಾಯಕ ಪ್ರಭು ಮುಂಧ್ಕುರ್‌ ಮತ್ತು ಖಳ ನಾಯಕ ಉಗ್ರಂ ಮಂಜು ಸವಾಲಿಗೆ ಬಿದ್ದವರಂತೆ, ತಮ್ಮ ಅಭಿನಯದ ಮೂಲಕ ಇಡೀ ಚಿತ್ರಕ್ಕೆ ಹೆಗಲಾಗಿದ್ದಾರೆ. ಇಬ್ಬರ ನಡುವಿನ ದೃಶ್ಯಗಳು, ಸಂಭಾಷಣೆ ನೋಡುಗರಿಗೆ ಅಲ್ಲಲ್ಲಿ ಸಸ್ಪೆನ್ಸ್‌-ಥ್ರಿಲ್ಲಿಂಗ್‌ ಜೊತೆಗೆ, ಕಾಮಿಡಿಯ ಕಚಗುಳಿಯನ್ನೂ ಕೊಡುತ್ತದೆ. ಉಳಿದಂತೆ ಮಾನ್ವಿತಾ ಕಾಮತ್‌ ಅವರದ್ದು ಅಚ್ಚುಕಟ್ಟಾದ ಅಭಿನಯ.

ಚಿತ್ರದ ಮೊದಲಾರ್ಧ ಅಲ್ಲಲ್ಲಿ ಮಂದಗತಿಯಲ್ಲಿ ಸಾಗಿದರೂ, ಚಿತ್ರದ ಛಾಯಾಗ್ರಹಣ, ಹಿನ್ನೆಲೆ ಸಂಗೀತ ಅದೆಲ್ಲವನ್ನು ಮರೆ ಮಾಚುತ್ತದೆ. ಚಿತ್ರದ ತಾಂತ್ರಿಕ ಕಾರ್ಯಗಳು ಗಮನ ಸೆಳೆಯುತ್ತದೆ. ಕೆಲವೊಂದು ಸಣ್ಣ-ಪುಟ್ಟ ಲೋಪಗಳನ್ನು ಬದಿಗಿಟ್ಟು ನೋಡುವುದಾದರೆ, “ರಿಲ್ಯಾಕ್ಸ್‌ ಸತ್ಯ’ ಕೊಟ್ಟ ದುಡ್ಡಿಗೆ ಮೋಸವಿಲ್ಲದೆ ಮನರಂಜಿಸುತ್ತಾನೆ. ಸಸ್ಪೆನ್ಸ್‌-ಥ್ರಿಲ್ಲರ್‌ ಚಿತ್ರಗಳ ಒಲವಿರುವವರು ವಾರಾಂತ್ಯದಲ್ಲಿ “ರಿಲ್ಯಾಕ್ಸ್‌ ಸತ್ಯ’ನನ್ನು ಒಮ್ಮೆ ನೋಡಿಬರಲು ಅಡ್ಡಿಯಿಲ್ಲ.

ಚಿತ್ರ: ರಿಲ್ಯಾಕ್ಸ್‌ ಸತ್ಯ
ನಿರ್ದೇಶನ: ನವೀನ್‌ ರೆಡ್ಡಿ. ಜಿ
ನಿರ್ಮಾಣ: ರೆಡ್‌ ಡ್ರ್ಯಾಗನ್‌ ಫಿಲಂಸ್‌
ತಾರಾಗಣ: ಪ್ರಭು ಮುಂಧ್ಕುರ್‌, ಮಾನ್ವಿತಾ ಹರೀಶ್‌, ಉಗ್ರಂ ಮಂಜು, ಕಡ್ಡಿಪುಡಿ ಚಂದ್ರು ಮತ್ತಿತರರು.

* ಜಿ.ಎಸ್‌ ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.