ಅನಿರೀಕ್ಷಿತ ತಿರುವುಗಳ ನಡುವೆ ಮೌನ ಯಾನ


Team Udayavani, Feb 23, 2020, 7:04 AM IST

mounam

ತಂದೆಗೆ ಮಗನೇ ಸರ್ವಸ್ವ, ಮಗನಿಗೆ ಅಪ್ಪನೇ ಪ್ರಪಂಚ. ತಾಯಿ ಇಲ್ಲದಿದ್ದರೂ, ಆ ಕೊರಗು ಬಾರದಂತೆ, ಚಿಕ್ಕಂದಿನಿಂದಲೇ ಮಗನ ಬೇಕು-ಬೇಡಗಳನ್ನು ಸೂಕ್ಷ್ಮವಾಗಿ ಗಮನಿಸುತ್ತ, ಅದಕ್ಕೆ ತಕ್ಕಂತೆ ಮಗನನ್ನು ತಯಾರಿ ಮಾಡಿರುವ ತಂದೆ, ಮಗನಿಗಾಗಿ ಎಲ್ಲವನ್ನೂ ತ್ಯಾಗ ಮಾಡಿರುತ್ತಾನೆ. ಇನ್ನು ಮಗನೂ ಕೂಡ ತಂದೆ ಹಾಕಿದ ಗೆರೆಯನ್ನು ದಾಟದ, ತಂದೆ ಹೇಳಿದಂತೆ ನಡೆಯುವ ಪಿತೃವಾಕ್ಯ ಪರಿಪಾಲಕ!

ತಂದೆ-ಮಗನ ಬಾಂಧವ್ಯದಲ್ಲಿ ಎಲ್ಲವೂ ಸುಸೂತ್ರವಾಗಿ ನಡೆಯುತ್ತಿ ರುವಾಗ, ಇವರಿಬ್ಬರ ಮಧ್ಯೆ ಹುಡುಗಿಯೊಬ್ಬಳ ಪ್ರವೇಶ ವಾಗುತ್ತದೆ. ಅಚ್ಚರಿಯ ತಿರುವೊಂದ ರಲ್ಲಿ ಅಪ್ಪ-ಮಗ ಇಬ್ಬರೂ ಒಂದೇ ಹುಡುಗಿಯನ್ನು ಪ್ರೀತಿಸುತ್ತಿರುತ್ತಾರೆ ಅನ್ನೋ ವಿಷಯ ನೋಡುಗರ ಮುಂದೆ ತೆರೆದುಕೊಳ್ಳುತ್ತದೆ. ಹಾಗಾದ್ರೆ ಮುಂದೇನಾಗುತ್ತೆ ಈ ತ್ರಿಕೋನ ಪ್ರೇಮ ಕಥೆಯಲ್ಲಿ ಹುಡುಗಿ ಯಾರ ಪಾಲಾಗುತ್ತಾಳೆ ಅನ್ನೋದು ಕ್ಲೈಮ್ಯಾಕ್ಸ್‌.

ಇದು ಈ ವಾರ ತೆರೆಗೆ ಬಂದಿರುವ “ಮೌನಂ’ ಚಿತ್ರದ ಕಥಾಹಂದರ. ಫ್ಲ್ಯಾಶ್‌ ಬ್ಯಾಕ್‌ನಿಂದ ಶುರುವಾಗುವ “ಮೌನಂ’ ಕಥೆ ಮೊದಲರ್ಧ ಕೊಂಚ ನಿಧಾನವಾಗಿ ಸಾಗುತ್ತ, ದ್ವಿತಿಯಾರ್ಧದಲ್ಲಿ ಒಂದಷ್ಟು ಟರ್ನ್-ಟ್ವಿಸ್ಟ್‌ಗಳನ್ನು ನೀಡುತ್ತ ಒಂದು ಹಂತಕ್ಕೆ ಬಂದು ನಿಲ್ಲುತ್ತದೆ. ಅದು ಹೇಗೆ ಅನ್ನೋದನ್ನ ಚಿತ್ರದಲ್ಲಿಯೇ ನೋಡಿ ತಿಳಿದುಕೊಳ್ಳುವುದು ಒಳಿತು. ಚಿತ್ರದ ಕಥಾಹಂದರ ಚೆನ್ನಾಗಿದ್ದರೂ, ನಿರ್ದೇಶಕರು ಚಿತ್ರಕಥೆ ಮತ್ತು ನಿರೂಪಣೆಯ ಕಡೆಗೆ ಇನ್ನಷ್ಟು ಗಮನ ಹರಿಸಿದ್ದರೆ, ಚಿತ್ರವನ್ನು ಇನ್ನೂ ಪರಿಣಾಮಕಾರಿಯಾಗಿ ತೆರೆಮೇಲೆ ತರುವ ಸಾಧ್ಯತೆಗಳಿದ್ದವು.

