Bigg Boss ಗೆದ್ದ ಪಲ್ಲವಿ ಪ್ರಶಾಂತ್‌ ವಿರುದ್ದ ಜಾಮೀನು ರಹಿತ ಕ್ರಿಮಿನಲ್‌ ಕೇಸ್‌ ದಾಖಲು


Team Udayavani, Dec 20, 2023, 3:57 PM IST

Bigg Boss ಗೆದ್ದ ಪಲ್ಲವಿ ಪ್ರಶಾಂತ್‌ ವಿರುದ್ದ ಜಾಮೀನು ರಹಿತ ಕ್ರಿಮಿನಲ್‌ ಕೇಸ್‌ ದಾಖಲು

ಹೈದರಾಬಾದ್: ಬಿಗ್‌ ಬಾಸ್‌ 7 ತೆಲುಗಿನ ಫಿನಾಲೆ ಇತ್ತೀಚೆಗೆ ಮುಕ್ತಾಯ ಕಂಡಿದೆ. ಫಿನಾಲೆಯಲ್ಲಿ ರೈತನ ಮಗ ಪಲ್ಲವಿ ಪ್ರಶಾಂತ್‌ ಭಾರೀ ಸಂಖ್ಯೆಯ ಮತವನ್ನು ಪಡೆದು ಬಿಗ್‌ ಬಾಸ್‌ ಟ್ರೋಫಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಆ ಮೂಲಕ ಅವರಿಗೆ ವೋಟ್‌ ಮಾಡಿದ ಪ್ರೇಕ್ಷಕರು ಕೂಡ ಖುಷ್ ಆಗಿದ್ದಾರೆ.

ಆದರೆ ಬಿಗ್‌ ಬಾಸ್‌ ಗೆದ್ದು ಸಂತೋಷದಲ್ಲಿದ್ದ ಪಲ್ಲವಿ ಪ್ರಶಾಂತ್‌ ಅವರಿಗೆ ಪೊಲೀಸರು ಶಾಕ್‌ ನೀಡಿದ್ದಾರೆ. ಪಲ್ಲವಿ ಪ್ರಶಾಂತ್‌ ವಿರುದ್ಧ ಜಾಮೀನು ರಹಿತ ಕ್ರಿಮಿನಲ್ ಪ್ರಕರಣವನ್ನು‌ ದಾಖಲಿಸಿದ್ದಾರೆ.

ಆಗಿದ್ದೇನು? : ಭಾನುವಾರ(ಡಿ.17 ರಂದು) ಬಿಗ್‌ ಬಾಸ್‌ ಫಿನಾಲೆ ನಡೆದಿತ್ತು. ಬಿಗ್ ಬಾಸ್ ನ ಗ್ರ್ಯಾಂಡ್ ಫಿನಾಲೆಗೆ ತಮ್ಮ ಹಳ್ಳಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಕರೆತರದಂತೆ ಪ್ರಶಾಂತ್ ಅವರಲ್ಲಿ ಪೊಲೀಸರು ಮೊದಲೇ ವಿನಂತಿಸಿದ್ದರು. ಇದಲ್ಲದೇ ಜನಸಂದಣಿ ತಪ್ಪಿಸಲು ತಪ್ಪಿಸಲು ಅನ್ನಪೂರ್ಣ ಸ್ಟುಡಿಯೋದಲ್ಲಿರುವ ಬೇರೆ ನಿರ್ಗಮನ ದ್ವಾರವನ್ನು ಬಳಸಬೇಕೆಂದು ಪೊಲೀಸರು ವಿನಂತಿಸಿದ್ದರು. ಆದರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಪ್ರಶಾಂತ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟು ಮಾಡಿದ್ದರಿಂದ ರಸ್ತೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಪೊಲೀಸರ ಅನುಮತಿಯಿಲ್ಲದೆ ಅವರು ರ‍್ಯಾಲಿ ನಡೆಸಿದ್ದರು.

ಬಿಗ್‌ ಬಾಸ್‌ ವಿಜೇತ ಪ್ರಶಾಂತ್‌ ಹಾಗೂ ರನ್ನರ್‌ ಅಪ್‌ ಅಮರ್‌ ಅಭಿಮಾನಿಗಳ ನಡುವೆ ರಂಪಾಟವೇ ನಡೆದಿತ್ತು. ಉತ್ಸುಕರಾದ ಅಭಿಮಾನಿಗಳು ವಿವಿಧ ಹೌಸ್‌ಮೇಟ್‌ಗಳ ಕಾರಿನ ಗ್ಲಾಸ್‌ಗಳನ್ನು ಒಡೆದು, ಹಲವು ಸರ್ಕಾರಿ ಬಸ್‌ಗಳ ಗಾಜುಗಳನ್ನು ಒಡೆದಿದ್ದಾರೆ. ಅಮರ್ ಮತ್ತು ಪ್ರಶಾಂತ್ ಅಭಿಮಾನಿಗಳ ನಡುವೆ ರಸ್ತೆಯಲ್ಲೇ ಹೊಡೆದಾಟ ನಡೆದಿದೆ.

