ವಿರಾಟಪುರ ವಿರಾಗಿ ಚಿತ್ರ ವಿಮರ್ಶೆ: ವಿರಾಗಿಯ ಬದುಕಿನ ಮೇಲೊಂದು ಬೆಳಕು


Team Udayavani, Jan 14, 2023, 12:13 PM IST

viragi

12 ನೇ ಶತಮಾನದಲ್ಲಿ ಬಸವಣ್ಣನವರಿಂದ ಆರಂಭವಾದ ಭಕ್ತಿ ಪಂಥವು ಸಮಾಜದ ಏಳಿಗೆಗಾಗಿ ನಿರ್ಮಿಸಲ್ಪಟ್ಟಿದೆ. ಸಮಾಜದಲ್ಲಿನ ಜಾತಿಪದ್ಧತಿ ಎಂಬ ಅನಿಷ್ಠವನ್ನು ಹೋಗಲಾಡಿಸಿ, ಜಾತಿ, ಲಿಂಗ, ವೃತ್ತಿ, ಎಲ್ಲವನ್ನೂ ಮೀರಿ ಲಿಂಗದೀಕ್ಷೆ ನೀಡುವ ಮೂಲಕ, ಕಾಯಕದಿಂದ ಶಿವನಲ್ಲಿ ಲೀನವಾಗುವ ಪರಿಯನ್ನು ಲೋಕಕ್ಕೆ ಸಾರಿದವರು ಬಸವಣ್ಣ. ಬಸವಣ್ಣನವರ ನಂತರ 19-20 ಶತಮಾನದಲ್ಲಿ ವೀರಶೈವ ಧರ್ಮದ ಉದ್ಧಾರ, ಲೋಕ ಕಲ್ಯಾಣಕ್ಕಾಗಿ ಶ್ರಮಿಸಿದ ಯೋಗಿಗಳು ಹಾನಗಲ್‌ ಕ್ಷೇತ್ರದ ವಿರಾಟಪುರದ ಶ್ರೀ ಕುಮಾರ ಶಿವಯೋಗಿಗಳು. ಶ್ರೀ ಕುಮಾರ ಶಿವಯೋಗಿಗಳ ಜೀವನಗಾಥೆ ಲೋಕಕ್ಕೆ ಮಾದರಿಯಾಗಿದ್ದು, ಈ ವಾರ ತೆರೆ ಕಂಡ “ವಿರಾಟಪುರ ವಿರಾಗಿ’ ಚಿತ್ರ ಅದಕ್ಕೆ ಸಾಕ್ಷಿಯಾಗಿದೆ.

ನಿರ್ದೇಶಕ ಬಿ.ಎಸ್‌ ಲಿಂಗದೇವರು ನಿರ್ದೇಶನದ ಈ ಚಿತ್ರ ಶ್ರೀಗಳ ಜೀವನಾಧಾರಿತ ಚಿತ್ರವಾಗಿದೆ. ಶಿವಯೋಗಿಗಳ ಕುರಿತು ಸಂಪೂರ್ಣ ಅಧ್ಯಯನ ನಡೆಸಿ , ಅವರ ಜೀವನ ಘಟ್ಟದ ಅತೀ ಮುಖ್ಯ ಅಂಶಗಳನ್ನು ಮೂರು ಗಂಟೆಗಳ ಮಿತಿಯಲ್ಲಿ ಪ್ರಸ್ತುತಪಡಿಸುವ ಪ್ರಯತ್ನ ಚಿತ್ರತಂಡದ್ದಾಗಿದೆ.

