Movie Review: ಕೊಲೆಯ ಸುತ್ತ ಕುತೂಹಲದ ಹುತ್ತ ‘ಯದಾ ಯದಾ ಹೀ’


Team Udayavani, Jun 3, 2023, 1:20 PM IST

yada yada hi movie review

ಒಂದು ಕೊಲೆ, ಅದರ ಹಿಂದೆ ಹಲವು ಆಯಾಮಗಳು, ಕ್ಷಣ ಕ್ಷಣಕ್ಕೂ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿರುವ ಘಟನೆಗಳು, ಇಲ್ಲಿ ಯಾರು ಒಳ್ಳೆಯವರು, ಯಾರು ಕೆಟ್ಟವರು, ಯಾರನ್ನು ನಂಬಬೇಕು, ಯಾರನ್ನು ಬಿಡಬೇಕು.. ಹೀಗೆ ಆರಂಭದಿಂದಲೇ ಕುತೂಹಲದೊಂದಿಗೆ ಸಾಗುವ ಸಿನಿಮಾ “ಯದಾ ಯದಾ ಹೀ’. ಒಂದು ಮರ್ಡರ್‌ ಮಿಸ್ಟರಿ ಸಿನಿಮಾಕ್ಕೆ ಮುಖ್ಯವಾಗಿ ಬೇಕಾದ ಗುಣವೆಂದರೆ ರೋಚಕತೆ. ಅದು ಈ ಚಿತ್ರದಲ್ಲಿ ಯಥೇತ್ಛವಾಗಿದೆ. ಕ್ಷಣ ಕ್ಷಣವೂ ಮಗ್ಗುಲು ಬದಲಿಸುತ್ತಾ ಸಾಗುವುದೇ ಈ ಸಿನಿಮಾದ ಹೈಲೈಟ್‌.

ಸಿನಿಮಾ ತೆರೆದುಕೊಳ್ಳುವುದೇ ಒಂದು ಕೊಲೆಯಿಂದ. ಆ ಕೊಲೆಯ ಹಿಂದಿನ ಉದ್ದೇಶದೊಂದಿಗೆ ಇಡೀ ಸಿನಿಮಾ ಸಾಗುತ್ತದೆ. ಅಷ್ಟಕ್ಕೂ ಪೊಲೀಸ್‌ ಆಫೀಸರ್‌ ನ ಆಕೆ ಕೊಲೆ ಮಾಡಿದ್ದು ಯಾಕೆ? ಕೊಲೆ ಬಳಿಕ ಆಕೆ ಹೇಳಿದ ಅಂಶಗಳು ಎಷ್ಟು ನಿಜ? ನಿಜಕ್ಕೂ “ಆಕೆ’ ಇಲ್ಲಿ ಅಷ್ಟೊಂದು ಮುಗ್ಧಳಾ ಅಥವಾ ಆಕೆಯ ಹೇಳುವ “ಕಥೆ’ ಹಿಂದೆ ಇನ್ನೊಂದು “ಉಪಕಥೆ’ ಇದೆಯಾ.. ಇಂತಹ ಸಣ್ಣ ಸಣ್ಣ ಕುತೂಹಲದೊಂದಿಗೆ ಸಾಗುವ ಸಿನಿಮಾ ಪ್ರೇಕ್ಷಕರನ್ನು ತನ್ನ ಜೊತೆಗೆ ಕರೆದುಕೊಂಡು ಹೋಗುವುದು ಈ ಸಿನಿಮಾದ ಪ್ಲಸ್‌ ಪಾಯಿಂಟ್‌.

ಬಿಗಿಯಾದ ಚಿತ್ರಕಥೆ, ಅದಕ್ಕೆ ಪೂರಕವಾದ ನಿರೂಪಣೆ ಸಿನಿಮಾವನ್ನು ಚೆಂದಗಾಣಿಸಿದೆ. ಇಲ್ಲಿ ಬರುವ ಪ್ರತಿ ಪಾತ್ರಗಳಿಗೆ ಬೇರೆ ಬೇರೆ ಶೇಡ್‌ ಇದೆ. ಒಮ್ಮೆಲೇ ಒಂದು ಪಾತ್ರವನ್ನು ನಂಬಿ, ಅಂತಿಮ ನಿರ್ಧಾರಕ್ಕೆ ಬರುವಂತಿಲ್ಲ. ಆ ತರಹದ ಒಂದು ಕಥೆ ಇದು. ಅಂದಹಾಗೆ, ಸಣ್ಣಪುಟ್ಟ ತಪ್ಪುಗಳನ್ನು ಬದಿಗಿಟ್ಟು ನೋಡಿದರೆ “ಯದಾ ಯದಾ ಹೀ’ ಪ್ರೇಕ್ಷಕರಿಗೆ ಖುಷಿ ಕೊಡುವ ಸಸ್ಪೆನ್ಸ್‌-ಥ್ರಿಲ್ಲರ್‌ ಸಿನಿಮಾ. ಇಲ್ಲಿ ಬರುವ ಸೂಕ್ಷ್ಮ ದೃಶ್ಯಗಳು ಕೂಡಾ ಮುಂದೆ ಸಿನಿಮಾಕ್ಕೆ ದೊಡ್ಡ ಲೀಡ್‌ ಕೊಡುತ್ತದೆ.

ಇನ್ನು, ಇಡೀ ಸಿನಿಮಾ ಮೂರು ಪಾತ್ರಗಳ ಸುತ್ತ ಸಾಗುತ್ತದೆ. ಹರಿಪ್ರಿಯಾ, ವಸಿಷ್ಠ ಹಾಗೂ ದಿಗಂತ್‌. ಮೂವರು ಕೂಡಾ ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ. ನಟಿ ಹರಿಪ್ರಿಯಾ ಅವರಿಗೆ ಇದು ಸವಾಲಿನ ಪಾತ್ರ. ಈ ಸವಾಲನ್ನು ಅವರು ಯಶಸ್ವಿಯಾಗಿ ನಿಭಾಹಿಸಿದ್ದಾರೆ. ಉಳಿದಂತೆ ಚಿತ್ರದ ಹಿನ್ನೆಲೆ ಸಂಗೀತ ಕಥೆಗೆ ಪೂರಕವಾಗಿದೆ.

 ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

1-sadasd

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

police

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

h c mahadevappa

BJP- JDS ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟವಿಲ್ಲ: ಸಚಿವ ಮಹದೇವಪ್ಪ

Khandre

BJP-JDS ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತದೆ: ಸಚಿವ ಈಶ್ವರ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dighvijay Movie review;

Dighvijaya Movie review; ರೈತಪರ ಹೋರಾಟಕ್ಕೆ ದಿಗ್ವಿಜಯ

Olave Mandara 2 movie review

Olave Mandara 2 movie review; ಪ್ರೇಮದೂರಿನ ಕರೆಯೋಲೆ

Parimala D’souza Movie Review; ನಿಗೂಢ ಹಾದಿಯಲ್ಲಿ ಪರಿಮಳ ಹೆಜ್ಜೆ

Parimala D’souza Movie Review; ನಿಗೂಢ ಹಾದಿಯಲ್ಲಿ ಪರಿಮಳ ಹೆಜ್ಜೆ

’13’ movie review

’13’ movie review: ಹಣದ ಹಿಂದೆ ಬಿದ್ದವರ ಹುಡುಕಾಟ

tales of mahanagara movie review

Tales of Mahanagara Movie Review; ಅಚ್ಚರಿಗಳ ನಡುವೆ ಮಹಾನಗರದ ಚಿತ್ರಣ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

1-sadasd

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

police

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.