ಅಪ್ಪ-ಮಗನ ಬಾಂಧವ್ಯಕ್ಕೆ ಪ್ರೀತಿಯ ಲೇಪನ ಹಚ್ಚಿರುವ ನಿರ್ದೇಶಕರು ಎಲ್ಲ ವರ್ಗದ ಪ್ರೇಕ್ಷಕರನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಇನ್ನು ಇಡೀ ಚಿತ್ರದಲ್ಲಿ ನಟಿ ಮಯೂರಿ ಮತ್ತು ಅವಿನಾಶ್‌ ತಮ್ಮ ಅಭಿನಯದಲ್ಲಿ ಗಮನ ಸೆಳೆಯುತ್ತಾರೆ. ಕಥೆಯ ಪಾತ್ರಕ್ಕೆ ತಕ್ಕಂತೆ ವಿಭಿನ್ನ ಶೇಡ್‌ಗಳಲ್ಲಿ ಕಾಣಿಸಿಕೊಂಡಿರುವ ಅವಿನಾಶ್‌, ಬೋಲ್ಡ… ಆ್ಯಂಡ್‌ ಬ್ಯೂಟಿಫ‌ುಲ್‌ ಆಗಿ ಕಾಣುವ ಮಯೂರಿ ತಮ್ಮ ಪಾತ್ರವನ್ನು ಚೆನ್ನಾಗಿ ನಿರ್ವಹಿಸಿದ್ದಾರೆ. ಉಳಿದಂತೆ ಬಾಲಾಜಿ, ಕೆಂಪೇಗೌಡ ಮತ್ತಿತರ ಕಲಾವಿದರು ನಿರ್ದೇಶಕರ ಆಶಯಕ್ಕೆ ತಕ್ಕಂತೆ ಅಭಿನಯಿಸಿದ್ದಾರೆ.

ಚಿತ್ರದ ಹಾಡುಗಳು, ಹಿನ್ನೆಲೆ ಸಂಗೀತ ಚೆನ್ನಾಗಿದೆ. ಛಾಯಾಗ್ರಹಣ, ಸಂಕಲನ ಮತ್ತಿತರ ತಾಂತ್ರಿಕ ಕಾರ್ಯಗಳ ಕಡೆಗೆ ಇನ್ನಷ್ಟು ಗಮನ ನೀಡಬಹುದಿತ್ತು. ಕೆಲವೊಂದು ಸಣ್ಣ-ಪುಟ್ಟ ಸಂಗತಿಗಳನ್ನು ಬದಿಗಿಟ್ಟು ನೋಡಿದರೆ, “ಮೌನಂ’ ಒಂದೊಳ್ಳೆ ಪ್ರಯತ್ನ ಎನ್ನಲು ಅಡ್ಡಿಯಿಲ್ಲ. ತಂದೆ-ಮಗನ ಬಾಂಧವ್ಯದ ನಡುವೆ ಹುಡುಗಿಯೊಬ್ಬಳು ಬಂದಾಗ ಏನೆಲ್ಲ ಆಗುತ್ತೆ ಅನ್ನೋದನ್ನ ನೋಡಿ ತಿಳಿಯುವ ಕುತೂಹಲವಿದ್ದರೆ, “ಮೌನಂ’ ಚಿತ್ರವನ್ನು ಒಮ್ಮೆ ನೋಡಿ ಬರಬಹುದು.

ಚಿತ್ರ: ಮೌನಂ
ನಿರ್ದೇಶನ: ರಾಜ್‌ ಪಂಡಿತ್‌
ನಿರ್ಮಾಣ: ಶ್ರೀಹರಿ
ತಾರಾಬಳಗ: ಮಯೂರಿ, ಬಾಲಾಜಿ ಶರ್ಮಾ, ಅವಿನಾಶ್‌, ರಿತೇಶ್‌, ನಯನಾ, ಕೆಂಪೇಗೌಡ, ಹನುಮಂತೇಗೌಡ ಮತ್ತಿತರರು.

* ಜಿ.ಎಸ್‌.ಕೆ ಸುಧನ್‌

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mehabooba-Movie-Review

Mehabooba Movie Review; ತಿರುವುಗಳ ಹಾದಿಯಲ್ಲಿ ಪ್ರೇಮಪಯಣ

chow chow bath movie review

Chow Chow Bath Review; ಹರೆಯದ ಮನಸುಗಳ ಖಾಸ್‌ಬಾತ್‌

jog 101 kannada movie review

JOG 101 movie review; ಸುಂದರ ಜೋಗದಲ್ಲಿ ನಿಗೂಢ ಹೆಜ್ಜೆ

blink kannada movie review

Blink movie review; ಸಮಯದ ಹಿಂದೆ ಸವಾರಿ…

ranganayaka movie review

Ranganayaka Movie Review; ಗುರುವಿನ ಆದಿ ಪುರಾಣ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.