ಸತೀಶ್‌ ಕೈಯಲ್ಲಿ ಅಶೋಕ ಬ್ಲೇಡ್


Team Udayavani, May 20, 2022, 2:11 PM IST

11

ನೀನಾಸಂ ಸತೀಶ್‌ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರ “ಅಶೋಕ ಬ್ಲೇಡ್‌’ ಚಿತ್ರದ ಮುಹೂರ್ತ ಇತ್ತೀಚೆಗೆ ನೆರವೇರಿತು. ಚಿತ್ರದಲ್ಲಿ ಸತೀಶ್‌ ನಾಯಕನಾಗುವುದರ ಜೊತೆ ಸಹ ನಿರ್ಮಾಪಕನಾಗಿಯೂ ಜವಾಬ್ದಾರಿ ಹೊತ್ತಿದ್ದಾರೆ. ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್‌ ಪಿಕ್ಚರ್‌ ಹೌಸ್‌ ಜಂಟಿಯಾಗಿ ನಿರ್ಮಿಸುತ್ತಿರುವ ಚಿತ್ರಕ್ಕೆ ವಿನೋದ್‌ ದೊಂಡಾಳೆ ನಿರ್ದೇಶಕರಾಗಿದ್ದಾರೆ.

ಚಿತ್ರದ ಮೊದಲ ಸನ್ನಿವೇಶಕ್ಕೆ ಪಿ.ಶೇಷಾದ್ರಿ ಆರಂಭ ಫ‌ಲಕ ತೋರಿದರು. ಟ.ಎನ್‌.ಸೀತಾರಾಂ ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

“ಸ್ನೇಹಿತ ಟಿ.ಕೆ. ದಯಾನಂದ್‌ ಅವರ ಹತ್ತಿರ ಒಂದೊಳ್ಳೆಯ ಕಥೆ ಇದೆ ಎಂದು ಗೊತ್ತಾಯಿತು. ಕಥೆ ಕೇಳಿದಾಗ ಬಹಳ ಇಷ್ಟವಾಯಿತು. ಇದೇ ನಮ್ಮ ಸಂಸ್ಥೆಯ ಮೊದಲ ಚಿತ್ರವಾಗಬೇಕು ಎಂದು ತೀರ್ಮಾನಿಸಿ ಚಿತ್ರ ಮಾಡುತ್ತಿದ್ದೇವೆ. ಸತೀಶ್‌ ನೀನಾಸಂ ಸಹ ಕೈ ಜೋಡಿಸಿದ್ದಾರೆ. ವರ್ತಕರು ಮತ್ತು ಕಾರ್ಮಿಕರ ನಡುವೆ ನಡೆಯುವ ಯುದ್ಧದ ಕುರಿತು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ನಿರ್ದೇಶಕ ವಿನೋದ್‌ ದೊಂಡಾಳೆ ಮಾಹಿತಿ ನೀಡಿದರು.

“ದಯಾನಂದ್‌ ಅವರ ಬಳಿ ಒಳ್ಳೆಯ ಕಥೆ ಇದೆ ಎಂದು ಕೇಳಿದೆ. ತರಿಸಿ ಓದಿದೆ. ತಕ್ಷಣ ಈ ಚಿತ್ರವನ್ನು ಮಾಡಬೇಕು ಎಂದನಿಸಿತು. ಇದೊಂದು ದೊಡ್ಡ ಕ್ಯಾನ್ವಾಸ್‌ನ ಚಿತ್ರ. ಒಂದು ಐತಿಹಾಸಿಕ ಯುದ್ಧವಿದೆ. 10 ನಿಮಿಷಗಳ ಕಾಲ ಸಾವಿರ ಜನ ಭಾಗವಹಿಸುವ ಯುದ್ಧ. ಅದನ್ನು ವಿನೋದ್‌ ಸಮರ್ಥವಾಗಿ ತೆರೆಯ ಮೇಲೆ ತರುತ್ತಾರೆ ಎಂಬ ನಂಬಿಕೆ ಇದೆ. ಈ ಯುದ್ಧದಲ್ಲಿ ಒಬ್ಬ ಸೂಪರ್‌ ಸ್ಟಾರ್‌ ಕಾಣಿಸಿಕೊಳ್ಳಲಿದ್ದಾರೆ.ಉತ್ತರಖಾಂಡ, ಮುಂಬೈ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ’ ಎಂದರು ನೀನಾಸಂ ಸತೀಶ್‌.

ಚಿತ್ರದ ನಾಯಕ ನಟಿ ಕಾವ್ಯ ಶೆಟ್ಟಿ, ನಿರ್ಮಾಪಕ ನರಹರಿ, ಚಿತ್ರಕಥೆಗಾರ ಟಿ.ಕೆ.ದಯಾನಂದ್‌, ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ, ಛಾಯಾಗ್ರಾಹಕ ಲವಿತ್‌ ಹಾಗೂ ನಟ ಬಿ.ಸುರೇಶ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವಿಭಿನ್ನ ಪಾತ್ರಗಳಲ್ಲಿ ಕಾವ್ಯಾ ಮಿಂಚು

ಆರಂಭದಿಂದಲೂ ವಿಭಿನ್ನ ಪಾತ್ರಗಳ ಮೂಲಕ ಗುರುತಿಸಿಕೊಂಡಿರುವ ನಟಿ ಕಾವ್ಯಾ ಶೆಟ್ಟಿ ಈಗ ಮತ್ತೂಂದು ಅಂಥದ್ದೇ ವಿಭಿನ್ನ ಟೈಟಲ್‌ನ ವಿಶೇಷ ಪಾತ್ರವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಅಂದಹಾಗೆ, ಕಾವ್ಯಾ ಶೆಟ್ಟಿ ಅಭಿನಯಿಸುತ್ತಿರುವ ಹೊಸ ಚಿತ್ರದ ಹೆಸರು “ಅಶೋಕ ಬ್ಲೇಡ್‌’. ಇನ್ನು ಈ ಚಿತ್ರದಲ್ಲಿ ಕಾವ್ಯಾ ಶೆಟ್ಟಿ ಇನ್ಸ್‌ಪೆಕ್ಟರ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಎರಡು ಕಾಲಘಟ್ಟದಲ್ಲಿ “ಅಶೋಕ ಬ್ಲೇಡ್‌’ ಸಿನಿಮಾದ ಕಥೆ ನಡೆಯಲಿದ್ದು, ಮೊದಲ ಬಾರಿಗೆ ಇಂಥದ್ದೊಂದು ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ ಖುಷಿಯಾಗುತ್ತಿದೆ ಎನ್ನುವುದು ಕಾವ್ಯಾ ಮಾತು.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.