Movie review: ‘ಸೈರನ್‌’ ಸೌಂಡ್‌ಗೆ ಪಾಪಿಗಳು ಅಂದರ್‌!


Team Udayavani, May 27, 2023, 3:08 PM IST

siren

ಪ್ರತಿದಿನ ಸಂಜೆಯಾಗುವುದರೊಳಗೆ ಮನೆ ಸೇರಿಕೊಳ್ಳುವ ಮಗಳು, ಅಂದು ರಾತ್ರಿಯಾದರೂ ಆಕೆಯ ಸುಳಿವೇ ಇಲ್ಲ. ಗಾಬರಿಯಾದ ತಾಯಿ ತಮ್ಮ ಮತ್ತೂಬ್ಬ ಮಗಳ ಜೊತೆ ನಡುರಾತ್ರಿ ಪೊಲೀಸ್‌ ಸ್ಟೇಷನ್‌ನತ್ತ ಹೆಜ್ಜೆ ಹಾಕುತ್ತಾಳೆ. ತನ್ನ ಮಗಳು ಕಾಣೆಯಾಗಿದ್ದಾಳೆ ಹುಡುಕಿಕೊಡಿ ಎಂದು ಪೊಲೀಸರ ಮುಂದೆ ಅಂಗಲಾಚುವ ಆ ತಾಯಿಗೆ ಅಲ್ಲಿನ ಪೊಲೀಸ್‌ ವ್ಯವಸ್ಥೆಯ ಮತ್ತೂಂದು ಮುಖ ಪರಿಚಯವಾಗುತ್ತದೆ. ಅಂತೂ ಕಾಡಿ-ಬೇಡಿ ಪೊಲೀಸರಿಗೆ ದೂರು ಕೊಟ್ಟರೂ, ಬೆಳಗಾಗುವುದರೊಳಗೆ ಕಾಣೆಯಾದ ಮಗಳು ಅರೆಬೆಂದ ಸ್ಥಿತಿಯಲ್ಲಿ ನಗರದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗುತ್ತಾಳೆ.

ಹಾಗಾದರೆ, ಕಾಣೆಯಾದ ಆ ಹುಡುಗಿ ಯಾರು? ಇಂಥದ್ದೊಂದು ಪೈಶಾಚಿಕ ಕೃತ್ಯಕ್ಕೆ ಕಾರಣವೇನು? ಇದರ ಹಿಂದಿನ ಕಾಣದ ಕೈಗಳು ಯಾರು? ಎಂಬುದನ್ನು ಪತ್ತೆ ಹಚ್ಚಲು ಯುವ ಐಪಿಎಸ್‌ ಅಧಿಕಾರಿ ಸಮರ್ಥ್ (ನಾಯಕ)ನನ್ನು ಪೊಲೀಸ್‌ ಇಲಾಖೆ ನೇಮಿಸುತ್ತದೆ. ಈ ಕೃತ್ಯದ ಹೆಜ್ಜೆ ಗುರುತು ಹಿಡಿದು ತನಿಖೆಗೆ ಹೊರಡುವ ನಾಯಕನಿಗೆ ಪ್ರತಿ ಹೆಜ್ಜೆಗೂ ಸವಾಲು ಎದುರಾಗುತ್ತದೆ. ಅದೆಲ್ಲವನ್ನು ಭೇದಿಸಿ ಪಾತಕಿಯ ಮುಖವನ್ನು ಪರಿಚಯಿಸುವ ಹೊತ್ತಿಗೆ ಸಿನಿಮಾ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದಿರುತ್ತದೆ. ಇದು ಈ ವಾರ ತೆರೆಗೆ ಬಂದಿರುವ “ಸೈರನ್‌’ ಚಿತ್ರದ ಕಥಾಹಂದರ. ಅದು ಹೇಗಿದೆ ಎಂಬ ಕುತೂಹಲ ನಿಮಗೂ ಇದ್ದರೆ, ಒಮ್ಮೆ ಥಿಯೇಟರ್‌ನಲ್ಲಿ “ಸೈರನ್‌’ ಸೌಂಡ್‌ ನೋಡಿಬರಲು ಅಡ್ಡಿಯಿಲ್ಲ.

ಆರಂಭದಲ್ಲಿಯೇ ಸಿನಿಮಾದ ಟೈಟಲ್‌, ಪೋಸ್ಟರ್‌, ಟೀಸರ್‌, ಟ್ರೇಲರ್‌ ನೋಡಿದರವರಿಗೆ ಮತ್ತು ಸ್ವತಃ ಚಿತ್ರತಂಡವೇ ಹೇಳಿಕೊಂಡಿರುವಂತೆ “ಸೈರನ್‌’ ಒಂದು ಔಟ್‌ ಆ್ಯಂಡ್‌ ಔಟ್‌ ಇನ್ವೆಸ್ಟಿಗೇಷನ್‌, ಕ್ರೈಂ-ಥ್ರಿಲ್ಲರ್‌ ಶೈಲಿಯ ಸಿನಿಮಾ.

