Arundhathi Nair: ಭೀಕರ ರಸ್ತೆ ಅಪಘಾತ; ಸಾವು – ಬದುಕಿನ ಹೋರಾಟದಲ್ಲಿ ಖ್ಯಾತ ನಟಿ
Team Udayavani, Mar 18, 2024, 2:23 PM IST
ತಿರುವನಂತಪುರಂ: ಭೀಕರ ಅಪಘಾತ ಸಂಭವಿಸಿ ಖ್ಯಾತ ನಟಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ಆಗಿದೆ.
ತಮಿಳು ಮತ್ತು ಮಲಯಾಳಂ ನಟಿ ಅರುಂಧತಿ ನಾಯರ್ ಅಪಘಾತಕ್ಕೆ ಒಳಗಾಗಿರುವ ನಟಿ. ಗುರುವಾರ ರಾತ್ರಿ(ಮಾ.14 ರಂದು) ಕೋವಲಂ ಬೈಪಾಸ್ನಲ್ಲಿ ಈ ಅಪಘಾತ ಸಂಭವಿಸಿದೆ.
ಅರುಂಧತಿ ಅವರು ಯೂಟ್ಯೂಬ್ ಚಾನೆಲ್ ವೊಂದಕ್ಕೆ ಸಂದರ್ಶನ ನೀಡಿ ಬೈಕ್ ನಲ್ಲಿ ತನ್ನ ಸಹೋದರನೊಂದಿಗೆ ವಾಪಾಸಾಗುತ್ತಿದ್ದರು. ಈ ವೇಳೆ ವಾಹನವೊಂದು ಢಿಕ್ಕಿ ಹೊಡೆದು ನಿಲ್ಲಿಸದೆ ಸಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಅರುಂಧತಿ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿ ಆಗಿದೆ.
ತಲೆಗೆ ಏಟಾಗಿ, ಅರ್ಧ ಗಂಟೆಯವರೆಗೂ ರಸ್ತೆಯಲ್ಲಿ ಇಬ್ಬರು ಬಿದ್ದಿದ್ದರು ಎಂದು ವರದಿ ತಿಳಿಸಿದೆ.
ಮಾ. 18 ರಂದು ಅವರ ಆರೋಗ್ಯ ಸ್ಥಿತಿಯ ಬಗ್ಗೆ ಸಹೋದರಿ ಆರತಿ ನಾಯರ್ ಮಾಹಿತಿ ನೀಡಿದ್ದಾರೆ. “ಅರುಂಧತಿ ಜೀವಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಸದ್ಯ ಅವರು ತಿರುವನಂತಪುರದ ಅನಂತಪುರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ನಲ್ಲಿದ್ದಾರೆ. ಆಕೆಯ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸಿ” ಎಂದು ಹೇಳಿದ್ದಾರೆ.
ಅರುಂಧತಿ ಅವರು 2014 ರಲ್ಲಿ ‘ಪೊಂಗಿ ಎಜು ಮನೋಹರ’ ಚಿತ್ರದ ಮೂಲಕ ಕಾಲಿವುಡ್ ಗೆ ಪಾದಾರ್ಪಣೆ ಮಾಡಿದರು. ವಿಜಯ್ ಆಂಟೋನಿ ಅವರ ‘ಸೈತಾನ್’ ಚಿತ್ರದ ಮೂಲಕ ಖ್ಯಾತಿಯನ್ನು ಪಡೆದರು. 2018 ರಲ್ಲಿ, ಅವರು ‘ಒಟ್ಟಕೋರು ಕಾಮುಕನ್’ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟರು. ಅವರು ಕೊನೆಯದಾಗಿ 2023 ರಲ್ಲಿ ತಮಿಳು ಚಿತ್ರ ‘ಆಯಿರಂ ಪೊರ್ಕಾಸುಕಲ್’ ನಲ್ಲಿ ಕಾಣಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