ಕೆಜಿಎಫ್-2 ಜೊತೆ ತೋತಾಪುರಿ ಟ್ರೇಲರ್‌


Team Udayavani, Apr 8, 2022, 12:36 PM IST

jaggesh

ನವರಸ ನಾಯಕ ಜಗ್ಗೇಶ್‌ ಹಾಗೂ ನಿರ್ದೇಶಕ ವಿಜಯಪ್ರಸಾದ್‌ “ನೀರ್‌ದೋಸೆ’ ಮೂಲಕ ಕಮಾಲ್‌ ಮಾಡಿದ್ದು ಗೊತ್ತೇ ಇದೆ. ಇದೀಗ “ತೋತಾಪುರಿ’ ಮೂಲಕ ಮತ್ತೆ ಯಶಸ್ವಿ ಜೋಡಿ ಒಂದಾಗಿದೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಲು ತಯಾರಾಗಿರುವ ಈ ಚಿತ್ರ ಎರಡು ಭಾಗಗಳಲ್ಲಿ ಮೂಡಿಬಂದಿದೆ. ಈವರೆಗೂ ಪೋಸ್ಟರ್‌ ಹಾಗೂ ಹಾಡಿನ ಮೂಲಕ ಜೋರಾಗಿ ಸುದ್ದಿಯಾಗಿದ್ದ “ತೋತಾಪುರಿ’ ಈಗ ಟ್ರೇಲರ್‌ ಮೂಲಕ ಸೌಂಡು ಮಾಡಲು ಸಜ್ಜಾಗಿದೆ. ಅದಕ್ಕೆ ಮುಹೂರ್ತ ಕೂಡ ಫಿಕ್ಸ್‌ ಆಗಿದೆ.

ಹೌದು, ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ “ತೋತಾಪುರಿ’ ಮೊದಲ ಭಾಗದ ಟ್ರೇಲರ್‌ “ಕೆಜಿಎಫ್-2′ ಜತೆ ರಿಲೀಸ್‌ ಮಾಡಲಿದೆ ಚಿತ್ರತಂಡ. ಏಪ್ರಿಲ್‌ 14ರಂದು ಕೆಜಿಎಫ್ ಭಾಗ 2 ಪ್ರಪಂಚದಾದ್ಯಂತ ತೆರೆಕಾಣುತ್ತಿದೆ. ಇದರೊಟ್ಟಿಗೆ “ತೋತಾಪುರಿ’ ಸಿನಿಮಾದ ಟ್ರೇಲ ರ್‌ ಸಹ ಬಿಡುಗಡೆಯಾಗಲಿದೆ. ಕೆಜಿಎಫ್ ಬಿಡುಗಡೆಯಾಗುವ ಎಲ್ಲಾ ಪರದೆಗಳಲ್ಲೂ “ತೋತಾಪುರಿ’ ಸವಿಯಬಹುದು.

ಜಗ್ಗೇಶ್‌ ಇದೇ ಮೊದಲ ಬಾರಿ ಎರಡು ಭಾಗವಿರುವ ಸಿನಿಮಾದಲ್ಲಿ ನಟಿಸಿದ್ದಾರೆ. ಜತೆಗೆ ಇದು ಅವರ ಮೊದಲ ಪ್ಯಾನ್‌ ಇಂಡಿಯಾ ಸಿನಿಮಾ. “ಬಾಗ್ಲು ತೆಗಿ ಮೇರಿ ಜಾನ್‌…’ ಹಾಡಿನ ಮುಖೇನ ವಿಶ್ವದಾದ್ಯಂತ ಸದ್ದು ಮಾಡಿರುವ “ತೋತಾಪುರಿ’ ಈಗ ಟ್ರೇಲರ್‌ ಮೂಲಕ ಜನರನ್ನು ತನ್ನತ್ತ ಸೆಳೆದುಕೊಳ್ಳಲಿದೆ ಎಂಬ ಭರವಸೆ ಚಿತ್ರತಂಡಕ್ಕಿದೆ.

