Television actress: ಹಲ್ಲೆ ಮಾಡಿ ಫೋನ್‌ ಕಸಿದುಕೊಂಡ ನಟಿ ಲಕ್ಷ್ಮೀ; ಪೊಲೀಸರಿಗೆ ದೂರು


Team Udayavani, Mar 9, 2024, 11:24 AM IST

Television actress: ಹಲ್ಲೆ ಮಾಡಿ ಫೋನ್‌ ಕಸಿದುಕೊಂಡ ನಟಿ ಲಕ್ಷ್ಮೀ; ಪೊಲೀಸರಿಗೆ ದೂರು

ಬೆಂಗಳೂರು: ಕಿರುತೆರೆ ನಟಿ ಲಕ್ಷ್ಮೀ ಸಿದ್ದಯ್ಯ ರಸ್ತೆ ಅಪಘಾತ ಎಸಗಿ, ಮೊಬೈಲ್‌ ಕಸಿದುಕೊಂಡಿದ್ದಾರೆ ಎಂದು ಆರೋಪಿಸಿ ಸಹೋದರಿಯರಿಬ್ಬರು ಜ್ಞಾನಭಾರತಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಳೆದ ವರ್ಷ ಡಿಸೆಂಬರ್‌ 6ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಜ್ಞಾನಭಾರತಿ ಮೆಟ್ರೋ ಸಮೀಪ ದೂರುದಾರ ಮಾಧುರಿ ಆಕೆಯ ಸಹೋದರಿ ಐಶ್ವರ್ಯಾ ಜತೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಅದೇ ಮಾರ್ಗದಲ್ಲಿ ಕಾರಿನಲ್ಲಿ ಬಂದ ಲಕ್ಷ್ಮೀ ಸಿದ್ದಯ್ಯ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಆಗ ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಈ ವೇಳೆ ಲಕ್ಷ್ಮೀ ಸಿದ್ದಯ್ಯ ಮತ್ತು ಅವರ ಜತೆಗಿದ್ದ ಆನಂದ್‌ಕುಮಾರ್‌ ಎಂಬಾತ ನಮ್ಮ ಮೇಲೆ ಹಲ್ಲೆ ನಡೆಸಿ ಗಲಾಟೆಯನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದ ಮೊಬೈಲ್‌ ಕಸಿದುಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ನಟಿ ಲಕ್ಷ್ಮೀ ಸಿದ್ದಯ್ಯ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ.

ಆದರೆ, ಯಾವ ಮೊಬೈಲ್‌ ಕಸಿದುಕೊಂಡಿಲ್ಲ. ಹಲ್ಲೆಯೂ ಮಾಡಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮತ್ತೂಂದೆಡೆ ತಾಂತ್ರಿಕವಾಗಿಯೂ ಮೊಬೈಲ್‌ ಪತ್ತೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು. ಇದೀಗ ಘಟನೆ ಕುರಿತು ಮಾಧ್ಯಮಗಳ ಮುಂದೆ ಬಂದಿರುವ ಸಹೋದರಿಯರು, ಘಟನೆಯಲ್ಲಿ ಲಕ್ಷ್ಮೀ ಸಿದ್ದಯ್ಯ ಅವರನ್ನು ಪೊಲೀಸರು ಠಾಣೆಗೆ ಕರೆಸಿಲ್ಲ. ವಿಚಾರಣೆ ನಡೆಸಿಲ್ಲ. ಮೊಬೈಲ್‌ ಪತ್ತೆ ಕಾರ್ಯವನ್ನು ನಡೆಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಅದಕ್ಕೆ ಮಾಧ್ಯಮಗಳ ಮೂಲಕ ಪ್ರತಿಕ್ರಿಯೆ ನೀಡಿರುವ ನಟಿ ಲಕ್ಷ್ಮೀ, ಘಟನೆ ವೇಳೆ ನಾನು ಯಾರ ಮೇಲೂ ಹಲ್ಲೆ ನಡೆಸಿಲ್ಲ. ಸಹೋದರಿಯರ ಅಣ್ಣ ಮತ್ತು ತಾಯಿ ಸ್ಥಳಕ್ಕೆ ಬಂದು ಅವರೇ ಗಲಾಟೆ ಮಾಡಿದ್ದಾರೆ. ಕೋರ್ಟ್‌ ಮೂಲಕವೇ ಸಮಸ್ಯೆ ಬಗೆಹರಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sunny Mahipal: ಪತ್ನಿ ಮೇಲೆ ಹಲ್ಲೆ ನಡೆಸಿದ ಕಿರುತೆರೆ ನಟನಿಗೆ ಜಾಮೀನು

Sunny Mahipal: ಪತ್ನಿ ಮೇಲೆ ಹಲ್ಲೆ ನಡೆಸಿದ ಕಿರುತೆರೆ ನಟನಿಗೆ ಜಾಮೀನು

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

6

ಕಿರುತೆರೆ ನಟನಿಂದ ಗರ್ಭಿಣಿ ಪತ್ನಿ ಮೇಲೆ ಹಲ್ಲೆ: ಮದುವೆ ಬಳಿಕ ಮತ್ತೊಬ್ಬಳ ಜತೆ ನಿಶ್ಚಿತಾರ್ಥ?

1

Vinod Dondale: ʼಕರಿಮಣಿʼ ಧಾರಾವಾಹಿ ನಿರ್ದೇಶಕ ನೇಣಿಗೆ ಶರಣು; ಸಾಲದ ಸುಳಿಯೇ ಕಾರಣ?

Bigg Boss Kannada ಸೀಸನ್‌11ರ ಆರಂಭಕ್ಕೆ ಸಿದ್ಧತೆ; ಸ್ಪರ್ಧಿಗಳಾಗಿ ಬರುವವರು ಇವರೇನಾ?

Bigg Boss Kannada ಸೀಸನ್‌ 11ರ ಆರಂಭಕ್ಕೆ ಸಿದ್ಧತೆ; ಸ್ಪರ್ಧಿಗಳಾಗಿ ಬರುವವರು ಇವರೇನಾ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.