‘ವೇದ’ ಚಿತ್ರ ವಿಮರ್ಶೆ: ಸೇಡಿನ ಜ್ವಾಲೆಯಲ್ಲಿ ವೇದ ಅಧ್ಯಯನ


Team Udayavani, Dec 24, 2022, 10:01 AM IST

Vedha film review

ಮನಸ್ಸಿನಲ್ಲಿ ಮಡುಗಟ್ಟಿದ ನೋವು ಸೇಡಾಗಿ ಪರಿವರ್ತನೆಯಾಗುತ್ತದೆ. ಸೇಡಿನ ಜ್ವಾಲೆ ಅನೇಕರ ಮನೆ ಬಾಗಿಲು ತಟ್ಟಿ “ಕೆಂಪು’ ಹಾದಿ ತೋರಿಸುತ್ತದೆ. ಈ “ಜ್ವಾಲಾಮುಖೀ’ ಕೋತ ಕೋತ ಕುದಿಯುತ್ತಾ ಮುಂದೆ ಸಾಗಲು ಒಂದು ಕಾರಣವಿದೆ, ಜೊತೆಗೊಂದು ಆಶಯವೂ ಇದೆ. ಅದೇನೆಂಬುದನ್ನು “ವೇದ’ನ ಬಾಯಿಯಿಂದಲೇ ಕೇಳಿದರೆ ಮಜಾ…

“ವೇದ’ ಶಿವರಾಜ್‌ಕುಮಾರ್‌ ಅವರ 125ನೇ ಸಿನಿಮಾ. 125ನೇ ಸಿನಿಮಾ ಎಂಬುದು ಒಬ್ಬ ನಟನ ವೃತ್ತಿ ಜೀವನದಲ್ಲಿ ಮೈಲಿಗಲ್ಲು. ಆ ನಿಟ್ಟಿನಲ್ಲಿ “ವೇದ’ ಚಿತ್ರದಲ್ಲಿ ಶಿವಣ್ಣ ಆಯ್ಕೆ ಮಾಡಿಕೊಂಡಿರುವ ಒನ್‌ಲೈನ್‌ ಚೆನ್ನಾಗಿದೆ. ಹೆಣ್ಣು ಮಕ್ಕಳನ್ನು ಕೆಟ್ಟ ದೃಷ್ಟಿಯಿಂದ ನೋಡುವ ಮುನ್ನ ನೂರು ಬಾರಿ ಯೋಚಿಸಿ ಎಂಬುದು ಈ ಸಿನಿಮಾದ ಮೂಲ ಸಂದೇಶ. ಈ ಅಂಶವನ್ನಿಟ್ಟುಕೊಂಡು ನಿರ್ದೇಶಕ ಹರ್ಷ ಔಟ್‌ ಅಂಡ್‌ ಔಟ್‌ ಆ್ಯಕ್ಷನ್‌ ಕಮರ್ಷಿಯಲ್‌ ಕಟ್ಟಿಕೊಟ್ಟಿದ್ದಾರೆ. ಇದು ಹರ್ಷ ಹಾಗೂ ಶಿವರಾಜ್‌ ಕುಮಾರ್‌ ಕಾಂಬಿನೇಶನ್‌ನಲ್ಲಿ ಬರುತ್ತಿರುವ 4ನೇ ಸಿನಿಮಾ.

ಶಿವಣ್ಣ ಜೊತೆಗಿನ ಈ ಹಿಂದಿನ ಮೂರು ಸಿನಿಮಾಗಳಲ್ಲೂ ಹರ್ಷ ಒಂದು ಹೊಸ ಲೋಕ, ಹೈವೋಲ್ಟೇಜ್‌ ಪಾತ್ರಗಳು, ಆಗಾಗ ತೆರೆದುಕೊಳ್ಳುವ ಫ್ಲ್ಯಾಶ್‌ಬ್ಯಾಕ್‌ಗಳೊಂದಿಗೆ ಕಟ್ಟಿಕೊಟ್ಟಿದ್ದರು. ಈಗ “ವೇದ’ದಲ್ಲೂ ಹರ್ಷ ಅವರ ಅದೇ ಶೈಲಿ ಮುಂದುವರೆದಿದೆ. 60-80ರ ದಶಕದಲ್ಲಿ ನಡೆಯುವ ಕಥೆ ಒಂದು ಕಡೆಯಾದರೆ, ಅದಕ್ಕಾಗಿಯೇ ಸೃಷ್ಟಿಯಾದ ಹಳ್ಳಿ, ಅಲ್ಲೊಂದಿಷ್ಟು “ನಿಗಿ ನಿಗಿ ಕೆಂಡದಂತಿರುವ’ ಪಾತ್ರಗಳು, ನಾಯಕನಿಗೊಂದು ಫ್ಲ್ಯಾಶ್‌ಬ್ಯಾಕ್‌.. ಹೀಗೆ “ವೇದ’ ಸಾಗುತ್ತದೆ.

