ಚಿತ್ರ ವಿಮರ್ಶೆ: ‘ತೂತು ಮಡಿಕೆ’ಯಲ್ಲಿ ಸಿಕ್ಕ ಕಾಮಿಡಿ ಕಿಲಾಡಿಗಳು


Team Udayavani, Jul 10, 2022, 12:40 PM IST

tootu madike

ಒಂದು ಸಮಾನ ಮನಸ್ಕ ಯುವ ತಂಡ ಒಟ್ಟಾಗಿ, ಸಿನಿಮಾವನ್ನು ಪ್ರೀತಿಸುತ್ತಾ ಅದರಲ್ಲಿ ತೊಡಗಿಕೊಂಡರೆ ಯಾವ ತರಹದ ಫ‌ಲಿತಾಂಶ ಸಿಗಬಹುದು ಎಂಬುದಕ್ಕೆ ಈ ವಾರ ತೆರೆಕಂಡಿರುವ “ತೂತು ಮಡಿಕೆ’ ಚಿತ್ರ ಒಂದು ಒಳ್ಳೆಯ ಉದಾಹರಣೆ.

ಪ್ರತಿಯೊಬ್ಬರು ಇಲ್ಲಿ ಮುಕ್ತ ಮನಸ್ಸಿನಿಂದ ತೊಡಗಿಸಿಕೊಂಡ ಪರಿಣಾಮ “ತೂತು ಮಡಿಕೆ’ ಒಂದು ನಗೆಹಬ್ಬವಾಗಿ ಹೊರಹೊಮ್ಮಿದೆ. ಆರಂಭದ ಕೊನೆಯವರೆಗೆ ಈ ಸಿನಿಮಾ ನಿಮ್ಮನ್ನು ನಗಿಸುತ್ತಲೇ ಸಾಗುತ್ತದೆ. ಆ ಮಟ್ಟಿಗೆ ನಿರ್ದೇಶಕರು ಪ್ರೇಕ್ಷಕರನ್ನು ನಗಿಸಲೇಬೇಕೆಂಬ ಪರಮ ಉದ್ದೇಶದೊಂದಿಗೆ ಕಥೆ ಮಾಡಿಕೊಂ ಡಂತಿದೆ. ಹಾಗೆ ನೋಡಿದರೆ ಸಿನಿಮಾದ ಕತೆ ಸಿಂಪಲ್‌.

ಪಂಚಲೋಹ ವಿಗ್ರಹದ ಹಿಂದೆ ಬೀಳುವ ಗ್ಯಾಂಗ್‌ವೊಂದರ ಸುತ್ತ ಇಡೀ ಸಿನಿಮಾ ಸಾಗುತ್ತದೆ. ಮನುಷ್ಯ ದುರಾಸೆಯ ಹಿಂದೆ ಬಿದ್ದರೆ ಅದರ ಪರಿಣಾಮ ಏನಾಗುತ್ತದೆ ಎಂಬುದು ಸಿನಿಮಾದ ಮೂಲ ಆಶಯ.

ಮೇಲ್ನೋಟಕ್ಕೆ ತುಂಬಾ ಗಂಭೀರವಾದ ವಿಷಯ ಎನಿಸಿದರೂ ನಿರೂಪಣೆಯಲ್ಲಿ ಇಡೀ ಸಿನಿಮಾದ ಹಾಸ್ಯದ ಲೇಪನದೊಂದಿಗೆ ಕಟ್ಟಿಕೊಟ್ಟಿದ್ದಾರೆ. ನಿರ್ದೇಶನದ ಜೊತೆಗೆ ರಘು ನಿಡುವಳ್ಳಿ ಅವರ ಸಂಭಾಷಣೆ ಚಿತ್ರದ ಹೈಲೈಟ್‌.ಸಂಭಾಷಣೆ ಮೂಲಕವೇ ಅನೇಕ ದೃಶ್ಯಗಳನ್ನು ಕಟ್ಟಿಕೊಡುವ ಜಾಣ್ಮೆಯನ್ನು ಚಿತ್ರತಂಡ ಮೆರೆದಿದೆ.

ಇದನ್ನೂ ಓದಿ:ಪರಾರಿಯಾದ ಶ್ರೀಲಂಕಾ ಅಧ್ಯಕ್ಷರು ರಾಜೀನಾಮೆ ನೀಡಿದರೆ ಏನಾಗುತ್ತದೆ? ಲಂಕಾದ ಮುಂದಿನ ಕಥೆಯೇನು

ನಿರ್ದೇಶಕ ಚಂದ್ರಕೀರ್ತಿ ತಮ್ಮ ಚೊಚ್ಚಲ ನಿರ್ದೇಶನದಲ್ಲೇ ಭರವಸೆ ಮೂಡಿಸಿದ್ದಾರೆ. ನಾಯಕನಾಗಿ ನಟಿಸುವ ಜೊತೆಗೆ ನಿರ್ದೇಶನ ದಲ್ಲೂ ಸೈ ಎನಿಸಿಕೊಂಡಿದ್ದಾರೆ.

ಮೊದಲೇ ಹೇಳಿದಂತೆ ನಾಯಕ ಚಂದ್ರಕೀರ್ತಿ ತಮಗೆ ಸಿಕ್ಕ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಹಿಸಿ ದ್ದಾರೆ. ನಾಯಕಿ ಪಾವನಾ ಗೌಡ ಅವರು ಹೊಸ ಬಗೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಪ್ರಮೋದ್‌ ಶೆಟ್ಟಿ, ಗಿರಿ, ಉಗ್ರಂ ಮಂಜು ಸೇರಿದಂತೆ ಇತರರು ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಸ್ವಾಮಿನಾಥನ್‌ ಸಂಗೀತ, ನವೀನ್‌ ಛಾಯಾಗ್ರಹಣ ಚಿತ್ರಕ್ಕೆ ಮತ್ತಷ್ಟು ಸಾಥ್‌ ನೀಡಿದೆ.

 ರವಿ ರೈ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.