ಕಾಲಿವುಡ್ ತಲೈವಾ ಸೂಪರ್ ಸ್ಟಾರ್ ರಜನಿಕಾಂತ್ ಗೆ ಒಲಿದ 51 ನೇ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ
Team Udayavani, Apr 1, 2021, 11:59 AM IST
ನವ ದೆಹಲಿ : ಸೂಪರ್ ಸ್ಟಾರ್ ರಜನಿಕಾಂತ್ 51 ನೇ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸರಣ ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.
ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಜಾವ್ಡೇಕರ್, 2019ನೇ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಸೂಪರ್ ಸ್ಟಾರ್ ರಜನಿಕಾಂತ್ ಆಯ್ಕೆಗೊಂಡಿದ್ದಾರೆ. ಭಾರತದ ಸಿನೆಮಾ ರಂಗದಲ್ಲಿ ರಜನಿಕಾಂತ್ ಮೇರು ನಟ. ನಟರಾಗಿ, ನಿರ್ಮಾಪಕರಾಗಿ, ಚಿತ್ರ ಕಥೆಗಾರನಾಗಿ ಭಾರತೀಯ ಸಿನೆಮಾ ರಂಗಕ್ಕೆ ಅವರು ನೀಡಿದ ಕೊಡುಗೆ ಅನನ್ಯ ಎಂದು ಅವರು ಹೇಳಿದ್ದಾರೆ.
Happy to announce #Dadasaheb Phalke award for 2019 to one of the greatest actors in history of Indian cinema Rajnikant ji
His contribution as actor, producer and screenwriter has been iconic
I thank Jury @ashabhosle @SubhashGhai1 @Mohanlal@Shankar_Live #BiswajeetChatterjee pic.twitter.com/b17qv6D6BP
— Prakash Javadekar (@PrakashJavdekar) April 1, 2021
ಇನ್ನು, ಈ ಬಗ್ಗೆ ಹರ್ಷ ವ್ಯಕ್ತ ಪಡಿಸಿದ ನಟ ಹಾಗೂ ನಿರ್ದೇಶಕ ಕಮಲಾ ಹಾಸನ್, ಸೂಪರ್ ಸ್ಟಾರ್ ಹಾಗೂ ನನ್ನ ಆತ್ಮೀಯ ಗೆಳೆಯ ರಜನಿಕಾಂತ್ ಈ ಪ್ರಶಸ್ತಿಗೆ ಶೇಕಡಾ ನೂರಕ್ಕೆ ನೂರು ಅರ್ಹ ವ್ಯಕ್ತಿ. ಅವರು ಪರದೆ ಮೇಲೆ ಪ್ರೇಕ್ಷಕರನ್ನು ಇಷ್ಟು ಪ್ರಮಾಣದಲ್ಲಿ ಗೆಲ್ಲಬಹುದು ಎಂದು ತೋರಿಸಿಕೊಟ್ಟಿದ್ದಾರೆ ಎಂದು ತಮ್ಮ ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.
உயரிய விருதான தாதா சாகேப் பால்கே விருது உச்ச நட்சத்திரமும் என் மனதிற்கு இனிய நண்பருமான ரஜினிகாந்திற்கு அறிவிக்கப்பட்டிருப்பது பெரும் மகிழ்வளிக்கிறது. திரையில் தோன்றுவதன் மூலமே ரசிகர்களை வென்றெடுத்துவிட முடியும் என்பதை நிரூபித்த ரஜினிக்கு இந்த விருது 100% பொருத்தம்.