ಇದನ್ನೂ ಓದಿ:“ವರ್ಣಪಟಲ”; ಆಟಿಸಂ ಮೇಲೊಂದು ಚಿತ್ರ

ಕಾಮಿಡಿ ಸಿನಿಮಾವೊಂದು ಇದೇ ಮೊದಲ ಬಾರಿಗೆ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತಯಾರಾಗಿರುವುದು ವಿಶೇಷ. ಎರಡೂ ಭಾಗದ ಶೂಟಿಂಗ್‌ ಮೊದಲೇ ಮುಗಿಸಿ ಬಿಡುಗಡೆಗೆ ಸಜ್ಜಾಗಿರುವುದೂ ಇದೇ ಮೊದಲು. ಹೀಗೆ ಹಲವು ಮೊದಲುಗಳನ್ನೊಳಗೊಂಡ “ತೋತಾಪುರಿ’ ಬೇಸಿಗೆಗೆ ಸವಿಯಲು ಸಿದ್ಧ.

ಮೋನಿಫಿಕ್ಸ್‌ ಸ್ಟುಡಿಯೋಸ್‌ ಬ್ಯಾನರ್‌ ಅಡಿಯಲ್ಲಿ ಕೆ.ಎ.ಸುರೇಶ್‌ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಹಿಂದೆ ಇವರು ಎರಡನೇ ಮದುವೆ, ಗೋವಿಂದಾಯ ನಮಃ, ಶಿವಲಿಂಗ, ಶ್ರಾವಣಿ ಸುಬ್ರಮಣ್ಯ ಮೊದಲಾದ ಸಿನಿಮಾಗಳನ್ನು ನಿರ್ಮಿಸಿ, ಸೂಪರ್‌ ಹಿಟ್‌ ನಿರ್ಮಾಪಕ ಎನಿಸಿಕೊಂಡಿದ್ದಾರೆ. ಸುರೇಶ್‌ ನಿರ್ಮಿಸಿರುವ ಎಲ್ಲಾ ಸಿನಿಮಾಗಳು “ಬ್ಲಾಕ್‌’ಬಸ್ಟರ್‌ ಆಗಿರುವುದರಿಂದ “ತೋತಾಪುರಿ’ ಸಹ ಬಾಕ್ಸಾಫೀಸ್‌’ನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲಿದೆ ಎಂಬುದು ಸಿನಿ ಪಂಡಿತರ ಲೆಕ್ಕಾಚಾರ.

ಅತಿಹೆಚ್ಚು ದಿನ ಚಿತ್ರೀಕರಣ ಮಾಡಿರುವ ಸಿನಿಮಾ ಎಂಬ ಹೆಗ್ಗಳಿಕೆ “ತೋತಾಪುರಿ’ಗಿದೆ. ತಾರಾಗಣದ ವಿಷಯದಲ್ಲೂ ದಾಖಲೆ ಬರೆದಿರುವ ಈ ಚಿತ್ರದಲ್ಲಿ ಡಾಲಿ ಧನಂಜಯ್, ಅದಿತಿ ಪ್ರಭುದೇವ, ಸುಮನ್‌ ರಂಗನಾಥ್‌, ದತ್ತಣ್ಣ, ವೀಣಾ ಸುಂದರ್‌ ಹಾಗೂ ಹೇಮಾದತ್‌ ಸೇರಿದಂತೆ ಸುಮಾರು ನೂರಕ್ಕೂ ಅಧಿಕ ಕಲಾವಿದರು ಬಣ್ಣ ಹಚ್ಚಿದ್ದಾರೆ. ಅನೂಪ್‌ ಸೀಳಿನ್‌ ಸಂಗೀತ, ನಿರಂಜನ್‌ ಬಾಬು ಕ್ಯಾಮೆರಾ, ಸುರೇಶ್‌ ಅರಸ್‌ ಸಂಕಲನ ಈ ಚಿತ್ರಕ್ಕಿದೆ. ಈ ಮೂಲಕ ಸಾಕಷ್ಟು ರಾಜ್ಯ ಪ್ರಶಸ್ತಿ ವಿಜೇತ ತಾಂತ್ರಿಕವರ್ಗ “ತೋತಾಪುರಿ’ಗೆ ಕಾರ್ಯ ನಿರ್ವಹಿಸಿದೆ ಎಂಬುದು ಈ ತಂಡದ ಹೆಚ್ಚುಗಾರಿಕೆ.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.