ಶ್ರೀ ಕುಮಾರ ಶಿವಯೋಗಿಗಳ ಬಾಲ್ಯ, ಓದು, ಆತ್ಮಲಿಂಗದ ಕಡೆಗಿನ ಒಲವು, ಸನ್ಯಾಸ, ಸಮಾಜ ಪರ ಕಾರ್ಯಗಳು ಎಲ್ಲವನ್ನೂ ದೃಶ್ಯ ಕಾವ್ಯದ ಮೂಲಕ ತೋರಿಸಲಾಗಿದೆ. ಶ್ರೀ ಕುಮಾರ ಶಿವಯೋಗಿಗಳ , ಬದುಕಿನ ದಾರಿಯೇ ಭಿನ್ನವಾಗಿದ್ದು, ಸಮಾಜದಲ್ಲಿ ಶಿಕ್ಷಣ, ಅದರಲ್ಲೂ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವಲ್ಲಿ, ಜಾತಿ ಪದ್ಧತಿಯನ್ನು ಹೋಗಲಾಡಿಸುವಲ್ಲಿ ಶ್ರೀಗಳು ನಡೆಸಿದ್ದು ಒಂದು ಕ್ರಾಂತಿ. ಭೀಕರ ಬರಗಾಲದಲ್ಲಿ ಅನ್ನದಾಸೋಹ ನಡೆಸಿ, ಪ್ಲೇಗ್‌ ರೋಗ ಇಡೀ ಊರನ್ನೇ ಆವರಿಸಿದಾಗ ಜನರನ್ನು ಆರೈಕೆ ಮಾಡಿ, ಬಡಜನರಿಗೆ ದಾರಿ ಯಾದವರು ಶ್ರೀ ಕುಮಾರ ಶಿವಯೋಗಿಗಳು. ವೀರಶೈವ ಮಹಾಸಭಾ ಆರಂಭಿಸಿ, ಸಮಾಜಮುಖೀ ಕಾರ್ಯಗಳಿಗೆ ಹೇಗೆ ಹೆಸರಾಗಿದ್ದರು ಎಂಬುದನ್ನು ಚಿತ್ರದಲ್ಲಿ ನೋಡಬಹುದಾಗಿದೆ.

ಇನ್ನು, ಚಿತ್ರದಲ್ಲಿ ನಟ ಸುಚೇಂದ್ರ ಪ್ರಸಾದ್‌, ಶಿವಯೋಗಿಗಳ ಪಾತ್ರ ನಿರ್ವಹಿಸಿದ್ದು, ತಮ್ಮ ಅಭಿನಯದ ಮೂಲಕ ಪಾತ್ರಕ್ಕೆ ಜೀವತುಂಬಿದ್ದಾರೆ. ಜೊತೆಯಲ್ಲಿ ಉತ್ತರ ಕರ್ನಾಟಕದ ರಂಗಭೂಮಿ ಕಲಾವಿದರು ಅಭಿನಯಿಸಿದ್ದು, ಕೆಲ ಸ್ವಾಮಿಜಿಗಳ ಪಾತ್ರಗಳನ್ನು ಸ್ವತಃ ಸ್ವಾಮಿಜಿಗಳೇ ನಿರ್ವಹಿ ಸಿದ್ದಾರೆ. ಶ್ರೀ ಪಂಚಾಕ್ಷರಿಗವಾಯಿಗಳ ಸಂಗೀತ ಆರಂಭವಾ ಗಿದ್ದ ದಿನಗಳ ಕುರಿತ ಅಂಶವನ್ನು ಇಲ್ಲಿ ತೋರಿಸಲಾಗಿದೆ.

“ವಿರಾಟಪುರ ವಿರಾಗಿ’ ಚಿತ್ರ ಕಮರ್ಷಿಯಲ್‌ ಅಂಶಗಳಿಂದ ಹೊರತಾಗಿದ್ದು, ಕಮರ್ಷಿಯಲ್‌ ಚಿತ್ರಗಳಿಂದಾಚಿನ ಚಿತ್ರ ಬಯಸುವವರು ನೋಡಬಹುದಾದ ಚಿತ್ರ.

ವಾಣಿ ಭಟ್ಟ

ಟಾಪ್ ನ್ಯೂಸ್

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lineman movie review

Lineman movie review; ಜಾಲಿರೈಡ್‌ ನ‌ಲ್ಲಿ ‘ಲೈನ್‌ಮ್ಯಾನ್‌’

Dilkush Movie Review

Dilkush Movie Review; ತ್ರಿಕೋನ ಪ್ರೇಮದಲ್ಲಿ ಹೊಸಬರ ಆಟ

Mehabooba-Movie-Review

Mehabooba Movie Review; ತಿರುವುಗಳ ಹಾದಿಯಲ್ಲಿ ಪ್ರೇಮಪಯಣ

chow chow bath movie review

Chow Chow Bath Review; ಹರೆಯದ ಮನಸುಗಳ ಖಾಸ್‌ಬಾತ್‌

jog 101 kannada movie review

JOG 101 movie review; ಸುಂದರ ಜೋಗದಲ್ಲಿ ನಿಗೂಢ ಹೆಜ್ಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.