Serial; ಕಿರುತೆರೆಯ ಸೂರ್ಯವಂಶ: ಅನಿರುದ್ಧ ಹೊಸ ಧಾರವಾಹಿ ಇಂದಿನಿಂದ
Team Udayavani, Mar 11, 2024, 11:56 AM IST
ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯದ “ಸೂರ್ಯವಂಶ’ ಚಿತ್ರವು ಬಿಡುಗಡೆಗೊಂಡು ಸೂಪರ್ ಹಿಟ್ ಆಗಿದ್ದು ನಿಮಗೆ ಗೊತ್ತಿರಬಹುದು. ಈಗ ಅದೇ ಹೆಸರಿನಲ್ಲಿ “ಸೂರ್ಯವಂಶ’ ಧಾರಾವಾಹಿ ಉದಯ ವಾಹಿನಿ’ಯಲ್ಲಿ ವೀಕ್ಷಕರಿಗೆ ತೋರಿಸಲು ಸಿದ್ಧವಾಗಿದೆ.
ತನ್ವಿ ಕ್ರಿಯೇಶನ್ಸ್ ಲಾಂಛನದಲ್ಲಿ ನಿರ್ಮಾಪಕ ಎಲ್. ಪದ್ಮನಾಭ ಬಂಡವಾಳ ಹೂಡುವುದರ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದಾರೆ. ಹರಿಸಂತು ಪ್ರಧಾನ ನಿರ್ದೇಶಕರಾಗಿದ್ದು, ಪ್ರಕಾಶ್ ಮುಚ್ಚಳಗುಡ್ಡ ಸಂಚಿಕೆ ನಿರ್ದೇಶನ ಮಾಡುತ್ತಿದ್ದಾರೆ.
ಒಂದು ಹಳೆಯ ಭವ್ಯ ಪರಂಪರೆಯ ಹೆಗ್ಗುರುತಾಗಿ ನಿಂತಿರುವ “ಸೂರ್ಯವಂಶ’ ಕುಟುಂಬದಲ್ಲಿ ತಾತ ಸತ್ಯಮೂರ್ತಿಗೆ ಈ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಬಯಕೆ. ವಂಶದ ಕುಡಿ ಇಪ್ಪತ್ತು ವರ್ಷಗಳ ಹಿಂದೆ ಮೊಮ್ಮಗ ಸೂರ್ಯವರ್ಧನ ಕಾಣೆಯಾಗಿದ್ದ ಚಿಂತೆಗೆ ಕಾರಣವಾಗಿರುತ್ತದೆ. ಒಂದು ಆಕಸ್ಮಿಕ ಸಂದರ್ಭದಲ್ಲಿ ಆ ಹುಡುಗ ಸಿಗುತ್ತಾನೆ. ತಾಯಿಯ ಚಿಕಿತ್ಸೆಗೆ ಹಣ ಬೇಕಿರುವುದರಿಂದ ಆತನು ಈ ನಾಟಕಕ್ಕೆ ಒಪ್ಪಿಕೊಳ್ಳುತ್ತಾನೆ. ಅವನೇ ಕಥಾನಾಯಕ ಕರ್ಣ. ನಂತರ ಕರ್ಣನು ಸೂರ್ಯವಂಶಕ್ಕೆ ಕಾಲಿಟ್ಟ ನಂತರ ಎಲ್ಲಾ ಕಡೆಗಳಿಂದಲೂ ವಿರೋಧಿಗಳು ಹುಟ್ಟಿಕೊಳ್ಳುತ್ತಾರೆ. ಅದೇ ಊರಿನ ಕಾಳಿಂಗ ಆಟಾಟೋಪವನ್ನು ಬಗ್ಗು ಬಡಿಯಲು ಕರ್ಣನಿಂದ ಮಾತ್ರ ಸಾಧ್ಯ ಎಂದು ಊರ ಜನರು ನಂಬಿರುತ್ತಾರೆ.
ಇದರ ಮಧ್ಯೆ ನಾಯಕಿ ಸುರಭಿ ಆಗಮನವಾಗುತ್ತದೆ. ಇದರಿಂದ ಕಥೆ ಹೊಸ ರೂಪ ಪಡೆದುಕೊಳ್ಳುತ್ತದೆ. ಮುಂದೆ ಕರ್ಣನೇ ಸೂರ್ಯವರ್ಧನ ಎನ್ನುವ ವಿಷಯ ತಿಳಿಯುತ್ತದೆ. ಅದು ಹೇಗೆ, ಯಾರಿಂದ, ಯಾವಾಗ ಎಂಬ ಸನ್ನಿವೇಶಗಳೊಂದಿಗೆ ರೋಚಕ ತಿರುವುಗಳು ಬರುತ್ತದೆ. ಪ್ರತಿ ಕಂತುಗಳು ಶ್ರೀಮಂತವಾಗಿ ಮೂಡಿಬಂದಿರುವುದು ವಿಶೇಷ.
ನಾಯಕನಾಗಿ ಅನಿರುದ್ಧ್ ಜಟ್ಕರ್, ನಾಯಕಿಯಾಗಿ ಸುರಭಿ. ತಾತನಾಗಿ ಸುಂದರರಾಜ್, ಖಳನಾಗಿ ದಿ.ಉದಯ್ ಕುಮಾರ್ ಪುತ್ರ ವಿಕ್ರಂ ಉದಯಕುಮಾರ್. ಉಳಿದಂತೆ ರವಿ ಭಟ್, ಸುಂದರ ಶ್ರೀ, ಲೋಕೇಶ್ ಬಸವಟ್ಟಿ, ಪುಷ್ಪಾಬೆಳವಾಡಿ, ನಯನಾ, ರಾಮಸ್ವಾಮಿ, ಸುನಂದಾ ಮುಂತಾದವರು ನಟಿಸುತ್ತಿದ್ದಾರೆ. ಮಾರ್ಚ್ 11 ಸೋಮವಾರದಿಂದ ಶನಿವಾರದವರೆಗೆ ರಾತ್ರಿ 8 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
Mollywood: ಸೂಪರ್ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಗೆ ಡೇಟ್ ಫಿಕ್ಸ್
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Karthik Mahesh: ಬಿಗ್ ಬಾಸ್ನಿಂದ ಬಂದ ಹಣ ಮನೆ ಕಟ್ಟೋಕೆ ಸಾಕಾಗಲ್ಲ: ಕಾರ್ತಿಕ್ ಮಹೇಶ್
Angry Rantman: 27ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಜನಪ್ರಿಯ ಯೂಟ್ಯೂಬರ್; ನೆಟ್ಟಿಗರು ಶಾಕ್
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?