‘ಸೀತಾಯಣ’ ಚಿತ್ರ ವಿಮರ್ಶೆ: ಥ್ರಿಲ್ಲರ್‌ ಟ್ರ್ಯಾಕ್‌ ನಲ್ಲಿ ಪ್ರೇಮಾಯಣ


Team Udayavani, May 28, 2022, 12:18 PM IST

‘ಸೀತಾಯಣ’ ಚಿತ್ರ ವಿಮರ್ಶೆ: ಥ್ರಿಲ್ಲರ್‌ ಟ್ರ್ಯಾಕ್‌ ನಲ್ಲಿ ಪ್ರೇಮಾಯಣ

ಆತ ಜೀವನದಲ್ಲಿ ಏನಾದರೂ ಸಾಧಿಸಬೇಕೆಂಬ ಛಲವಿರುವ ಹುಡುಗ. ನೋಡಲು ಚಾಕೋಲೆಟ್‌ ಬಾಯ್‌ನಂತೆ ಕಾಣುವ ಜೊತೆಗೆ ಅಷ್ಟೇ ರಫ್ ಆ್ಯಂಡ್‌ ಟಫ್ ಆಗಿರುವ ಈ ಹುಡುಗನ ಜೀವನದಲ್ಲಿ ಹುಡುಗಿಯೊಬ್ಬಳು ಪ್ರವೇಶಿಸಿ, ಆತನನ್ನು ಪ್ರೀತಿಸುವಂತೆ ದುಂಬಾಳು ಬೀಳುತ್ತಾಳೆ. ಕೊನೆಗೂ ಆಕೆಯ ಪ್ರೀತಿಗೆ ಮನಸೋಲುವ ಹುಡುಗ ಮನೆಯವರ ಸಮ್ಮತಿ ಪಡೆದು ಪ್ರೀತಿಸಿದ ಹುಡುಗನನ್ನೇ ವರಿಸುತ್ತಾನೆ.  ಎರಡು-ಮೂರು ಸಾಂಗ್‌, ಬ್ಯಾಂಕಾಕ್‌ನಲ್ಲಿ ಹನಿಮೂನ್‌ ಟ್ರಿಪ್‌, ಲವ್‌-ರೊಮ್ಯಾನ್ಸ್‌ ಎಲ್ಲವೂ ಸುಖವಾಗಿ, ಸುಸೂತ್ರವಾಗಿ ನಡೆಯುತ್ತದೆ ಎನ್ನುವಾಗಲೇ ಅನಿರೀಕ್ಷಿತ ಆಘಾತವೊಂದು ಹುಡುಗನ ಜೀವನದಲ್ಲಿ ಎದುರಾಗುತ್ತದೆ. ಅಲ್ಲಿಯವರೆಗೂ ರೊಮ್ಯಾಂಟಿಕ್‌ ಟ್ರ್ಯಾಕ್‌ನಲ್ಲಿ ಸಾಗುತ್ತಿದ್ದ ಕಥೆ, ಕೊಂಚ ಟ್ವಿಸ್ಟ್‌-ಟರ್ನ್ ತೆಗೆದುಕೊಂಡು ಸಸ್ಪೆನ್ಸ್‌-ಆ್ಯಕ್ಷನ್‌ ಟ್ರ್ಯಾಕ್‌ಗೆ ಬಂದು ನಿಲ್ಲುತ್ತದೆ. ಕೊನೆಗೆ ಕ್ಲೈಮ್ಯಾಕ್ಸ್‌ನಲ್ಲಿ ಎಲ್ಲದಕ್ಕೂ ಉತ್ತರ ಸಿಗುತ್ತದೆ. ಇದು ಈ ವಾರ ತೆರೆಗೆ ಬಂದಿರುವ “ಸೀತಾಯಣ’ ಸಿನಿಮಾದ ಕಥೆಯ ಒಂದು ಎಳೆ.

ಒಂದು ಲವ್‌ಸ್ಟೋರಿಯಲ್ಲಿ ಒಂದಷ್ಟು ಸಸ್ಪೆನ್ಸ್‌-ಆ್ಯಕ್ಷನ್‌ ಅಂಶಗಳನ್ನು ಇಟ್ಟುಕೊಂಡು ಜೊತೆಯಲ್ಲಿ ಒಂದಷ್ಟು ಟ್ವಿಸ್ಟ್‌- ಟರ್ನ್ ಸೇರಿಸಿ ಹಿರಿಯರು (ಪೋಷಕರು) ಮತ್ತು ಕಿರಿಯರು (ಯುವಕರು) ಎರಡೂ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುವಂತೆ “ಸೀತಾಯಣ’ ಚಿತ್ರವನ್ನು ತೆರೆಗೆ ತಂದಿದ್ದಾರೆ ನಿರ್ದೇಶಕ ಪ್ರಭಾಕರ್‌ ಆರಿಪ್ಕಾ.