ಹುಡುಗಿಯೊಬ್ಬಳ ಕಣ್ಮರೆ, ನಿಗೂಢ ಸಾವು, ಅದರ ಹಿಂದಿನ ಕಾರಣಗಳು ಮತ್ತು ಕಾರಣರಾದವರ ಸುತ್ತ ಇಡೀ ಸಿನಿಮಾದ ಕಥಾಹಂದರ ಸಾಗುತ್ತದೆ. ತುಂಬ ಗಂಭೀರವಾಗಿ ತೆರೆದುಕೊಳ್ಳುವ “ಸೈರನ್‌’ ಅಷ್ಟೇ ಗಂಭೀರವಾಗಿ ಕ್ಲೈಮ್ಯಾಕ್ಸ್ ವರೆಗೂ ಸಾಗುತ್ತದೆ. ಕ್ರೈಂ-ಥ್ರಿಲ್ಲರ್‌ ಸಿನಿಮಾಗಳಿಗೆ ಕುತೂಹಲವೇ ಜೀವಾಳ. ಅಂಥದ್ದೇ ಒಂದಷ್ಟು ಕುತೂಹಲ, ಟ್ವಿಸ್ಟ್‌-ಟರ್ನ್ಗಳ ಜೊತೆ ಚಿತ್ರವನ್ನು ತೆರೆಮೇಲೆ ತಂದಿದ್ದಾರೆ ನಿರ್ದೇಶಕ ರಾಜ ವೆಂಕಯ್ಯ.

ಇನ್ನು ಯುವನಟ ಪ್ರವೀರ್‌ ಮೊದಲ ಸಿನಿಮಾದಲ್ಲೇ ಒಂದಷ್ಟು ಭರವಸೆ ಮೂಡಿಸುತ್ತಾರೆ. ಆ್ಯಕ್ಷನ್‌, ಡ್ಯಾನ್ಸ್‌ ಎಲ್ಲದಕ್ಕೂ ಪ್ರವೀರ್‌ ಹಾಕಿರುವ ಪರಿಶ್ರಮ ತೆರೆಮೇಲೆ ಕಾಣುತ್ತದೆ. ಉಳಿದಂತೆ ಪವಿತ್ರಾ ಲೋಕೇಶ್‌, ಅಚ್ಯುತ ಕುಮಾರ್‌, ಶರತ್‌ ಲೋಹಿತಾಶ್ವ, ಸ್ಪರ್ಶ ರೇಖಾ ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಸಸ್ಪೆನ್ಸ್‌, ಕ್ರೈಂ-ಥ್ರಿಲ್ಲರ್‌ ಸಿನಿಮಾಗಳನ್ನು ಇಷ್ಟಪಡುವವರು ಒಮ್ಮೆ “ಸೈರನ್‌’ ನೋಡಲು ಅಡ್ಡಿಯಿಲ್ಲ.

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

1-monday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ

Inspire Award: ವಿಜ್ಞಾನದತ್ತ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆಸಕ್ತಿ

Inspire Award: ವಿಜ್ಞಾನದತ್ತ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆಸಕ್ತಿ

District In-charge Minister ಮಂಗಳೂರು, ಉಡುಪಿಯಲ್ಲಿ ಇಂದು ಜನತಾ ದರ್ಶನ

District In-charge Minister ಮಂಗಳೂರು, ಉಡುಪಿಯಲ್ಲಿ ಇಂದು ಜನತಾ ದರ್ಶನ

1—wewqe

World cup Cricket ಜಗತ್ತನ್ನು ಬೆರಗುಗೊಳಿಸಿದ ಭಾರತ !

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dighvijay Movie review;

Dighvijaya Movie review; ರೈತಪರ ಹೋರಾಟಕ್ಕೆ ದಿಗ್ವಿಜಯ

Olave Mandara 2 movie review

Olave Mandara 2 movie review; ಪ್ರೇಮದೂರಿನ ಕರೆಯೋಲೆ

Parimala D’souza Movie Review; ನಿಗೂಢ ಹಾದಿಯಲ್ಲಿ ಪರಿಮಳ ಹೆಜ್ಜೆ

Parimala D’souza Movie Review; ನಿಗೂಢ ಹಾದಿಯಲ್ಲಿ ಪರಿಮಳ ಹೆಜ್ಜೆ

’13’ movie review

’13’ movie review: ಹಣದ ಹಿಂದೆ ಬಿದ್ದವರ ಹುಡುಕಾಟ

tales of mahanagara movie review

Tales of Mahanagara Movie Review; ಅಚ್ಚರಿಗಳ ನಡುವೆ ಮಹಾನಗರದ ಚಿತ್ರಣ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

1-monday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ

Inspire Award: ವಿಜ್ಞಾನದತ್ತ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆಸಕ್ತಿ

Inspire Award: ವಿಜ್ಞಾನದತ್ತ ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆಸಕ್ತಿ

District In-charge Minister ಮಂಗಳೂರು, ಉಡುಪಿಯಲ್ಲಿ ಇಂದು ಜನತಾ ದರ್ಶನ

District In-charge Minister ಮಂಗಳೂರು, ಉಡುಪಿಯಲ್ಲಿ ಇಂದು ಜನತಾ ದರ್ಶನ

1—wewqe

World cup Cricket ಜಗತ್ತನ್ನು ಬೆರಗುಗೊಳಿಸಿದ ಭಾರತ !

jds

JDS: ಮೈತ್ರಿಗೆ ಮುನಿಸು: ಶಾಸಕರು, ನಾಯಕರಿಗೆ ಅಸಮಾಧಾನ ಮೂಡಿಸಿದ ಗೆಳೆತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.