ಇದನ್ನೆಲ್ಲಾ ಪರಿಗಣಿಸಿ ಪೊಲೀಸರು ಪ್ರಶಾಂತ್ ವಿರುದ್ಧ ಅಸಹಕಾರ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದ ಆರೋಪದ ಮೇಲೆ ಜಾಮೀನು ರಹಿತ ಪ್ರಕರಣ ದಾಖಲಿಸಿದ್ದಾರೆ. ಇಂದು ಸಂಜೆಯೊಳಗೆ (ಡಿ.20) ತಮ್ಮ ಮುಂದೆ ಹಾಜರಾಗುವಂತೆ ಪೊಲೀಸರು ಪ್ರಶಾಂತ್‌ಗೆ ಸೂಚಿಸಿದ್ದಾರೆ.

ಇಷ್ಟು ಮಾತ್ರವಲ್ಲದೆ, ಬಿಗ್‌ ಬಾಸ್‌ ಮನೆಯೊಳಗೆ ಹೋಗುವ ವೇಳೆ ತಾನೊಬ್ಬ ಬಡ ರೈತ ಕುಟುಂಬದಿಂದ ಬಂದಿದ್ದೇನೆ ಎಂದಿದ್ದ ಪಲ್ಲವಿ ಪ್ರಶಾಂತ್‌, ಈಗ ಬಿಗ್‌ ಬಾಸ್‌ ಗೆದ್ದ ಬಳಿಕ ದುರಹಂಕಾರದಿಂದ ಮಾತನಾಡುತ್ತಿದ್ದು, ಮನೆಯ ಸದಸ್ಯರ ವಿರುದ್ಧ ದೊಡ್ಡ ಹೇಳಿಕೆಗಳನ್ನು ನೀಡಿದ್ದಾರೆ. ಇದರಿಂದ ಅವರನ್ನು ಮೆಚ್ಚಿದ ವೀಕ್ಷಕರಿಗೆ ಶಾಕ್‌ ನೀಡಿದೆ.

ಯಾರು ಈ ಪಲ್ಲವಿ ಪ್ರಶಾಂತ್:

ತೆಲಂಗಾಣದ ಹಳ್ಳಿಯೊಂದರಲ್ಲಿ ಬೆಳೆದ ಪಲ್ಲವಿ ಪ್ರಶಾಂತ್‌ ವೃತ್ತಿಯಲ್ಲಿ ರೈತನಾಗಿದ್ದಾರೆ. ಅವರು ತಮ್ಮದೇ ಆದ ಯೂಟ್ಯೂಬ್‌ ಚಾನೆಲ್‌ ನ್ನು ಹೊಂದಿದ್ದಾರೆ. ಕೃಷಿ ಸಂಬಂಧಿತ ನಿತ್ಯದ ವ್ಲಾಗ್‌ ಗಳನ್ನು ಅವರು ಅಪ್ಲೋಡ್‌ ಮಾಡುತ್ತಿರುತ್ತಾರೆ. ʼನಾನೊಬ್ಬ ರೈತ..ʼ ಎನ್ನುವ ರೈತ ಎನ್ನುವ ಅವರ ವಿಡಿಯೋ ವೈರಲ್‌ ಆಗಿದೆ. ರೀಲ್ಸ್‌ ಹಾಗೂ ವಿಡಿಯೋಗಳಿಂದಲೇ ಅವರು ಅಪಾರ ಫಾಲೋವರ್ಸ್‌ ಗಳನ್ನು ಹೊಂದಿದ್ದಾರೆ. ‌ಗದ್ದೆಬದಿಯ ಕೆಲಸದ ರೀಲ್ಸ್‌, ರೈತರ ಬಗೆಗಿನ ರೀಲ್ಸ್‌ ಹಾಗೂ ವ್ಲಾಗ್‌ ಮಾಡಿಯೇ ಅಪಾರ ಫಾಲೋವರ್ಸ್‌ ಗಳನ್ನು ಪ್ರಶಾಂತ್‌ ಪಡೆದುಕೊಂಡಿದ್ದು. ಬಿಗ್‌ ಬಾಸ್‌ ಕಾರ್ಯಕ್ರಮದ ಬಳಿಕ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದೆ. ಸೆಲೆಬ್ರಿಟಿಗಳೊಂದಿಗೆ ಸಾಮಾನ್ಯವಾಗಿ ದೊಡ್ಮನೆಯಲ್ಲಿ ನೂರು ದಿನ ಕಳೆದ ಪ್ರಶಾಂತ್‌ ಈಗ ಸಾಮಾನ್ಯದಿಂದ ಸೆಲೆಬ್ರಿಟಿಯಾಗಿದ್ದಾರೆ.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.