ಇದನ್ನೂ ಓದಿ:‘ವೀಲ್‌ ಚೇರ್‌ ರೋಮಿಯೋ’ ಚಿತ್ರ ವಿಮರ್ಶೆ; ವೀಲ್‌ಚೇರ್‌ನಿಂದ ಮೇಲೇಳುವ ಸಿನಿಮಾವಿದು…

ಚಿತ್ರದ ಕಥಾಹಂದರ ಚೆನ್ನಾಗಿದ್ದರೂ, ಚಿತ್ರದ ನಿರೂಪಣೆ ಮತ್ತು ಸಂಭಾಷಣೆ ಚಿತ್ರದ ಓಟಕ್ಕೆ ಅಲ್ಲಲ್ಲಿ ತೊಡಕಾದಂತೆ ಕಾಣುತ್ತದೆ. ಕನ್ನಡ ಮತ್ತು ತೆಲುಗು ಎರಡೂ ಭಾಷೆಯಲ್ಲಿ “ಸೀತಾಯಣ’ ಚಿತ್ರ ನಿರ್ಮಾಣವಾಗಿದ್ದರೂ, ಚಿತ್ರದ ಕಲಾವಿದರು ಮತ್ತು ತಂತ್ರಜ್ಞರಲ್ಲಿ ತೆಲುಗಿನವರದ್ದೇ ಪಾರಮ್ಯ ತೆರೆಮುಂದೆ ಮತ್ತು ತೆರೆಹಿಂದೆ ಹೆಚ್ಚಾಗಿ ಕಾಣುತ್ತದೆ.  ಅನೇಕ ಕಲಾವಿದರ ಡೈಲಾಗ್‌ ಡೆಲಿವರಿ ತೆರೆಮೇಲೆ ಕೆಲವು ಕಡೆಗಳಲ್ಲಿ ತುಂಬ ಅಸಹಜ ಎನಿಸುವಂತಿದೆ.

ಇನ್ನು ಚೊಚ್ಚಲ ಚಿತ್ರದಲ್ಲಿ ನಟ ಅಕ್ಷಿತ್‌ ಶಶಿಕುಮಾರ್‌ ತಮ್ಮ ಪಾತ್ರಕ್ಕೆ ಸಾಕಷ್ಟು ಪರಿಶ್ರಮ ಹಾಕಿರುವುದು ತೆರೆಮೇಲೆ ಕಾಣುತ್ತದೆ. ಉಳಿದಂತೆ ನಾಯಕಿ ಅನಹಿತಾ ಭೂಷಣ್‌ ಗ್ಲಾಮರ್‌ ಬೊಂಬೆಯಾಗಿ ತೆರೆಮೇಲೆ ಇದ್ದಷ್ಟು ಹೊತ್ತು ಅಂದವಾಗಿ ಕಾಣುತ್ತಾರೆ. ಉಳಿದಂತೆ ಇತರ ಕಲಾವಿದರ ಬಗ್ಗೆ ಹೆಚ್ಚೇನೂ ಹೇಳುವಂತಿಲ್ಲ.

ಚಿತ್ರದ ಒಂದೆರಡು ಹಾಡುಗಳು ಗುನುಗುವಂತಿದ್ದು, ಚಿತ್ರದ ಛಾಯಾಗ್ರಹಣ, ಸಂಕಲನ, ಕಲರಿಂಗ್‌, ಒಳ್ಳೆಯ ಲೊಕೇಶನ್ಸ್‌ ತೆರೆಮೇಲೆ “ಸೀತಾಯಣ’ವನ್ನು ಕಲರ್‌ಫ‌ುಲ್‌ ಆಗಿ ತೋರುವಂತೆ ಮಾಡಿದೆ. ಅತಿಯಾದ ನಿರೀಕ್ಷೆ ಇಟ್ಟುಕೊಳ್ಳದೆ ವಾರಾಂತ್ಯದಲ್ಲಿ ಒಮ್ಮೆ “ಸೀತಾಯಣ’ ಕಣ್ತುಂಬಿಕೊಂಡು ಬರಲು ಅಡ್ಡಿಯಿಲ್ಲ.

ಜಿ.ಎಸ್‌.ಕೆ. ಸುಧನ್‌

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.