Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್ ನಿರೀಕ್ಷೆ
Team Udayavani, Mar 28, 2024, 2:58 PM IST
ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ಅವರ ನಿರ್ದೇಶನದಲ್ಲಿ ಪೃಥ್ವಿರಾಜ್ ಸುಕುಮಾರನ್ ನಾಯಕರಾಗಿ ನಟಿಸಿರುವ “ಆಡುಜೀವಿತಂ'(ಗೋಟ್ ಲೈಫ್) ಚಿತ್ರ ಇಂದು ತೆರೆ ಕಾಣುತ್ತಿದೆ. ಹೊಂಬಾಳೆ ಫಿಲಂಸ್ ಕರ್ನಾಟಕದ ವಿತರಣೆಯ ಹಕ್ಕನ್ನು ಪಡೆದುಕೊಂಡಿದೆ.
ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ ಪೃಥ್ವಿರಾಜ್ ಮಾತನಾಡಿ, “ನನಗೆ ವಿಜಯ್ ಕಿರಗಂದೂರ್ ಅವರು ಆತ್ಮೀಯ ಸ್ನೇಹಿತರು. ನಮ್ಮ ಆಡುಜೀವಿತಂ ಚಿತ್ರವನ್ನು ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡುತ್ತಿದೆ. ಇನ್ನು ಬ್ಲೆಸ್ಸಿ ಅವರು ಗೋಟ್ ಲೈಫ್ ಚಿತ್ರ ಮಾಡಬೇಕೆಂದು ಕೊಂಡಿದ್ದು 2008 ರಲ್ಲಿ. ಚಿತ್ರೀಕರಣ ಆರಂಭವಾಗಿದ್ದು 2018 ರಲ್ಲಿ. ಈ ಚಿತ್ರಕ್ಕಾಗಿ ಹದಿನಾರು ವರ್ಷಗಳ ಪರಿಶ್ರಮವಿದೆ. ನಾನು ಈ ಚಿತ್ರಕ್ಕಾಗಿ 31 ಕೆಜಿ ತೂಕ ಕಡಿಮೆ ಮಾಡಿಕೊಂಡಿದ್ದೇನೆ. ಇದು ಬೆನ್ಯಾಮಿನ್ ಅವರು ಬರೆದಿರುವ ಆಡುಜೀವಿತಂ ಕಾದಂಬರಿ ಆಧಾರಿತ ಚಿತ್ರ. ಈ ಜನಪ್ರಿಯ ಕಾದಂಬರಿ ಈವರೆಗೂ 251 ಬಾರಿ ಮುದ್ರಣವಾಗಿದೆ. ನಜೀಬ್ ಎಂಬುವವರ ಜೀವನದ ನೈಜ ಕಥೆ ಆಧರಿಸಿದೆ. ಅಮಲಾ ಪೌಲ್, ಹಾಲಿವುಡ್ ನಟ ಜಿಮ್ಮಿ ಜೀನ್ ಲೂಯಿಸ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಹೆಸರಾಂತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಸಂಗೀತ ನೀಡಿದ್ದಾರೆ’ ಎಂದರು.
ಚಿತ್ರ ಮಲಯಾಳಂ, ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಚಿತ್ರವನ್ನು ಎಲ್ಲರೂ ನೋಡಿ ಎನ್ನುವುದು ನಿರ್ದೇಶಕ ಬ್ಲೆಸ್ಸಿ ಮಾತು. ಹಾಲಿವುಡ್ ನಟ ಜಿಮ್ಮಿ ಜೀನ್ ಲೂಯಿಸ್ ಸಹ ಈ ಚಿತ್ರದಲ್ಲಿ ನಟಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು
Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್ ಟೀಸರ್ ಔಟ್
MUST WATCH
ಹೊಸ ಸೇರ್ಪಡೆ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