ಮೊದಲೇ ಹೇಳಿದಂತೆ ಕಥೆಯ ಆಶಯ ಚೆನ್ನಾಗಿದೆ. ಈ ಆಶಯವನ್ನು ರಗಡ್‌ ಆಗಿ ಕಟ್ಟಿಕೊಡುವ ಹಾದಿಯಲ್ಲಿ ರಕ್ತದ ಹೊಳೆಯೇ ಹರಿಯುತ್ತದೆ. ಚಿತ್ರದುದ್ದಕ್ಕೂ ಬರ್ಬರವಾದ ಕೊಲೆಗಳು ಕಾಣಸಿಗುತ್ತವೆ. ಚಿತ್ರದ ಮೊದಲರ್ಧ ಸ್ವಲ್ಪ ನಿಧಾನಗತಿಯಲ್ಲಿ ಸಾಗಿದರೆ, ಸಿನಿಮಾದ ಮುಖ್ಯ ಕಥೆ ತೆರೆದುಕೊಳ್ಳುವುದು ದ್ವಿತೀಯಾರ್ಧದಲ್ಲಿ. ಮೊದಲರ್ಧಕ್ಕಿಂತ ಹೆಚ್ಚು ದ್ವಿತೀಯಾರ್ಧದಲ್ಲಿ “ರಕ್ತದ ವಾಸನೆ’ ಮೂಗಿಗೆ ಬಡಿಯುತ್ತದೆ. ಇದರ ಜೊತೆಗೆ ಸಾಕಷ್ಟು ಟ್ವಿಸ್ಟ್‌ಗಳು ಕೂಡಾ ಸಿನಿಮಾದ ಕುತೂಹಲ ಹೆಚ್ಚಿಸುತ್ತಾ ಸಾಗುತ್ತದೆ.

ಇದನ್ನೂ ಓದಿ:ಕಂದಕಕ್ಕೆ ಉರುಳಿದ ಶಬರಿಮಲೆ ಯಾತ್ರಿಗಳಿದ್ದ ವ್ಯಾನ್: ಎಂಟು ಭಕ್ತರ ದುರ್ಮರಣ

ಇನ್ನು, ನಾಯಕನ ಮದುವೆ ಎಪಿಸೋಡ್‌ ಸೇರಿದಂಥೆ ಒಂದಷ್ಟು ದೃಶ್ಯಗಳನ್ನು ಟ್ರಿಮ್‌ ಮಾಡಿ ಚಿತ್ರದ ವೇಗ ಹೆಚ್ಚಿಸುವ ಅವಕಾಶವಿತ್ತು. ಆ್ಯಕ್ಷನ್‌ ಎಪಿಸೋಡ್‌ಗಳ ಜೊತೆ ಜೊತೆಗೆ ಫ್ಲ್ಯಾಶ್‌ಬ್ಯಾಕ್‌ ತೆರೆದುಕೊಳ್ಳುವ ಮೂಲಕ “ಕ್ಲಾಸ್‌’ ಸಿನಿಪ್ರಿಯರ ಮನಸ್ಸು ತಣಿಸುತ್ತದೆ. ವೈಲೈಂಟ್‌ ಆಗಿರುವ ನಾಯಕ ಸೈಲೈಂಟ್‌ ಆಗಿದ್ದ ದಿನಗಳನ್ನು ತೋರಿಸುವ ಮೂಲಕ “ಅಲ್ಲಲ್ಲಿ’ ಫ್ಯಾಮಿಲಿ ಆಡಿಯನ್ಸ್‌ ಅನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ ಹರ್ಷ.

ಇನ್ನು, ಇಡೀ ಸಿನಿಮಾದ ಹೈಲೈಟ್‌ ನಟ ಶಿವರಾಜ್‌ಕುಮಾರ್‌. ಅವರಿಗೆ ಚಿತ್ರದಲ್ಲಿ ಹೆಚ್ಚು ಮಾತಿಲ್ಲ. ಇಡೀ ಸಿನಿಮಾದಲ್ಲಿ ಮಾತನಾಡಿರೋದು ಅವರ ಕಣ್ಣು ಮತ್ತು ಕೈ. ಬೆಂಕಿಯುಗುಳು ಕಣ್ಣುಗಳು ಒಂದು ಕಡೆಯಾದರೆ, ದುಷ್ಟರ ಚೆಂಡಾಡುವ ಕೈ ಮತ್ತೂಂದು ಕಡೆ. ಚಿತ್ರದಲ್ಲಿ ಕೊಡಬೇಕಾದ ಸಂದೇಶವನ್ನು ಕೂಡಾ ಖಡಕ್‌ ಆಗಿಯೇ ನೀಡಿದ್ದಾರೆ. ನಾಯಕಿ ಗಾನವಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಪಾತ್ರಕ್ಕೆ ಹೊಂದಿಕೊಂಡಿದ್ದರೂ ಅವರು ಹೇಳುವ ಸಂಭಾಷಣೆಯನ್ನು ಅರ್ಥಮಾಡಿಕೊಳ್ಳಲು ಸ್ವಲ್ಪ ಸಮಯ ಹಿಡಿಯುತ್ತದೆ.

ಉಳಿದಂತೆ ಅದಿತಿ ಸಾಗರ್‌, ಶ್ವೇತಾ ಚೆಂಗಪ್ಪ, ರಾಘ ಶಿವಮೊಗ್ಗ, ಉಮಾಶ್ರೀ ಚಿತ್ರದ ಪ್ರಮುಖ ಪಾತ್ರಗಳು. ಉಳಿದಂತೆ ಹರ್ಷ ಸಿನಿಮಾಗಳಲ್ಲಿ ಕಾಣ ಸಿಗುವ ಆರಡಿ ವಿಲನ್‌ಗಳು ಅಬ್ಬರಿಸಿದ್ದಾರೆ. ಚಿತ್ರದ ಹಿನ್ನೆಲೆ ಸಂಗೀತ ಹಾಗೂ ಹಾಡುಗಳು “ವೇದ’ನ ಪ್ಲಸ್‌ ಗಳಲ್ಲಿ ಒಂದು.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.