‘ವಿಜಯಾನಂದ’ ಚಿತ್ರ ವಿಮರ್ಶೆ: ಸಾಧನೆಯ ಹಿಂದಿನ ಪರಿಶ್ರಮದ ಕಥನ


Team Udayavani, Dec 10, 2022, 1:02 PM IST

vijayanand movie review

ಪ್ರಖ್ಯಾತ ಸಾರಿಗೆ ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನಗಾಥೆಯನ್ನು ಆಧರಿಸಿದ “ವಿಜಯಾನಂದ’ ಸಿನಿಮಾ ಈ ವಾರ ತೆರೆಗೆ ಬಂದಿದೆ. ಆರಂಭದಲ್ಲಿಯೇ ಚಿತ್ರತಂಡ ಹೇಳಿಕೊಂಡಿರುವಂತೆ, “ವಿಜಯಾನಂದ’ ಕನ್ನಡದ ಮೊದಲ ಅಧಿಕೃತ ಬಯೋಪಿಕ್‌ ಸಿನಿಮಾ.

1970ರ ದಶಕದಲ್ಲಿ ಒಂದು ಟ್ರಕ್‌ ಮೂಲಕ ಸಾರಿಗೆ ಉದ್ಯಮ ಆರಂಭಿಸಿ, ಇಡೀ ಸಾರಿಗೆ ಉದ್ಯಮವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ ವಿಜಯ ಸಂಕೇಶ್ವರ ಅವರ ಜೀವನ ಏಳು-ಬೀಳುಗಳು, ಸಾಧನೆಯ ಚಿತ್ರಣವನ್ನು “ವಿಜಯಾನಂದ’ ಸಿನಿಮಾದಲ್ಲಿ ತೆರೆಮೇಲೆ ತರಲಾಗಿದೆ. ಮುಖ್ಯವಾಗಿ ಯುವಕನಾಗಿ, ಮಧ್ಯಮ ವಯಸ್ಕನಾಗಿ ಮತ್ತು ಸಾಧಕನಾಗಿ ಸಂಕೇಶ್ವರ ಅವರ ಜೀವನದ ಮೂರು ಕಾಲಘಟ್ಟದ ಅನಾವರಣ ಸಿನಿಮಾದಲ್ಲಾಗಿದೆ.

“ವಿಜಯಾನಂದ’ ಒಂದು ಬಯೋಪಿಕ್‌ ಆದರೂ ಅಲ್ಲಲ್ಲಿ ಮೆಲೋಡಿ ಹಾಡುಗಳು, ಆ್ಯಕ್ಷನ್‌, ಕಾಮಿಡಿ, ಎಮೋಶನ್ಸ್‌ ಹೀಗೆ ಒಂದು ಕಮರ್ಷಿಯಲ್‌ ಸಿನಿಮಾದಲ್ಲಿ ಇರಬಹುದಾದ ಎಲ್ಲ ಮನರಂಜನೆಯ ಅಂಶಗಳನ್ನೂ ಸಿನಿಮಾದಲ್ಲಿ ಕಾಣಬಹುದು. ನಮ್ಮ ನಡುವಿನ ಸಾಧನಕನ ಕಥೆಯನ್ನು ಎಲ್ಲೂ ಬೋರ್‌ ಆಗದಂತೆ ವರ್ಣರಂಜಿತವಾಗಿ ತೆರೆಮೇಲೆ ತರುವಲ್ಲಿ ಚಿತ್ರತಂಡ ಯಶಸ್ವಿಯಾಗಿದೆ. ಸಿನಿಮಾದ ಮೊದಲರ್ಧ ಚಿತ್ರಕಥೆಗೆ ವೇಗ ಸಿಕ್ಕಿದ್ದರೆ, “ವಿಜಯಾನಂದ’ದ ವೇಗ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿದ್ದವು.

ಇನ್ನು ಕಲಾವಿದರ ಬಗ್ಗೆ ಹೇಳುವುದಾದರೆ, ನಟ ನಿಹಾಲ್‌ ಸಿನಿಮಾದಲ್ಲಿ ವಿಜಯ ಸಂಕೇಶ್ವರ ಅವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯುವಕನಾಗಿ, ಮಧ್ಯಮ ವಯಸ್ಕನಾಗಿ ಮತ್ತು ಸಾಧಕನಾಗಿ ಮೂರು ವಿಭಿನ್ನ ಗೆಟಪ್‌ನಲ್ಲಿ ಸಂಕೇಶ್ವರ ಪಾತ್ರದಲ್ಲಿ ನಿಹಾಲ್‌ ಅವರದ್ದು ಗಮನ ಸೆಳೆಯುವ ಅಭಿನಯ.

ಉಳಿದಂತೆ ಅನಂತನಾಗ್‌, ಸಿರಿ ಪ್ರಹ್ಲಾದ್‌ ತಮ್ಮ ಪಾತ್ರಗಳಲ್ಲಿ ಇಷ್ಟವಾಗುತ್ತಾರೆ. ಪ್ರತಿ ಪಾತ್ರಗಳಲ್ಲೂ ಪರಿಚಿತ ಕಲಾವಿದರೇ ಕಾಣಿಸಿಕೊಂಡಿದ್ದು, ಬಹುತೇಕರು ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ತಾಂತ್ರಿಕವಾಗಿಯೂ ಸಿನಿಮಾ ಗುಣಮಟ್ಟದಲ್ಲಿ ಗಮನ ಸೆಳೆಯುತ್ತದೆ. ಒಂದೆರಡು ಹಾಡುಗಳು, ಹಿನ್ನೆಲೆ ಸಂಗೀತ, ಛಾಯಾಗ್ರಹಣ, ಸಂಕಲನ ಕಾರ್ಯ, ಕಲರಿಂಗ್‌, ಬೃಹತ್‌ ಸೆಟ್‌ಗಳು, ಕಾಸ್ಟೂಮ್ಸ್‌ “ವಿಜಯಾನಂದ’ ಸಿನಿಮಾವನ್ನು ತೆರೆಮೇಲೆ ಕಲರ್‌ಫ‌ುಲ್‌ ಆಗಿ ಕಾಣುವಂತೆ ಮಾಡಿವೆ.

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

Marigold movie review

Marigold movie review; ಥ್ರಿಲ್ಲರ್ ಹಾದಿಯಲ್ಲಿ ಗೋಲ್ಡನ್ ರೈಡ್

Matinee movie review

Matinee Review; ಪ್ರೀತಿಯ ಅರಮನೆಯಲ್ಲಿ ಆತ್ಮದ ಆಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.