— Kamal Haasan (@ikamalhaasan) April 1, 2021
ಭಾರತೀಯ ಸಿನೆಮಾ ರಂಗದ ಪಿತಾಮಹ ಎಂದು ಕರೆಯಲ್ಪಡುವ ದಾದಾ ಸಾಹೇಬ್, 1913ರಲ್ಲಿ ನಟರಾಗಿ ಭಾರತೀಯ ಸಿನೆಮಾ ರಂಗಕ್ಕೆ ಪಾದಾರ್ಪಣೆ ಮಾಡಿದರು. ಅವರ ಹೆಸರಿನಲ್ಲಿ ಕೊಡಮಾಡುವ ಈ ಪ್ರಶಸ್ತಿ ಭಾರತೀಯ ಸಿನೆಮಾ ರಂಗದ ಶ್ರೇಷ್ಟ ಪ್ರಶಸ್ತಿ ಎಂದು ಪರಿಗಣಿಸಲ್ಪಟ್ಟಿದೆ. ಸಿನೆಮಾರಂಗದ ಶ್ರೇಷ್ಠ ಮಾನ್ಯರಿಗೆ, ಭಾರತೀಯ ಸಿನಿ ರಂಗಕ್ಕೆ ನೀಡಿದ ಅಪಾರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಪ್ರಶಸ್ತಿಯು ಸ್ವರ್ಣ ಕಮಲ ಪದಕ ಹಾಗೂ ಹತ್ತು ಲಕ್ಷ ನಗದು ಬಹುಮಾನವನ್ನು ಒಳಗೊಂಡಿರುತ್ತದೆ.
ಓದಿ : ಸಿಎಂ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿ: ಸಿದ್ದರಾಮಯ್ಯ ಆಗ್ರಹ
ಈ ಪ್ರಶಸ್ತಿಯನ್ನು ಕಳೆದ ವರ್ಷ ಘೋಷಿಸಬೇಕಾಗಿತ್ತು. ಕೋವಿಡ್ ಸಾಂಕ್ರಾಮಿಕ ಸೋಂಕು ಹಾಗೂ ಲಾಕ್ಡೌನ್ ನ ಕಾರಣದಿಂದಾಗಿ ವಿಳಂಬವಾಗಿತ್ತು. ಗಾಯಕರಾದ ಆಶಾ ಭೋಸ್ಲೆ ಮತ್ತು ಶಂಕರ್ ಮಹಾದೇವನ್, ನಟರಾದ ಮೋಹನ್ ಲಾಲ್ ಮತ್ತು ಬಿಸ್ವಾಜೀತ್, ಮತ್ತು ಚಲನಚಿತ್ರ ನಿರ್ಮಾಪಕ ಸುಭಾಷ್ ಘೈ ಇದ್ದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ 2019 ನೇ ಸಾಲಿನ ಆಯ್ಕೆ ಸಮಿತಿಯು ರಜನಿಕಾಂತ್ ಅವರನ್ನು ಸಿನೆಮಾ ರಂಗಕ್ಕೆ ನೀಡಿದ ಅಪಾರವಾದ ಸಾಧನೆಗಾಗಿ ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಕಳೆದ ಸಾಲಿನಲ್ಲಿ ಬಾಲಿವುಡ್ ಸಿನೆಮಾ ರಂಗದ ಮೇರು ನಟ ಅಮಿತಾಭ್ ಬಚ್ಚನ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
ಇನ್ನು, ಈವರೆಗೆ ಕನ್ನಡದ ನಟ ಸಾರ್ವಭೌಮ ವರನಟ ಡಾ. ರಾಜ್ ಕುಮಾರ್ ಅವರನ್ನೊಳಗೊಂಡು 50 ಮಂದಿಗೆ ಈ ಪ್ರಶಸ್ತಿಯನ್ನು ನೀಡಲಾಗಿದ್ದು, ರಜನಿಕಾಂತ್ 51ನೇಯವರಾಗಿ ಪ್ರಶಸ್ತಿಯನ್ನು ಸ್ವಿಕರಿಸುತ್ತಿದ್ದಾರೆ.
ಓದಿ : ಭರ್ಜರಿ ಖರೀದಿ:ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 390 ಅಂಕ ಏರಿಕೆ, 14,804ಕ್ಕೆ ತಲುಪಿದ ನಿಫ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್